Homeಅಂಕಣಗಳುಆಘಾತವಾಣಿ | `ಜೈಲೊಳಗೆ ಸ್ವೋಭುನಕ್ಕೆ ರೆಡಿ ಮಾಡಿ, ಆಮ್ಯಾಲೆ ನನ್ನ ಅರೆಸ್ಟ್ ಮಾಡ್ರುಲಾ’

ಆಘಾತವಾಣಿ | `ಜೈಲೊಳಗೆ ಸ್ವೋಭುನಕ್ಕೆ ರೆಡಿ ಮಾಡಿ, ಆಮ್ಯಾಲೆ ನನ್ನ ಅರೆಸ್ಟ್ ಮಾಡ್ರುಲಾ’

- Advertisement -
- Advertisement -
  • ಅಟ್ಯಾಕ್ ಹನ್ಮಂತ |

ನಮಸ್ಕಾರ ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ಅಟ್ಯಾಕ್ ಹನ್ಮಂತ.

ಕಣ್ಣಿಗೆ ಏನೇ ಕಂಡರೂ ಅದನ್ನು ಉದ್ಘಾಟನೆ ಮಾಡಿ ಪೋಟೋ ತಗೊಳ್ತೀನಿ ಅಂತ ಓಡೋಡಿ ಬರುವ ಮಾನ್ಯ ಪ್ರದ್ರಾನ ಮಂತ್ರಿ ‘ಪಕೋಡಪ್ಪ ಕುಂಡಾಲೇಂದ್ರ’ ಅವರು ಇತ್ತೀಚೆಗೆ ಒಂದು ವಿಶೇಷ ಉದ್ಘಾಟನೆಯಿಂದಾಗಿ ಮತ್ತೆ ಸುದ್ದಿಯಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮಾಯಾವತಿ ಮತ್ತು ಅಖಿಲೇಶ್ ಯಾದವ್ ಇವರುಗಳು ಕಳೆದ ತಮ್ಮ ಅಧಿಕಾರಾವಧಿಯಲ್ಲಿ ದೆಹಲಿಗೆ ಹೊಂದಿಕೊಂಡಂತೆ ನೂರಾರು ಕಿಲೋಮೀಟರ್‍ಗಳ ಎಕ್ಸ್‍ಪ್ರೆಸ್ ಹೈವೇ ನಿರ್ಮಿಸಿದ್ದರು. ಅದನ್ನು ತಮ್ಮ ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಳ್ಳುವ ಪ್ರತಿಭೆಯ ಕೊರತೆಯಿಂದಾಗಿ ಹಾಲಿ ವಿಫಲ ರಾಜಕಾರಣಿಗಳಾಗಿದ್ದಾರೆ. ಆದರೆ ಪಕೋಡೇಂದ್ರನ ಬಹುಮುಖ ಪ್ರತಿಭೆಗೆ ಮತ್ತೊಂದು ತಾಜಾ ನಿದರ್ಶನ ಇದೀ ವರದಿಯಾಗಿದೆ.. ದೆಹಲಿಯಿಂದ ಮೀರತ್ ನಡುವೆ ಜುಜುಬಿ 9 ಕಿಲೋಮೀಟರ್ ಎಕ್ಸ್‍ಪ್ರೆಸ್ ಹೈವೇಯನ್ನು ನಿರ್ಮಿಸಿ ‘ನಾನೇ ಮಾಡಿದ್ದು, ನಾನೇ ನಾನೇ..’ ಎಂದು ಕೂಗಾಡಿ ಕಿರುಚಾಡಿ ಫೋಟೋ ತಗೆಸಿ ಪ್ರಚಾರ ಮಾಡಿ ಕೊಂಡಿದ್ದಾರೆ. ಇಂಥದೊಂದು ಚಿಲ್ಲರೆ ಸುದ್ದಿಗಾಗಿಯೇ ಕಾದು ಕುಳಿತಿದ್ದ ಮೀಡಿಯಾಗಳು ಮಂತ್ರಕ್ಕಿಂತ ಉಗುಳನ್ನೇ ಹೆಚ್ಚಾಗಿ ಖರ್ಚುಮಾಡಿ ತಮ್ಮ ಖಾಲಿತಲೆಯನ್ನು ಪ್ರದರ್ಶನಕ್ಕಿಟ್ಟಿರುವುದು ವರದಿಯಾಗಿದೆ. ಈ ಸುದ್ದಿಯಿಂದ ಉತ್ತೇಜಿತನಾದ ಜಡೇಮಾಯಸಂದ್ರದ ಹಾಸ್ಯನಟ ಗಜ್ಜೇಶ್ ಅವರು, ತಮ್ಮ ‘ಮನೆಯ ಶೌಚಾಲಯಕ್ಕೆ ಹಾಕಿಸಿರೋ ಹೊಸ ಟೈಲ್ಸ್‍ಗಳು ಮತ್ತು ತಮ್ಮೂರಿನಲ್ಲಿ ಹೊಸದಾಗಿ ಹಾಕಿರುವ ರಸ್ತೆಉಬ್ಬುಗಳನ್ನು ಉದ್ಘಾಟಿಸಲು ಕ್ಯಾಮೆರಾ ಸಮೇತ ತಾವು ಬರಲೇಬೇಕೆಂದು’ ಪ್ರದಾನಮಂತ್ರಿ ‘ಪಕೋಡೇಂದ್ರ’ ಅವರನ್ನು ಬೇಡಿಕೊಂಡಿದ್ದಾರೆಂದು ವರದಿಯಾಗಿದೆ.

* * * *

ದೇಶದ ಬ್ಯಾಂಕ್‍ಗಳಲ್ಲಿ ಬೇಕಾಬಿಟ್ಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋಗಲು ಸನ್ಮಾನ್ಯ ‘ಕುಂಡಾಲೇಂದ್ರ’ ಅವರು ಶುರು ಮಾಡಿರುವ ‘ಕುಣ್ಕೊಂಡ್ ಬನ್ನಿ ದೋಚ್ಕೊಂಡ್ ಓಡಿ’ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ 33 ಮಂದಿ ಕಾರ್ಪೊರೇಟ್ ಕಳ್ಳರು ತಾವು ಸಾಲ ಪಡೆದ ಬ್ಯಾಂಕುಗಳ ತಲೆಯನ್ನು ನುಣ್ಣಗೆ ಬೋಳಿಸಿ ದೇಶ ಬಿಟ್ಟು ಓಡಿ ಹೋಗಿರುವುದು ಹಳೆಯ ವಿಷಯ. ಈಗ ಈ ಯೋಜನೆಯಡಿಯಲ್ಲಿ ದೇಶಬಿಟ್ಟ ಮೊದಲಿಗರಾದ ಮಲ್ಯಪ್ಪನವರನ್ನು ಲಂಡನ್‍ನಿಂದ ವಾಪಸ್ಸು ಕಳಿಸಲು ಕುಂಡಾಲೇಂದ್ರ ಬ್ರಿಟನ್ ಸರ್ಕಾರವನ್ನು ಅಂಗಲಾಚಿ ಕೇಳಿಕೊಂಡಿದ್ದರು. ಇದಕ್ಕೆ ಮಲ್ಯಪ್ಪನವರು “ಇಂಡಿಯಾ ದೇಸುದ ಜೈಲ್‍ಗುಳಲ್ಲಿ ಸೊಳ್ಳೆಕಾಟ ಜ್ಯಾಸ್ತಿ, ನಿಂಬೆ ಶರ್ಬತ್ತಿನಷ್ಟು ಗಟ್ಟಿ ಸಾಂಬಾರ್ ಮಾಡ್ತಾರೆ, ಆಲೂಗಡ್ಡೆ ಪಲ್ಯುದ ಬದ್ಲು ಬೂಸ್ಟು ಹಿಡಿದ ಹಪ್ಪಳ ಕೊಡ್ತಾರೆ. ನಾನು ಇಂಥಾ ಇಂಡಿಯಾ ಜೈಲ್‍ಗುಳಿಗೆ ಹ್ವೋಗಲ್ಲ, ಮೊದ್ಲು ಆ ದೇಸುದ ಜೈಲುಗಳಲ್ಲಿ ಸಿಮ್ಮಿಂಗ್ ಫೂಲ್ ಕಟ್ಟುಸಿ, ತ್ರಿಬಲ್ ಬೆಡ್ರೂಂ ಜೈಲುಕ್ವಾಣೆಯೊಳಗೆ ನನ್ನ ಹೊಸ ಹೆಂಡ್ತಿ ಜ್ವತೆ ಶೋಭನ ಮಾಡ್ಕ್ಯನಕ್ಕೆ ಕುರ್ಲಾನ್ ಹಾಸಿಗೆ ವ್ಯವಸ್ಥೆ ಮಾಡಿ ಮುಗಿದ ಮ್ಯಾಲೆ ಬೇಕಾದ್ರೆ ನನ್ನುನ್ನ ಅರೆಸ್ಟು ಮಾಡಿ” ಎಂದು ಉತ್ತರಿಸಿದ್ದಾರಂತೆ. ಈ ಸಂಬಂಧ ಕುರ್ಲಾನ್ ಹಾಸಿಗೆಯ ಮೇಲೆ ಚೆಲ್ಲಲು ಮಲ್ಲಿಗೆಹೂವುಗಳ ಪೂರೈಕೆದಾರರರಿಗೆ ಕುಂಡಾಲೇಂದ್ರ ಟೆಂಡರ್ ಕರೆಯುತ್ತಾರಾ ಎಂದು ಜನರು ಕುಂಡೆ ಬಡಕೊಂಡು ನಗುತ್ತಿದ್ದಾರೆ ಎಂದು ವರದಿಯಾಗಿದೆ.

* * * *

ಇತ್ತೀಚೆಗೆ ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ನೂರಾರು ಸಂಖ್ಯೆಯಲ್ಲಿ ಕೆಟ್ಟು ಕುಲಗೆಟ್ಟಿರುವ ಇವಿಎಂಗಳನ್ನು ಬಳಸಲಾಗಿದೆಯೆಂದು ಚುನಾವಣಾ ಅಭ್ಯರ್ಥಿಗಳು ಎಲೆಕ್ಷನ್ ಕಮಿಷನ್ನಿಗೆ ದೂರು ಕೊಟ್ಟಿದ್ದಾರೆ. ಈ ಸಂಬಂಧ ಉತ್ತರಿಸಿರುವ ಚುನಾವಣಾ ಆಯೋಗವು `ಆ ಸ್ಥಳಗಳಲ್ಲಿ ಟೆಂಪ್ರೇಚರ್ರು ಶ್ಯಾನೆ ಹೆಚ್ಚಾಗಿಹ್ವೋಗಿ ನಂ ಇವಿಎಂ ಮೆಷೀನುಗಳ ತಲೆಕೆಟ್ಟು, ಇದ್ದುಕ್ಕಿದ್ದಂತೆ ಹುಚ್ಚ್‍ನಾಯಿ ಕಚ್ಚುದಂಗೆ ಬಿಜೆಪಿಗೆ ವೋಟು ಹಾಕ್ತಾ ಕುಂತವೆ‘ ಎಂದೂ ವಿವರಣೆ ಕೊಟ್ಟಿದೆ. ವಾತಾವರಣದ ಉಷ್ಣಾಂಶ ಹೆಚ್ಚಾಗಿ ಮೊಬೈಲ್‍ಗಳು ಕೆಟ್ಟಿಲ್ಲ, ಕಂಪ್ಯೂಟರ್‍ಗಳು ಕೆಟ್ಟಿಲ್ಲ, ಟಿವಿ, ಮಿಕ್ಸಿ, ಟೇಪ್‍ರೆಕಾರ್ಡರಿನಂಥ ಎಲೆಕ್ಟ್ರಾನಿಕ್ ವಸ್ತುಗಳೂ ಕೆಟ್ಟ ಉದಾಹರಣೆಯಿಲ್ಲ. ಹೀಗಿರುವಾಗ ಇವಿಎಂಗಳು ಮಾತ್ರ ಉಷ್ಣಾಂಶಕ್ಕೆ ಹೆದರಿ ಯಾಕೆ ಉಚ್ಚೆ ಹುಯ್ದುಕೊಳ್ಳುತ್ತಿವೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ. ಇವನ್ನು ತಯಾರಿಸಿದ್ದು ಸರ್ಕಾರದ ಎಲೆಕ್ಟ್ರಾನಿಕ್ ಎಂಜಿನಿಯರ್‍ಗಳೋ ಅಥವ ಹಳೇಸೀಸ ಖಾಲಿ ಬಾಟ್ಲು ವ್ಯಾಪಾರಿಗಳೋ ಎಂದು ಜನರು ತಲೆ ಕೆರೆದುಕೊಳ್ಳುತ್ತಿದ್ದಾರೆ.

* * * *

ರೈತರ ಸಾಲ ಮನ್ನಾ ಮಾಡದಿದ್ರೆ ನಾವು ಕರ್ನಾಟಕ ಬಂದ್ ಮಾಡ್ತೀವಿ’ ಅಂತ ತಮ್ಮದೇ ತೊಡೆಯನ್ನು ತಟ್ಟಿಕೊಂಡು ಹೇಳಿದ ಧಡಿಯೂರಪ್ಪನವರು ನಂತರ ಕೈ ಪಕ್ಷವು ಕೋರ್ಟ್‍ಗೆ ಹೋಗಿ ಕೇಸಾಕ್ತೀವಿ ಎಂದು ಹೆದರಿಸಿದ ಮೇಲೆ.. ನಾನಂಗೆ ಹೇಳೇ ಇಲ್ಲ, ಮೋಸ್ಟ್ ಲಿ ನನ್ನ ಆತ್ಮ ದೇಹದಿಂದ ಪುಸುಕ್ ಅಂತ ಹೊರಬಂದು.. ಡೈಲಾಗ್ ಹೊಡೆದು ದಬುಕ್ ಅಂತ ಒಳಕ್ಕೆ ಹೋಗಿರಬೇಕು ಎಂದು ಪ್ಲೇಟ್ ಚೇಂಜ್ ಮಾಡಿಬಿಟ್ಟಿದ್ದರು. ಈ ಅವಾಂತರಗಳನ್ನು ಕಣ್ಣಾರೆ ಕಂಡ ಕರ್ನಾಟಕದ ಜನ ಬಂದನ್ನೇ ಬಂದ್ ಮಾಡಿ ಧಡಿಯೂರಪ್ಪನಿಗೆ ಮಣ್ಣುಮುಕ್ಕಿಸಿದ್ದಾರೆ. ಈ ಸಂದರ್ಭದಲ್ಲಿ ಮೈಸೂರಿನಲ್ಲಿ ವಿಶೇಷ ಚೇತನ ಮಾನಸಿಕ ಅಸ್ವಸ್ಥ ಪ್ರಪಾತ ಸಿಮ್ಮನನ್ನು ಅರೆಸ್ಟ್ ಮಾಡಿರುವ ಪೊಲೀಸರು.. ಸಿಮ್ಮನ ಎರಡೂ ಕಾಲುಗಳಿಗೆ ಹಗ್ಗ ಕಟ್ಟಿ, ಬಾಯಿಗೆ ಗೋಣಿಚೀಲ ತುರುಕಿ, ಎರಡೂ ಕಣ್ಣಿಗೆ ಪತಂಜಲಿ ಖಾರದಪುಡಿ ಎರಚಿ, ಫ್ಯಾನಿಗೆ ನೇತುಹಾಕಿ ನಾಯಿಗೆ ಹೊಡೆದಂತೆ ಇನ್ನೂ ಹೊಡೆದಿಲ್ಲವೆಂದು ವರದಿಯಾಗಿದೆ.

* * * *

ನಮ್ಮ ಪ್ರದ್ರಾನಮಂತ್ರಿ ಕುಂಡಾಲೇಂದ್ರ ವಿಶ್ವಬ್ಯಾಂಕಿನಿಂದ ನಯಾಪೈಸ ಸಾಲ ತೆಗೆದುಕೊಳ್ಳದೆ ಸರ್ಕಾರ ನಡೆಸುತ್ತಿದ್ದಾನೆಂದು ಮೋತಿಭಕ್ತರು ಊರಲ್ಲೆಲ್ಲ ಪುಂಗಿ ಊದುತ್ತಿರುವ ವರದಿಗಳು ವ್ಯಾಪಕವಾಗಿ ಕೇಳಿಬಂದಿವೆ. ಕೈಯಲ್ಲಿ ಪೊರಕೆ ಹಿಡಿದು, ಮುಖಕ್ಕೆ ಮೂರು ಇಂಚು ಮೇಕಪ್ಪು ರುಬ್ಬಿಕೊಂಡು ಟೊಯ್ಯಟೊಯ್ಯ ಎಂದು ಕಸಗುಡಿಸುವ ಡ್ರಾಮಾ ಮಾಡುತ್ತಿದ್ದ ಮೋತಿಜೀ, ಈ ಬಿಕನಾಸಿ ನಾಟಕವನ್ನು ಪತ್ರಿಕೆಗಳಲ್ಲಿ ಪ್ರಚಾರ ಮಾಡಲೂ ಸಹ ವಿಶ್ವಬ್ಯಾಂಕಿನಿಂದ ತಿರುಪೆ ಸಾಲ ತಂದಿದ್ದಾನೆಂದು ವಿಶ್ವಬ್ಯಾಂಕ್ ಮೂಲಗಳು ತಿಳಿಸಿವೆ. ಇಂಥಹ ಹಸಿಸುಳ್ಳುಗಳನ್ನೇ ಹೇಳುತ್ತ ತಿರುಗುತ್ತಿರುವ ಮೋತಿಜಿ ಮತ್ತು ಮೋತಿಭಕ್ತರನ್ನು ಜನರು ಅಟ್ಟಾಡಿಸಿಕೊಂಡು ಬಟ್ಟೆ ಹರಿದುಹೋಗುವಂತೆ ಬಡಿದು ನೆಲಕ್ಕೆ ಹಾಕಿ ತುಳಿಯಲು ಪ್ರಯತ್ನ ನಡೆಸಿರುವ ಘಟನೆ ಇನ್ನೂ ವರದಿಯಾಗಿಲ್ಲ.

* * * *

ಉತ್ತರಪ್ರದೇಶದ ಕಬ್ಬು ಬೆಳೆಯುವ ರೈತರಿಗೆ ಕೊಡಬೇಕಾದ 13 ಸಾವಿರ ಕೋಟಿ ಖರೀದಿ ಹಣವನ್ನು ಕೊಡದೆ ಮುಂಡಾ ಮೋಚಿರುವ ಜೋಗಿ ಪ್ಯಾದೇನಾತನ ಸರ್ಕಾರವು ಈ ಬಗ್ಗೆ ಪ್ರದ್ರಾನಮಂತ್ರಿಗೆ ಹಣಬಿಡುಗಡೆಗೆ ಕೇಳಿದಾಗ.. ಕುಂಡಾಲೇಂದ್ರನು..’ ಏನೂ ಹೆದರಬ್ಯಾಡ.. ಪಾಕಿಸ್ತಾನದಿಂದ ಸಕ್ಕರೆ ತರಿಸಿಕೊಂಡು ಉತ್ತರಪ್ರದೇಶದ ರೈತರ ಕಣ್ಣಿಗೆ ಮಣ್ಣುಸುಣ್ಣ ಎರಡನ್ನೂ ಮಿಕ್ಸ್ ಮಾಡಿ ಎರಚೋಣ’ಎಂದು ಭರವಸೆ ಕೊಟ್ಟಿದ್ದಾನೆ ಎಂದು ದೆಹಲಿಯಿಂದ ವರದಿ ಬಂದಿದೆ. ಅದರಂತೆ ಪಾಕಿಸ್ತಾನದಿಂದ 2 ಲಕ್ಷ ಟನ್ ಸಕ್ಕರೆ ಆಮದು ಮಾಡಿಕೊಂಡು ಉತ್ತರಪ್ರದೇಶದ ಕಬ್ಬುಬೆಳೆಗಾರರಿಗೆ ಈ ಅಲ್ಲಣ್ಣ-ಮಲ್ಲಣ್ಣ ಅಲಕ್ ಬುಲಕ್ ಜೋಡಿಯು ನಾಮ ಎಳೆದಿದೆ ಎಂದು ತಿಳಿದುಬಂದಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ಸಿಗೋಣ. ಬೈ ಟೇಕ್ ಕೇರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...