Homeಅಂಕಣಗಳುಆಡಿಯೋ ಬಿಚ್ಚಿಡುತ್ತಿರುವ ಸತ್ಯ; ಮೋದಿ-ಶಾ ಪ್ರಸ್ತಾಪಕ್ಕೆ ಬಿಜೆಪಿಗೆ ಖೇದವೇ ಇಲ್ಲ!

ಆಡಿಯೋ ಬಿಚ್ಚಿಡುತ್ತಿರುವ ಸತ್ಯ; ಮೋದಿ-ಶಾ ಪ್ರಸ್ತಾಪಕ್ಕೆ ಬಿಜೆಪಿಗೆ ಖೇದವೇ ಇಲ್ಲ!

- Advertisement -
- Advertisement -

ಪೀಕೆ |
ಒಂದು ಆಡಿಯೋ ಸುತ್ತ ನಡೆಯುತ್ತಿರುವ ಒಟ್ಟೂ ಪ್ರಹಸನ ಬಿಚ್ಚಿಡುತ್ತಿರುವ ಸತ್ಯ ಏನೆಂದರೆ, ಆಪರೇಷನ್ ಕಮಲಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬೆಂಬಲವಿದೆ ಎಂಬುದನ್ನು ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ಒಪ್ಪಿಕೊಳ್ಳುತ್ತಿದ್ದಾರೆ ಬಿಜೆಪಯ ನಾಯಕರು!

ಸದನದಲ್ಲಿ ಈ ಆಡಿಯೋ ವಿಚಾರವಾಗಿ ಮಾತನಾಡಿದ ಬಿಜೆಪಿಯ ಎಲ್ಲ ನಾಯಕರು ಪದೇ ಪದೇ, ‘ಸ್ಪೀಕರ್ ರಮೇಶಕುಮಾರವರೇ, ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ತಮ್ಮ ಹೆಸರು ಉಲ್ಲೇಖವಾದುದಕ್ಕೆ ನಮಗೂ ಬೇಜಾರಾಗಿದೆ’ ಎಂದು ಸ್ಪೀಕರ್ ಅವರ ಪ್ರಾಮಾಣಿಕತೆಗೆ ಸರ್ಟಿಫಿಕೆಟ್ ಕೊಡುತ್ತಿದ್ದಾರೆ. ಆದರೆ, ಆ ಆಡಿಯೋದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೆಸರೂ ಪ್ರಸ್ತಾಪವಾಗಿದೆಯಲ್ಲ? ಆ ಬಗ್ಗೆ ಇಲ್ಲಿವರೆಗೂ ಯಾವ ಬಿಜೆಪಿ ನಾಯಕನೂ ಖೇದ ವ್ಯಕ್ತಪಡಿಸಿಲ್ಲ, ನೊಂದುಕೊಂಡಿಲ್ಲ. ಅಂದರೆ ಅವರಿಗೆ ಪಕ್ಕಾ ಗೊತ್ತಿದೆ: ಮೋದಿ-ಶಾ ಬೆಂಬಲದಿಂದಲೇ ಇದೆಲ್ಲ ನಡೆಯುತ್ತಿದೆ ಎಂಬುದು. ಆದರೆ ಬಾಹ್ಯವಾಗಿಯಾದರೂ ಈ ಕುರಿತಂತೆ ಮಾತಾಡಬಹುದಿತ್ತಲ್ಲ? ಎಂಟು ತಿಂಗಳಿಂದ ನಡೆದಿರುವ ಅಸಹ್ಯ ಆಪರೇಷನ್ ಕಮಲದಲ್ಲಿ ತಮ್ಮ ರಾಷ್ಟ್ರೀಯ ನಾಯಕರೂ ಭಾಗಿ ಎಂಬುದು ಮನದಟ್ಟಾಗಿರುವುದರಿಂದ ಅರ‍್ಯಾರಿಗೂ ಆಡಿಯೊದಲ್ಲಿ ಬಂದ ‘ಸತ್ಯ’ವನ್ನು ವಿರೋಧಿಸಲು ಆಗುತ್ತಿಲ್ಲವೇ?

ಇಲ್ಲಿ ಒಂದಿಷ್ಟು ಅಂಶಗಳನ್ನು ಸುಮ್ಮನೆ ಗಮನಿಸಿ:

* ಸೋಮವಾರ ಸ್ಪೀಕರ್ ಈ ವಿಷಯ ಎತ್ತಿದ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿಯ ಮಾಧುಸ್ವಾಮಿ, ‘ಎಲ್ಲೋ ಯಾರೋ ಮಾತಾಡಿದ್ದಕ್ಕೆ ತಾವು (ಸ್ಪೀಕರ್) ನೊಂದುಕೊಳ್ಳಬೇಡಿ. ನಿಮ್ಮ ಬಗ್ಗೆ ನಮಗೆಲ್ಲ ಗೌರವವಿದೆ. ಏನೋ ಅಚಾತುರ್ಯ ನಡೆದಿದೆ, ಅದನ್ನು ಮರೆತುಬಿಡಿ, ಮನ್ನಿಸಿಬಿಡಿ’ ಎಂದರು. ಅಂದರೆ ಈ ‘ಅಚಾತುರ್ಯ’ ನಡೆದಿರುವುದು ಸತ್ಯ ಎಂದು ಪರೋಕ್ಷವಾಗಿ ಅವರು ಒಪ್ಪಿಕೊಂಡರು. ಆದರೆ ರಮೇಶಕುಮಾರ್ ಹೆಸರು ಪ್ರಸ್ತಾಪವಾದುದಕ್ಕೆ ಕಳವಳ ವ್ಯಕ್ತಪಡಿಸಿದ ಅವರಿಗೆ, ಮೋದಿ-ಶಾ ಹೆಸರು ಪ್ರಸ್ತಾಪವಾಗಿದ್ದರ ಬಗ್ಗೆ ಯಾವ ಬೇಜಾರೂ ಇಲ್ಲವೆಂದಾಯಿತಲ್ಲ? ಅವತ್ತು ಮಾತಾಡಿದ ಬಿಜೆಪಿಯ ಎಲ್ಲ ನಾಯಕರೂ ಸ್ಪೀಕರ್ ಹೆಸರು ಬಂದುದಕ್ಕೆ ಬೇಸರ ವ್ಯಕ್ತಪಡಿಸಿದರೆ ಹೊರತು ತಮ್ಮ ರಾಷ್ಟ್ರೀಯ ನಾಯಕರ ಹೆಸರು ಪ್ರಸ್ತಾಪವಾದುದಕ್ಕೆ ಖೇದ ಪಡಲೇ ಇಲ್ಲ!

* ಮಂಗಳವಾರ, ಬುಧವಾರ ಎಸ್‌ಐಟಿ ತನಿಖೆಗೆ ವಿರೋಧ ವ್ಯಕ್ತ ಮಾಡುವಾಗಲೂ, ಆಡಿಯೋದ ಸಣ್ಣ ಭಾಗ ಮಾತ್ರ ರಿಲೀಸ್ ಮಾಡಲಾಗಿದೆ ಎಂದರೆ ಹೊರತು ಅದು ನಕಲಿ ರಂದೂ ಗಟ್ಟಿಯಾಗಿ ಪ್ರತಿಪಾದಿಸಲೇ ಇಲ್ಲ!

* ಶರಣಗೌಡ ಎಂಬ 37 ವರ್ಷದ ಜೆಡಿಎಸ್ ಕಾರ್ಯಕರ್ತನೊಂದಿಗೆ ಒಂದೆರಡು ತಾಸು ಮಾತಾಡಿದ್ದಾರಂತೆ ಯಡಿಯೂರಪ್ಪ ಮತ್ತು ಶಿವನಗೌಡ ನಾಯಕ್. ಆ ‘ಹುಡುಗ’ನ ಜೊತೆ ಮಾತಾಡಿದ ಪೂರ್ತಿ ಆಡಿಯೋ ಬಿಡಿಗಡೆಯಾದರೂ, ಈಗ ರಲೀಸ್ ಆಗಿರುವ ವಿಷಯ ಸತ್ಯ ಎಂಬುದು ಗ್ಯಾರಂಟಿಯಾಯಿತಲ್ಲ. ಅಷ್ಟಕ್ಕೂ ಶರಣಗೌಡನಿಗೆ ಪ್ರಜಾಪ್ರಭುತ್ವದ ಬಗ್ಗೆ, ಸಂವಿಧಾನದ ಬಗ್ಗೆ ಯಡಿಯೂರಪ್ಪ ಬೋಧಿಸುತ್ತ ಕುಳಿತಿದ್ದರೆ? ಮಧ್ಯರಾತ್ರಿಯಲ್ಲಿ ದೇವದುರ್ಗದ ಶಾಸಕ ಶಿವನಗೌಡ, ಸರ್ಕಾರ ತಾನಾಗೇ ಬೀಳುತ್ತೆ. ಆಗ ನಮ್ಮ ಜೊತೆ ನೀನು ಇರು ಸಾಕು. ಎಲ್ಲ ನ್ಯಾಯಯುತವಾಗಿಯೇ ನಡೆಯಲಿದೆ/ ಎಂದು ಶರಣಗೌಡನಿಗೆ ಉಪದೇಶ ಮಾಡುತ್ತಿದ್ದರೆ?

ಹೀಗೆ ಸುಮ್ಮನೆ ಸರಳ ತರ್ಕ ಉಪಯೋಗಿಸಿದರೂ, ಬಿಜೆಪಿಯ ಹಿಪಾಕ್ರಸಿ ಬಯಲಾಗುತ್ತ ಹೋಗುತ್ತದೆ. ಆಡಿಯೋದಲ್ಲಿರುವ ಧ್ವನಿ ತನ್ನದೇ ಎಂದ ಮೇಲೆ, ಎಸ್‌ಐಟಿ ತನ್ನನ್ನು ಹಣಿಯಲಿದೆ ಎಂಬುದು ಖಾತ್ರಿಯಾಗಿದ್ದರಿಂದಲೇ ಯಡಿಯೂರಪ್ಪ ಈಗ ಸದಸನದ ಕಲಾಪಗಳನ್ನೆಲ್ಲ ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಇದರಲ್ಲಿ ಮಾಧುಸ್ವಾಮಿಯಂತವರು ಸಂಪೂರ್ಣ ಬೆತ್ತಲಾಗುತ್ತಿದ್ದಾರೆ. ಯಡಿಯೂರಪ್ಪ, ಶಿವನಗೌಡರನ್ನು ಬಿಡಿ, ಅವರು ಎಂದೋ ವಿವಸ್ತ್ರರಾಗಿ ಬಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...