Homeರಾಜಕೀಯಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

ಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

- Advertisement -
- Advertisement -

ನಮ್ಮ ಪ್ರಧಾನ ಸೇವಕ ನರೇಂದ್ರ ಮೋದಿ ಸೇರಿದಂತೆ ಸಿನಿಮಾ ಸ್ಟಾರ್‍ಗಳು, ಆಟಗಾರರು ಫಿಟ್ನೆಸ್ ಚಾಲೆಂಜ್ ಮಾಡ್ಕಂಡು ಒಂದಷ್ಟು ದಿನ ಆಟ ಆಡಿದ್ರು, ಅಲ್ಲದೆ ಒಂದು ವಾರದಿಂದ ಕಿಕಿ ಚಾಲೆಂಜ್ ಅಂತ ಹೊಸದೊಂದು ಚಾಲೆಂಜ್ ಟ್ರೆಂಡ್ ಶುರು ಮಾಡ್ಕೊಂಡು ಜನ ಬಿಸಿಯಾಗಿದ್ದಾರೆ. ಇದನ್ನ ನೋಡಿ ಸುಮ್ಮನಿರಲಾರದ ಟ್ರಾಯ್ ಅಧ್ಯಕ್ಷ ಕಂ ಯುಐಡಿಎಐ(ವಿಶಿಷ್ಟ ಗುರುತು ಪ್ರಾಧಿಕಾರ)ನ ಮಾಜಿ ಸಿಇಓ ಆರ್.ಎಸ್.ಶರ್ಮ ಇರಲಾರದೋರು ಇರುವೆ ಬಿಡ್ಕಂಡ್ರು ಅನ್ನೋ ಹಾಗೆ ಹೊಸ ಚಾಲೆಂಜ್ ಶುರು ಮಾಡೋಕೋಗಿ ನಮ್ ಜನರ ಮುಂದೆ ಕಾಮೆಡಿ ಪೀಸಾಗಿದ್ದಾರೆ.
ಅಂತದ್ದೇನಪ್ಪಾ ಮಾಡಿದ್ರು ನಮ್ ಟ್ರಾಯ್ ಅಧ್ಯಕ್ಷರು ಅಂದ್ರೆ, ಆಧಾರ್ ಸಂಖ್ಯೆ ಸೇಫಾಗಿಲ್ಲ ಅನ್ನೋರಿಗೆ ಅಧಾರ್ ಎಷ್ಟು ಸೇಫ್ ಅಂತ ತೋರಿಸ್ತೀನಿ ಅಂತ ಕೆಲವು ದಿನಗಳ ಹಿಂದೆ ತಮ್ಮ ಆಧಾರ್ ನಂಬರ್‍ನ ಟ್ವಿಟರ್‍ನಲ್ಲಿ ಹಂಚಿಕೊಂಡ ಶರ್ಮಾ ಯಾರಿಗಾದ್ರು ಸಾಧ್ಯವಾದ್ರೆ ನನ್ನ ಆಧಾರ್ ನಂಬರ್‍ನ ಬಳಸಿಕೊಂಡು ಹ್ಯಾಕ್ ಮಾಡಿ ಅಂತ ಸವಾಲ್ ಹಾಕಿದ್ರು. ಇದನ್ನ ನೋಡಿದ ಹ್ಯಾಕಿಂಗ್ ಪ್ರವೀಣರು ಸಂಪತ್ತಿಗೆ ಸವಾಲ್ ಅನ್ನೋ ಹಾಗೆ ಮಾಜಿ ಸಿಇಓ ಶರ್ಮಾರವರ ಆಧಾರಗಳನ್ನೆಲ್ಲ ಹೊರತೆಗೆದೇ ಬಿಟ್ಟಿದ್ದಾರೆ. ಶರ್ಮಾರ ಡೀಟೇಲ್ಸ್‍ಗಳನ್ನ ಕದ್ದಿರುವ ಹ್ಯಾಕ್ ಪ್ರವೀಣರು ಅವರ ಪರ್ಸನಲ್ ಡೀಟೆಲ್‍ಗಳನ್ನ ಒಂದೊಂದಾಗಿ ಕಳಿಸಿದ್ದಾರೆ, ಇದು ಆಧಾರ್‍ಸಂಖ್ಯೆ ಗಟ್ಟಿ ಆಧಾರವನ್ನು ಹೊಂದಿಲ್ಲ ಅನ್ನೋದನ್ನ ಖಾತ್ರಿ ಮಾಡಿದೆ.
ಇಷ್ಟಕ್ಕ ಸುಮ್ಮನಾಗದ ಹ್ಯಾಕರ್ಸ್ ಟ್ರಾಯ್ ಅಧ್ಯಕ್ಷರ ಫೋನ್ ನಂಬರ್, ಇ-ಮೇಲ್ ಅಡ್ರೆಸ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆ ನಂಬರ್, ಹುಟ್ಟಿದ ದಿನಾಂಕ ಎಲ್ಲವನ್ನೂ ಪಡೆದುಕೊಂಢು ಒಂದೊಂದಾಗಿ ಶರ್ಮಾರಿಗೆ ಕಳಿಸಿದ್ದಾರೆ. ಇಷ್ಟಾದರೂ ಎಚ್ಚೆತ್ತುಕೊಂಡು ಸುಮ್ಮನಿರದ ಶರ್ಮಾ ಸಾಹೇಬರು ನಾನು ಹೇಳಿದ್ದು ನನಗೆ ತೊಂದರೆ ಆಗುವಂತದ್ದನ್ನ ಮಾಡಿ ಎಂದು, ಡೀಟೆಲ್ಸ್ ಕೊಡಿ ಎಂದಲ್ಲ ಎಂದು ಮತ್ತೊಂದು ಟ್ವಿಟ್ ಮಾಡಿದ್ದಾರೆ. ಇದನ್ನ ನೋಡಿ ರೊಚ್ಚಿಗೆದ್ದ ಹ್ಯಾಕರ್ಸ್ ಅವರ ಖಾತೆಯಿಂದ ಹಣ ಪಡೆದರೆ ಅದನ್ನ ಮತ್ತೆ ಪಾಪಸ್ ಪಡೆಯಬಹುದು ಎಂದು ತಿಳಿದಿದ್ದವರು ಹಣ ತೆಗೆದುಕೊಳ್ಳದೆ ಶರ್ಮಾರ ಪಿಎನ್‍ಬಿ ಅಕೌಂಟಿಗೆ ಒಂದು ರೂಪಾಯಿ ಜಮಾ ಮಾಡಿ ಶರ್ಮಾರನ್ನು ಕೀಟಲೆ ಮಾಡಿದ್ದಾರೆ.
ಶರ್ಮಾರ ಇ-ಮೇಲ್ ಖಾತೆಯಿಂದಲೇ ಅವರ ಪುತ್ರಿಗೆ ಮೇಲ್ ಮಾಡಿರುವ ಖತರ್ನಾಕ್ ಪ್ರವೀಣರು ಸಾಮಾಜಿಕ ಮಾಧ್ಯಮದಲ್ಲಿ ಸವಾಲೆಸೆದು ದೇಶಕ್ಕೆ ಮುಜುಗರ ಉಂಟುಮಾಡಿರುವ ನಿಮ್ಮ ತಂದೆ ಹ್ಯಾಕರ್‍ಗಳಿಗೆ ಭರ್ಜರಿ ಬಹುಮಾನ ನೀಡಿದ್ದಾರೆಂದು ಸಂದೇಶ ಕಳಿಸಿದ್ದಾರೆ. ಅಷ್ಟೇ ಅಲ್ಲದೆ ಅವರ ಬ್ಯಾಂಕ್ ಖಾತೆಯು ಶೀಘ್ರದಲ್ಲೇ ಹ್ಯಾಕ್ ಆಗಲಿದೆ, ಒಂದು ವೇಳೆ ಅವರು ತನ್ನ ಖಾತೆಯನ್ನು ಅಳಿಸಿ ಹಾಕದಿದ್ದರೆ ಸೂಕ್ಷ್ಮ ದಾಖಲೆಗಳನ್ನೂ ಬಹಿರಂಗ ಪಡಿಸಲಾಗುವುದು ಎಂದೂ, ಈ ಸೂಚನೆಯನ್ನು ಪಾಲಿಸದಿದ್ದರೆ ಮಾಲ್‍ವೇರ್(ಮಾಹಿತಿ ಕದಿಯುವ ಸಾಫ್ಟ್‍ವೇರ್)ಅನ್ನು ಶರ್ಮಾರ ಮೊಬೈಲ್‍ಗೆ ಇನ್‍ಸ್ಟಾಲ್ ಮಾಡಿ ಅವರ ಸಂವಾದವನ್ನು ಕದಿಯಲಾಗುವುದೆಂದು ಎಚ್ಚರಿಕೆ ಸಂದೇಶವನ್ನೂ ಟ್ರಾಯ್ ಅಧ್ಯಕ್ಷರ ಪುತ್ರಿಗೆ ಕಳಿಸಿದ್ದಾರೆ.
ಇಷ್ಟಾದರೂ ಬುದ್ದಿಕಲಿಯದ ಶರ್ಮಾ ಸಾಹೇಬರು ಡಿಜಿಜಲ್ ಯುಗದಲ್ಲಿ ಖಾಸಗೀ ಡಾಟಾವನ್ನು ರಕ್ಷಿಸಿಕೊಳ್ಳುವುದು ಬಹಳ ಮುಖ್ಯವಾದ ವಿಚಾರ, ಅಂತಹ ಡಾಟಾಗಳನ್ನು ಆಧಾರ್ ಲೀಕ್ ಮಾಡಲಾರದು, ನಾನು ಅದರ ಜತೆಗಿದ್ದೇನೆ ಎಂದು ಮತ್ತೆ ಟ್ವಿಟ್ ಮಾಡಿದ್ದಾರೆ.
ಒಟ್ಟಿನಲ್ಲಿ ಆಧಾರ್‍ಗೆ ಯಾವ ಆಧಾರವೂ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಧಾನ ಸೇವಕ ಮೋದಿ ಸರ್ಕಾರದ ಗೊಡ್ಡು ಆಶ್ವಾಸನೆಗಳಿಂದ ಎಲ್ಲಾ ಖಾಸಗೀ ಡೇಟಾಗಳಿಗೂ ಆಧಾರ್ ಲಿಂಕ್ ಕೊಟ್ಟಿರುವ ಜನರು ತಮ್ಮ ಡೇಟಾಗಳನ್ನು ರಕ್ಷಿಸಿಕೊಳ್ಳಲು ಪೇಚಾಡಬೇಕಾದ ಪರಿಸ್ಥಿತಿಯನ್ನು ಚಾಲೆಂಜಿಂಗ್ ಸ್ಟಾರ್ ಶರ್ಮಾರ ಅವಾಂತರ ಎದುರುಗೊಳಿಸಿದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...