Homeಅಂತರಾಷ್ಟ್ರೀಯಅರ್ನಾಬ್ ಗೋಸ್ವಾಮಿ boycott Pakistana ಅಂದ್ರೆ, ಸೌದಿ ರಾಜಕುಮಾರನ ಮುಂದೆ friendship Pakistana ಅಂದ್ರು ಮೋದಿ!

ಅರ್ನಾಬ್ ಗೋಸ್ವಾಮಿ boycott Pakistana ಅಂದ್ರೆ, ಸೌದಿ ರಾಜಕುಮಾರನ ಮುಂದೆ friendship Pakistana ಅಂದ್ರು ಮೋದಿ!

- Advertisement -
- Advertisement -

ಪುಲ್ವಾಮಾ ಭಯೋತ್ಪಾದಾಕ ದಾಳಿ ನಡೆದು ಸರಿಯಾಗಿ ಆರು ದಿನಗಳ ನಂತರ ಫೆಬ್ರವರಿ 20ರಂದು ಪ್ರಧಾನಿ ಮೋದಿಯವರು ಮತ್ತು ಸೌದಿ ಅರೇಬಿಯಾದ ರಾಜಕುಮಾರ ಅಬ್ದುಲ್ಲಾ (ಎಂಬಿಎಸ್) ಜೊತೆಯಾಗಿ ಬಿಡುಗಡೆ ಮಾಡಿದ ಉಭಯ ದೇಶಗಳ ಜಂಟಿ ಹೇಳಿಕೆ ಮೋದಿಯವರ ಸಮರ್ಥಕರಿಗೆ, ಮುಖ್ಯವಾಗಿ ಮೀಡಿಯಾದಲ್ಲಿ ಅವರ ಪರ ಚಿಯರ್ ಮಾಡುವ ಅರ್ನಾಬ್ ಗೋಸ್ವಾಮಿಯಂತಹ ಆಂಕರುಗಳಿಗೆ ಭಾರೀ ನಿರಾಸೆ ಉಂಟುಮಾಡಿತ್ತು. ಯಾಕೆಂದರೆ ಪುಲ್ವಾಮಾ ದಾಳಿಗೆ ಪಾಕಿಸ್ತಾನವನ್ನು ಖಂಡಿಸುವಂತ ಒಂದೇಒಂದು ಸಾಲೂ ಅದರಲ್ಲಿ ಇರಲಿಲ್ಲ. ಅರ್ಥಾತ್, ಸೌದಿ ರಾಜಕುಮಾರನಿಗೆ ಪಾಕಿಸ್ತಾನದ ಡಬಲ್ ಸ್ಟಾಂಡರ್ಡ್ ಅರ್ಥ ಮಾಡಿಸುವ ವಿಚಾರದಲ್ಲಿ ಮೋದಿ ಸಂಪೂರ್ಣವಾಗಿ ಸೋತುಹೋಗಿದ್ದರು. ಬದಲಿಗೆ ಆ ಹೇಳಿಕೆಯಲ್ಲಿ ಭಾರತ-ಪಾಕಿಸ್ತಾನದ ನಡುವೆ ಸಂಬಂಧ ವೃದ್ಧಿಯಾಗಬೇಕು ಎಂಬ ಆಶಯವಿತ್ತು. ದಾಯಾದಿ ದೇಶಗಳ ನಡುವೆ ಸಂಬಂಧ ಸುಧಾರಿಸಬೇಕು ಎನ್ನುವುದೇನೊ ಒಪ್ಪಬಹುದಾದ ಸಂಗತಿ, ಆದರೆ ಇಂಥಾ ಭಯೋತ್ಪಾದನೆ ದಾಳಿ ನಡೆದ ಸಂದರ್ಭದಲ್ಲಿ ಹೇಳುವ ಮಾತಾ ಇದು. ಅದರಲ್ಲು, ಪುಲ್ವಾಮಾ ದಾಳಿಯ ಸುದ್ದಿ ತಿಳಿದ ಮೇಲೆ ಝಾನ್ಸಿ ರ್ಯಾಲಿಯಲ್ಲಿ ಸ್ವತಃ ಮೋದಿಯವರೇ `ಮೋದಿಯ ಆಳ್ವಿಕೆಯಲ್ಲಿ ಭಾರತ ಏಳಿಗೆ ಆಗುತ್ತಿರೋದನ್ನು ಸಹಿಸದ ಹೊಟ್ಟೆಕಿಚ್ಚಿನ ದೇಶದವಾದ ಪಾಕಿಸ್ತಾನ ಇಂಥಾ ದಾಳಿ ನಡೆಸಿದೆ’ ಎಂದು ದೂರಿದ್ದರು. ಹಾಗಿರುವಾಗ ಇಂಡಿಯಾ-ಸೌದಿ ಜಂಟಿ ಹೇಳಿಕೆಯಲ್ಲಿ ಪಾಕಿಸ್ತಾನವನ್ನು ಖಂಡಿಸದೆ ಅದರ ಜೊತೆ ಸಂಬಂಧ ವೃದ್ಧಿಯ ಪ್ರಸ್ತಾಪ ಬಂದಿದೆಯೆಂದರೆ ಮೋದಿ ಜಾಗತಿಕ ವೇದಿಕೆಯಲ್ಲಿ ಸೋತಿದ್ದಾರೆ ಅಂತ ತಾನೇ ಅರ್ಥ!

ಜಂಟಿ ಹೇಳಿಕೆಯಲ್ಲಿ ಪುಲ್ವಾಮ ದಾಳಿಯನ್ನು ಖಂಡಿಸಲಾಗಿದೆಯಾದರು, ಅದಕ್ಕೆ ಪಾಕಿಸ್ತಾನವನ್ನು ಹೊಣೆ ಎಂದು ಎಲ್ಲೂ ಕರೆದಿಲ್ಲ. “ಜಮ್ಮು ಮತ್ತು ಕಾಶ್ಮೀರಾದ ಪುಲ್ವಾಮಾದಲ್ಲಿ 14 ಫೆಬ್ರವರಿ 2019ರಂದು ಭಾರತ ಭದ್ರತಾ ಪಡೆಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನ ಮಂತ್ರಿಗಳು ಮತ್ತು ಘನತೆವೆತ್ತ ದೊರೆಗಳು ಖಂಡಿಸುತ್ತಾರೆ” ಎಂದಷ್ಟೇ ಅದರಲ್ಲಿದೆ.

ಇದೇ ಜಂಟಿ ಹೇಳಿಕೆಯಲ್ಲಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿರುವ ರಾಷ್ಟ್ರಗಳ ಬಗ್ಗೆ ಮಾತಾಡುವಾಗಲೂ ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸಿಲ್ಲ! “ಭಯೋತ್ಪಾದನೆಯನ್ನು ತಮ್ಮ ಆಡಳಿತ ನೀತಿಯ ಒಂದು ಅಸ್ತ್ರವನ್ನಾಗಿ ಮಾಡಿಕೊಂಡ ಎಲ್ಲಾ ರಾಷ್ಟ್ರಗಳು ಅದನ್ನು ತ್ಯಜಿಸಬೇಕು ಎಂದು ಉಭಯ ದೇಶಗಳು ಕರೆಕೊಡುತ್ತವೆ. ಬೇರೆ ದೇಶಗಳ ಮೇಲೆ ಭಯೋತ್ಪಾದಕ ದಾಳಿಗಳನ್ನು ನಡೆಸಲು ಮಿಸೈಲ್ ಮತ್ತು ಡ್ರೋಣ್ ಗಳನ್ನು ಒಳಗೊಂಡಂತೆ ಯಾವ ಶಸ್ತ್ರಾಸ್ತ್ರಗಳನ್ನೂ ಪೂರೈಕೆ ಮಾಡಬಾರದು ಎಂಬುದಾಗಿಯೂ ನಾವು ಕರೆಕೊಡುತ್ತೇವೆ”.

ಹೀಗೆ ಮುಂದುವರೆಯುವ ಹೇಳಿಕೆಯು, “ಉಗ್ರವಾದ ಮತ್ತು ಭಯೋತ್ಪಾದನೆಗಳು ಎಲ್ಲಾ ದೇಶಗಳು ಮತ್ತು ಸಮಾಜಗಳಿಗೆ ಕಂಟಕ ಪ್ರಾಯವಾದವು ಎಂಬುದನ್ನು ದೃಢಪಡಿಸುತ್ತಲೇ, ಈ ಜಾಗತಿಕ ಪಿಡುಗನ್ನು ಯಾವುದೇ ನಿರ್ದಿಷ್ಟ ಜನಾಂಗ, ಧರ್ಮ ಅಥವಾ ಸಂಸ್ಕೃತಿಗೆ ತಳುಕು ಹಾಕುವ ಯಾವುದೇ ಪ್ರಯತ್ನವನ್ನು ಉಭಯ ರಾಷ್ಟ್ರಗಳು ತಿರಸ್ಕರಿಸುತ್ತವೆ. ಇತರೆ ದೇಶಗಳ ಮೇಲೆ ಭಯೋತ್ಪಾದನೆಯನ್ನು ಒಂದು ಅಸ್ತ್ರವಾಗಿ ಪ್ರಯೋಗಿಸದಂತೆ; ಈಗಾಗಲೇ ತಮ್ಮ ಒಳಗೆ ಭಯೋತ್ಪಾದಕ ಸಂಘಟನೆಗಳು ಇದ್ದರೆ ಅವುಗಳನ್ನು ನಾಶ ಮಾಡುವಂತೆ ಮತ್ತು ಬೇರೆ ರಾಷ್ಟ್ರಗಳ ಮೇಲೆ ಭಯೋತ್ಪಾದನಾ ದಾಳಿಗೆ ಯಾವುದೇ ರೀತಿಯ ನೆರವು, ಹಣಕಾಸು ನೀಡದಂತೆ; ಮತ್ತು ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಸಮಾಜಘಾತುಕರನ್ನು ನ್ಯಾಯಾಲಯದ ವ್ಯಾಪ್ತಿಗೆ ತರುವಂತೆ ಎಲ್ಲಾ ದೇಶಗಳಿಗೆ ಉಭಯ ದೇಶಗಳು ಕರೆಕೊಡುತ್ತೇವೆ.”

ಇಲ್ಲು ಸಹಾ ಎಲ್ಲೂ ಪಾಕಿಸ್ತಾನದ ಹೆಸರನ್ನೇ ತರಲಾಗಿಲ್ಲ. ಪುಲ್ವಾಮಾ ದಾಳಿ ನಡೆಯುತ್ತಿದ್ದಂತೆಯೇ ಸ್ವತಃ ಪ್ರಧಾನಿ ಮೋದಿಯವರಲ್ಲದೆ ಅವರ ಹಿಂಬಾಲಕರೆಲ್ಲ ಪಾಕಿಸ್ತಾನವೇ ಇದನ್ನು ಮಾಡಿಸಿರುವುದಾಗಿ ಬಹಳ ಸ್ಪಷ್ಟವಾಗಿ ಹೇಳುತ್ತಾ ಬಂದಿದ್ದಾರೆ. ಈಗಲೂ ಬಿಜೆಪಿಯ ಸಂಬಂಧಿತ ಸೋಶಿಯಲ್ ನೆಟ್ ವರ್ಕ್ ಗಳು ಪಾಕಿಸ್ತಾನವನ್ನು ಮುಂದಿಟ್ಟುಕೊಂಡು ದೇಶಪ್ರೇಮದ ಹೆಸರಲ್ಲಿ ಲೋಡುಗಟ್ಟಲೆ ಮೆಸೇಜುಗಳನ್ನು ಹರಿಬಿಡುತ್ತಿವೆ. ಆದರೆ ಸ್ವತಃ ಮೋದಿಯವರೇ ಸೌದಿ ಅರೇಬಿಯಾದ ರಾಜನಿಗೆ ಇದನ್ನು ಮನವರಿಕೆ ಮಾಡಿಕೊಡಲು ಸೋತು ಹೋಗಿದ್ದಾರೆ.

ಇಡೀ ಜಂಟಿ ಹೇಳಿಕೆಯಲ್ಲಿ ಪಾಕಿಸ್ತಾನದ ಹೆಸರು ಕಾಣಿಸಿಕೊಂಡಿರುವುದು ಒಂದೇ ಕಡೆ, ಅದೂ `ಭಾರತ-ಪಾಕಿಸ್ತಾನ’ ನಡುವೆ ಮತ್ತೆ ಮಾತುಕತೆ ಶುರುವಾಗಬೇಕೆಂಬ ಫ್ರೆಂಡ್ಲಿ ಅಡ್ವೈಸಿಂಗ್ ನ ಬಿಟ್ಟಿ ಸಲಹೆಯಲ್ಲಿ. “ಉಭಯ ದೇಶಗಳು ಪ್ರಾದೇಶಿಕ ಸ್ಥಿರತೆ ಮತ್ತು ನೆರೆ ರಾಷ್ಟ್ರಗಳ ಜೊತೆ ಸೌಹಾರ್ದಯುತ ಸಂಬಂಧದ ಪ್ರಾಮುಖ್ಯತೆಗೆ ಒತ್ತು ನೀಡುತ್ತವೆ. ಈ ನಿಟ್ಟಿನಲ್ಲಿ ಪಾಕಿಸ್ತಾನದ ಜೊತೆ ಸ್ನೇಹವನ್ನು ವೃದ್ಧಿಸಲು ಮೇ 2014ರಲ್ಲಿ ತಾವು ಅಧಿಕಾರ ವಹಿಸಿಕೊಂಡ  ನಂತರ ಪ್ರಧಾನಿ ಮೋದಿಯವರು   ಕೈಗೊಂಡಿರುವ ನಿರಂತರ ಪ್ರಯತ್ನಗಳನ್ನು ಘನತೆವೆತ್ತ ರಾಜಕುಮಾರರು ಪ್ರಶಂಸಿಸುತ್ತಾರೆ. ಇದಕ್ಕೆ ಸಂಬಂಧಿಸಿದಂತೆ, ಭಾರತ ಮತ್ತು ಪಾಕಿಸ್ತಾನಗಳ ನಡುವೆ ಸಮಗ್ರ ಮಾತುಕತೆಗಳು ಪುನರಾರಂಭಗೊಳ್ಳುವಂತಹ ವಾತಾವರಣ ನಿರ್ಮಿಸಲು ಉಭಯ ರಾಷ್ಟ್ರಗಳು ಬಯಸುತ್ತವೆ”.

ಒಟ್ಟಿನಲ್ಲಿ ಮೋದಿ ಪರ ಮೀಡಿಯಾ ಚಿಯರ್ ಆಂಕರುಗಳು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು `ಸಮರ್ಥ ನಾಯಕ’ ಭಾರತಕ್ಕೆ ಬೇಕಾಗಿದೆ ಅಂತ ಮೋದಿಯನ್ನೇ ಮತ್ತೊಮ್ಮೆ ಕದ್ದುಮುಚ್ಚಿ ಪ್ರೊಜೆಕ್ಟ್ ಮಾಡಲು ಹೆಣಗಾಡುತ್ತಿರುವಾಗಲೇ, ಹಿಂದೊಮ್ಮೆ (ಪ್ರಧಾನಿಯಾಗುವುದಕ್ಕೂ ಮುನ್ನ) `ಪಾಕಿಸ್ತಾನಕ್ಕೆ ಅದರದೇ ಭಾಷೆಯಲ್ಲಿ ಉತ್ತರ ಕೊಡಬೇಕು’ ಎಂದು ಗುಡುಗಿದ್ದ ಮೋದಿ, ಭಾರತದ ಪ್ರಧಾನಿಯ ಹುದ್ದೆಯಲ್ಲಿ ಕೂತುಕೊಂಡು ­ದೇಶದ ಮೇಲೆ ಮತ್ತೊಂದು ಡಿಪ್ಲೊಮ್ಯಾಟಿಕ್ ದುರಂತವನ್ನು ಎಳೆದುಬಿಟ್ಟಿದ್ದಾರೆ! ಪಾಪಾ, ಪುಲ್ವಾಮ ಘಟನೆಯಲ್ಲಿ ಮಡಿದ ನಮ್ಮ 45 ಸೈನಿಕರ ಜೀವಗಳನ್ನೇ ಬಂಡವಾಳ ಮಾಡಿಕೊಂಡು #boycottpakistan ಅನ್ನೋ ಹ್ಯಾಷ್‌ಟ್ಯಾಗ್ ಓಡಿಸುತ್ತಿದ್ದ ಅರ್ನಾಬ್ ಗೋಸ್ವಾಮಿ ಥರದ ಚಿಯರ್ ಆಂಕರುಗಳು ಮೋದಿಯ ಜಂಟಿ ಹೇಳಿಕೆಯಿಂದ ಗಪ್.ಚುಪ್ ಆಗಿದ್ದಾರೆ.

ಆಧಾರ: janta ka reporter

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...