Homeರಾಜಕೀಯಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

ಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

- Advertisement -
- Advertisement -

ನಮ್ಮ ಪ್ರಧಾನ ಸೇವಕ ನರೇಂದ್ರ ಮೋದಿ ಸೇರಿದಂತೆ ಸಿನಿಮಾ ಸ್ಟಾರ್‍ಗಳು, ಆಟಗಾರರು ಫಿಟ್ನೆಸ್ ಚಾಲೆಂಜ್ ಮಾಡ್ಕಂಡು ಒಂದಷ್ಟು ದಿನ ಆಟ ಆಡಿದ್ರು, ಅಲ್ಲದೆ ಒಂದು ವಾರದಿಂದ ಕಿಕಿ ಚಾಲೆಂಜ್ ಅಂತ ಹೊಸದೊಂದು ಚಾಲೆಂಜ್ ಟ್ರೆಂಡ್ ಶುರು ಮಾಡ್ಕೊಂಡು ಜನ ಬಿಸಿಯಾಗಿದ್ದಾರೆ. ಇದನ್ನ ನೋಡಿ ಸುಮ್ಮನಿರಲಾರದ ಟ್ರಾಯ್ ಅಧ್ಯಕ್ಷ ಕಂ ಯುಐಡಿಎಐ(ವಿಶಿಷ್ಟ ಗುರುತು ಪ್ರಾಧಿಕಾರ)ನ ಮಾಜಿ ಸಿಇಓ ಆರ್.ಎಸ್.ಶರ್ಮ ಇರಲಾರದೋರು ಇರುವೆ ಬಿಡ್ಕಂಡ್ರು ಅನ್ನೋ ಹಾಗೆ ಹೊಸ ಚಾಲೆಂಜ್ ಶುರು ಮಾಡೋಕೋಗಿ ನಮ್ ಜನರ ಮುಂದೆ ಕಾಮೆಡಿ ಪೀಸಾಗಿದ್ದಾರೆ.
ಅಂತದ್ದೇನಪ್ಪಾ ಮಾಡಿದ್ರು ನಮ್ ಟ್ರಾಯ್ ಅಧ್ಯಕ್ಷರು ಅಂದ್ರೆ, ಆಧಾರ್ ಸಂಖ್ಯೆ ಸೇಫಾಗಿಲ್ಲ ಅನ್ನೋರಿಗೆ ಅಧಾರ್ ಎಷ್ಟು ಸೇಫ್ ಅಂತ ತೋರಿಸ್ತೀನಿ ಅಂತ ಕೆಲವು ದಿನಗಳ ಹಿಂದೆ ತಮ್ಮ ಆಧಾರ್ ನಂಬರ್‍ನ ಟ್ವಿಟರ್‍ನಲ್ಲಿ ಹಂಚಿಕೊಂಡ ಶರ್ಮಾ ಯಾರಿಗಾದ್ರು ಸಾಧ್ಯವಾದ್ರೆ ನನ್ನ ಆಧಾರ್ ನಂಬರ್‍ನ ಬಳಸಿಕೊಂಡು ಹ್ಯಾಕ್ ಮಾಡಿ ಅಂತ ಸವಾಲ್ ಹಾಕಿದ್ರು. ಇದನ್ನ ನೋಡಿದ ಹ್ಯಾಕಿಂಗ್ ಪ್ರವೀಣರು ಸಂಪತ್ತಿಗೆ ಸವಾಲ್ ಅನ್ನೋ ಹಾಗೆ ಮಾಜಿ ಸಿಇಓ ಶರ್ಮಾರವರ ಆಧಾರಗಳನ್ನೆಲ್ಲ ಹೊರತೆಗೆದೇ ಬಿಟ್ಟಿದ್ದಾರೆ. ಶರ್ಮಾರ ಡೀಟೇಲ್ಸ್‍ಗಳನ್ನ ಕದ್ದಿರುವ ಹ್ಯಾಕ್ ಪ್ರವೀಣರು ಅವರ ಪರ್ಸನಲ್ ಡೀಟೆಲ್‍ಗಳನ್ನ ಒಂದೊಂದಾಗಿ ಕಳಿಸಿದ್ದಾರೆ, ಇದು ಆಧಾರ್‍ಸಂಖ್ಯೆ ಗಟ್ಟಿ ಆಧಾರವನ್ನು ಹೊಂದಿಲ್ಲ ಅನ್ನೋದನ್ನ ಖಾತ್ರಿ ಮಾಡಿದೆ.
ಇಷ್ಟಕ್ಕ ಸುಮ್ಮನಾಗದ ಹ್ಯಾಕರ್ಸ್ ಟ್ರಾಯ್ ಅಧ್ಯಕ್ಷರ ಫೋನ್ ನಂಬರ್, ಇ-ಮೇಲ್ ಅಡ್ರೆಸ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆ ನಂಬರ್, ಹುಟ್ಟಿದ ದಿನಾಂಕ ಎಲ್ಲವನ್ನೂ ಪಡೆದುಕೊಂಢು ಒಂದೊಂದಾಗಿ ಶರ್ಮಾರಿಗೆ ಕಳಿಸಿದ್ದಾರೆ. ಇಷ್ಟಾದರೂ ಎಚ್ಚೆತ್ತುಕೊಂಡು ಸುಮ್ಮನಿರದ ಶರ್ಮಾ ಸಾಹೇಬರು ನಾನು ಹೇಳಿದ್ದು ನನಗೆ ತೊಂದರೆ ಆಗುವಂತದ್ದನ್ನ ಮಾಡಿ ಎಂದು, ಡೀಟೆಲ್ಸ್ ಕೊಡಿ ಎಂದಲ್ಲ ಎಂದು ಮತ್ತೊಂದು ಟ್ವಿಟ್ ಮಾಡಿದ್ದಾರೆ. ಇದನ್ನ ನೋಡಿ ರೊಚ್ಚಿಗೆದ್ದ ಹ್ಯಾಕರ್ಸ್ ಅವರ ಖಾತೆಯಿಂದ ಹಣ ಪಡೆದರೆ ಅದನ್ನ ಮತ್ತೆ ಪಾಪಸ್ ಪಡೆಯಬಹುದು ಎಂದು ತಿಳಿದಿದ್ದವರು ಹಣ ತೆಗೆದುಕೊಳ್ಳದೆ ಶರ್ಮಾರ ಪಿಎನ್‍ಬಿ ಅಕೌಂಟಿಗೆ ಒಂದು ರೂಪಾಯಿ ಜಮಾ ಮಾಡಿ ಶರ್ಮಾರನ್ನು ಕೀಟಲೆ ಮಾಡಿದ್ದಾರೆ.
ಶರ್ಮಾರ ಇ-ಮೇಲ್ ಖಾತೆಯಿಂದಲೇ ಅವರ ಪುತ್ರಿಗೆ ಮೇಲ್ ಮಾಡಿರುವ ಖತರ್ನಾಕ್ ಪ್ರವೀಣರು ಸಾಮಾಜಿಕ ಮಾಧ್ಯಮದಲ್ಲಿ ಸವಾಲೆಸೆದು ದೇಶಕ್ಕೆ ಮುಜುಗರ ಉಂಟುಮಾಡಿರುವ ನಿಮ್ಮ ತಂದೆ ಹ್ಯಾಕರ್‍ಗಳಿಗೆ ಭರ್ಜರಿ ಬಹುಮಾನ ನೀಡಿದ್ದಾರೆಂದು ಸಂದೇಶ ಕಳಿಸಿದ್ದಾರೆ. ಅಷ್ಟೇ ಅಲ್ಲದೆ ಅವರ ಬ್ಯಾಂಕ್ ಖಾತೆಯು ಶೀಘ್ರದಲ್ಲೇ ಹ್ಯಾಕ್ ಆಗಲಿದೆ, ಒಂದು ವೇಳೆ ಅವರು ತನ್ನ ಖಾತೆಯನ್ನು ಅಳಿಸಿ ಹಾಕದಿದ್ದರೆ ಸೂಕ್ಷ್ಮ ದಾಖಲೆಗಳನ್ನೂ ಬಹಿರಂಗ ಪಡಿಸಲಾಗುವುದು ಎಂದೂ, ಈ ಸೂಚನೆಯನ್ನು ಪಾಲಿಸದಿದ್ದರೆ ಮಾಲ್‍ವೇರ್(ಮಾಹಿತಿ ಕದಿಯುವ ಸಾಫ್ಟ್‍ವೇರ್)ಅನ್ನು ಶರ್ಮಾರ ಮೊಬೈಲ್‍ಗೆ ಇನ್‍ಸ್ಟಾಲ್ ಮಾಡಿ ಅವರ ಸಂವಾದವನ್ನು ಕದಿಯಲಾಗುವುದೆಂದು ಎಚ್ಚರಿಕೆ ಸಂದೇಶವನ್ನೂ ಟ್ರಾಯ್ ಅಧ್ಯಕ್ಷರ ಪುತ್ರಿಗೆ ಕಳಿಸಿದ್ದಾರೆ.
ಇಷ್ಟಾದರೂ ಬುದ್ದಿಕಲಿಯದ ಶರ್ಮಾ ಸಾಹೇಬರು ಡಿಜಿಜಲ್ ಯುಗದಲ್ಲಿ ಖಾಸಗೀ ಡಾಟಾವನ್ನು ರಕ್ಷಿಸಿಕೊಳ್ಳುವುದು ಬಹಳ ಮುಖ್ಯವಾದ ವಿಚಾರ, ಅಂತಹ ಡಾಟಾಗಳನ್ನು ಆಧಾರ್ ಲೀಕ್ ಮಾಡಲಾರದು, ನಾನು ಅದರ ಜತೆಗಿದ್ದೇನೆ ಎಂದು ಮತ್ತೆ ಟ್ವಿಟ್ ಮಾಡಿದ್ದಾರೆ.
ಒಟ್ಟಿನಲ್ಲಿ ಆಧಾರ್‍ಗೆ ಯಾವ ಆಧಾರವೂ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಧಾನ ಸೇವಕ ಮೋದಿ ಸರ್ಕಾರದ ಗೊಡ್ಡು ಆಶ್ವಾಸನೆಗಳಿಂದ ಎಲ್ಲಾ ಖಾಸಗೀ ಡೇಟಾಗಳಿಗೂ ಆಧಾರ್ ಲಿಂಕ್ ಕೊಟ್ಟಿರುವ ಜನರು ತಮ್ಮ ಡೇಟಾಗಳನ್ನು ರಕ್ಷಿಸಿಕೊಳ್ಳಲು ಪೇಚಾಡಬೇಕಾದ ಪರಿಸ್ಥಿತಿಯನ್ನು ಚಾಲೆಂಜಿಂಗ್ ಸ್ಟಾರ್ ಶರ್ಮಾರ ಅವಾಂತರ ಎದುರುಗೊಳಿಸಿದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...