Homeರಾಜಕೀಯಅಪರಾ-ತಪರಾ: ಅಕೌಂಟಿಗೆ ಹಣ ಮತ್ತು ಕೌಂಟ್‌ಲೆಸ್ ಸುಳ್ಳು

ಅಪರಾ-ತಪರಾ: ಅಕೌಂಟಿಗೆ ಹಣ ಮತ್ತು ಕೌಂಟ್‌ಲೆಸ್ ಸುಳ್ಳು

- Advertisement -
ಮಲ್ಲಿ |
2014ರ ಲೋಕಸಭಾ ಚುನಾವಣೆಯ ಪ್ರಚಾರದಿಂದ ಇಲ್ಲಿವರೆಗೆ ‘ಅಕೌಂಟಿಗೆ ರೊಕ್ಕ’ ಎಂಬುದನ್ನು ನರೇಂದ್ರ ಮೋದಿ ಬಡಬಡಿಸುತ್ತಲೇ ಬಂದಿದ್ದಾರೆ. ಈ ವಿಷಯದಲ್ಲಿ ಕೌಂಟ್‌ಲೆಸ್ (ಎಣಿಸಲಾಗದಷ್ಟು!) ಸುಳ್ಳುಗಳನ್ನು  ‘ಸಚ್ಚಾ’ ಪ್ರಧಾನಿ ಹೇಳುತ್ತಲೇ ಬಂದಿದ್ದು, ಆದರೆ 2016ರ ನಂತರ ಕಪ್ಪುಹಣದ ವಿಷಯವನ್ನು ಡ್ರಾಪ್ ಮಾಡಿಬಿಟ್ಟರು!
ಆದರೆ ಅಕೌಂಟು ಎಂಬ ಪದ ಮಾತ್ರ ಅವರ ನಾಲಿಗೆ ಮೇಲೆ ಸೀಟ್ ರಿಸರ್ವ್ ಮಾಡಿಕೊಂಡು ಕೂತು ಬಿಟ್ಟಿದೆ.
ಮೊದಲಿಗೆ, 2014ರ ಚುನಾವಣಾ ಪ್ರಚಾರದಲ್ಲಿ, ವಿದೇಶದಲ್ಲಿರುವ ಕಪ್ಪುಹಣ ವಾಪಸ್ ತರ್ತೇನೆ, ಎಲ್ಲರ ಅಕೌಂಟಿಗೂ ೧೫ ಲಕ್ಷ ಹಾಕ್ತೇನೆ ಎಂದರು.
* ಕಪ್ಪುಹಣ ತರೋದು ಗೋಲ್ವಾಲ್ಕರಾಣೆಗೂ ಸಾಧ್ಯವಿಲ್ಲ ಎಂದು ಅರಿವಾಯಿತು. ತಾವೂ ಗೆದ್ದಿದ್ದು ಅಂಥದೇ ಹಣದಿಂದ ಅಲ್ವಾ ಅಂತಾ ಆ ಹಣದ ಮೇಲೆ ಕರುಣೆ ಉಕ್ಕಿತು, ಅಂತಹ ಹಣದಾತರ ಸೇವೆ ಮಾಡಲು ಶುರು ಮಾಡಿದರು.
* ’15 ಲಕ್ಷ ಹಾಕಬೇಕು ಅನಕೊಂಡಿದ್ದೆ. ಆದರೆ ಈ ದೇಶದ ಕೋಟ್ಯಂತರ ಬಡವರಿಗೆ ಬ್ಯಾಂಕ್ ಅಕೌಂಟೇ ಇಲ್ಲ ಎಂಬುದು ಗೊತ್ತಾಗಿತು. ಅದಕ್ಕೇ ಜನಧನ್ ಅಕೌಂಟು ಆರಂಭಿಸಿದೆ…’ ಎಂದರು.
ಈ ಅಕೌಂಟುಗಳಿಗೆ ಝೀರೋ ಅಕೌಂಟು ಎಂದೂ ಕರೆಯಲಾಗುತ್ತಿದೆ. ಹೆಸರು ಸರಿಯಾಗಿಯೇ ಇದೆ.
* ‘ಡಿಜಿಟಲ್ ಇಂಡಿಯಾ’ ಶುರುವಾದ ಮೇಲೆ ಡಿಜಿಟಲ್ಲಾಗಿಯೇ ಹಣ ಟ್ರಾನ್ಸ್ಫರ್ ಮಾಡೋ ಯೋಚನೆ ಬಂತಂತೆ. ಅಂದರೆ ಮುಟ್ಟಲಾಗದ, ತಟ್ಟಲೂ ಆಗದ ಡಿಜಿಟಲ್ ಹಣ!
* ಈಗ 2019ರ ಚುನಾವಣೆ ಬಂತಲ್ಲ, ಸಣ್ಣ ರೈತರ ಅಕೌಂಟುಗಳಿಗೆ ಅದರಲ್ಲೂ ಝೀರೋ ಅಕೌಂಟುಗಳಿಗೆ ದಿನಕ್ಕೆ 15 ರೂ. ಹಾಕೋದಾಗಿ ರೀಲು ಬಿಟ್ರು. ‘15 ಲಕ್ಷ ರೂ.’ದಲ್ಲಿನ ಲಕ್ಷ ಅಲಕ್ಷ್ಯಕ್ಕೊಳಗಾದ ಕತೆ ಹೀಗಿದೆ ನೋಡಿ!
ಈಗ ತಮ್ಮ ಸ್ವಂತ 15 ರೂ.ನಲ್ಲಿ ಒಂದು ಚಾ ಕುಡಿದು, ಎಲೆ-ಅಡಿಕೆ-ಸುಣ್ಣ-ತಂಬಾಕು ತಿಂದು ಮೋದಿ ಮಕಕ್ಕ  ಉಗಿಯಲು ರೈತರಷ್ಟೇ ಅಲ್ಲ, ನಿರುದ್ಯೋಗಿ ಯುವ ಜನರೂ ರೆಡಿಯಾಗಿದ್ದಾರೆ.
ರೈತರ ಆದಾಯ ದ್ವಿಗುಣ ಆಗೇ ಬಿಟ್ಟಿದೆ!
ಮೋದಿ ಮತ್ತೆ ಮತ್ತೆ ಹೇಳುವುದು ರೈತರ ಆದಾಯವನ್ನು ದ್ವಿಗುಣ ಮಾಡ್ತೀವಿ ಅಂತಾ. ಆದರೆ ಆ ನಿಟ್ಟಿನಲ್ಲಿ ಯಾವ ಪ್ರಯತ್ನವನ್ನೂ ಮಾಡಲೇ ಇಲ್ಲ. ಆದರೆ ಒಂದರ್ಥದಲ್ಲಿ ಮೋದಿ ಕಾರಣದಿಂದಾಗಿ ರೈತರ ಆದಾಯ ದ್ವಿಗುಣಗೊಂಡಿದೆ:
ಉದಾಹರಣೆಗೆ: ಒಬ್ಬ ಸಣ್ಣ ರೈತನ ಸಾಲ ೫ ಲಕ್ಷ ಅಂತಾ ಇಟ್ಟುಕೊಳ್ಳಿ. ಅದನ್ನು ಹೀಗೂ ಹೇಳಬಹುದು: ‘ಆತನ/ಆಕೆಯ ಆದಾಯ  –5 ಲಕ್ಷ ರೂ (ಮೈನಸ್ 5 ಲಕ್ಷ ರೂ)’…..ಈಗ ಮೋದಿಯ  ಕೃಷಿ ವಿರೋಧಿ ನೀತಿಯಿಂದಾಗಿ ಆ ರೈತನ ಸಾಲ 10 ಲಕ್ಷಕ್ಕೆ ಏರಿದೆ. ಅಂದರೆ ಆ ರೈತನ ಆದಾಯ ಈಗ -10 ಲಕ್ಷ ರೂ!  ಆಯಿತಲ್ಲ ರೈತನ ಆದಾಯ ದ್ವಿಗುಣ!
                       ****
೨೦೧೪ರ ಚುನಾವಣಾ ಪ್ರಚಾರದಿಂದ ಇಲ್ಲಿವರೆಗೆ ಸುಳ್ಳುಗಳನ್ನೇ ಹೇಳುತ್ತ ಜನದ್ರೋಹಿ ಆಡಳಿತ ನೀಡಿದ, ಅಕೌಂಟೆಬಿಲಿಟಿಯೇ (ಹೊಣೆಗಾರಿಕೆ) ಇಲ್ಲದ ಈ ಮನುಷ್ಯನನ್ನು ಇನ್ನೂ ಹಾಡಿ ಹೊಗಳುವ ಭಕ್ತರಿದ್ದಾರಲ್ಲ, ಅವರಿನ್ನೂ ಮೋದಿಯ ಪೆಪ್ಪರಮೆಂಟು ಚೀಪುತ್ತಲೇ ಇದ್ದಾರೆ….
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...