Homeಕರ್ನಾಟಕಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅನರ್ಹಗೊಂಡ ಶಾಸಕರು ಉಪಚುನಾವಣೆಗಳಲ್ಲೂ ಸ್ಪರ್ಧೆ ಮಾಡುವಂತಿಲ್ಲ

- Advertisement -
- Advertisement -

ಮೂವರು ಶಾಸಕರು ವಿಧಾನಸಭೆಯ ಈ ಅವಧಿ ಮುಗಿಯುವವರೆಗೂ ಅನರ್ಹರು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ಬಿದ್ದು ಹೋಗುತ್ತದೆ ಎಂಬುದು ಸ್ಪಷ್ವವಾದ ಕ್ಷಣದಿಂದ ಇದ್ದ ಕುತೂಹಲಗಳು ಎರಡು. ಒಂದು, ಸ್ಪೀಕರ್ ಅವರ ನಡೆ ಏನಾಗಿರುತ್ತದೆ ಎಂಬುದು, ಅಂದರೆ ಯಾವ್ಯಾವ ಶಾಸಕರನ್ನು ಅನರ್ಹಗೊಳಿಸುತ್ತಾರೆ ಎಂಬ ವಿಚಾರ. ಎರಡನೆಯದ್ದು ಯಡಿಯೂರಪ್ಪನವರು ಕೂಡಲೇ ಮುಖ್ಯಮಂತ್ರಿಯಾಗುತ್ತಾರಾ ಇಲ್ಲವಾ ಎಂಬುದು.

ಇದೀಗ ಮೊದಲನೆಯ ವಿಚಾರಕ್ಕೆ ಪಾಕ್ಷಿಕವಾಗಿ ತೆರೆ ಬಿದ್ದಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮೂವರು ಶಾಸಕರ ಅನರ್ಹತೆಯ ಕುರಿತಾದ ತಮ್ಮ ತೀರ್ಮಾನಗಳನ್ನು ವಿವರವಾಗಿ ಬಿಡಿಸಿಟ್ಟರು.

ರಾಣಿಬೆನ್ನೂರಿನ ಶಾಸಕ ಶಂಕರ್ ಅವರು ಕೆಪಿಜೆಪಿಯಿಂದ ಆಯ್ಕೆಯಾಗಿದ್ದು, ಎರಡನೆಯ ಸಾರಿ ಮಂತ್ರಿಯಾದಾಗ ಕಾಂಗ್ರೆಸ್ ಪಕ್ಷದೊಂದಿಗೆ (ಜೂನ್ 14ರಂದು) ತನ್ನ ಪಕ್ಷವನ್ನು ವಿಲೀನ ಮಾಡಿದ್ದೇನೆಂದು ಸ್ಪೀಕರ್ ಅವರಿಗೆ ತಿಳಿಸಿದ್ದರು. ಆ ನಂತರ ತಾನು ಬಿಜೆಪಿಗೆ ಬೆಂಬಲಿಸುತ್ತಿದ್ದೇನೆಂದು ತಾನೇ ತಿಳಿಸಿರುವುದರಿಂದ ಸಂದೇಹಕ್ಕೆ ಆಸ್ಪದವಿಲ್ಲದೇ ಪಕ್ಷಾಂತರ ಮಾಡಿರುವುದರಿಂದ ಅವರು ಅನರ್ಹರು ಎಂದು ಘೋಷಿಸಲಾಗಿದೆ.

ವಿಪ್ ಉಲ್ಲಂಘನೆ ಕಾರಣಕ್ಕೆ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಫೆಬ್ರವರಿಯಲ್ಲೇ ದೂರು ನೀಡಲಾಗಿತ್ತು.  ಅವರು ಏನೇನು ಮಾಡಿದರೆಂಬುದನ್ನು ವಿವರಿಸಿ ಅವರನ್ನೂ ಅನರ್ಹರೆಂದು ಘೋಷಿಸಲಾಗಿದೆ.

ಇನ್ನು ಉಳಿದ ಶಾಸಕರುಗಳ ರಾಜೀನಾಮೆ ಪ್ರಕರಣಗಳ ಕುರಿತು ತೀರ್ಮಾನ ಮಾಡಲು ತಾನಿನ್ನೂ ಅಧ್ಯಯನ ಮಾಡಬೇಕಿದೆ. ಹಲವಾರು ಕೋರ್ಟ್ ತೀರ್ಪುಗಳನ್ನು ನೋಡಬೇಕಿದೆ. ಅವರುಗಳ  ರಾಜೀನಾಮೆಯ ಕುರಿತೂ ನನಗಿನ್ನೂ ಮನವರಿಕೆಯಾಗಿಲ್ಲ, ಅವರುಗಳ ರಾಜೀನಾಮೆಯು ಕ್ರಮಬದ್ಧವಾಗಿಲ್ಲ. ಆದರೆ ಅದರ ಕುರಿತು ತೀರ್ಪು ನೀಡಲು ಸಮಯ ಬೇಕಿದೆ ಎಂದರು.

ಈ ತೀರ್ಮಾನ ಕೈಗೊಳ್ಳಲು ಕಾರಣವಾದ ನೈತಿಕ ಹಾಗೂ ಕಾನೂನಿನ ವಿಚಾರಗಳನ್ನೂ ರಮೇಶ್ ಕುಮಾರ್ ವಿವರಿಸಿದ್ದಲ್ಲದೇ, ಶಾಸಕರ ಅನೈತಿಕ ರೀತಿ-ನೀತಿಗಳ ಕುರಿತು ಖಾರವಾಗಿ ಮಾತನಾಡಿದರು.

ಸುಪ್ರೀಂಕೋರ್ಟ್.ಗೆ ಹೋಗುವ ಸಾಧ್ಯತೆ

ಅನರ್ಹಗೊಂಡ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ. ಅದನ್ನು ಗಮನದಲ್ಲಿಟ್ಟುಕೊಂಡೇ ರಮೇಶ್ ಕುಮಾರ್ ವಿವರಗಳನ್ನು ತಿಳಿಸಿದರು. ಈ ಮೂರೂ ಶಾಸಕರ ವಿಚಾರದಲ್ಲಿ ತಾಂತ್ರಿಕ ಅಂಶಗಳೂ ಸ್ಪಷ್ಟವಿದ್ದುದರಿಂದ ಸ್ಪಷ್ಟವಾದ ಕ್ರಮ ತೆಗೆದುಕೊಳ್ಳಲು ಹಿಂಜರಿದಿಲ್ಲ ಎಂಬುದು ಗೊತ್ತಾಗಿದೆ. ಅದರಲ್ಲೂ ಶಂಕರ್, ತಾನು ಕಾಂಗ್ರೆಸ್.ನಲ್ಲಿ ವಿಲೀನವಾಗಿದ್ದೆನೆಂದು ಹೇಳಿ ನಂತರ ಬಿಜೆಪಿಗೆ ಬೆಂಬಲ ಕೊಡುತ್ತೇನೆಂದು ಲಿಖಿತವಾಗಿ ತಿಳಿಸಿದ್ದರಿಂದ ಅವರನ್ನು ಅನರ್ಹಗೊಳಿಸಲು ಯಾವುದೇ ಅಡ್ಡಿಗಳಿರಲಿಲ್ಲ.

ಆದರೂ ಸದರಿ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ.

ಸ್ಪೀಕರ್ ಅವರು ವಹಿಸಿದ ಎಚ್ಚರಿಕೆ

ಪ್ರತಿಯೊಬ್ಬರ ವಿಚಾರದಲ್ಲೂ ನಡೆದ ಘಟನಾವಳಿಗಳನ್ನು ದಿನಾಂಕವಾರು ವಿವರಿಸಿದ್ದಲ್ಲದೇ, ಅದು ಕಾನೂನು ಪ್ರಕಾರ ಹೇಗೆ ಸರಿ ಅಥವಾ ತಪ್ಪು ಎಂಬುದನ್ನೂ ಸ್ಪೀಕರ್ ಮುಂದಿಟ್ಟಿದ್ದಾರೆ. ಆ ಮೂಲಕ ತಾನು ಪಕ್ಷಪಾತದಿಂದ ವರ್ತಿಸಿಲ್ಲ, ಪಕ್ಷಾಂತರ ನಿಷೇಧ ಕಾಯ್ದೆಯನ್ವಯವೇ ಕ್ರಮ ತೆಗೆದುಕೊಂಡಿದ್ದೇನೆ ಎಂಬುದಕ್ಕೆ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ತಾನು ತರಾತುರಿಯೂ ಮಾಡಲಿಲ್ಲ, ಕಾಯ್ದೆಯ ಉದ್ದೇಶವನ್ನು ಈಡೇರಿಸುವ ನಿಟ್ಟಿನಲ್ಲಿ ತಡವೂ ಮಾಡಲಿಲ್ಲ ಎಂಬುದನ್ನೂ ವಿವರಿಸಿದರು.

ತಾನು ರಾಜೀನಾಮೆ ಅಂಗೀಕಾರಕ್ಕೆ ತಡಮಾಡುತ್ತಿದ್ದೇನೆಂದು ಸುಪ್ರೀಂಕೋರ್ಟಿಗೆ ಸುಳ್ಳು ಹೇಳಿದರೆಂಬುದನ್ನು ಘಟನಾವಳಿಗಳ ಮೂಲಕ ಸ್ಪೀಕರ್ ಬಿಚ್ಚಿಟ್ಟರು. ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ಶರದ್ ಯಾದವ್ ಅವರ ಪ್ರಕರಣದಲ್ಲಿ ನೀಡಿದ ತೀರ್ಪನ್ನೂ ಉಲ್ಲೇಖಿಸಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರಂಭದಿಂದಲೂ ಸ್ಪೀಕರ್ ರಮೇಶ್ ಕುಮಾರ್ ಅವರು ಹಾಲಿ ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ ಮತ್ತು ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮಕುಮಾರ್ ಅವರಿಂದ ಕಾನೂನು ಸಲಹೆಯನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...