Homeಅಂಕಣಗಳು`ಅರೆರೆ, ನಮ್ದು ಕುತ್ತೆ ನಮಿಗೇ ಬೌ..ಬೌ..’

`ಅರೆರೆ, ನಮ್ದು ಕುತ್ತೆ ನಮಿಗೇ ಬೌ..ಬೌ..’

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳು, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.
ಬ್ಲೂಜೆಪಿಯೆಂಬ ಕೊಳಕುಮಂಡಲ ಪಾರ್ಟಿಯು ದೇಶದ ತುಂಬೆಲ್ಲ ಕಾರ್ಯಕರ್ತರ ಹೆಸರಿನಲ್ಲಿ ಮಿಡಿನಾಗರಗಳನ್ನು ಸಾಕಿ, ವಿರೋಧಿಗಳ ಮೇಲೆ ಎಸೆಯುತ್ತಿರುವುದು ಗೊತ್ತೇ ಇದೆ. ಕಂಡಕಂಡವರಿಗೆಲ್ಲ ಕಚ್ಚಿ ಕಚ್ಚಿ ಅಭ್ಯಾಸವಾಗಿರುವ ಈ ಹಾವುಗಳು ಕಚ್ಚಲು ಬೇರೆ ಯಾರೂ ಸಿಗದೆ ಇತ್ತೀಚೆಗೆ ಬ್ಲೂಜೆಪಿ ಪಕ್ಷದವರನ್ನೇ ಅಗಿಯುತ್ತಿರುವುದು ಹೊಸ ಸಮಾಚಾರ. ಅಂತರ್ಧರ್ಮೀಯ ಮದುವೆಯಾದ ದಂಪತಿಗಳಿಗೆ ಪಾಸ್ ಪೋರ್ಟ್ ಕೊಡಲ್ಲ ಎಂದ ಸರ್ಕಾರಿ ಅಧಿಕಾರಿಯೊಬ್ಬನನ್ನು ಕೇಂದ್ರ ವಿದೇಶಾಂಗ ಮಂತ್ರಿ ಚೆಷ್ಮಾ ಸುರಾಜಮ್ಮ ಒದೆಯಬಾರದ ಜಾಗಕ್ಕೆ ಒದ್ದು ಕೆಲಸದಿಂದ ಓಡಿಸಿದ್ದರು. ಇಷ್ಟಕ್ಕೇ ರೊಚ್ಚಿಗೆದ್ದ ಬ್ಲೂಜೆಪಿಯ ಕಾರ್ಯಕರ್ತ ಸರ್ಪಗಳ ಪಡೆಯು ಚೆಶ್ಮಮ್ಮನನ್ನು ಕೊಲೆ ಮಾಡಲು, ತುಳಿದು ಸಾಯಿಸಲು ಕರೆ ಕೊಟ್ಟಿದ್ದವು. ಮುದ್ದು ಮಾಡಿ, ತಲೆಸವರಿ, ವಿಷವುಣಿಸಿ ಬೆಳೆಸಿದ ತಮ್ಮ ಸ್ವಂತ ಸರ್ಪಗಳೇ ತಿರುಗಿ ಬಿದ್ದು ಕಚ್ಚುತ್ತಿರುವುದರಿಂದ ಘಾಸಿಗೊಂಡ ಚೆಷ್ಮಮ್ಮ `ಅರೆರೆ, ನಮ್ದು ಕುತ್ತಾ ನಮಿಗೇ ಬೌ..ಬೌ..’ ಎಂದು ಕನವರಿಸುತ್ತಾ ಜೀವನದಲ್ಲಿ ಜಿಗುಪ್ಸೆ ಹುಟ್ಟಿಸಿಕೊಂಡಿದ್ದಾರೆಂದು ಅನಧಿಕೃತ ಮೂಲಗಳು ತಿಳಿಸಿವೆ.

******

ಬ್ರದಾನಮಂತ್ರಿ ಫಕೀರಪ್ಪನನ್ನು ರೋಡ್ ಶೋ ಟೈಮಿನಲ್ಲಿ ಆನೆಪಟಾಕಿ ಸರಕ್ಕೆ ಬೆಂಕಿಹಚ್ಚಿ ಎಸೆದು ಉಡೀಸ್ ಮಾಡಲು ದುಷ್ಕರ್ಮಿಗಳು ಹೊಂಚು ಹಾಕುತ್ತಿದ್ದಾರೆಂದು ಹಗಲುಕನಸು ಕಂಡ ಮಹಾರಾಷ್ಟ್ರ ಪೊಲೀಸರು ಈ ಕೆಟ್ಟಕನಸಿನ ಬಗ್ಗೆ ಬ್ರಧಾನಮಂತ್ರಿ ಕಚೇರಿಗೆ ಮಾಹಿತಿ ತಲುಪಿಸಿದ್ದಾರೆ. ಈ ತಳಬುಡವಿಲ್ಲದ ದುಸ್ವಪ್ನದ ಆಧಾರದ ಮೇಲೆ ಪಿ.ಎಂ ಫಕೀರಪ್ಪನಿಗೆ ಸೆಕ್ಯುರಿಟಿಯನ್ನು ಟೈಟ್ ಮಾಡಲಾಗಿದೆಯಂತೆ. ಹೊಸ ಆದೇಶದ ಪ್ರಕಾರ ಫಕೀರಪ್ಪನನ್ನು ದೇಶದ ಎಂ.ಎಲ್.ಎ, ಎಂಪಿಗಳು, ಅಧಿಕಾರಿಗಳೂ ಸಹ ಭೇಟಿ ಮಾಡಲು ನಿಬರ್ಂಧ ಹೇರಲಾಗಿದೆ. ಫಕೀರಪ್ಪನನ್ನು ಒಂದು ಪುರಿಮೂಟೆಯೊಳಗೆ ತುಂಬಿ, ಲಾರಿಯೊಂದಕ್ಕೆ ಎಸೆದು, ಆ ಲಾರಿಯ ಸುತ್ತ ಎಸ್.ಪಿ.ಜಿ ಕಮ್ಯಾಂಡೋಗಳು ಬಂದೂಕು ಹಿಡಿದು ಪಹರೆ ಕಾಯುತ್ತಿದ್ದಾರೆ ಎನ್ನಲಾಗಿದೆ. ತಿಂಡಿ, ಊಟ, ಸುಸ್ಸು ಮಾಡಲಷ್ಟೇ ಪುರಿಮೂಟೆಯಿಂದ ಹೊರಬರುವ ಫಕೀರಪ್ಪ, ಬಂದ ಕೆಲಸ ಮುಗಿಯುತ್ತಿದ್ದಂತೆ ಪುಸುಕ್ ಅಂತ ಲಾರಿ ಹತ್ತಿ ವಾಪಸ್ ಪುರಿಮೂಟೆಯೊಳಗೆ ಹೋಗಿ ಅವಿತು ಕುಳಿತುಕೊಳ್ಳುತ್ತಿದ್ದಾರೆಂದು ಅನಧಿಕೃತ ಮೂಲಗಳು ಸ್ಪಷ್ಟಪಡಿಸಿವೆ.

******

ರಾಜ್ಯ ರಾಜಕಾರಣದ ಕಲಬೆರಕೆ ಸರ್ಕಾರದಲ್ಲಿ ದಿನಕ್ಕೊಂದು ಧೀಂತಕಿಟತೋಂ ಅವಾಂತರಗಳನ್ನು ನೋಡಿ ನೋಡಿ ಕಣ್ಣು ಬೇನೆ ಬರಿಸಿಕೊಂಡಿರುವ ಸಮಾಜವಾದಿ ಸಿದ್ದಣ್ಣನವರು ಧರ್ಮಸ್ಥಳದ ಆಯುರ್ವೇದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆದೂ ಪಡೆದೂ ಬೇಜಾರಾಗಿರೋ ಸಿದ್ದಣ್ಣ ‘ಬೆರಕೆ ಸರ್ಕಾರದ ಆಯುಸ್ಸು ಇಷ್ಟು ತಿಂಗಳು, ಆಮೇಲಿದು ಕಾಲೆತ್ತಿಕೊಂಡು ಮಲಗುತ್ತದೆ’ ಅಂತ ದಿನಕ್ಕೊಂದು ಆಡಿಯೋ ರೆಕಾಡಿರ್ಂಗ್, ವಿಡಿಯೋ ಕ್ಲಿಪಿಂಗ್ ರಿಲೀಸ್ ಮಾಡುತ್ತ ಕುಮಾರಣ್ಣನ ಬೋಳುಮಂಡೆಯ ಮೇಲೆ ಟುಕುಟುಕು ಕುಟ್ಟಿಕೊಂಡು ಎಂಜಾಯ್ ಮಾಡುತ್ತಿರುವುದು ಕೈಕಮಾಂಡ್ ತಲೆ ಕೆಡಿಸಿದೆ. ಈ ಬಗ್ಗೆ ಚಿಂತಾಕ್ರಾಂತರಾದ ಕೈಕಮ್ಯಾಂಡ್ ಮುಖ್ಯಸ್ಥರು ಪೇಟದ ಹೆಗ್ಗಡೆಯವರಿಗೆ ಫೋನು ಮಾಡಿ, ಸಿದ್ದಣ್ಣನವರ ಚಿಕಿತ್ಸೆ ಮುಗಿಯುವವರೆಗೆ ಅವರು ಮಾತನಾಡಲು ಸಾಧ್ಯವಾಗದಂತೆ ಯಾವುದಾದರೂ ಬೇರನ್ನು ಅರೆದು ಸಿದ್ದಣ್ಣನಿಗೆ ಬಲವಂತವಾಗಿ ಕುಡಿಸುವಂತೆ ವಿನಂತಿ ಮಾಡಿಕೊಂಡಿದ್ದಾರೆಂದು ಸೋರಿಕೆ ಸುದ್ದಿಗಳು ತಿಳಿಸಿವೆ.

******

ಬೀದಿಬೀದಿಗಳಲ್ಲಿ ನಾಯಿಕೊಡೆಗಳಂತೆ ತಲೆಯೆತ್ತಿರುವ ಮೊಬೈಲ್ ರಿಪೇರಿ ಅಂಗಡಿಗಳ ಹುಡುಗರಿಗಿಂತ ಕಡಿಮೆ ಕಾಮನ್ ಸೆನ್ಸ್ ಮತ್ತು ಸೈನ್ಸ್ ತಿಳುವಳಿಕೆಯಿರೋ ‘ಪವನಜ್ಜ’ ಎಂಬ ವಯೋವೃದ್ಧ ಚೆಡ್ಡಿಯೊಂದು ತನ್ನ ಮಾನವನ್ನು ತಾನೇ ತೆಗೆದುಕೊಂಡಿರೋ ಘಟನೆ ವರದಿಯಾಗಿದೆ. ಮೊಬೈಲ್‍ಗಳಲ್ಲಿ ಅದಿದೆ, ಇದು ಹಂಗೆ ಕೆಲ್ಸ ಮಾಡುತ್ತೆ, ಅದು ಹಿಂಗೆ ಕೆಲ್ಸ ಮಾಡುತ್ತೆ ಅಂತ ಪತ್ರಿಕೆಗಳಲ್ಲಿ ಪುಂಗುವ ಈ ಹಳೇ ದೊಗಳೆಚೆಡ್ಡಿಯು ಪುಸ್ತಕ ನೋಡಿ ಪರೀಕ್ಷೆ ಬರೆಯುವ ಶಿಕ್ಷಣ ಇಲಾಖೆಯ ಹೊಸ ಆಲೋಚನೆಯನ್ನು ಮೀಸಲಾತಿಗೆ ಗಂಟುಹಾಕಿ ತನ್ನ ಪುಳಚಾರ್ ಪಾಲಿಟಿಕ್ಸನ್ನು ಬಟಾಬಯಲು ಮಾಡಿಕೊಂಡಿದೆ. ಮೀಸಲಾತಿ ಅನುಪಾತದ ಹಿಂದುಮುಂದು ಗೊತ್ತಿಲ್ಲದೆ ಕೆಕರುಮಕರು ಪಟ್ಟಿಯೊಂದನ್ನು ಫೇಸ್ಬುಕ್ಕಲ್ಲಿ ಪೋಸ್ಟ್ ಮಾಡಿರುವ ಪವನಜ್ಜ.. ತಾನೆಂಥ ಶ್ರೇಷ್ಟಜಾತಿಯ ಹುಳ ಎಂಬುದನ್ನು ಅಂಡು ತಟ್ಟಿಕೊಂಡು ಘೋಷಿಸಿ ಜನರಿಂದ ಛೀಥೂ ಎಂದು ಉಗಿಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ.

******

ಬಿಹಾರದಲ್ಲಿ ಲಲ್ಲೂ ಯಾದವ್ ಜೊತೆಗೆ ನೆಟ್ಟಗೆ ನಡೆಯುತ್ತಿದ್ದ ಕೂಡುಸಂಸಾರದ ಸರ್ಕಾರಕ್ಕೆ ಕೈ ಕೊಟ್ಟು ಬ್ಲೂಜೆಪಿಯೆಂಬ ಮಾನಸಿಕ ಅಸ್ವಸ್ಥ ಕತ್ತೆಯೊಂದರ ಜೊತೆಗೆ ಹೊಸ ಸಂಸಾರದ ಸರ್ಕಾರ ಮಾಡಿಕೊಂಡಿದ್ದ ನಿತೀಶ್ ಕುಮಾರ್‍ಗೆ ತಾನು ಓತಿಕ್ಯಾತಕ್ಕೆ ಹೆದರಿ ಹೆಬ್ಬಾವನ್ನು ತಬ್ಬಿಕೊಂಡಿದ್ದೇನೆ ಅಂತ ತಡವಾಗಿ ಅರಿವಾಗಿದೆಯತೆ. ಬ್ಲೂಜೆಪಿ ತಿಕ್ಕಲರು ಕೊಡ್ತಿರೋ ಚಿತ್ರಹಿಂಸೆಯಿಂದ ಹೇಗಾದರೂ ಸರಿ ತಪ್ಪಿಸಿಕೊಳ್ಳಲು ಹೆಣಗುತ್ತಿರೋ ನಿತೀಶ್, ಹಳೇ ಹಸ್ಬೆಂಡಿನ ಲೆಗ್ಗೇ ಗತಿ ಎಂಬ ತೀರ್ಮಾನಕ್ಕೆ ಬಂದು “ಲಲ್ಲೂ ಮಾಮ, ಐ ಲವ್ ಯೂ ಮಾಮಾ “ ಎಂದು ಲಲ್ಲೂ ಯಾದವ್‍ಗೆ ಮೆಸೇಜು ಪಾಸ್ ಮಾಡ್ತಿದ್ದಾರೆಂದು ಗೊತ್ತಾಗಿದೆ. ಹೋದ ಬಂದಲ್ಲೆಲ್ಲ ಮಕಮೂತಿಗೆ ಇಕ್ಕಿಸಿಕೊಂಡು ಏದುಸಿರು ಬಿಡುತ್ತಿರೋ ಹಮೀದ್ ಷಾ ಎಂಬ ಹಳೇ ಕ್ರಿಮಿನಲ್ ಗಿರಾಕಿಗೆ ಈ ಬೆಳವಣಿಗೆಯಿಂದ ಹೊಸದಾಗಿ ಬೇಧಿ ಕಿತ್ಕೊಂಡಿದೆಯೆಂದು ಗುಪ್ತಮೂಲಗಳು ತಿಳಿಸಿವೆ. ಬಿಹಾರದಲ್ಲೇನಾದ್ರೂ ಎಡವಟ್ಟಾದರೆ ಅಕ್ಕಪಕ್ಕದ ರಾಜ್ಯಗಳೂ ಕೈಗೆ ಕೆರ ಎತ್ತಿಕೊಳ್ತವೆ ಅಂತ ಗಾಬರಿಯಾಗಿರುವ ಡ್ರಾಮಾ ಮಾಸ್ಟರ್ ಫಕೀರಪ್ಪ ಪಕೋಡೇಂದ್ರನು ನಿತೀಶ್ ಕುಮಾರ್‍ಗೆ ತಕ್ಷಣ ಫೋನ್ ಮಾಡಿ “ಬಾ.. ಮುತ್ತು ಕೊಡುವೆ ಕಂದನೆ, ನನ್ನ ಮುದ್ದು ರಾಜ” ಎಂಬ ಹಾಡನ್ನು ಹಾಡಿದರಂತೆ.. ಇದಕ್ಕೆ ಉತ್ತರಿಸಿದ ನಿತೀಶ್ ಕುಮಾರ್ “ನಾನು ಆ ಟೈಪ್‍ನವನಲ್ಲ… ಮುಚ್ಕೊಂಡ್ ಫೋನ್ ಮಡಗು” ಎಂದು ಖಡಕ್‍ಆಗಿ ಹೇಳಿ ಫೋನು ಕುಕ್ಕಿದರೆಂದು ಬಲ್ಲ ಮೂಲಗಳು ತಿಳಿಸಿವೆ.

******

ಕಳೆದ ಮುವ್ವತ್ತು ವರ್ಷಗಳಿಂದಲೂ ‘ಮಂದಿರ್ ವಹೀ ಬನಾಯೇಂಗೆ, ಇಟ್ಟಿಗೆ ಕೊಡಿ, ಚಪ್ಪಡಿ ಕೊಡಿ, ಮಣ್ಣು ಕೊಡಿ, ಸಿಮೆಂಟು ಕೊಡಿ’ ಅಂತ ಗಂಟಲು ಹರಿದುಕೊಳ್ತಿದ್ದ ದೊಗಳೆಚಡ್ಡಿಗಳು 2014ರಲ್ಲಿ ತಮ್ಮದೇ ಮೆಜಾರಿಟಿ ಸರ್ಕಾರ ಬಂದ ತಕ್ಷಣ ತಮ್ಮ ನವರಂಧ್ರಗಳಿಗೂ ಮಂದಿರದ ಹೆಸರಿನಲ್ಲಿ ಕಲೆಕ್ಷನ್ ಮಾಡಿದ ಐಟಂಗಳನ್ನು ಇಟ್ಟುಕೊಂಡು ಗಪ್ ಚುಪ್ ಆಗಿದ್ದರು. 4 ವರ್ಷ ಇದೇ “ಗಪ್ ಚುಪ್ಪಾಸನ” ಮಾಡುತ್ತಿದ್ದ ಇದೇ ದೊಗಳೆಚಡ್ಡಿಗಳು, ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ. ಮತ್ತೆ “ಮಂದಿರ್ ವಹೀ ಬನಾಯೇಂಗೆ” ಎಂದು ಥಕಥಕ ಕುಣಿಯುತ್ತಿವೆ. ನಿಮ್ಮದೇ ಸರ್ಕಾರ, ನಿಮ್ಮದೇ ಕಾನೂನು, ನಿಮ್ಮದೇ ಆಡಳಿತ, ನಿಮ್ಮದೇ ರಾಜ್ಯ, ನಿಮ್ಮದೇ ಮುಖ್ಯಮಂತ್ರಿ, ಇಷ್ಟೆಲ್ಲ ಇದ್ದು ಮಂದಿರ ಕಟ್ಟದೇ ಇಷ್ಟು ವರ್ಷ ಎಲ್ಲಿ ಎಂಜಲೆತ್ತೋಕೆ ಹೋಗಿದ್ರಿ ಅಂತ ದೊಗಳೆ ಚಡ್ಡಿಗಳಿಗೆ ಜನ ಉಗಿಯುತ್ತಿದ್ದಾರೆ. ಇದನ್ನು ಕೇರು ಮಾಡದ ದೊಗಳೆಚಡ್ಡಿಗಳು ಅದೇ ಚಡ್ಡಿಯಲ್ಲಿ ಉಗುಳುಬಿದ್ದ ಮುಖವನ್ನು ಒರೆಸಿಕೊಂಡು “ಮಂದಿರ್ ವಹೀ….” ಅಂತ ತಲೆ ಮೇಲೆ ಟವೆಲ್ ಹಾಕಿಕೊಂಡು ಹತ್ತಿರದ ವೈನ್ ಸ್ಟೋರ್ ಕಡೆಗೆ ಠೀವಿಯಿಂದ ಹೆಜ್ಜೆಹಾಕಿದರು ಎಂಬ ಸುದ್ದಿ ಲಭ್ಯವಾಗಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...