Homeಅಂಕಣಗಳುಆಘಾತವಾಣಿ | `ಜೈಲೊಳಗೆ ಸ್ವೋಭುನಕ್ಕೆ ರೆಡಿ ಮಾಡಿ, ಆಮ್ಯಾಲೆ ನನ್ನ ಅರೆಸ್ಟ್ ಮಾಡ್ರುಲಾ’

ಆಘಾತವಾಣಿ | `ಜೈಲೊಳಗೆ ಸ್ವೋಭುನಕ್ಕೆ ರೆಡಿ ಮಾಡಿ, ಆಮ್ಯಾಲೆ ನನ್ನ ಅರೆಸ್ಟ್ ಮಾಡ್ರುಲಾ’

- Advertisement -
- Advertisement -
  • ಅಟ್ಯಾಕ್ ಹನ್ಮಂತ |

ನಮಸ್ಕಾರ ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ಅಟ್ಯಾಕ್ ಹನ್ಮಂತ.

ಕಣ್ಣಿಗೆ ಏನೇ ಕಂಡರೂ ಅದನ್ನು ಉದ್ಘಾಟನೆ ಮಾಡಿ ಪೋಟೋ ತಗೊಳ್ತೀನಿ ಅಂತ ಓಡೋಡಿ ಬರುವ ಮಾನ್ಯ ಪ್ರದ್ರಾನ ಮಂತ್ರಿ ‘ಪಕೋಡಪ್ಪ ಕುಂಡಾಲೇಂದ್ರ’ ಅವರು ಇತ್ತೀಚೆಗೆ ಒಂದು ವಿಶೇಷ ಉದ್ಘಾಟನೆಯಿಂದಾಗಿ ಮತ್ತೆ ಸುದ್ದಿಯಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮಾಯಾವತಿ ಮತ್ತು ಅಖಿಲೇಶ್ ಯಾದವ್ ಇವರುಗಳು ಕಳೆದ ತಮ್ಮ ಅಧಿಕಾರಾವಧಿಯಲ್ಲಿ ದೆಹಲಿಗೆ ಹೊಂದಿಕೊಂಡಂತೆ ನೂರಾರು ಕಿಲೋಮೀಟರ್‍ಗಳ ಎಕ್ಸ್‍ಪ್ರೆಸ್ ಹೈವೇ ನಿರ್ಮಿಸಿದ್ದರು. ಅದನ್ನು ತಮ್ಮ ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಳ್ಳುವ ಪ್ರತಿಭೆಯ ಕೊರತೆಯಿಂದಾಗಿ ಹಾಲಿ ವಿಫಲ ರಾಜಕಾರಣಿಗಳಾಗಿದ್ದಾರೆ. ಆದರೆ ಪಕೋಡೇಂದ್ರನ ಬಹುಮುಖ ಪ್ರತಿಭೆಗೆ ಮತ್ತೊಂದು ತಾಜಾ ನಿದರ್ಶನ ಇದೀ ವರದಿಯಾಗಿದೆ.. ದೆಹಲಿಯಿಂದ ಮೀರತ್ ನಡುವೆ ಜುಜುಬಿ 9 ಕಿಲೋಮೀಟರ್ ಎಕ್ಸ್‍ಪ್ರೆಸ್ ಹೈವೇಯನ್ನು ನಿರ್ಮಿಸಿ ‘ನಾನೇ ಮಾಡಿದ್ದು, ನಾನೇ ನಾನೇ..’ ಎಂದು ಕೂಗಾಡಿ ಕಿರುಚಾಡಿ ಫೋಟೋ ತಗೆಸಿ ಪ್ರಚಾರ ಮಾಡಿ ಕೊಂಡಿದ್ದಾರೆ. ಇಂಥದೊಂದು ಚಿಲ್ಲರೆ ಸುದ್ದಿಗಾಗಿಯೇ ಕಾದು ಕುಳಿತಿದ್ದ ಮೀಡಿಯಾಗಳು ಮಂತ್ರಕ್ಕಿಂತ ಉಗುಳನ್ನೇ ಹೆಚ್ಚಾಗಿ ಖರ್ಚುಮಾಡಿ ತಮ್ಮ ಖಾಲಿತಲೆಯನ್ನು ಪ್ರದರ್ಶನಕ್ಕಿಟ್ಟಿರುವುದು ವರದಿಯಾಗಿದೆ. ಈ ಸುದ್ದಿಯಿಂದ ಉತ್ತೇಜಿತನಾದ ಜಡೇಮಾಯಸಂದ್ರದ ಹಾಸ್ಯನಟ ಗಜ್ಜೇಶ್ ಅವರು, ತಮ್ಮ ‘ಮನೆಯ ಶೌಚಾಲಯಕ್ಕೆ ಹಾಕಿಸಿರೋ ಹೊಸ ಟೈಲ್ಸ್‍ಗಳು ಮತ್ತು ತಮ್ಮೂರಿನಲ್ಲಿ ಹೊಸದಾಗಿ ಹಾಕಿರುವ ರಸ್ತೆಉಬ್ಬುಗಳನ್ನು ಉದ್ಘಾಟಿಸಲು ಕ್ಯಾಮೆರಾ ಸಮೇತ ತಾವು ಬರಲೇಬೇಕೆಂದು’ ಪ್ರದಾನಮಂತ್ರಿ ‘ಪಕೋಡೇಂದ್ರ’ ಅವರನ್ನು ಬೇಡಿಕೊಂಡಿದ್ದಾರೆಂದು ವರದಿಯಾಗಿದೆ.

* * * *

ದೇಶದ ಬ್ಯಾಂಕ್‍ಗಳಲ್ಲಿ ಬೇಕಾಬಿಟ್ಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋಗಲು ಸನ್ಮಾನ್ಯ ‘ಕುಂಡಾಲೇಂದ್ರ’ ಅವರು ಶುರು ಮಾಡಿರುವ ‘ಕುಣ್ಕೊಂಡ್ ಬನ್ನಿ ದೋಚ್ಕೊಂಡ್ ಓಡಿ’ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ 33 ಮಂದಿ ಕಾರ್ಪೊರೇಟ್ ಕಳ್ಳರು ತಾವು ಸಾಲ ಪಡೆದ ಬ್ಯಾಂಕುಗಳ ತಲೆಯನ್ನು ನುಣ್ಣಗೆ ಬೋಳಿಸಿ ದೇಶ ಬಿಟ್ಟು ಓಡಿ ಹೋಗಿರುವುದು ಹಳೆಯ ವಿಷಯ. ಈಗ ಈ ಯೋಜನೆಯಡಿಯಲ್ಲಿ ದೇಶಬಿಟ್ಟ ಮೊದಲಿಗರಾದ ಮಲ್ಯಪ್ಪನವರನ್ನು ಲಂಡನ್‍ನಿಂದ ವಾಪಸ್ಸು ಕಳಿಸಲು ಕುಂಡಾಲೇಂದ್ರ ಬ್ರಿಟನ್ ಸರ್ಕಾರವನ್ನು ಅಂಗಲಾಚಿ ಕೇಳಿಕೊಂಡಿದ್ದರು. ಇದಕ್ಕೆ ಮಲ್ಯಪ್ಪನವರು “ಇಂಡಿಯಾ ದೇಸುದ ಜೈಲ್‍ಗುಳಲ್ಲಿ ಸೊಳ್ಳೆಕಾಟ ಜ್ಯಾಸ್ತಿ, ನಿಂಬೆ ಶರ್ಬತ್ತಿನಷ್ಟು ಗಟ್ಟಿ ಸಾಂಬಾರ್ ಮಾಡ್ತಾರೆ, ಆಲೂಗಡ್ಡೆ ಪಲ್ಯುದ ಬದ್ಲು ಬೂಸ್ಟು ಹಿಡಿದ ಹಪ್ಪಳ ಕೊಡ್ತಾರೆ. ನಾನು ಇಂಥಾ ಇಂಡಿಯಾ ಜೈಲ್‍ಗುಳಿಗೆ ಹ್ವೋಗಲ್ಲ, ಮೊದ್ಲು ಆ ದೇಸುದ ಜೈಲುಗಳಲ್ಲಿ ಸಿಮ್ಮಿಂಗ್ ಫೂಲ್ ಕಟ್ಟುಸಿ, ತ್ರಿಬಲ್ ಬೆಡ್ರೂಂ ಜೈಲುಕ್ವಾಣೆಯೊಳಗೆ ನನ್ನ ಹೊಸ ಹೆಂಡ್ತಿ ಜ್ವತೆ ಶೋಭನ ಮಾಡ್ಕ್ಯನಕ್ಕೆ ಕುರ್ಲಾನ್ ಹಾಸಿಗೆ ವ್ಯವಸ್ಥೆ ಮಾಡಿ ಮುಗಿದ ಮ್ಯಾಲೆ ಬೇಕಾದ್ರೆ ನನ್ನುನ್ನ ಅರೆಸ್ಟು ಮಾಡಿ” ಎಂದು ಉತ್ತರಿಸಿದ್ದಾರಂತೆ. ಈ ಸಂಬಂಧ ಕುರ್ಲಾನ್ ಹಾಸಿಗೆಯ ಮೇಲೆ ಚೆಲ್ಲಲು ಮಲ್ಲಿಗೆಹೂವುಗಳ ಪೂರೈಕೆದಾರರರಿಗೆ ಕುಂಡಾಲೇಂದ್ರ ಟೆಂಡರ್ ಕರೆಯುತ್ತಾರಾ ಎಂದು ಜನರು ಕುಂಡೆ ಬಡಕೊಂಡು ನಗುತ್ತಿದ್ದಾರೆ ಎಂದು ವರದಿಯಾಗಿದೆ.

* * * *

ಇತ್ತೀಚೆಗೆ ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ನೂರಾರು ಸಂಖ್ಯೆಯಲ್ಲಿ ಕೆಟ್ಟು ಕುಲಗೆಟ್ಟಿರುವ ಇವಿಎಂಗಳನ್ನು ಬಳಸಲಾಗಿದೆಯೆಂದು ಚುನಾವಣಾ ಅಭ್ಯರ್ಥಿಗಳು ಎಲೆಕ್ಷನ್ ಕಮಿಷನ್ನಿಗೆ ದೂರು ಕೊಟ್ಟಿದ್ದಾರೆ. ಈ ಸಂಬಂಧ ಉತ್ತರಿಸಿರುವ ಚುನಾವಣಾ ಆಯೋಗವು `ಆ ಸ್ಥಳಗಳಲ್ಲಿ ಟೆಂಪ್ರೇಚರ್ರು ಶ್ಯಾನೆ ಹೆಚ್ಚಾಗಿಹ್ವೋಗಿ ನಂ ಇವಿಎಂ ಮೆಷೀನುಗಳ ತಲೆಕೆಟ್ಟು, ಇದ್ದುಕ್ಕಿದ್ದಂತೆ ಹುಚ್ಚ್‍ನಾಯಿ ಕಚ್ಚುದಂಗೆ ಬಿಜೆಪಿಗೆ ವೋಟು ಹಾಕ್ತಾ ಕುಂತವೆ‘ ಎಂದೂ ವಿವರಣೆ ಕೊಟ್ಟಿದೆ. ವಾತಾವರಣದ ಉಷ್ಣಾಂಶ ಹೆಚ್ಚಾಗಿ ಮೊಬೈಲ್‍ಗಳು ಕೆಟ್ಟಿಲ್ಲ, ಕಂಪ್ಯೂಟರ್‍ಗಳು ಕೆಟ್ಟಿಲ್ಲ, ಟಿವಿ, ಮಿಕ್ಸಿ, ಟೇಪ್‍ರೆಕಾರ್ಡರಿನಂಥ ಎಲೆಕ್ಟ್ರಾನಿಕ್ ವಸ್ತುಗಳೂ ಕೆಟ್ಟ ಉದಾಹರಣೆಯಿಲ್ಲ. ಹೀಗಿರುವಾಗ ಇವಿಎಂಗಳು ಮಾತ್ರ ಉಷ್ಣಾಂಶಕ್ಕೆ ಹೆದರಿ ಯಾಕೆ ಉಚ್ಚೆ ಹುಯ್ದುಕೊಳ್ಳುತ್ತಿವೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ. ಇವನ್ನು ತಯಾರಿಸಿದ್ದು ಸರ್ಕಾರದ ಎಲೆಕ್ಟ್ರಾನಿಕ್ ಎಂಜಿನಿಯರ್‍ಗಳೋ ಅಥವ ಹಳೇಸೀಸ ಖಾಲಿ ಬಾಟ್ಲು ವ್ಯಾಪಾರಿಗಳೋ ಎಂದು ಜನರು ತಲೆ ಕೆರೆದುಕೊಳ್ಳುತ್ತಿದ್ದಾರೆ.

* * * *

ರೈತರ ಸಾಲ ಮನ್ನಾ ಮಾಡದಿದ್ರೆ ನಾವು ಕರ್ನಾಟಕ ಬಂದ್ ಮಾಡ್ತೀವಿ’ ಅಂತ ತಮ್ಮದೇ ತೊಡೆಯನ್ನು ತಟ್ಟಿಕೊಂಡು ಹೇಳಿದ ಧಡಿಯೂರಪ್ಪನವರು ನಂತರ ಕೈ ಪಕ್ಷವು ಕೋರ್ಟ್‍ಗೆ ಹೋಗಿ ಕೇಸಾಕ್ತೀವಿ ಎಂದು ಹೆದರಿಸಿದ ಮೇಲೆ.. ನಾನಂಗೆ ಹೇಳೇ ಇಲ್ಲ, ಮೋಸ್ಟ್ ಲಿ ನನ್ನ ಆತ್ಮ ದೇಹದಿಂದ ಪುಸುಕ್ ಅಂತ ಹೊರಬಂದು.. ಡೈಲಾಗ್ ಹೊಡೆದು ದಬುಕ್ ಅಂತ ಒಳಕ್ಕೆ ಹೋಗಿರಬೇಕು ಎಂದು ಪ್ಲೇಟ್ ಚೇಂಜ್ ಮಾಡಿಬಿಟ್ಟಿದ್ದರು. ಈ ಅವಾಂತರಗಳನ್ನು ಕಣ್ಣಾರೆ ಕಂಡ ಕರ್ನಾಟಕದ ಜನ ಬಂದನ್ನೇ ಬಂದ್ ಮಾಡಿ ಧಡಿಯೂರಪ್ಪನಿಗೆ ಮಣ್ಣುಮುಕ್ಕಿಸಿದ್ದಾರೆ. ಈ ಸಂದರ್ಭದಲ್ಲಿ ಮೈಸೂರಿನಲ್ಲಿ ವಿಶೇಷ ಚೇತನ ಮಾನಸಿಕ ಅಸ್ವಸ್ಥ ಪ್ರಪಾತ ಸಿಮ್ಮನನ್ನು ಅರೆಸ್ಟ್ ಮಾಡಿರುವ ಪೊಲೀಸರು.. ಸಿಮ್ಮನ ಎರಡೂ ಕಾಲುಗಳಿಗೆ ಹಗ್ಗ ಕಟ್ಟಿ, ಬಾಯಿಗೆ ಗೋಣಿಚೀಲ ತುರುಕಿ, ಎರಡೂ ಕಣ್ಣಿಗೆ ಪತಂಜಲಿ ಖಾರದಪುಡಿ ಎರಚಿ, ಫ್ಯಾನಿಗೆ ನೇತುಹಾಕಿ ನಾಯಿಗೆ ಹೊಡೆದಂತೆ ಇನ್ನೂ ಹೊಡೆದಿಲ್ಲವೆಂದು ವರದಿಯಾಗಿದೆ.

* * * *

ನಮ್ಮ ಪ್ರದ್ರಾನಮಂತ್ರಿ ಕುಂಡಾಲೇಂದ್ರ ವಿಶ್ವಬ್ಯಾಂಕಿನಿಂದ ನಯಾಪೈಸ ಸಾಲ ತೆಗೆದುಕೊಳ್ಳದೆ ಸರ್ಕಾರ ನಡೆಸುತ್ತಿದ್ದಾನೆಂದು ಮೋತಿಭಕ್ತರು ಊರಲ್ಲೆಲ್ಲ ಪುಂಗಿ ಊದುತ್ತಿರುವ ವರದಿಗಳು ವ್ಯಾಪಕವಾಗಿ ಕೇಳಿಬಂದಿವೆ. ಕೈಯಲ್ಲಿ ಪೊರಕೆ ಹಿಡಿದು, ಮುಖಕ್ಕೆ ಮೂರು ಇಂಚು ಮೇಕಪ್ಪು ರುಬ್ಬಿಕೊಂಡು ಟೊಯ್ಯಟೊಯ್ಯ ಎಂದು ಕಸಗುಡಿಸುವ ಡ್ರಾಮಾ ಮಾಡುತ್ತಿದ್ದ ಮೋತಿಜೀ, ಈ ಬಿಕನಾಸಿ ನಾಟಕವನ್ನು ಪತ್ರಿಕೆಗಳಲ್ಲಿ ಪ್ರಚಾರ ಮಾಡಲೂ ಸಹ ವಿಶ್ವಬ್ಯಾಂಕಿನಿಂದ ತಿರುಪೆ ಸಾಲ ತಂದಿದ್ದಾನೆಂದು ವಿಶ್ವಬ್ಯಾಂಕ್ ಮೂಲಗಳು ತಿಳಿಸಿವೆ. ಇಂಥಹ ಹಸಿಸುಳ್ಳುಗಳನ್ನೇ ಹೇಳುತ್ತ ತಿರುಗುತ್ತಿರುವ ಮೋತಿಜಿ ಮತ್ತು ಮೋತಿಭಕ್ತರನ್ನು ಜನರು ಅಟ್ಟಾಡಿಸಿಕೊಂಡು ಬಟ್ಟೆ ಹರಿದುಹೋಗುವಂತೆ ಬಡಿದು ನೆಲಕ್ಕೆ ಹಾಕಿ ತುಳಿಯಲು ಪ್ರಯತ್ನ ನಡೆಸಿರುವ ಘಟನೆ ಇನ್ನೂ ವರದಿಯಾಗಿಲ್ಲ.

* * * *

ಉತ್ತರಪ್ರದೇಶದ ಕಬ್ಬು ಬೆಳೆಯುವ ರೈತರಿಗೆ ಕೊಡಬೇಕಾದ 13 ಸಾವಿರ ಕೋಟಿ ಖರೀದಿ ಹಣವನ್ನು ಕೊಡದೆ ಮುಂಡಾ ಮೋಚಿರುವ ಜೋಗಿ ಪ್ಯಾದೇನಾತನ ಸರ್ಕಾರವು ಈ ಬಗ್ಗೆ ಪ್ರದ್ರಾನಮಂತ್ರಿಗೆ ಹಣಬಿಡುಗಡೆಗೆ ಕೇಳಿದಾಗ.. ಕುಂಡಾಲೇಂದ್ರನು..’ ಏನೂ ಹೆದರಬ್ಯಾಡ.. ಪಾಕಿಸ್ತಾನದಿಂದ ಸಕ್ಕರೆ ತರಿಸಿಕೊಂಡು ಉತ್ತರಪ್ರದೇಶದ ರೈತರ ಕಣ್ಣಿಗೆ ಮಣ್ಣುಸುಣ್ಣ ಎರಡನ್ನೂ ಮಿಕ್ಸ್ ಮಾಡಿ ಎರಚೋಣ’ಎಂದು ಭರವಸೆ ಕೊಟ್ಟಿದ್ದಾನೆ ಎಂದು ದೆಹಲಿಯಿಂದ ವರದಿ ಬಂದಿದೆ. ಅದರಂತೆ ಪಾಕಿಸ್ತಾನದಿಂದ 2 ಲಕ್ಷ ಟನ್ ಸಕ್ಕರೆ ಆಮದು ಮಾಡಿಕೊಂಡು ಉತ್ತರಪ್ರದೇಶದ ಕಬ್ಬುಬೆಳೆಗಾರರಿಗೆ ಈ ಅಲ್ಲಣ್ಣ-ಮಲ್ಲಣ್ಣ ಅಲಕ್ ಬುಲಕ್ ಜೋಡಿಯು ನಾಮ ಎಳೆದಿದೆ ಎಂದು ತಿಳಿದುಬಂದಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ಸಿಗೋಣ. ಬೈ ಟೇಕ್ ಕೇರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...