Homeಎಲೆಮರೆಅಲೆಮಾರಿ ಮೇಡಂ: ಶಾರದ

ಅಲೆಮಾರಿ ಮೇಡಂ: ಶಾರದ

- Advertisement -
- Advertisement -

ಬೀದರಿನ ವಾರ್ತಾಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಮಾಜಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಜಿಲ್ಲಾಧಿಕಾರಿಗಳ ಕಚೇರಿ ಮುಂತಾದ ಇಲಾಖೆಗಳ ಅಧಿಕಾರಿಗಳ ಬಳಿ ಮತ್ತು ಬೀದರ್ ಜಿಲ್ಲೆಯ ಯಾವುದೇ ಬುಡಕಟ್ಟು ಅಲೆಮಾರಿ ಜನರ ಬಳಿ `ಅಲೆಮಾರಿ ಮೇಡಂ’ ಯಾರು ಎಂದು ಕೇಳಿದರೆ ಅವರುಗಳು ಶಾರದ ಅವರ ಬಗ್ಗೆ ಹೇಳುತ್ತಾರೆ. ಕೆಲವು ಅಧಿಕಾರಿಗಳು ಮುಖ ಗಂಟಿಕ್ಕಿ ಚೂರು ಸಿಡುಕಿನಿಂದಲೆ ಹೇಳಿದರೆ, ಅಲೆಮಾರಿ ಬುಡಕಟ್ಟಿನ ಜನರು ಮುಖ ಅರಳಿಸಿ `ಓಹ್ ನಮ್ ಮೇಡಂ ಸರ್, ಗೊತ್ತವ್ರು, ಅವರ ನಂಬರ್.. ನಮ್ಮ ಆಧಾರ ಕಾರ್ಡ್ ಮೇಲಿದೆ’ ಎಂದು ನಿಮಗೆ ಶಾರದ ಅವರ ಫೋನ್ ನಂಬರ್ ಕೊಡುತ್ತಾರೆ.

ಹೀಗೆ ಬೀದರ್ ಜಿಲ್ಲೆಯಾದ್ಯಂತ ಅಲೆಮಾರಿ ಮೇಡಂ ಎಂದೇ ಗುರುತಿಸಲ್ಪಡುವ ಶಾರದ ಒಬ್ಬ ಸಾಮಾನ್ಯ ಪದವೀಧರ ಗೃಹಿಣಿ. ಅರೆ ಶಾರದ ಅವರನ್ನು ಯಾಕೆ ಅಲೆಮಾರಿ ಮೇಡಂ ಎಂದು ಕರೆಯುತ್ತಾರೆ..? ಏಕೆಂದರೆ 2013 ರಿಂದಲೂ ಬುಡಕಟ್ಟು ಅಲೆಮಾರಿ ಮಕ್ಕಳಿಗೆ ಅಕ್ಷರದ ಅರಿವು ಮೂಡಿಸಲು, ಅವರಿಗೊಂದು ಗುರುತು ಕೊಡಿಸಲು, ನೆಲೆ ಒದಗಿಸಲು, ಅವಿರತವಾಗಿ ಶ್ರಮಿಸುತ್ತಿದ್ದಾರೆ.

ಯಾವುದೇ ಅಧಿಕಾರವಿಲ್ಲದೆ, ಲಾಭನಷ್ಟದ ಲೆಕ್ಕಾಚಾರಗಳಿಲ್ಲದೆ, ಉತ್ತಮ ಆರ್ಥಿಕ ಸ್ಥಿತಿಯೂ ಇಲ್ಲದೆ, ಮೇಲ್ಜಾತಿಯೂ ಅಲ್ಲದ ಪರಿಶಿಷ್ಟ ಜಾತಿಯ ಛಲವಾದಿ ಸಮುದಾಯಕ್ಕೆ ಸೇರಿದ, ಎಂ.ಎಸ್.ಡಬ್ಲು ಬಿಇಡಿ ಮಾಡಿದ ಒಬ್ಬ ಸಾಮಾನ್ಯ ಮಹಿಳೆಗೆ ಬುಡಕಟ್ಟು ಅಲೆಮಾರಿಗಳ ಒಳಿತಿಗಾಗಿ ದುಡಿವ ಮನಸ್ಸು ಹದಗೊಂಡದ್ದು ಹೇಗೆ ಎಂದು ನೋಡಿದರೆ, ಅದೊಂದು ಕುತೂಹಲಕರ ಸಂಗತಿ.

ರಾಯಚೂರು ಜಿಲ್ಲೆ ಮಾನವಿ ತಾಲೂಕಿನ ಬಾಗಲವಾಡ ಹಳ್ಳಿಯ ಶಾರದ ಮನೆಯ ಬಡತನದ ಕಾರಣ ಹೈಸ್ಕೂಲಿನಿಂದಲೂ ಮಾನವಿ, ರಾಯಚೂರಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲುಗಳಲ್ಲಿ ಓದುತ್ತಾರೆ. ಹೀಗೆ ಓದುವಾಗ ತಮ್ಮ ಹಾಸ್ಟೆಲುಗಳ ಹೊರವಲಯದಲ್ಲಿ ಆಗಾಗ ಅಲೆಮಾರಿಗಳು ಬಟ್ಟೆಯ ಟೆಂಟ್ ಹಾಕಿ ವಾಸಿಸುತ್ತಿದ್ದರು. ಹಿರಿಯರು ಚಿಕ್ಕಪುಟ್ಟ ವ್ಯಾಪಾರ, ಬೇಟೆ, ಭಿಕ್ಷೆ ಅಂತೆಲ್ಲಾ ನಗರ ಮತ್ತು ಕಾಡು ಪ್ರವೇಶಿಸಿದರೆ, ಇವರ ಮಕ್ಕಳು ಬಟ್ಟೆಯಿಲ್ಲದೆ ಸ್ನಾನವಿಲ್ಲದೆ ಕೆದರಿದ ಕೂದಲಿನಲ್ಲಿ ಟೆಂಟಿನ ಮುಂದೆ ಮಣ್ಣಲ್ಲಿ ಆಟವಾಡುತ್ತಿದ್ದರು. ಶಾರದ ಹಾಸ್ಟೆಲ್ ಕಿಟಕಿಗಳಿಂದ ಈ ಮಕ್ಕಳನ್ನು ನೋಡುತ್ತಿದ್ದಾಗ ಅರೆ ಇವರ್ಯಾಕೆ ಹೀಗೆ ? ಇವರಿಗೆ ನಮ್ಮಂತೆ ಮನೆಗಳೇಕಿಲ್ಲ? ಎನ್ನುವ ಪ್ರಶ್ನೆಯೊಂದು ಮಿಂಚಿ ಮರೆಯಾಗುತ್ತಿತ್ತು. ಒಮ್ಮೊಮ್ಮೆ ಇದ್ದಕ್ಕಿದ್ದಂತೆ ಆ ಸ್ಥಳದಿಂದ ಮಾಯವಾಗಿ ಎಷ್ಟೋ ದಿನಗಳ ಕಾಲ ಅವರು ಇತ್ತ ತಲೆ ಹಾಕುತ್ತಲೂ ಇರಲಿಲ್ಲ. ಒಮ್ಮೊಮ್ಮೆ ದಿಢೀರ್ ಟೆಂಟ್‍ಗಳು ಪ್ರತ್ಯಕ್ಷವಾಗುತ್ತಿದ್ದವು. ಈ ಕಣ್ಣೋಟದ ಅಲೆಮಾರಿಗಳ ಚಿತ್ರ ಶಾರದ ಅವರಲ್ಲಿ ಸುಪ್ತವಾಗಿತ್ತು.

ಬಿ.ಎ. ಎರಡನೆ ವರ್ಷ ಕಲಿಯುವಾಗಲೆ ಶಾರದ 2011 ರಲ್ಲಿ ಮದುವೆಯಾಗಿ ಬೀದರಿಗೆ ಬರುತ್ತಾರೆ. ಗಂಡ ಮತ್ತು ಮನೆಯವರ ಬೆಂಬಲದಿಂದ ಅರ್ಧಕ್ಕೆ ನಿಂತ ಓದನ್ನು ಮುಂದುವರಿಸುತ್ತಾರೆ. ಬಿ.ಎ., ಎಮ್.ಎಸ್.ಡಬ್ಲು, ಬಿಎಡ್ ಮಾಡುತ್ತಾರೆ. ಎಮ್.ಎಸ್.ಡಬ್ಲು ಮಾಡುವಾಗ ಸಮಾಜಸೇವೆಯ ಬಗ್ಗೆ ಗಮನ ಹರಿಯುತ್ತದೆ. ಹೈಸ್ಕೂಲಲ್ಲಿ ಕಂಡ ಅಲೆಮಾರಿಗಳ ಚಿತ್ರಗಳು ತರಗತಿಗಳಲ್ಲಿ ಮರುಕಳಿಸತೊಡಗುತ್ತವೆ. ಹೀಗೆ ಬಿಎಡ್ ಮುಗಿಸಿ ಬೀದರಿನ ಸೆಂಟ್ ಜೋಸೆಫ್ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸಕ್ಕೆ ಸೇರುತ್ತಾರೆ. ಶಾಲೆಗೆ ಹೋಗಿ ಬಂದು ಮಾಡುವ ಮಾರ್ಗಮಧ್ಯದಲ್ಲಿ ಒಮ್ಮೆ ಅರ್ಧಮುಚ್ಚಿದ ಬಾವಿಯೊಂದರಲ್ಲಿ ಅಲೆಮಾರಿ ಮಗು ಆಯತಪ್ಪಿ ಬಿದ್ದು ಅಳುತ್ತಿರುತ್ತದೆ. ಇದನ್ನು ನೋಡಿ ಶಾರದ ಆ ಮಗುವನ್ನು ಮೇಲಕ್ಕೆತ್ತಿ ಅವರ ತಂದೆತಾಯಿಗೆ ತಲುಪಿಸುತ್ತಾರೆ. ಆಗ ಅಲೆಮಾರಿಗಳ ಪರಿಚಯವಾಗುತ್ತದೆ.

ಸೋಷಿಯಲ್ ವರ್ಕ್ ಎನ್ನುವ ಕೆಲಸದಲ್ಲಿ ಡಾನ್‍ಬಾಸ್ಕೋ ಸಂಸ್ಥೆಯಲ್ಲಿ ಕೆಲದಿನ ಕೆಲಸ ಮಾಡುತ್ತಾರೆ. ಆಗ ಮಗುವಿಗೆ ಹೆರಿಗೆಯಾದ ಕಾರಣ ಡಾನ್‍ಬಾಸ್ಕೋ ಸಂಸ್ಥೆಯ ಕೆಲಸವನ್ನು ಬಿಡುತ್ತಾರೆ. ತಾಯಿ, ಮಗುವಿನ ಜತೆ ಕಾಲ ಕಳೆಯುವಾಗ ತನ್ನ ಮನೆಗೆ ಹತ್ತಿರದಲ್ಲಿರುವ ಅಲೆಮಾರಿಗಳ ಜತೆ ಸಂಪರ್ಕ ಬೆಳೆಯುತ್ತದೆ. ಓದುಬರಹವಿಲ್ಲದ ಅವರ ಮಕ್ಕಳನ್ನು ನೋಡಿ, ನಿಮ್ಮ ಮಕ್ಕಳಿಗೆ ಅಕ್ಷರ ಕಲಿಸುವೆ ಎಂದಾಗ ಅಲೆಮಾರಿಗಳು ಒಪ್ಪುವುದಿಲ್ಲ. ದಿನಾಲು ಅಲೆಮಾರಿಗಳ ಗುಡಿಸಲುಗಳ ಎದುರು ಅವರ ಮನವೊಲಿಸಲು ಪ್ರಯತ್ನಿಸುತ್ತಾರೆ. ಆದರೂ ಅಲೆಮಾರಿಗಳು ಇವರನ್ನು ನಂಬುವುದಿಲ್ಲ. ನಾನಾಗೆ ಇವರ ಮಕ್ಕಳಿಗೆ ಅಕ್ಷರ ಕಲಿಸುವೆ ಎಂದರೂ ಇವರು ನನ್ನನ್ನು ನಂಬುತ್ತಿಲ್ಲವಲ್ಲ ಎಂದು ಎಷ್ಟೋ ಬಾರಿ ಶಾರದ ಅಳುತ್ತಾ ಮನೆಗೆ ಮರಳಿದ್ದರು. ಇಷ್ಟಾಗಿಯೂ ಅಲೆಮಾರಿಗಳನ್ನು ಬಗೆಬಗೆಯ ರೀತಿಯಲ್ಲಿ ಆಪ್ತವಾಗಿ ಒಪ್ಪಿಸಲು ಪ್ರಯತ್ನಿಸಿದರು. ಒಂದೆರಡು ವರ್ಷದ ನಂತರ ನಿಧಾನಕ್ಕೆ ಅಲೆಮಾರಿಗಳಿಗೆ ಶಾರದ ಅವರಲ್ಲಿ ವಿಶ್ವಾಸ ಮೂಡುತ್ತದೆ.

`ನಮಗೆ ಮನಿಯಿಲ್ಲ ಮಠವಿಲ್ಲ ನೀವು ಬಂದ್ ಶಾಲಿ ಕಲಿಸ್ತೀನಿ ಅಂತೀರಿ, ನಾವು ಇವತ್ ಇಲ್ಲಿದ್ರೆ ನಾಳೆ ಅಲ್ಲಿರ್ತೀವಿ, ನಮ್ಮನ್ನ ಸರಕಾರದವರು ಇಲ್ಲಿಂದ ಅಲ್ಲಿಗೆ ಅಲ್ಲಿಂದ ಇಲ್ಲಿಗೆ ಓಡಿಸ್ತಾನ ಇರ್ತಾರೆ. ನಮಗೆ ಉಳಿಯೋಕೆ ಒಂದು ನೆಲೆ ಅಂತ ಇಲ್ದಿರೋವಾಗ ನಮ್ಮ ಮಕ್ಕಳು ಶಾಲಿ ಕಲಿತು ಏನ್ ಮಾಡ್ತಾವೆ’ ಎನ್ನುತ್ತಾರೆ. ಆಗ ಶಾರದಾಗೆ ಹೊಳೆದ ಸಂಗತಿಯೆಂದರೆ, ಇವರಿಗೆ ಸರಕಾರದಿಂದ ಒಂದು ಮನೆ ಕಟ್ಟಿಸಿಕೊಟ್ಟರೆ ಒಂದೆಡೆ ಉಳಿಯುತ್ತಾರೆ ಎಂದು ಅನ್ನಿಸುತ್ತದೆ. ಅದಕ್ಕಾಗಿ `ನೀವು ನಿಮ್ಮ ಮಕ್ಕಳನ್ನು ಶಾಲೆಗೆ ಕಳಿಸಿ, ನಾನು ಹೇಗಾದರೂ ಮಾಡಿ ನಿಮಗೆ ಮನೆಗಳನ್ನು ಕೊಡಿಸ್ತೀನಿ’ ಎನ್ನುವ ಸುಳ್ಳು ಭರವಸೆ ಕೊಡುತ್ತಾರೆ. ಈ ಒಂದು ಭರವಸೆಯಿಂದ ಅಲೆಮಾರಿಗಳು ತಮ್ಮ ಮಕ್ಕಳನ್ನು ಶಾರದ ಬಳಿ ಅಕ್ಷರ ಕಲಿಯಲು ಕಳಿಸುತ್ತಾರೆ. ಆಗ ಶಾರದ ಅವರು ಅಲೆಮಾರಿಗಳ ಜಾಗವನ್ನೆ ಶಾಲೆಯ ಆವರಣವನ್ನಾಗಿಸಿಕೊಂಡು ಅವರಿಗೆ ಅಕ್ಷರ ಕಲಿಸತೊಡಗುತ್ತಾರೆ.

ಇದೇ ಹೊತ್ತಿಗೆ ಬೀದರ್ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯು ಬೀದರಿನಲ್ಲಿ ಅಲೆಮಾರಿಗಳಿಲ್ಲ ಎಂದು ಸರಕಾರಕ್ಕೆ ವರದಿ ಸಲ್ಲಿಸುತ್ತದೆ. ಸ್ವತಃ ಅಲೆಮಾರಿಗಳ ಜತೆ ಬದುಕುತ್ತಿದ್ದ ಶಾರದ ಅವರಿಗೆ ಈ ವರದಿ ಅಚ್ಚರಿ ಹುಟ್ಟಿಸಿ ಇಲಾಖೆಯ ಗಮನಕ್ಕೆ ತರುತ್ತಾರೆ. ಆಗ ಇಲಾಖೆಯು ಅಲೆಮಾರಿಗಳು ಇದ್ದರೆ ಅವರನ್ನು ಗುರುತಿಸಲು ಶಾರದಾ ಅವರಿಗೆ ಸಹಕಾರ ನೀಡುತ್ತದೆ. ಈ ನಡುವೆ ತಾನು ಅಕ್ಷರ ಕಲಿಸುವ ಮಕ್ಕಳನ್ನು ಶಾಲೆಗೆ ಸೇರಿಸಬೇಕು. ಆದರೆ ಆ ಮಕ್ಕಳಿಗೆ ಯಾವುದೇ ಗುರುತಿಲ್ಲ. ಮೊದಲನೆಯದಾಗಿ ಆಧಾರ ಕಾರ್ಡ್ ಮಾಡಿಸಬೇಕಾದ ಅನಿವಾರ್ಯ ಬರುತ್ತದೆ. ಮಕ್ಕಳಿಗೆ ಆಧಾರ್ ಮಾಡಿಸಲು ತಂದೆತಾಯಿಯರ ಆಧಾರ್ ಬೇಕು.

ಆದರೆ ಈ ಯಾವ ಕುಟುಂಬಗಳಿಗೂ ಆಧಾರ ಕಾರ್ಡ್ ಕೊಟ್ಟಿರಲಿಲ್ಲ. ಈಗ ಮತ್ತೊಂದು ಸಮಸ್ಯೆ ಶುರುವಾಯಿತು. ಮಕ್ಕಳ ತಂದೆತಾಯಿಯರಿಗೆ ಆಧಾರ್ ಕಾರ್ಡ್ ಮಾಡಿಸುವುದು. ಯಾವುದೇ ದಾಖಲೆಗಳಿಲ್ಲದ ಈ ಅಲೆಮಾರಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಸೆಳೆದು, ಅಲೆದಲೆದು ಶಾರದ ಅವರೆ ಸ್ವತಃ ಎಲ್ಲರಿಗೂ ಸಾಕ್ಷಿಯಾಗಿದ್ದು ಆಧಾರ್ ಕಾರ್ಡ ಮಾಡಿಸುತ್ತಾರೆ. ಹೀಗೆ ನಿರಂತರವಾಗಿ ನಾಲ್ಕೈದು ವರ್ಷದಲ್ಲಿ ಅಲೆಮಾರಿ ಸಮುದಾಯದ 500ಕ್ಕೂ ಹೆಚ್ಚು ಜನರಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಓಟರ್ ಐಡಿ ಮಾಡಿಸಿದ್ದಾರೆ. ಇದೀಗ 63 ಅಲೆಮಾರಿ ಮಕ್ಕಳು ಶಾಲೆ ಕಲಿಯುತ್ತಿದ್ದಾರೆ. ಅಲೆಮಾರಿಗಳ ಮನೆ ಕಟ್ಟಿಸಲಿಕ್ಕಾಗಿ ನಾಲ್ಕು ಎಕರೆ ಜಮೀನು ಮಂಜೂರಾಗಿದೆ. ಇದೀಗ ಅಲೆಮಾರಿಗಳ ಸ್ವಂತ ಉದ್ಯೋಗಕ್ಕಾಗಿ ಸಣ್ಣಮಟ್ಟದಲ್ಲಿ ಸಾಲಸೌಲಭ್ಯಗಳು ಸಿಗತೊಡಗಿವೆ. ಇದೆಲ್ಲವೂ ಸುಲಭವಾಗಿ ದಕ್ಕಿರುವುದಲ್ಲ ಶಾರದ ಅವರು ನಾಲ್ಕೈದು ವರ್ಷಗಳ ಕಾಲ ಸರಕಾರಿ ಇಲಾಖೆಗಳ ಜತೆ, ಅಧಿಕಾರಿಗಳ ಜತೆ ನಿರಂತರ ಜಗಳ, ಹಕ್ಕೊತ್ತಾಯ, ಚರ್ಚೆ ಸಂವಾದಗಳ ಮೂಲಕ ಇದನ್ನೆಲ್ಲಾ ಆಗುಮಾಡಿದ್ದಾರೆ.

ಈ ಎಲ್ಲಾ ಹೋರಾಟ ಹಕ್ಕೊತ್ತಾಯಗಳ ಜೊತೆಜೊತೆಗೆ ಇದೀಗ ಗುತ್ತಿಗೆ ಆಧಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮಹಿಳಾ ಶಕ್ತಿ ಕೇಂದ್ರ ಯೋಜನೆಯ ಜಿಲ್ಲಾ ಮಹಿಳಾ ಕಲ್ಯಾಣಾಧಿಕಾರಿಯಾಗಿ ಇದೇ ಜನವರಿ 13, 2020 ರಿಂದ ಕೆಲಸಕ್ಕೆ ಸೇರಿದ್ದಾರೆ. `ನಮ್ ಮನೆಯವ್ರ ಬೆಂಬಲ ಇರದಿದ್ರ ಇದನ್ನೆಲ್ಲ ಮಾಡೋಕೆ ಆಗ್ತಿರಲಿಲ್ಲ ಸರ್, ಈಗ ಸಿ.ಎ.ಎ ಎನ್.ಆರ್.ಸಿ ಬಂದದಲ್ಲ ಮತ್ತೆ ನನಗೆ ಭಯ ಶುರು ಆಗ್ಯಾತಿ. ಇವರಿಗೆ ಈಗಿರೋದನ್ನು ಬಿಟ್ಟರೆ ಇವರ ಹಿರೇರು ಎಲ್ಲಿದ್ರು ಅನ್ನೋಕೆ ಏನೂ ದಾಖಲೆ ಇಲ್ಲ. ಅದೇನು ಆಗ್ತಾತೋ ಅಂತ ಭಯ ಆಗೇತಿ’ ಎಂದು ಆತಂಕ ವ್ಯಕ್ತಪಡಿಸುತ್ತಾರೆ. ಯಾವುದೇ ಆಕಾಡೆಮಿಕ್ ಸಂಶೋಧಕರಿಗಿಂತಲೂ ಸೂಕ್ಷ್ಮವಾಗಿ ಅಲೆಮಾರಿ ಬುಡಕಟ್ಟು ಸಮುದಾಯದ ನಾಡಿಮಿಡಿತ ಗುರುತಿಸುವ ಶಾರದ ಅವರು ನಿಜಕ್ಕೂ ಈ ಕಾಲಕ್ಕೆ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಶಾರದಾ ಅವರ ಸಮಾಜಸೇವೆ ಜೋತೆ… ವಿದ್ಯೆ ದಾನವನ್ನು ಮಾಡಿದ್ದಾರೆ. ಅವರಿಗಿ ಅಭಿನಂದನೆಗಳು

LEAVE A REPLY

Please enter your comment!
Please enter your name here

- Advertisment -

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....