HomeಅಂಕಣಗಳುKarnataka against SIRSIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

sir-karnataka-government-issues-important-orders-countering-central-governments-sir

- Advertisement -
- Advertisement -

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌ SIR ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗುತ್ತಿದೆ.

ಕರ್ನಾಟಕದಲ್ಲಿ ಒಬ್ಬ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ರಕ್ಷಿಸಿಕೊಳ್ಳಲು ಕರ್ನಾಟಕ ಸರ್ಕಾರವು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು SIR ವಿರೋಧಿ ಕರ್ನಾಟಕ, ಎದ್ದೇಳು ಕರ್ನಾಟಕ ಸೇರಿದಂತೆ ಹಲವು ಜನಪರ ಸಂಘಟನೆಗಳು ನಿರಂತರವಾಗಿ ಒತ್ತಾಯಿಸುತ್ತಿದ್ದವು.

ಕೇಂದ್ರ ಚುನಾವಣಾ ಆಯೋಗವು 11 ದಾಖಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅವುಗಳನ್ನು BLO ಗಳಿಗೆ ಒದಗಿಸಿದರೆ ತಮ್ಮ ಮತವನ್ನು ರಕ್ಷಿಸಿಕೊಳ್ಳಬಹುದು ಎಂದು ಹೇಳಿತ್ತು. ಆ ಪಟ್ಟಿಯಲ್ಲಿ ಶಾಶ್ವತ ಶಾಶ್ವತ ನಿವಾಸ ಪ್ರಮಾಣ ಪತ್ರವೂ ಒಂದಾಗಿತ್ತು. ಕರ್ನಾಟಕವು ಪ್ರಮುಖ ಆದೇಶವನ್ನು ಮಾಡುವ ಮೂಲಕ ಅರ್ಹ ಮತದಾರರನ್ನು SIR ಪ್ರಕ್ರಿಯಲ್ಲಿನ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮವಹಿಸಲು ಮುಂದಾಗಿದೆ. ಇದರ ಮೂಲಕ ಕರ್ನಾಟಕ ಸರ್ಕಾರವು ನಾಗರಿಕ ಸಂಘಟನೆಗಳ ನಿರಂತರ ಒತ್ತಾಯಕ್ಕೆ ಮನ್ನಣೆ ನೀಡಿ ಆದೇಶ ಹೊರಡಿಸಿದೆ.

ಆದೇಶ

ಗ್ರಾಮಪಂಚಾಯಿತಿಗಳಲ್ಲಿ ವಾಸಸ್ಥಳ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ

ಅಟಲ್‌ ಜನಸ್ನೇಹಿ ಕೇಂದ್ರ, ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಗಳ ಮೂಲಕ ಇಷ್ಟು ದಿನ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಪಡೆಯಬಹುದಿತ್ತು. ತಹಸೀಲ್ದಾರ್‌ ಈ ಪ್ರಮಾಣಪತ್ರವನ್ನು ನೀಡುವ ಅಧಿಕಾರವನ್ನು ಹೊಂದಿದ್ದರು. ಇದೀಗ ಕರ್ನಾಟಕ ಸರ್ಕಾರದ ಹೊಸ ಆದೇಶದಂತೆ ಗ್ರಾಮಪಂಚಾಯಿತಿಗಳಲ್ಲೂ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡುವಂತೆ ಆದೇಶ ಹೊರಡಿಸಿದೆ. ತಹಸೀಲ್ದಾರ್‌ ಹಾಗೂ ಉಪ ತಹಸೀಲ್ದಾರ್‌ ಈ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹ ವ್ಯಕ್ತಿಗಳಿಗೆ ಪ್ರಮಾಣ ಪತ್ರವನ್ನು ನೀಡಲು ಅವಕಾಶ ನೀಡಲಾಗಿದೆ. ಇದರ ಮೂಲಕ ಕರ್ನಾಟಕದ ಯಾವುದೇ ಒಬ್ಬ ವ್ಯಕ್ತ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ರಕ್ಕಣೆ ಪಡೆಯಲು ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬಹುದು.

ಈ ಅದೇಶದಂತೆ ಇಂದಿನಿಂದ 7 ದಿನಗಳ ಒಳಗೆ ಕರ್ನಾಟಕದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ಸೌಕರ್ಯಗಳನ್ನೊಳಗೊಂಡ ಕೇಂದ್ರಗಳನ್ನುಸ್ಥಾಪಿಸಲು ಆದೇಶಿಸಲಾಗಿದೆ. ಅರ್ಜಿಗಳನ್ನು ಶೀಫ್ರವಾಗಿ ವಿಲೇವಾರಿ ಮಾಡುವಂತೆಯೂ ಆದೇಶಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ SIR ವಿರೋಧಿ ಕರ್ನಾಟಕದ ಮುಖಂಡರಾದ ನೂರ್‌ ಶ್ರೀಧರ್‌ ರವರು, “ಇದು ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ಒಳ್ಳೆಯ ನಿರ್ಧಾರ. ಕರ್ನಾಟಕದ ಯಾವುದೇ ಒಬ್ಬ ಅರ್ಹ ಮತದಾರರು ದಾಖಲೆ ಇಲ್ಲವೆಂದ ಮಾತ್ರಕ್ಕೆ ಮತದಾರ ಪಟ್ಟಿಯಿಂದ ಹೊರಗುಳಿಯಬಾರದು. ಸರ್ಕಾರದ ಈ ಆದೇಶವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿ ಮಾಡಲು ನಾಗರಿಕ ಸಂಘಟನೆಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತೇವೆ. ಒಂದು ವೇಳೆ ಅಧಿಕಾರಿಗಳು ಜಾರಿ ಮಾಡಲು ಮೀನಾಮೇಶ ಎಣಿಸುತ್ತಿದ್ದರೆ ಕೂಡಲೇ ಅದನ್ನು ಪ್ರತಿಭಟಿಸುತ್ತೇವೆ” ಎಂದರು.

ಶಾಶ್ವತ ನಿವಾಸ ಪ್ರಮಾಣ ಪತ್ರ ನೀಡಲು ಅರ್ಹತೆ

  1. ಪ್ರಮಾಣ ಪತ್ರ ನೀಡುವ ಪ್ರಾಧಿಕಾರವು ಅಗತ್ಯ ವಿಚಾರಣೆ ಹಾಗೂ ಪರಿಶೀಲನೆಯ ನಂತರ ಅರ್ಜಿದಾರರು ಕರ್ನಾಟಕ ರಾಜ್ಯದ ನಿಜವಾದ ಮತ್ತು ಶಾಶ್ವತ ನಿವಾಸಿಯಾಗಿದ್ದಾರೆ ಎಂಬ ಬಗ್ಗೆ, ಖಚಿತಪಡಿಸಿಕೊಂಡು ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡಬಹುದು.
  2. ಮೇಲ್ಕಂಡಂತೆ ಖಚಿತಗೊಳಿಸಿಕೊಳ್ಳುವ ಸಂದರ್ಭದಲ್ಲಿ ಪ್ರಮಾಣ ಪತ್ರ ನೀಡುವ ಪ್ರಾಧಿಕಾರವು ಈ ಕೆಳಕಂಡ ಒಂದು ಅಥವಾ ಹೆಚ್ಚಿನ ಅಂಶಗಳನ್ನು ಪರಿಗಣಿಸಬಹುದು:

ಇತರೆ ಪುರಾವೆಗಳು ಕರ್ನಾಟಕವೇ ಅರ್ಜಿದಾರರ ಪ್ರಮುಖ ಹಾಗೂ ಶಾಶ್ವತ ವಾಸಸ್ಥಳವಾಗಿದೆ ಎಂಬುದನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ದಾಖಲಾತಿ, ವಿದ್ಯುನ್ಮಾನ ಅಥವಾ ಮೌಖಿಕ ಸಾಕ್ಷ

  • ಕರ್ನಾಟಕದಲ್ಲಿ ಜನನ- ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಜನಿಸಿರಬೇಕು.
  • ಸಾಮಾನ್ಯ ವಾಸಸ್ಥಳ ಅರ್ಜಿದಾರರು ಅಥವಾ ಅವರ ತಂದೆ/ತಾಯಿ ಅಥವಾ ಕಾನೂನುಬದ್ಧ ಪಾಲಕರು ಕರ್ನಾಟಕ ರಾಜ್ಯದಲ್ಲಿ ಸತತವಾಗಿ ಕನಿಷ್ಠ ಹತ್ತು (10) ವರ್ಷಗಳ ಕಾಲ ಸಾಮಾನ್ಯವಾಗಿ ವಾಸವಾಗಿರಬೇಕು.
  • ಶಿಕ್ಷಣ ಅರ್ಜಿದಾರರು ಕರ್ನಾಟಕದಲ್ಲಿನ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿತೀಯ ಪಿಯುಸಿ / 12ನೇ ತರಗತಿ ಅಥವಾ ತತ್ಸಮಾನ ಹಂತದವರೆಗೆ ಕನಿಷ್ಠ ಹತ್ತು (10) ಶೈಕ್ಷಣಿಕ ವರ್ಷಗಳ ಕಾಲ ವ್ಯಾಸಂಗ ಮಾಡಿರಬೇಕು.
  • ಪೋಷಕರು ಅಥವಾ ಸಂಗಾತಿಯ ವಾಸಸ್ಥಳ ಅರ್ಜಿದಾರರ ತಂದೆ, ತಾಯಿ, ಕಾನೂನುಬದ್ಧ ಪಾಲಕರು ಅಥವಾ ಪತಿ/ಪತ್ನಿಯು ಕರ್ನಾಟಕದಲ್ಲಿ ಸಾಮಾನ್ಯ ಹಾಗೂ ಶಾಶ್ವತ ನಿವಾಸಿಯಾಗಿರಬೇಕು.
  • ವಸತಿ ಆಸ್ತಿ ಅಥವಾ ಅರ್ಜಿದಾರರು ಅಥವಾ ಅವರ ಕುಟುಂಬವು ಕರ್ನಾಟಕದಲ್ಲಿ ವಸತಿ ಇತರೆ ಸ್ಥಿರಾಸ್ತಿಯ ಮಾಲೀಕತ್ವವನ್ನು ಹೊಂದಿರಬೇಕು ಕಾನೂನುಬದ್ಧವಾದ ವಾರಸುದಾರರಾಗಿರಬೇಕು ಅಥವಾ ಬಳಸುತ್ತಿರಬೇಕು.
  • ಸರ್ಕಾರಿ ದಾಖಲೆಗಳು ಮತದಾರರ ಪಟ್ಟಿ, ಆಧಾರ್, ಪಡಿತರ ಚೀಟಿ, ಕಂದಾಯ ದಾಖಲೆಗಳು ಅಥವಾ ಇತರೆ ಸರ್ಕಾರಿ ದಾಖಲೆಗಳಲ್ಲಿ ಅರ್ಜಿದಾರರು ಅಥವಾ ಅವರ ಪೋಷಕರ ಹೆಸರು ಸಾಮಾನ್ಯ ನಿವಾಸಿಯಾಗಿ ದಾಖಲಾಗಿರಬೇಕು.
  • ಸರ್ಕಾರಿ / ಸಾರ್ವಜನಿಕ ಸೇವೆ – ಅರ್ಜಿದಾರರು ಅಥವಾ ಅವರ ತಂದೆ/ತಾಯಿಯು ಕರ್ನಾಟಕ ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಗಣನೀಯ ಅವಧಿಯಸೇವೆ ಸಲ್ಲಿಸಿರಬೇಕು.
  • ವಿವಾಹ – ಅರ್ಜಿದಾರರು ಕರ್ನಾಟಕದಲ್ಲಿ ವಾಸಿಸುವ ವ್ಯಕ್ತಿಯನ್ನು ವಿವಾಹವಾಗಿದ್ದು, ರಾಜ್ಯದಲ್ಲಿ ವಾಸವಿರಬೇಕು.

ಸರ್ಕಾರ ಹೊರಡಿಸಿರುವ ಆದೇಶ ಈ ಕೆಳಗಿದೆ.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...