Homeರಾಜಕೀಯಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

ಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

- Advertisement -
- Advertisement -

ನಮ್ಮ ಪ್ರಧಾನ ಸೇವಕ ನರೇಂದ್ರ ಮೋದಿ ಸೇರಿದಂತೆ ಸಿನಿಮಾ ಸ್ಟಾರ್‍ಗಳು, ಆಟಗಾರರು ಫಿಟ್ನೆಸ್ ಚಾಲೆಂಜ್ ಮಾಡ್ಕಂಡು ಒಂದಷ್ಟು ದಿನ ಆಟ ಆಡಿದ್ರು, ಅಲ್ಲದೆ ಒಂದು ವಾರದಿಂದ ಕಿಕಿ ಚಾಲೆಂಜ್ ಅಂತ ಹೊಸದೊಂದು ಚಾಲೆಂಜ್ ಟ್ರೆಂಡ್ ಶುರು ಮಾಡ್ಕೊಂಡು ಜನ ಬಿಸಿಯಾಗಿದ್ದಾರೆ. ಇದನ್ನ ನೋಡಿ ಸುಮ್ಮನಿರಲಾರದ ಟ್ರಾಯ್ ಅಧ್ಯಕ್ಷ ಕಂ ಯುಐಡಿಎಐ(ವಿಶಿಷ್ಟ ಗುರುತು ಪ್ರಾಧಿಕಾರ)ನ ಮಾಜಿ ಸಿಇಓ ಆರ್.ಎಸ್.ಶರ್ಮ ಇರಲಾರದೋರು ಇರುವೆ ಬಿಡ್ಕಂಡ್ರು ಅನ್ನೋ ಹಾಗೆ ಹೊಸ ಚಾಲೆಂಜ್ ಶುರು ಮಾಡೋಕೋಗಿ ನಮ್ ಜನರ ಮುಂದೆ ಕಾಮೆಡಿ ಪೀಸಾಗಿದ್ದಾರೆ.
ಅಂತದ್ದೇನಪ್ಪಾ ಮಾಡಿದ್ರು ನಮ್ ಟ್ರಾಯ್ ಅಧ್ಯಕ್ಷರು ಅಂದ್ರೆ, ಆಧಾರ್ ಸಂಖ್ಯೆ ಸೇಫಾಗಿಲ್ಲ ಅನ್ನೋರಿಗೆ ಅಧಾರ್ ಎಷ್ಟು ಸೇಫ್ ಅಂತ ತೋರಿಸ್ತೀನಿ ಅಂತ ಕೆಲವು ದಿನಗಳ ಹಿಂದೆ ತಮ್ಮ ಆಧಾರ್ ನಂಬರ್‍ನ ಟ್ವಿಟರ್‍ನಲ್ಲಿ ಹಂಚಿಕೊಂಡ ಶರ್ಮಾ ಯಾರಿಗಾದ್ರು ಸಾಧ್ಯವಾದ್ರೆ ನನ್ನ ಆಧಾರ್ ನಂಬರ್‍ನ ಬಳಸಿಕೊಂಡು ಹ್ಯಾಕ್ ಮಾಡಿ ಅಂತ ಸವಾಲ್ ಹಾಕಿದ್ರು. ಇದನ್ನ ನೋಡಿದ ಹ್ಯಾಕಿಂಗ್ ಪ್ರವೀಣರು ಸಂಪತ್ತಿಗೆ ಸವಾಲ್ ಅನ್ನೋ ಹಾಗೆ ಮಾಜಿ ಸಿಇಓ ಶರ್ಮಾರವರ ಆಧಾರಗಳನ್ನೆಲ್ಲ ಹೊರತೆಗೆದೇ ಬಿಟ್ಟಿದ್ದಾರೆ. ಶರ್ಮಾರ ಡೀಟೇಲ್ಸ್‍ಗಳನ್ನ ಕದ್ದಿರುವ ಹ್ಯಾಕ್ ಪ್ರವೀಣರು ಅವರ ಪರ್ಸನಲ್ ಡೀಟೆಲ್‍ಗಳನ್ನ ಒಂದೊಂದಾಗಿ ಕಳಿಸಿದ್ದಾರೆ, ಇದು ಆಧಾರ್‍ಸಂಖ್ಯೆ ಗಟ್ಟಿ ಆಧಾರವನ್ನು ಹೊಂದಿಲ್ಲ ಅನ್ನೋದನ್ನ ಖಾತ್ರಿ ಮಾಡಿದೆ.
ಇಷ್ಟಕ್ಕ ಸುಮ್ಮನಾಗದ ಹ್ಯಾಕರ್ಸ್ ಟ್ರಾಯ್ ಅಧ್ಯಕ್ಷರ ಫೋನ್ ನಂಬರ್, ಇ-ಮೇಲ್ ಅಡ್ರೆಸ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆ ನಂಬರ್, ಹುಟ್ಟಿದ ದಿನಾಂಕ ಎಲ್ಲವನ್ನೂ ಪಡೆದುಕೊಂಢು ಒಂದೊಂದಾಗಿ ಶರ್ಮಾರಿಗೆ ಕಳಿಸಿದ್ದಾರೆ. ಇಷ್ಟಾದರೂ ಎಚ್ಚೆತ್ತುಕೊಂಡು ಸುಮ್ಮನಿರದ ಶರ್ಮಾ ಸಾಹೇಬರು ನಾನು ಹೇಳಿದ್ದು ನನಗೆ ತೊಂದರೆ ಆಗುವಂತದ್ದನ್ನ ಮಾಡಿ ಎಂದು, ಡೀಟೆಲ್ಸ್ ಕೊಡಿ ಎಂದಲ್ಲ ಎಂದು ಮತ್ತೊಂದು ಟ್ವಿಟ್ ಮಾಡಿದ್ದಾರೆ. ಇದನ್ನ ನೋಡಿ ರೊಚ್ಚಿಗೆದ್ದ ಹ್ಯಾಕರ್ಸ್ ಅವರ ಖಾತೆಯಿಂದ ಹಣ ಪಡೆದರೆ ಅದನ್ನ ಮತ್ತೆ ಪಾಪಸ್ ಪಡೆಯಬಹುದು ಎಂದು ತಿಳಿದಿದ್ದವರು ಹಣ ತೆಗೆದುಕೊಳ್ಳದೆ ಶರ್ಮಾರ ಪಿಎನ್‍ಬಿ ಅಕೌಂಟಿಗೆ ಒಂದು ರೂಪಾಯಿ ಜಮಾ ಮಾಡಿ ಶರ್ಮಾರನ್ನು ಕೀಟಲೆ ಮಾಡಿದ್ದಾರೆ.
ಶರ್ಮಾರ ಇ-ಮೇಲ್ ಖಾತೆಯಿಂದಲೇ ಅವರ ಪುತ್ರಿಗೆ ಮೇಲ್ ಮಾಡಿರುವ ಖತರ್ನಾಕ್ ಪ್ರವೀಣರು ಸಾಮಾಜಿಕ ಮಾಧ್ಯಮದಲ್ಲಿ ಸವಾಲೆಸೆದು ದೇಶಕ್ಕೆ ಮುಜುಗರ ಉಂಟುಮಾಡಿರುವ ನಿಮ್ಮ ತಂದೆ ಹ್ಯಾಕರ್‍ಗಳಿಗೆ ಭರ್ಜರಿ ಬಹುಮಾನ ನೀಡಿದ್ದಾರೆಂದು ಸಂದೇಶ ಕಳಿಸಿದ್ದಾರೆ. ಅಷ್ಟೇ ಅಲ್ಲದೆ ಅವರ ಬ್ಯಾಂಕ್ ಖಾತೆಯು ಶೀಘ್ರದಲ್ಲೇ ಹ್ಯಾಕ್ ಆಗಲಿದೆ, ಒಂದು ವೇಳೆ ಅವರು ತನ್ನ ಖಾತೆಯನ್ನು ಅಳಿಸಿ ಹಾಕದಿದ್ದರೆ ಸೂಕ್ಷ್ಮ ದಾಖಲೆಗಳನ್ನೂ ಬಹಿರಂಗ ಪಡಿಸಲಾಗುವುದು ಎಂದೂ, ಈ ಸೂಚನೆಯನ್ನು ಪಾಲಿಸದಿದ್ದರೆ ಮಾಲ್‍ವೇರ್(ಮಾಹಿತಿ ಕದಿಯುವ ಸಾಫ್ಟ್‍ವೇರ್)ಅನ್ನು ಶರ್ಮಾರ ಮೊಬೈಲ್‍ಗೆ ಇನ್‍ಸ್ಟಾಲ್ ಮಾಡಿ ಅವರ ಸಂವಾದವನ್ನು ಕದಿಯಲಾಗುವುದೆಂದು ಎಚ್ಚರಿಕೆ ಸಂದೇಶವನ್ನೂ ಟ್ರಾಯ್ ಅಧ್ಯಕ್ಷರ ಪುತ್ರಿಗೆ ಕಳಿಸಿದ್ದಾರೆ.
ಇಷ್ಟಾದರೂ ಬುದ್ದಿಕಲಿಯದ ಶರ್ಮಾ ಸಾಹೇಬರು ಡಿಜಿಜಲ್ ಯುಗದಲ್ಲಿ ಖಾಸಗೀ ಡಾಟಾವನ್ನು ರಕ್ಷಿಸಿಕೊಳ್ಳುವುದು ಬಹಳ ಮುಖ್ಯವಾದ ವಿಚಾರ, ಅಂತಹ ಡಾಟಾಗಳನ್ನು ಆಧಾರ್ ಲೀಕ್ ಮಾಡಲಾರದು, ನಾನು ಅದರ ಜತೆಗಿದ್ದೇನೆ ಎಂದು ಮತ್ತೆ ಟ್ವಿಟ್ ಮಾಡಿದ್ದಾರೆ.
ಒಟ್ಟಿನಲ್ಲಿ ಆಧಾರ್‍ಗೆ ಯಾವ ಆಧಾರವೂ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಧಾನ ಸೇವಕ ಮೋದಿ ಸರ್ಕಾರದ ಗೊಡ್ಡು ಆಶ್ವಾಸನೆಗಳಿಂದ ಎಲ್ಲಾ ಖಾಸಗೀ ಡೇಟಾಗಳಿಗೂ ಆಧಾರ್ ಲಿಂಕ್ ಕೊಟ್ಟಿರುವ ಜನರು ತಮ್ಮ ಡೇಟಾಗಳನ್ನು ರಕ್ಷಿಸಿಕೊಳ್ಳಲು ಪೇಚಾಡಬೇಕಾದ ಪರಿಸ್ಥಿತಿಯನ್ನು ಚಾಲೆಂಜಿಂಗ್ ಸ್ಟಾರ್ ಶರ್ಮಾರ ಅವಾಂತರ ಎದುರುಗೊಳಿಸಿದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...