Homeಕರ್ನಾಟಕಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅನರ್ಹಗೊಂಡ ಶಾಸಕರು ಉಪಚುನಾವಣೆಗಳಲ್ಲೂ ಸ್ಪರ್ಧೆ ಮಾಡುವಂತಿಲ್ಲ

- Advertisement -
- Advertisement -

ಮೂವರು ಶಾಸಕರು ವಿಧಾನಸಭೆಯ ಈ ಅವಧಿ ಮುಗಿಯುವವರೆಗೂ ಅನರ್ಹರು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ಬಿದ್ದು ಹೋಗುತ್ತದೆ ಎಂಬುದು ಸ್ಪಷ್ವವಾದ ಕ್ಷಣದಿಂದ ಇದ್ದ ಕುತೂಹಲಗಳು ಎರಡು. ಒಂದು, ಸ್ಪೀಕರ್ ಅವರ ನಡೆ ಏನಾಗಿರುತ್ತದೆ ಎಂಬುದು, ಅಂದರೆ ಯಾವ್ಯಾವ ಶಾಸಕರನ್ನು ಅನರ್ಹಗೊಳಿಸುತ್ತಾರೆ ಎಂಬ ವಿಚಾರ. ಎರಡನೆಯದ್ದು ಯಡಿಯೂರಪ್ಪನವರು ಕೂಡಲೇ ಮುಖ್ಯಮಂತ್ರಿಯಾಗುತ್ತಾರಾ ಇಲ್ಲವಾ ಎಂಬುದು.

ಇದೀಗ ಮೊದಲನೆಯ ವಿಚಾರಕ್ಕೆ ಪಾಕ್ಷಿಕವಾಗಿ ತೆರೆ ಬಿದ್ದಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮೂವರು ಶಾಸಕರ ಅನರ್ಹತೆಯ ಕುರಿತಾದ ತಮ್ಮ ತೀರ್ಮಾನಗಳನ್ನು ವಿವರವಾಗಿ ಬಿಡಿಸಿಟ್ಟರು.

ರಾಣಿಬೆನ್ನೂರಿನ ಶಾಸಕ ಶಂಕರ್ ಅವರು ಕೆಪಿಜೆಪಿಯಿಂದ ಆಯ್ಕೆಯಾಗಿದ್ದು, ಎರಡನೆಯ ಸಾರಿ ಮಂತ್ರಿಯಾದಾಗ ಕಾಂಗ್ರೆಸ್ ಪಕ್ಷದೊಂದಿಗೆ (ಜೂನ್ 14ರಂದು) ತನ್ನ ಪಕ್ಷವನ್ನು ವಿಲೀನ ಮಾಡಿದ್ದೇನೆಂದು ಸ್ಪೀಕರ್ ಅವರಿಗೆ ತಿಳಿಸಿದ್ದರು. ಆ ನಂತರ ತಾನು ಬಿಜೆಪಿಗೆ ಬೆಂಬಲಿಸುತ್ತಿದ್ದೇನೆಂದು ತಾನೇ ತಿಳಿಸಿರುವುದರಿಂದ ಸಂದೇಹಕ್ಕೆ ಆಸ್ಪದವಿಲ್ಲದೇ ಪಕ್ಷಾಂತರ ಮಾಡಿರುವುದರಿಂದ ಅವರು ಅನರ್ಹರು ಎಂದು ಘೋಷಿಸಲಾಗಿದೆ.

ವಿಪ್ ಉಲ್ಲಂಘನೆ ಕಾರಣಕ್ಕೆ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಫೆಬ್ರವರಿಯಲ್ಲೇ ದೂರು ನೀಡಲಾಗಿತ್ತು.  ಅವರು ಏನೇನು ಮಾಡಿದರೆಂಬುದನ್ನು ವಿವರಿಸಿ ಅವರನ್ನೂ ಅನರ್ಹರೆಂದು ಘೋಷಿಸಲಾಗಿದೆ.

ಇನ್ನು ಉಳಿದ ಶಾಸಕರುಗಳ ರಾಜೀನಾಮೆ ಪ್ರಕರಣಗಳ ಕುರಿತು ತೀರ್ಮಾನ ಮಾಡಲು ತಾನಿನ್ನೂ ಅಧ್ಯಯನ ಮಾಡಬೇಕಿದೆ. ಹಲವಾರು ಕೋರ್ಟ್ ತೀರ್ಪುಗಳನ್ನು ನೋಡಬೇಕಿದೆ. ಅವರುಗಳ  ರಾಜೀನಾಮೆಯ ಕುರಿತೂ ನನಗಿನ್ನೂ ಮನವರಿಕೆಯಾಗಿಲ್ಲ, ಅವರುಗಳ ರಾಜೀನಾಮೆಯು ಕ್ರಮಬದ್ಧವಾಗಿಲ್ಲ. ಆದರೆ ಅದರ ಕುರಿತು ತೀರ್ಪು ನೀಡಲು ಸಮಯ ಬೇಕಿದೆ ಎಂದರು.

ಈ ತೀರ್ಮಾನ ಕೈಗೊಳ್ಳಲು ಕಾರಣವಾದ ನೈತಿಕ ಹಾಗೂ ಕಾನೂನಿನ ವಿಚಾರಗಳನ್ನೂ ರಮೇಶ್ ಕುಮಾರ್ ವಿವರಿಸಿದ್ದಲ್ಲದೇ, ಶಾಸಕರ ಅನೈತಿಕ ರೀತಿ-ನೀತಿಗಳ ಕುರಿತು ಖಾರವಾಗಿ ಮಾತನಾಡಿದರು.

ಸುಪ್ರೀಂಕೋರ್ಟ್.ಗೆ ಹೋಗುವ ಸಾಧ್ಯತೆ

ಅನರ್ಹಗೊಂಡ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ. ಅದನ್ನು ಗಮನದಲ್ಲಿಟ್ಟುಕೊಂಡೇ ರಮೇಶ್ ಕುಮಾರ್ ವಿವರಗಳನ್ನು ತಿಳಿಸಿದರು. ಈ ಮೂರೂ ಶಾಸಕರ ವಿಚಾರದಲ್ಲಿ ತಾಂತ್ರಿಕ ಅಂಶಗಳೂ ಸ್ಪಷ್ಟವಿದ್ದುದರಿಂದ ಸ್ಪಷ್ಟವಾದ ಕ್ರಮ ತೆಗೆದುಕೊಳ್ಳಲು ಹಿಂಜರಿದಿಲ್ಲ ಎಂಬುದು ಗೊತ್ತಾಗಿದೆ. ಅದರಲ್ಲೂ ಶಂಕರ್, ತಾನು ಕಾಂಗ್ರೆಸ್.ನಲ್ಲಿ ವಿಲೀನವಾಗಿದ್ದೆನೆಂದು ಹೇಳಿ ನಂತರ ಬಿಜೆಪಿಗೆ ಬೆಂಬಲ ಕೊಡುತ್ತೇನೆಂದು ಲಿಖಿತವಾಗಿ ತಿಳಿಸಿದ್ದರಿಂದ ಅವರನ್ನು ಅನರ್ಹಗೊಳಿಸಲು ಯಾವುದೇ ಅಡ್ಡಿಗಳಿರಲಿಲ್ಲ.

ಆದರೂ ಸದರಿ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ.

ಸ್ಪೀಕರ್ ಅವರು ವಹಿಸಿದ ಎಚ್ಚರಿಕೆ

ಪ್ರತಿಯೊಬ್ಬರ ವಿಚಾರದಲ್ಲೂ ನಡೆದ ಘಟನಾವಳಿಗಳನ್ನು ದಿನಾಂಕವಾರು ವಿವರಿಸಿದ್ದಲ್ಲದೇ, ಅದು ಕಾನೂನು ಪ್ರಕಾರ ಹೇಗೆ ಸರಿ ಅಥವಾ ತಪ್ಪು ಎಂಬುದನ್ನೂ ಸ್ಪೀಕರ್ ಮುಂದಿಟ್ಟಿದ್ದಾರೆ. ಆ ಮೂಲಕ ತಾನು ಪಕ್ಷಪಾತದಿಂದ ವರ್ತಿಸಿಲ್ಲ, ಪಕ್ಷಾಂತರ ನಿಷೇಧ ಕಾಯ್ದೆಯನ್ವಯವೇ ಕ್ರಮ ತೆಗೆದುಕೊಂಡಿದ್ದೇನೆ ಎಂಬುದಕ್ಕೆ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ತಾನು ತರಾತುರಿಯೂ ಮಾಡಲಿಲ್ಲ, ಕಾಯ್ದೆಯ ಉದ್ದೇಶವನ್ನು ಈಡೇರಿಸುವ ನಿಟ್ಟಿನಲ್ಲಿ ತಡವೂ ಮಾಡಲಿಲ್ಲ ಎಂಬುದನ್ನೂ ವಿವರಿಸಿದರು.

ತಾನು ರಾಜೀನಾಮೆ ಅಂಗೀಕಾರಕ್ಕೆ ತಡಮಾಡುತ್ತಿದ್ದೇನೆಂದು ಸುಪ್ರೀಂಕೋರ್ಟಿಗೆ ಸುಳ್ಳು ಹೇಳಿದರೆಂಬುದನ್ನು ಘಟನಾವಳಿಗಳ ಮೂಲಕ ಸ್ಪೀಕರ್ ಬಿಚ್ಚಿಟ್ಟರು. ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ಶರದ್ ಯಾದವ್ ಅವರ ಪ್ರಕರಣದಲ್ಲಿ ನೀಡಿದ ತೀರ್ಪನ್ನೂ ಉಲ್ಲೇಖಿಸಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರಂಭದಿಂದಲೂ ಸ್ಪೀಕರ್ ರಮೇಶ್ ಕುಮಾರ್ ಅವರು ಹಾಲಿ ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ ಮತ್ತು ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮಕುಮಾರ್ ಅವರಿಂದ ಕಾನೂನು ಸಲಹೆಯನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...