Homeಅಂಕಣಗಳು`ಅರೆರೆ, ನಮ್ದು ಕುತ್ತೆ ನಮಿಗೇ ಬೌ..ಬೌ..’

`ಅರೆರೆ, ನಮ್ದು ಕುತ್ತೆ ನಮಿಗೇ ಬೌ..ಬೌ..’

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳು, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.
ಬ್ಲೂಜೆಪಿಯೆಂಬ ಕೊಳಕುಮಂಡಲ ಪಾರ್ಟಿಯು ದೇಶದ ತುಂಬೆಲ್ಲ ಕಾರ್ಯಕರ್ತರ ಹೆಸರಿನಲ್ಲಿ ಮಿಡಿನಾಗರಗಳನ್ನು ಸಾಕಿ, ವಿರೋಧಿಗಳ ಮೇಲೆ ಎಸೆಯುತ್ತಿರುವುದು ಗೊತ್ತೇ ಇದೆ. ಕಂಡಕಂಡವರಿಗೆಲ್ಲ ಕಚ್ಚಿ ಕಚ್ಚಿ ಅಭ್ಯಾಸವಾಗಿರುವ ಈ ಹಾವುಗಳು ಕಚ್ಚಲು ಬೇರೆ ಯಾರೂ ಸಿಗದೆ ಇತ್ತೀಚೆಗೆ ಬ್ಲೂಜೆಪಿ ಪಕ್ಷದವರನ್ನೇ ಅಗಿಯುತ್ತಿರುವುದು ಹೊಸ ಸಮಾಚಾರ. ಅಂತರ್ಧರ್ಮೀಯ ಮದುವೆಯಾದ ದಂಪತಿಗಳಿಗೆ ಪಾಸ್ ಪೋರ್ಟ್ ಕೊಡಲ್ಲ ಎಂದ ಸರ್ಕಾರಿ ಅಧಿಕಾರಿಯೊಬ್ಬನನ್ನು ಕೇಂದ್ರ ವಿದೇಶಾಂಗ ಮಂತ್ರಿ ಚೆಷ್ಮಾ ಸುರಾಜಮ್ಮ ಒದೆಯಬಾರದ ಜಾಗಕ್ಕೆ ಒದ್ದು ಕೆಲಸದಿಂದ ಓಡಿಸಿದ್ದರು. ಇಷ್ಟಕ್ಕೇ ರೊಚ್ಚಿಗೆದ್ದ ಬ್ಲೂಜೆಪಿಯ ಕಾರ್ಯಕರ್ತ ಸರ್ಪಗಳ ಪಡೆಯು ಚೆಶ್ಮಮ್ಮನನ್ನು ಕೊಲೆ ಮಾಡಲು, ತುಳಿದು ಸಾಯಿಸಲು ಕರೆ ಕೊಟ್ಟಿದ್ದವು. ಮುದ್ದು ಮಾಡಿ, ತಲೆಸವರಿ, ವಿಷವುಣಿಸಿ ಬೆಳೆಸಿದ ತಮ್ಮ ಸ್ವಂತ ಸರ್ಪಗಳೇ ತಿರುಗಿ ಬಿದ್ದು ಕಚ್ಚುತ್ತಿರುವುದರಿಂದ ಘಾಸಿಗೊಂಡ ಚೆಷ್ಮಮ್ಮ `ಅರೆರೆ, ನಮ್ದು ಕುತ್ತಾ ನಮಿಗೇ ಬೌ..ಬೌ..’ ಎಂದು ಕನವರಿಸುತ್ತಾ ಜೀವನದಲ್ಲಿ ಜಿಗುಪ್ಸೆ ಹುಟ್ಟಿಸಿಕೊಂಡಿದ್ದಾರೆಂದು ಅನಧಿಕೃತ ಮೂಲಗಳು ತಿಳಿಸಿವೆ.

******

ಬ್ರದಾನಮಂತ್ರಿ ಫಕೀರಪ್ಪನನ್ನು ರೋಡ್ ಶೋ ಟೈಮಿನಲ್ಲಿ ಆನೆಪಟಾಕಿ ಸರಕ್ಕೆ ಬೆಂಕಿಹಚ್ಚಿ ಎಸೆದು ಉಡೀಸ್ ಮಾಡಲು ದುಷ್ಕರ್ಮಿಗಳು ಹೊಂಚು ಹಾಕುತ್ತಿದ್ದಾರೆಂದು ಹಗಲುಕನಸು ಕಂಡ ಮಹಾರಾಷ್ಟ್ರ ಪೊಲೀಸರು ಈ ಕೆಟ್ಟಕನಸಿನ ಬಗ್ಗೆ ಬ್ರಧಾನಮಂತ್ರಿ ಕಚೇರಿಗೆ ಮಾಹಿತಿ ತಲುಪಿಸಿದ್ದಾರೆ. ಈ ತಳಬುಡವಿಲ್ಲದ ದುಸ್ವಪ್ನದ ಆಧಾರದ ಮೇಲೆ ಪಿ.ಎಂ ಫಕೀರಪ್ಪನಿಗೆ ಸೆಕ್ಯುರಿಟಿಯನ್ನು ಟೈಟ್ ಮಾಡಲಾಗಿದೆಯಂತೆ. ಹೊಸ ಆದೇಶದ ಪ್ರಕಾರ ಫಕೀರಪ್ಪನನ್ನು ದೇಶದ ಎಂ.ಎಲ್.ಎ, ಎಂಪಿಗಳು, ಅಧಿಕಾರಿಗಳೂ ಸಹ ಭೇಟಿ ಮಾಡಲು ನಿಬರ್ಂಧ ಹೇರಲಾಗಿದೆ. ಫಕೀರಪ್ಪನನ್ನು ಒಂದು ಪುರಿಮೂಟೆಯೊಳಗೆ ತುಂಬಿ, ಲಾರಿಯೊಂದಕ್ಕೆ ಎಸೆದು, ಆ ಲಾರಿಯ ಸುತ್ತ ಎಸ್.ಪಿ.ಜಿ ಕಮ್ಯಾಂಡೋಗಳು ಬಂದೂಕು ಹಿಡಿದು ಪಹರೆ ಕಾಯುತ್ತಿದ್ದಾರೆ ಎನ್ನಲಾಗಿದೆ. ತಿಂಡಿ, ಊಟ, ಸುಸ್ಸು ಮಾಡಲಷ್ಟೇ ಪುರಿಮೂಟೆಯಿಂದ ಹೊರಬರುವ ಫಕೀರಪ್ಪ, ಬಂದ ಕೆಲಸ ಮುಗಿಯುತ್ತಿದ್ದಂತೆ ಪುಸುಕ್ ಅಂತ ಲಾರಿ ಹತ್ತಿ ವಾಪಸ್ ಪುರಿಮೂಟೆಯೊಳಗೆ ಹೋಗಿ ಅವಿತು ಕುಳಿತುಕೊಳ್ಳುತ್ತಿದ್ದಾರೆಂದು ಅನಧಿಕೃತ ಮೂಲಗಳು ಸ್ಪಷ್ಟಪಡಿಸಿವೆ.

******

ರಾಜ್ಯ ರಾಜಕಾರಣದ ಕಲಬೆರಕೆ ಸರ್ಕಾರದಲ್ಲಿ ದಿನಕ್ಕೊಂದು ಧೀಂತಕಿಟತೋಂ ಅವಾಂತರಗಳನ್ನು ನೋಡಿ ನೋಡಿ ಕಣ್ಣು ಬೇನೆ ಬರಿಸಿಕೊಂಡಿರುವ ಸಮಾಜವಾದಿ ಸಿದ್ದಣ್ಣನವರು ಧರ್ಮಸ್ಥಳದ ಆಯುರ್ವೇದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆದೂ ಪಡೆದೂ ಬೇಜಾರಾಗಿರೋ ಸಿದ್ದಣ್ಣ ‘ಬೆರಕೆ ಸರ್ಕಾರದ ಆಯುಸ್ಸು ಇಷ್ಟು ತಿಂಗಳು, ಆಮೇಲಿದು ಕಾಲೆತ್ತಿಕೊಂಡು ಮಲಗುತ್ತದೆ’ ಅಂತ ದಿನಕ್ಕೊಂದು ಆಡಿಯೋ ರೆಕಾಡಿರ್ಂಗ್, ವಿಡಿಯೋ ಕ್ಲಿಪಿಂಗ್ ರಿಲೀಸ್ ಮಾಡುತ್ತ ಕುಮಾರಣ್ಣನ ಬೋಳುಮಂಡೆಯ ಮೇಲೆ ಟುಕುಟುಕು ಕುಟ್ಟಿಕೊಂಡು ಎಂಜಾಯ್ ಮಾಡುತ್ತಿರುವುದು ಕೈಕಮಾಂಡ್ ತಲೆ ಕೆಡಿಸಿದೆ. ಈ ಬಗ್ಗೆ ಚಿಂತಾಕ್ರಾಂತರಾದ ಕೈಕಮ್ಯಾಂಡ್ ಮುಖ್ಯಸ್ಥರು ಪೇಟದ ಹೆಗ್ಗಡೆಯವರಿಗೆ ಫೋನು ಮಾಡಿ, ಸಿದ್ದಣ್ಣನವರ ಚಿಕಿತ್ಸೆ ಮುಗಿಯುವವರೆಗೆ ಅವರು ಮಾತನಾಡಲು ಸಾಧ್ಯವಾಗದಂತೆ ಯಾವುದಾದರೂ ಬೇರನ್ನು ಅರೆದು ಸಿದ್ದಣ್ಣನಿಗೆ ಬಲವಂತವಾಗಿ ಕುಡಿಸುವಂತೆ ವಿನಂತಿ ಮಾಡಿಕೊಂಡಿದ್ದಾರೆಂದು ಸೋರಿಕೆ ಸುದ್ದಿಗಳು ತಿಳಿಸಿವೆ.

******

ಬೀದಿಬೀದಿಗಳಲ್ಲಿ ನಾಯಿಕೊಡೆಗಳಂತೆ ತಲೆಯೆತ್ತಿರುವ ಮೊಬೈಲ್ ರಿಪೇರಿ ಅಂಗಡಿಗಳ ಹುಡುಗರಿಗಿಂತ ಕಡಿಮೆ ಕಾಮನ್ ಸೆನ್ಸ್ ಮತ್ತು ಸೈನ್ಸ್ ತಿಳುವಳಿಕೆಯಿರೋ ‘ಪವನಜ್ಜ’ ಎಂಬ ವಯೋವೃದ್ಧ ಚೆಡ್ಡಿಯೊಂದು ತನ್ನ ಮಾನವನ್ನು ತಾನೇ ತೆಗೆದುಕೊಂಡಿರೋ ಘಟನೆ ವರದಿಯಾಗಿದೆ. ಮೊಬೈಲ್‍ಗಳಲ್ಲಿ ಅದಿದೆ, ಇದು ಹಂಗೆ ಕೆಲ್ಸ ಮಾಡುತ್ತೆ, ಅದು ಹಿಂಗೆ ಕೆಲ್ಸ ಮಾಡುತ್ತೆ ಅಂತ ಪತ್ರಿಕೆಗಳಲ್ಲಿ ಪುಂಗುವ ಈ ಹಳೇ ದೊಗಳೆಚೆಡ್ಡಿಯು ಪುಸ್ತಕ ನೋಡಿ ಪರೀಕ್ಷೆ ಬರೆಯುವ ಶಿಕ್ಷಣ ಇಲಾಖೆಯ ಹೊಸ ಆಲೋಚನೆಯನ್ನು ಮೀಸಲಾತಿಗೆ ಗಂಟುಹಾಕಿ ತನ್ನ ಪುಳಚಾರ್ ಪಾಲಿಟಿಕ್ಸನ್ನು ಬಟಾಬಯಲು ಮಾಡಿಕೊಂಡಿದೆ. ಮೀಸಲಾತಿ ಅನುಪಾತದ ಹಿಂದುಮುಂದು ಗೊತ್ತಿಲ್ಲದೆ ಕೆಕರುಮಕರು ಪಟ್ಟಿಯೊಂದನ್ನು ಫೇಸ್ಬುಕ್ಕಲ್ಲಿ ಪೋಸ್ಟ್ ಮಾಡಿರುವ ಪವನಜ್ಜ.. ತಾನೆಂಥ ಶ್ರೇಷ್ಟಜಾತಿಯ ಹುಳ ಎಂಬುದನ್ನು ಅಂಡು ತಟ್ಟಿಕೊಂಡು ಘೋಷಿಸಿ ಜನರಿಂದ ಛೀಥೂ ಎಂದು ಉಗಿಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ.

******

ಬಿಹಾರದಲ್ಲಿ ಲಲ್ಲೂ ಯಾದವ್ ಜೊತೆಗೆ ನೆಟ್ಟಗೆ ನಡೆಯುತ್ತಿದ್ದ ಕೂಡುಸಂಸಾರದ ಸರ್ಕಾರಕ್ಕೆ ಕೈ ಕೊಟ್ಟು ಬ್ಲೂಜೆಪಿಯೆಂಬ ಮಾನಸಿಕ ಅಸ್ವಸ್ಥ ಕತ್ತೆಯೊಂದರ ಜೊತೆಗೆ ಹೊಸ ಸಂಸಾರದ ಸರ್ಕಾರ ಮಾಡಿಕೊಂಡಿದ್ದ ನಿತೀಶ್ ಕುಮಾರ್‍ಗೆ ತಾನು ಓತಿಕ್ಯಾತಕ್ಕೆ ಹೆದರಿ ಹೆಬ್ಬಾವನ್ನು ತಬ್ಬಿಕೊಂಡಿದ್ದೇನೆ ಅಂತ ತಡವಾಗಿ ಅರಿವಾಗಿದೆಯತೆ. ಬ್ಲೂಜೆಪಿ ತಿಕ್ಕಲರು ಕೊಡ್ತಿರೋ ಚಿತ್ರಹಿಂಸೆಯಿಂದ ಹೇಗಾದರೂ ಸರಿ ತಪ್ಪಿಸಿಕೊಳ್ಳಲು ಹೆಣಗುತ್ತಿರೋ ನಿತೀಶ್, ಹಳೇ ಹಸ್ಬೆಂಡಿನ ಲೆಗ್ಗೇ ಗತಿ ಎಂಬ ತೀರ್ಮಾನಕ್ಕೆ ಬಂದು “ಲಲ್ಲೂ ಮಾಮ, ಐ ಲವ್ ಯೂ ಮಾಮಾ “ ಎಂದು ಲಲ್ಲೂ ಯಾದವ್‍ಗೆ ಮೆಸೇಜು ಪಾಸ್ ಮಾಡ್ತಿದ್ದಾರೆಂದು ಗೊತ್ತಾಗಿದೆ. ಹೋದ ಬಂದಲ್ಲೆಲ್ಲ ಮಕಮೂತಿಗೆ ಇಕ್ಕಿಸಿಕೊಂಡು ಏದುಸಿರು ಬಿಡುತ್ತಿರೋ ಹಮೀದ್ ಷಾ ಎಂಬ ಹಳೇ ಕ್ರಿಮಿನಲ್ ಗಿರಾಕಿಗೆ ಈ ಬೆಳವಣಿಗೆಯಿಂದ ಹೊಸದಾಗಿ ಬೇಧಿ ಕಿತ್ಕೊಂಡಿದೆಯೆಂದು ಗುಪ್ತಮೂಲಗಳು ತಿಳಿಸಿವೆ. ಬಿಹಾರದಲ್ಲೇನಾದ್ರೂ ಎಡವಟ್ಟಾದರೆ ಅಕ್ಕಪಕ್ಕದ ರಾಜ್ಯಗಳೂ ಕೈಗೆ ಕೆರ ಎತ್ತಿಕೊಳ್ತವೆ ಅಂತ ಗಾಬರಿಯಾಗಿರುವ ಡ್ರಾಮಾ ಮಾಸ್ಟರ್ ಫಕೀರಪ್ಪ ಪಕೋಡೇಂದ್ರನು ನಿತೀಶ್ ಕುಮಾರ್‍ಗೆ ತಕ್ಷಣ ಫೋನ್ ಮಾಡಿ “ಬಾ.. ಮುತ್ತು ಕೊಡುವೆ ಕಂದನೆ, ನನ್ನ ಮುದ್ದು ರಾಜ” ಎಂಬ ಹಾಡನ್ನು ಹಾಡಿದರಂತೆ.. ಇದಕ್ಕೆ ಉತ್ತರಿಸಿದ ನಿತೀಶ್ ಕುಮಾರ್ “ನಾನು ಆ ಟೈಪ್‍ನವನಲ್ಲ… ಮುಚ್ಕೊಂಡ್ ಫೋನ್ ಮಡಗು” ಎಂದು ಖಡಕ್‍ಆಗಿ ಹೇಳಿ ಫೋನು ಕುಕ್ಕಿದರೆಂದು ಬಲ್ಲ ಮೂಲಗಳು ತಿಳಿಸಿವೆ.

******

ಕಳೆದ ಮುವ್ವತ್ತು ವರ್ಷಗಳಿಂದಲೂ ‘ಮಂದಿರ್ ವಹೀ ಬನಾಯೇಂಗೆ, ಇಟ್ಟಿಗೆ ಕೊಡಿ, ಚಪ್ಪಡಿ ಕೊಡಿ, ಮಣ್ಣು ಕೊಡಿ, ಸಿಮೆಂಟು ಕೊಡಿ’ ಅಂತ ಗಂಟಲು ಹರಿದುಕೊಳ್ತಿದ್ದ ದೊಗಳೆಚಡ್ಡಿಗಳು 2014ರಲ್ಲಿ ತಮ್ಮದೇ ಮೆಜಾರಿಟಿ ಸರ್ಕಾರ ಬಂದ ತಕ್ಷಣ ತಮ್ಮ ನವರಂಧ್ರಗಳಿಗೂ ಮಂದಿರದ ಹೆಸರಿನಲ್ಲಿ ಕಲೆಕ್ಷನ್ ಮಾಡಿದ ಐಟಂಗಳನ್ನು ಇಟ್ಟುಕೊಂಡು ಗಪ್ ಚುಪ್ ಆಗಿದ್ದರು. 4 ವರ್ಷ ಇದೇ “ಗಪ್ ಚುಪ್ಪಾಸನ” ಮಾಡುತ್ತಿದ್ದ ಇದೇ ದೊಗಳೆಚಡ್ಡಿಗಳು, ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ. ಮತ್ತೆ “ಮಂದಿರ್ ವಹೀ ಬನಾಯೇಂಗೆ” ಎಂದು ಥಕಥಕ ಕುಣಿಯುತ್ತಿವೆ. ನಿಮ್ಮದೇ ಸರ್ಕಾರ, ನಿಮ್ಮದೇ ಕಾನೂನು, ನಿಮ್ಮದೇ ಆಡಳಿತ, ನಿಮ್ಮದೇ ರಾಜ್ಯ, ನಿಮ್ಮದೇ ಮುಖ್ಯಮಂತ್ರಿ, ಇಷ್ಟೆಲ್ಲ ಇದ್ದು ಮಂದಿರ ಕಟ್ಟದೇ ಇಷ್ಟು ವರ್ಷ ಎಲ್ಲಿ ಎಂಜಲೆತ್ತೋಕೆ ಹೋಗಿದ್ರಿ ಅಂತ ದೊಗಳೆ ಚಡ್ಡಿಗಳಿಗೆ ಜನ ಉಗಿಯುತ್ತಿದ್ದಾರೆ. ಇದನ್ನು ಕೇರು ಮಾಡದ ದೊಗಳೆಚಡ್ಡಿಗಳು ಅದೇ ಚಡ್ಡಿಯಲ್ಲಿ ಉಗುಳುಬಿದ್ದ ಮುಖವನ್ನು ಒರೆಸಿಕೊಂಡು “ಮಂದಿರ್ ವಹೀ….” ಅಂತ ತಲೆ ಮೇಲೆ ಟವೆಲ್ ಹಾಕಿಕೊಂಡು ಹತ್ತಿರದ ವೈನ್ ಸ್ಟೋರ್ ಕಡೆಗೆ ಠೀವಿಯಿಂದ ಹೆಜ್ಜೆಹಾಕಿದರು ಎಂಬ ಸುದ್ದಿ ಲಭ್ಯವಾಗಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...