Homeಸಿನಿಮಾಅಮ್ಮನ ಪ್ರೀತಿಯಲ್ಲಿ ಬದುಕಿನ ಬಿಚ್ಚುನೋಟ....

ಅಮ್ಮನ ಪ್ರೀತಿಯಲ್ಲಿ ಬದುಕಿನ ಬಿಚ್ಚುನೋಟ….

- Advertisement -
- Advertisement -
ಕನ್ನಡಿಗರು ಭಾವನಾ ಜೀವಿಗಳು, ಕರ್ನಾಟಕದಲ್ಲಿ ಭಾವನೆಗಳಿಗೆ ಬೆಲೆ ಜಾಸ್ತಿ ಎಂಬ ಮಾತುಗಳು ಚಿತ್ರರಂಗದಲ್ಲಿ ಬಹಳ ಕಾಲದಿಂದಲೂ ಕೇಳಿಬರುತ್ತಿದೆ. ಅಂತೆಯೇ ಕೆಲವು ಸಿನಿಮಾಗಳಲ್ಲಿ ಕನ್ನಡಿಗರು ಸೆಂಟಿಮೆಂಟಲ್ ಫೂಲ್ಸ್ ಎಂದೂ ಸಹ ನಯವಾಗಿ ಬೈಸಿಕೊಂಡಿರುವುದೂ ಇದೆ. ಕನ್ನಡ ಚಿತ್ರರಂಗವು ಸೆಂಟಿಮೆಂಟ್‍ಗೆ ಹೆಚ್ಚು ಹೊತ್ತು ಕೊಡುತ್ತಾ ಬಂದಿದೆ, ಸಂಬಂಧಗಳ ಭಾವನೆಗಳನ್ನಿಟ್ಟುಕೊಂಡು ಮಾಡಿದ ಸಿನಿಮಾಗಳು ಫೈಲ್ ಆಗಿದ್ದೇ ಇಲ್ಲ.
ಅದರಲ್ಲೂ ತಾಯಿಯ ಪ್ರೀತಿ ವಾತ್ಸಲ್ಯಕ್ಕೆ ಬೆಲೆ ಕಟ್ಟಲಾಗದಷ್ಟು ಅನುಕಂಪ. ಅಮ್ಮ ಎಂದರೆ ಸ್ಥೈರ್ಯ, ಅಮ್ಮಾ ಎಂದರೆ ಅನುಕಂಪ, ತಾಯಿಯೇ ಸ್ಫೂರ್ತಿ ಎಂಬ ಹೆಗ್ಗಳಿಕೆ ಕನ್ನಡಿಗರದು. ಹೆತ್ತವಳು ಕಣ್ಣೆದುರೇ ಮರೆಯಾಗುತ್ತಾಳೆಂದಾಗ ಅವಳನ್ನು ಉಳಿಸಿಕೊಳ್ಳಲು ಮಗನ ಒದ್ದಾಟ ಹಾಗೂ ತಳಮಳವನ್ನು ಕಥೆಯನ್ನಾಗಿಟ್ಟುಕೊಂಡು ನಿರ್ದೇಶಕ ಕೆ.ಎಂ.ಚೈತನ್ಯ ‘ಅಮ್ಮ ಐ ಲವ್ ಯೂ’ ಸಿನಿಮಾ ಮಾಡಿದ್ದಾರೆ.
ಪ್ರೀತಿಯ ಪ್ರಜ್ಞೆಯನ್ನು ಕೇಂದ್ರವಾಗಿಟ್ಟುಕೊಂಡಿರುವ ಈ ಚಿತ್ರ ಅಮ್ಮ ಮಗನ ಸೆಂಟಿಮೆಂಟ್ ಅಷ್ಟೇ ಅಲ್ಲದೆ ಸಮಾಜದ ಹಲವು ಸಂಬಂಧಗಳನ್ನು ಬೆಸೆಯುವ ಮಾನವೀಯ ಮೌಲ್ಯಗಳನ್ನು ಒಳಗೊಂಡಿದೆ. ಭಿಕ್ಷುಕರ ಬದುಕಿನ ತೊಳಲಾಟದೊಂದಿಗೆ ಬದುಕಿನ ಅರ್ಥವನ್ನು ಕಟ್ಟಿಕೊಟ್ಟಿದೆ.
ಸಿದ್ದಾರ್ಥ್ ತನ್ನ ಹೆತ್ತ ತಾಯಿ ಸಾವು ಬದುಕಿನ ನಡುವೆ ಹೋರಾಟ ಮಾಡುವಾಗ ಅವಳನ್ನು ಉಳಿಸಿಕೊಳ್ಳಲು ಹಲವು ಆಸ್ಪತ್ರೆಗಳನ್ನು ಸುತ್ತಿದರು ತಾಯಿ ಗುಣಮುಖಳಾಗದಿದ್ದ ಚಿಂತೆಯಲ್ಲಿದ್ದವನು ಒಬ್ಬ ಸನ್ಯಾಸಿಯ ಮಾತು ಕೇಳಿ ತನ್ನ ವೈಚಾರಿಕತೆಯನ್ನು ಬದಿಗೊತ್ತಿ ಶ್ರೀಮಂತಿಯ ವೇಷ ಮರೆಸಿ ಭಿಕ್ಷುಕನ ವೇಷ ಧರಿಸಿ ಭಿಕ್ಷಾಟನೆಯ ಅಜ್ಞಾತವಾಸಕ್ಕೆ ತೆರಳುತ್ತಾನೆ, ಇಲ್ಲಿ ತಾಯಿಯ ಮೇಲಿನ ಮಮತೆ ಔಷಧಿಗಳಿಂದ ಸಾಧ್ಯವಾಗದ್ದು ಹರಕೆಯಿಂದ ಸಾಧ್ಯವೇ ಎಂಬ ಪ್ರಶ್ನೆಯನ್ನೂ ಹುಟ್ಟುಹಾಕಲಾರದು. ಇಂತಹ ಸಂದರ್ಭಗಳು ಜನರು ಮೌಢ್ಯದ ಮೊರೆಹೊಗುವ ಪರಿಸ್ಥಿತಿಗೆ ಕನ್ನಡಿ ಇಟ್ಟಂತೆ ತಿಳಿಸುತ್ತವೆ.
ಆ ದಿನಗಳಲ್ಲಿ ಭಿಕ್ಷುಕರ ನೋವು-ನಲಿವು, ಅವರು ಎದುರಿಸುವ ಮಾನಸಿಕ ದೈಹಿಕ ಹಿಂಸೆಗಳನ್ನು ಬಿಡಿಸಿಟ್ಟಿರುವ ಚಿತ್ರ, ಭಿಕ್ಷುಕರೆಂದರೆ ಅಸಹ್ಯ ಪಡುವ ಜನರು ಹಾಗೂ ಕೆಲವು ಸಿನಿಮಾಗಳನ್ನು ನೋಡಿ ಭಿಕ್ಷುಕರು ಭಾರಿ ಸಂಪಾದಿಸುತ್ತಾರೆಂದು ಅವರನ್ನು ದೂಷಿಸುವ ಜನರಿಗೆ ಭಿಕ್ಷುಕರನ್ನು ಕಾಮೆಡಿ ಸೀನ್‍ಗಳಾಗಿ ತೋರುವ ಬೇರೆಲ್ಲ ಸಿನಿಮಾಗಳಿಗಿಂತ ಭಿಕ್ಷುಕರ ಬದುಕಿನ ನೈಜತೆಯನ್ನು ಚಿತ್ರಿಸಿದೆ. ಭಿಕ್ಷುಕರೂ ಮನುಷ್ಯರೇ ಅವರಿಗೂ ಒಂದು ಬದುಕಿದೆ, ಉಳ್ಳವರ ಮಧ್ಯೆ ಅವರ ದೌರ್ಜನ್ಯಗಳಿಂದ ತೊಳಲಾಡುವ ಇಲ್ಲದವರ ಬದುಕಿನ ಪ್ರತಿಬಿಂಬವಾಗಿ ಭಿಕ್ಷುಕರ ಬದುಕು ಕಾಣದೆ ಇರಲಾರದು.
ಮಾಲೀಕನ ಕೈ ಕೆಳಗೆ ದುಡಿದು ಕಷ್ಟದ ದಿನಗಳಲ್ಲಿ ಎದುರಿಸಿ ಉದ್ಯಮಿಯಾಗಿ ಬೆಳೆದುಬಂದ ಸಿದ್ದಾರ್ಥನ ತಾಯಿ, ಕಂಪನಿಯ ಮಾಲಕಿಯಾಗಿ, ದುಡಿಯುವ ಜನರ ಸ್ನೇಹಿತೆಯಾಗಿದ್ದು, ನೌಕರರನ್ನು ರೋಬೋಟ್‍ಗಳಂತೆ ದುಡಿಸಿಕೊಳ್ಳುವ ವ್ಯವಸ್ಥೆಯೊಳಗೆ ಕಷ್ಟದ ಅರಿವಿರುವ ತಾಯಿ ತನ್ನ ಕಂಪನಿಯಲ್ಲಿ ದುಡಿಯುವ ಶ್ರಮಿಕರ ಹಿತವನ್ನೂ ಕಾಯುವ, ಅವರ ಬದುಕಿನಲ್ಲಿ ನೆರವಾಗುತ್ತಾ ಎಲ್ಲರನ್ನೂ ನಿಸ್ವಾರ್ಥವಾಗಿ ಒಳಗೊಳ್ಳುವಳು, ಈ ಒಳಗೊಳ್ಳುವಿಕೆ ಇಲ್ಲದವರ ಶ್ರಮದಿಂದ ಉಳ್ಳವರು ಕಟ್ಟಿಕೊಳ್ಳುವ ಮೊಹಲ್ಲಗಳ ಮಧ್ಯೆ ಸದೃಢ ಸಮಾಜದಲ್ಲಿ ದುಡಿಯುವ ಕೈಗಳಿಸಿ ತಮ್ಮ ಶ್ರಮಕ್ಕೆ ಸಿಗಬೇಕಾದ ಪಾಲಿನ ಸಂಕೇತವಾಗಿದೆ. ತಮ್ಮ ದುಡಿವ ಕೈಗಳಿಗೆ ಕೆಲಸಕೊಟ್ಟ ಅವಳ ಉಳಿವಿಗಾಗಿ ಪ್ರಾರ್ಥಿಸುವ ಸಿಬ್ಬಂದಿಗಳು, ಮಾಲಿಕ ಮತ್ತು ಶ್ರಮಿಕರ ಹೊಂದಾಣಿಕೆಗೆ ಸ್ಪೂರ್ತಿ ತುಂಬುತ್ತದೆ.
ಮತ್ತೊಂದೆಡೆ ಇಂದಿನ ಯುವಜನರು ಸಮಾಜದಲ್ಲಿ ಮಾಡಬೇಕಾದ ಸಹಾಯಾಸ್ತದ ಕನಿಷ್ಟ ಮೌಲ್ಯವನ್ನು ತೋರಿಸುವ ನಾಯಕಿಯ ಪಾತ್ರ, ತಾಯಿಗಾಗಿ ಭಿಕ್ಷೆ ಬೇಡುವ ಪ್ರೇಮಿಯ ಪ್ರೀತಿ ಬಯಸುವ ಪ್ರೇಯಸಿ. ಈ ಎಲ್ಲಾ ಪಾತ್ರಗಳೂ ಜೀವನ ಸಂಗ್ರಾಮದ ಹಲವು ದಿಕ್ಕುಗಳನ್ನು ತೋರುತ್ತವೆ.

ಪ್ರೀತಿ, ಮಮತೆಯ ಹುಡುಕಾಟದೊಂದಿಗೆ ಸಾಗುವ ಚಿತ್ರ ನೋಡುಗರ ಮನತಟ್ಟುವ ಕಥಾಹಂದರವನ್ನು ಒಳಗೊಂಡಿದೆ. ಆದರೆ ಇಂತಹ ಕತೆಯನ್ನು ತೆರೆಯ ಮೇಲೆ ನಿರೂಪಿಸುವಾಗ ಪ್ರೇಕ್ಷಕರ ಮನಸಲ್ಲಿ ಕ್ಯೂರಿಯಾಸಿಟಿಯನ್ನಾಗಲಿ ಅಥವಾ ನೋಡುಗರ ಗಮನ ಮತ್ತೊಂದೆಡೆಗೆ ಜಾರದಂತೆ ತನ್ನತ್ತ ಸೆಳೆದಿಟ್ಟುಕೊಳ್ಳುವಲ್ಲಿ ತಂಡ ಕೊಂಚ ಎಡವಿದೆಯಾದರೂ, ಭಿಕ್ಷುಕನ ಪಾತ್ರದಲ್ಲಿ ಚಿರು, ಹಾಗೂ ನಾಯಕಿಯಾಗಿ ಹೊಸ ನಟಿ ನಿಶ್ಚಿಕಾ ಸೌಂದರ್ಯ ಉತ್ತಮ ಅಭಿನಯ ನೀಡಿದ್ದಾರೆ.


ಕಳೆದುಹೋದ ಖಳನಾಯಕ

ವಿಷ್ಣುವರ್ಧನ್, ಅಂಬರೀಶ್, ಶಿವರಾಜ್‍ಕುಮಾರ್‍ರಂಥಹ ಕನ್ನಡ ಚಿತ್ರರಂಗದ ದಿಗ್ಗಜರೊಂದಿಗೆ ಖಳನಾಯಕನಾಗಿ ಅಭಿನಯಿಸುತ್ತಿದ್ದ ಧೀಮಂತ ಕಲಾವಿದ, ಖ್ಯಾತ ನಾಟಕಕಾರ ಸದಾಶಿವ ಸಾಲ್ಯನ್ ಇಹಲೋಕ ತ್ಯಜಿಸಿದ್ದಾರೆ. 1988ರಲ್ಲಿ ತುಳು ಭಾಷೆಯ ‘ಭಾಗ್ಯವಂತೆದಿ” ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಸಾಲ್ಯನ್ ಕನ್ನಡ, ತುಳು, ಹಿಂದಿ, ಮರಾಠಿ ಭಾಷೆಯಲ್ಲಿ ಸುಮಾರು 50 ಚಿತ್ರಗಳಲ್ಲಿ ಅಭಿನಯಿಸಿದ್ದರು, 500ಕ್ಕೂ ಹೆಚ್ಚು ರಂಗ ಪ್ರಯೋಗಗಳಲ್ಲ್ಲಿ ಅಭಿನಯಿಸಿದ ಮುಂಬೈ-ಕರ್ನಾಟಕದ ಏಕೈಕ ರಂಗಕಲಾವಿದನೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಮುಂಬೈನಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಉದ್ಯೋಗಿಯೂ ಆಗಿದ್ದ ಇವರು 2004ಅಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾಲಿನ ಸ್ವಾಧಿನ ಕಳೆದುಕೊಂಡು ಕಷ್ಟದ ಜೀವನ ಸಾಗಿಸುತ್ತಿದ್ದವರು.


ಕುಂಬಳಕಾಯಿ ಕಳ್ಳ ಕೋಕಿಲ?
ಸಿನಿಮಾ ರಂಗದ ಸ್ಟಾರ್‍ಗಳು, ನಿರ್ದೇಶಕರು, ನಿರ್ಮಾಪಕರಿಗಾಗಲೀ ಭೂಗತ ಪಾತಕಿಗಳೊಂದಿಗಿನ ಒಡನಾಟ ಮಾಮೂಲಿಯಾದದ್ದು. ಎಷ್ಟೋ ನಿರ್ಮಾಪಕರೇ ರೌಡಿ ಶೀಟರ್ ಬ್ಯಾಗ್ರೌಂಡ್ ಹೊಂದಿರುತ್ತಾರೆ. ಇದಕ್ಕೆ ಕನ್ನಡ ಚಿತ್ರರಂಗವೂ ಹೊರತಲ್ಲ. ಅಂತೆಯೇ ಬೆಂಗಳೂರಿನ ಕುಖ್ಯಾತ ರೌಡಿ ಶೀಟರ್ ಸೈಕಲ್ ರವಿಯನ್ನು ಬಹಳ ದಿನಗಳಿಂದ ಹುಡುಕುತ್ತಿದ್ದ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ರೌಡಿ ರವಿ ಜತೆ ಹಾಸ್ಯನಟ ಸಾಧುಕೋಕಿಲ ಒಡನಾಟ ಇಟ್ಟುಕೊಂಡಿದ್ದರೆಂದು ಯಾರೋ ಹಬ್ಬಿಸಿದ
ಗಾಳಿಸುದ್ದಿಯನ್ನು ಕೇಳಿ ಹೆದರಿದ ಸಾಧು ಸಿಸಿಬಿ ಕಚೇರಿಗೆ ದೌಡಾಯಿಸಿದ್ದಾರೆ. ನನಗೂ ರೌಡಿಗೂ ಯಾವ ಸಂಬಂಧವೂ ಇಲ್ಲ, ಈ ಪ್ರಕರಣದಲ್ಲಿ ನನ್ನ ಹೆಸರು ಬರುತ್ತಿದೆಯಂತೆ ಎಂದು ಅಧಿಕಾರಿಯ ಎದುರು ಕುಂಯ್ಯೋಮರ್ರೋ ಎಂದರಂತೆ. ಅದಕ್ಕೆ ಆ ಅಧಿಕಾರಿ ನಿನಗೆ ರೌಡಿಯ ಜತೆ ಒಡನಾಟವಿದೆ ಎಂದು ನಾವು ಎಲ್ಲಿಯೂ ಹೇಳಿಲ್ಲ, ಹೇಳೋಕೆ ಯಾವ ಪುರಾವೆಯೂ ಇಲ್ಲ, ‘ಕುಂಬಳಕಾಯಿ ಕಳ್ಳ ಅಂದ್ರೆ ನೀನ್ಯಾಕೆ ಹೆಗಲು ಮುಟ್ಟಿ ನೋಡ್ಕೋತೀಯಾ’, ಹಾಗೇನಾದರೂ ಇದ್ದರೆ ನಾವೆ ಕರೆಯುತ್ತಿದ್ದೆವು ಎಂದು ಮಂಗಳಾರತಿ ಮಾಡಿ ಕಳಿಸಿದ್ದಾರೆ. ಸಾಧುವಿನ ಈ ಅತಿಗಾಬರಿಯ ವರ್ತನೆ ಅದ್ಯಾವುದೋ ಕೆಟ್ಟ ಕ್ಷಣಗಳ ಮುನ್ಸೂಚನೆಯಂತೆ ಕಾಣುತ್ತಿದೆ. ಹಾಗೇನಾದರೂ ಸಾಧು ಇಂತಹ ಕ್ರಿಮಿನಲ್‍ಗಳ ಒಡನಾಟ ಇಟ್ಟುಕೊಂಡಿದ್ದರೆ, ಅಂತಹವುಗಳನ್ನು ಕತ್ತರಿಸಿಕೊಂಡು ಹೊರಬರಲಿ. ಯಾಕೆಂದರೆ, ಅವರ ಪ್ರತಿಭೆಗೆ ಈ ಬಗೆಯ ಮಸಿ ಹತ್ತಿಕೊಂಡು ಮಂಕಾಗುವುದು ಯಾರಿಗೂ ಇಷ್ಟವಿಲ್ಲ.
– ಸೋಮಶೇಖರ್ ಚಲ್ಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...