Homeಮುಖಪುಟಅಯೋಧ್ಯೆ ತೀರ್ಪು ಒಪ್ಪಿದ್ದೇವೆ, ಮರು ಪರಿಶೀಲನೆ ಅರ್ಜಿ ಹಾಕುವುದಿಲ್ಲ: ಸುನ್ನಿ ವಕ್ಫ್ ಮಂಡಳಿ

ಅಯೋಧ್ಯೆ ತೀರ್ಪು ಒಪ್ಪಿದ್ದೇವೆ, ಮರು ಪರಿಶೀಲನೆ ಅರ್ಜಿ ಹಾಕುವುದಿಲ್ಲ: ಸುನ್ನಿ ವಕ್ಫ್ ಮಂಡಳಿ

- Advertisement -
- Advertisement -

ಅಯೋಧ್ಯೆ ವಿವಾದದಲ್ಲಿ ಪ್ರಮುಖ ದಾವೆದಾರರಲ್ಲಿ ಒಂದಾಗಿದ್ದ ಸುನ್ನಿ ವಕ್ಫ್ ಬೋರ್ಡ್ ಮಂಡಳಿಯು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮರುಪರಿಶೀಲನೆ ಮನವಿಯನ್ನು ಸಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಉತ್ತರ ಪ್ರದೇಶ ಸುನ್ನಿ ವಕ್ಫ್ ಬೋರ್ಡ್ ಮಂಡಳಿಯ ಅಧ್ಯಕ್ಷ ಜಫರ್ ಅಹ್ಮದ್ ಫರೂಕಿಯವರು ಸುದ್ದಿಗೋಷ್ಠಿ ನಡೆಸಿ “ಮಂಡಳಿಯು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತದೆ. ಹಾಗಾಗಿ ತೀರ್ಪಿನ ಮರುಪರಿಶೀಲನೆ ಮಾಡುವ ಮೇಲ್ಮನವಿಯನ್ನು ಸಲ್ಲಿಸದಿರಲು ನಿರ್ಧರಿಸಿದೆ. ಮಂಡಳಿಯು ಸಂಪೂರ್ಣ ವರದಿಯನ್ನು ಕೂಲಂಕಷವಾಗಿ ಓದಿದ ತರುವಾಯ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಲಾಗುವುದು. ಆದರೆ ಮೇಲ್ಮನವಿ ಸಲ್ಲಿಸದಿರುವುದು ಮಾತ್ರ ಖಚಿತ” ಎಂದು ತಿಳಿಸಿದ್ದಾರೆ.

ಇದಕ್ಕು ಮುನ್ನ, ತೀರ್ಪು ಹೊರಬರುತ್ತಿದ್ದಂತೆಯೇ, ಸುನ್ನಿ ವಕ್ಫ್ ಬೋರ್ಡ್ ಪರ ವಾದ ಮಂಡಿಸಿದ್ದ ಮತ್ತು ಸುನ್ನಿ ವಕ್ಪ್ ಮಂಡಳಿಯ ಸದಸ್ಯರೂ, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಕಾರ್ಯದರ್ಶಿಯೂ ಆದ ಜಫರ್ಯಾಬ್ ಜಿಲಾನಿಯವರು ಪತ್ರಿಕಾಗೋಷ್ಠಿಯಲ್ಲಿ “ತೀರ್ಪಿನ ಬಗ್ಗೆ ಗೌರವವಿದೆ, ಆದರೆ ಸಮಾಧಾನ ತಂದಿಲ್ಲ. ಹಾಗಾಗಿ ಮರುಪರಿಶೀಲನೆ ಅರ್ಜಿ ಹಾಕುವ ಬಗ್ಗೆ ಯೋಚಿಸಿ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದರು. ಆದರೆ ಫರೂಕಿಯವರ ಹೇಳಿಕೆಯಿಂದ ಮರು ಪರಿಶೀಲನೆ ಅರ್ಜಿ ಸಲ್ಲಿಸಲಾಗುವುದಿಲ್ಲ ಎಂಬುದು ಖಾತ್ರಿಯಾಗಿದೆ.

ಈ ಬಗ್ಗೆ ಜಫರ್ಯಾಬ್ ಜಿಲಾನಿಯವರ ಸ್ಪಷ್ಟಣೆ ಕೇಳಿದಾಗ, “ಮಧ್ಯಾಹ್ನ ನಾನು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅದರ ಕಾರ್ಯದರ್ಶಿಯಾಗಿ ಅಭಿಪ್ರಾಯ ಹೇಳಿದ್ದೆ. ವಕ್ಫ್ ಮಂಡಳಿಯ ಪರವಾಗಿ ಅಲ್ಲ.” ಎಂದರು.
`ಸುನ್ನಿ ವಕ್ಫ್ ಮಂಡಳಿಯಲ್ಲದೆ ನಿರ್ಮೋಹಿ ಅಖಾರ, ಶಿಯಾ ವಕ್ಫ್ ಮಂಡಳಿಗಳೂ ಈ ಪ್ರಕರಣದಲ್ಲಿ ದಾವೆದಾರರಾಗಿದ್ದವು. ಅವು ಮೇಲ್ಮನವಿ ಸಲ್ಲಿಸುತ್ತವೋ, ಇಲ್ಲವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟ ವಿಚಾರ’ ಎಂಬ ಮಾತನ್ನೂ ಫರೂಕಿಯವರು ಹೇಳಿದರು.

ಬೆಳಿಗ್ಗೆ ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್ ಅಯೋಧ್ಯೆಯ ವಿವಾದಿತ 2.7 ಎಕರೆ ಜಾಗವನ್ನು ಮಂದಿರ ನಿರ್ಮಾಣಕ್ಕೆ ಬಿಟ್ಟುಕೊಡಬೇಕು, ಈ ಕುರಿತು ಕೇಂದ್ರ ಸರ್ಕಾರ ಒಂದು ಟ್ರಸ್ಟ್ ಸ್ಥಾಪಿಸಬೇಕು. ಮತ್ತು ಇದಕ್ಕೆ ಬದಲಾಗಿ ಅಯೋಧ್ಯೆಯಲ್ಲೇ ಬೇರೆಡೆ ಮಸೀದಿ ನಿರ್ಮಿಸಲು ಸುನ್ನಿ ವಕ್ಫ್ ಮಂಡಳಿಗೆ ಐದು ಎಕರೆ ಜಮೀನು ನೀಡಬೇಕು ಎಂದು ಆದೇಶಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...