Homeರಾಜಕೀಯಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

ಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

- Advertisement -
- Advertisement -

ನಮ್ಮ ಪ್ರಧಾನ ಸೇವಕ ನರೇಂದ್ರ ಮೋದಿ ಸೇರಿದಂತೆ ಸಿನಿಮಾ ಸ್ಟಾರ್‍ಗಳು, ಆಟಗಾರರು ಫಿಟ್ನೆಸ್ ಚಾಲೆಂಜ್ ಮಾಡ್ಕಂಡು ಒಂದಷ್ಟು ದಿನ ಆಟ ಆಡಿದ್ರು, ಅಲ್ಲದೆ ಒಂದು ವಾರದಿಂದ ಕಿಕಿ ಚಾಲೆಂಜ್ ಅಂತ ಹೊಸದೊಂದು ಚಾಲೆಂಜ್ ಟ್ರೆಂಡ್ ಶುರು ಮಾಡ್ಕೊಂಡು ಜನ ಬಿಸಿಯಾಗಿದ್ದಾರೆ. ಇದನ್ನ ನೋಡಿ ಸುಮ್ಮನಿರಲಾರದ ಟ್ರಾಯ್ ಅಧ್ಯಕ್ಷ ಕಂ ಯುಐಡಿಎಐ(ವಿಶಿಷ್ಟ ಗುರುತು ಪ್ರಾಧಿಕಾರ)ನ ಮಾಜಿ ಸಿಇಓ ಆರ್.ಎಸ್.ಶರ್ಮ ಇರಲಾರದೋರು ಇರುವೆ ಬಿಡ್ಕಂಡ್ರು ಅನ್ನೋ ಹಾಗೆ ಹೊಸ ಚಾಲೆಂಜ್ ಶುರು ಮಾಡೋಕೋಗಿ ನಮ್ ಜನರ ಮುಂದೆ ಕಾಮೆಡಿ ಪೀಸಾಗಿದ್ದಾರೆ.
ಅಂತದ್ದೇನಪ್ಪಾ ಮಾಡಿದ್ರು ನಮ್ ಟ್ರಾಯ್ ಅಧ್ಯಕ್ಷರು ಅಂದ್ರೆ, ಆಧಾರ್ ಸಂಖ್ಯೆ ಸೇಫಾಗಿಲ್ಲ ಅನ್ನೋರಿಗೆ ಅಧಾರ್ ಎಷ್ಟು ಸೇಫ್ ಅಂತ ತೋರಿಸ್ತೀನಿ ಅಂತ ಕೆಲವು ದಿನಗಳ ಹಿಂದೆ ತಮ್ಮ ಆಧಾರ್ ನಂಬರ್‍ನ ಟ್ವಿಟರ್‍ನಲ್ಲಿ ಹಂಚಿಕೊಂಡ ಶರ್ಮಾ ಯಾರಿಗಾದ್ರು ಸಾಧ್ಯವಾದ್ರೆ ನನ್ನ ಆಧಾರ್ ನಂಬರ್‍ನ ಬಳಸಿಕೊಂಡು ಹ್ಯಾಕ್ ಮಾಡಿ ಅಂತ ಸವಾಲ್ ಹಾಕಿದ್ರು. ಇದನ್ನ ನೋಡಿದ ಹ್ಯಾಕಿಂಗ್ ಪ್ರವೀಣರು ಸಂಪತ್ತಿಗೆ ಸವಾಲ್ ಅನ್ನೋ ಹಾಗೆ ಮಾಜಿ ಸಿಇಓ ಶರ್ಮಾರವರ ಆಧಾರಗಳನ್ನೆಲ್ಲ ಹೊರತೆಗೆದೇ ಬಿಟ್ಟಿದ್ದಾರೆ. ಶರ್ಮಾರ ಡೀಟೇಲ್ಸ್‍ಗಳನ್ನ ಕದ್ದಿರುವ ಹ್ಯಾಕ್ ಪ್ರವೀಣರು ಅವರ ಪರ್ಸನಲ್ ಡೀಟೆಲ್‍ಗಳನ್ನ ಒಂದೊಂದಾಗಿ ಕಳಿಸಿದ್ದಾರೆ, ಇದು ಆಧಾರ್‍ಸಂಖ್ಯೆ ಗಟ್ಟಿ ಆಧಾರವನ್ನು ಹೊಂದಿಲ್ಲ ಅನ್ನೋದನ್ನ ಖಾತ್ರಿ ಮಾಡಿದೆ.
ಇಷ್ಟಕ್ಕ ಸುಮ್ಮನಾಗದ ಹ್ಯಾಕರ್ಸ್ ಟ್ರಾಯ್ ಅಧ್ಯಕ್ಷರ ಫೋನ್ ನಂಬರ್, ಇ-ಮೇಲ್ ಅಡ್ರೆಸ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆ ನಂಬರ್, ಹುಟ್ಟಿದ ದಿನಾಂಕ ಎಲ್ಲವನ್ನೂ ಪಡೆದುಕೊಂಢು ಒಂದೊಂದಾಗಿ ಶರ್ಮಾರಿಗೆ ಕಳಿಸಿದ್ದಾರೆ. ಇಷ್ಟಾದರೂ ಎಚ್ಚೆತ್ತುಕೊಂಡು ಸುಮ್ಮನಿರದ ಶರ್ಮಾ ಸಾಹೇಬರು ನಾನು ಹೇಳಿದ್ದು ನನಗೆ ತೊಂದರೆ ಆಗುವಂತದ್ದನ್ನ ಮಾಡಿ ಎಂದು, ಡೀಟೆಲ್ಸ್ ಕೊಡಿ ಎಂದಲ್ಲ ಎಂದು ಮತ್ತೊಂದು ಟ್ವಿಟ್ ಮಾಡಿದ್ದಾರೆ. ಇದನ್ನ ನೋಡಿ ರೊಚ್ಚಿಗೆದ್ದ ಹ್ಯಾಕರ್ಸ್ ಅವರ ಖಾತೆಯಿಂದ ಹಣ ಪಡೆದರೆ ಅದನ್ನ ಮತ್ತೆ ಪಾಪಸ್ ಪಡೆಯಬಹುದು ಎಂದು ತಿಳಿದಿದ್ದವರು ಹಣ ತೆಗೆದುಕೊಳ್ಳದೆ ಶರ್ಮಾರ ಪಿಎನ್‍ಬಿ ಅಕೌಂಟಿಗೆ ಒಂದು ರೂಪಾಯಿ ಜಮಾ ಮಾಡಿ ಶರ್ಮಾರನ್ನು ಕೀಟಲೆ ಮಾಡಿದ್ದಾರೆ.
ಶರ್ಮಾರ ಇ-ಮೇಲ್ ಖಾತೆಯಿಂದಲೇ ಅವರ ಪುತ್ರಿಗೆ ಮೇಲ್ ಮಾಡಿರುವ ಖತರ್ನಾಕ್ ಪ್ರವೀಣರು ಸಾಮಾಜಿಕ ಮಾಧ್ಯಮದಲ್ಲಿ ಸವಾಲೆಸೆದು ದೇಶಕ್ಕೆ ಮುಜುಗರ ಉಂಟುಮಾಡಿರುವ ನಿಮ್ಮ ತಂದೆ ಹ್ಯಾಕರ್‍ಗಳಿಗೆ ಭರ್ಜರಿ ಬಹುಮಾನ ನೀಡಿದ್ದಾರೆಂದು ಸಂದೇಶ ಕಳಿಸಿದ್ದಾರೆ. ಅಷ್ಟೇ ಅಲ್ಲದೆ ಅವರ ಬ್ಯಾಂಕ್ ಖಾತೆಯು ಶೀಘ್ರದಲ್ಲೇ ಹ್ಯಾಕ್ ಆಗಲಿದೆ, ಒಂದು ವೇಳೆ ಅವರು ತನ್ನ ಖಾತೆಯನ್ನು ಅಳಿಸಿ ಹಾಕದಿದ್ದರೆ ಸೂಕ್ಷ್ಮ ದಾಖಲೆಗಳನ್ನೂ ಬಹಿರಂಗ ಪಡಿಸಲಾಗುವುದು ಎಂದೂ, ಈ ಸೂಚನೆಯನ್ನು ಪಾಲಿಸದಿದ್ದರೆ ಮಾಲ್‍ವೇರ್(ಮಾಹಿತಿ ಕದಿಯುವ ಸಾಫ್ಟ್‍ವೇರ್)ಅನ್ನು ಶರ್ಮಾರ ಮೊಬೈಲ್‍ಗೆ ಇನ್‍ಸ್ಟಾಲ್ ಮಾಡಿ ಅವರ ಸಂವಾದವನ್ನು ಕದಿಯಲಾಗುವುದೆಂದು ಎಚ್ಚರಿಕೆ ಸಂದೇಶವನ್ನೂ ಟ್ರಾಯ್ ಅಧ್ಯಕ್ಷರ ಪುತ್ರಿಗೆ ಕಳಿಸಿದ್ದಾರೆ.
ಇಷ್ಟಾದರೂ ಬುದ್ದಿಕಲಿಯದ ಶರ್ಮಾ ಸಾಹೇಬರು ಡಿಜಿಜಲ್ ಯುಗದಲ್ಲಿ ಖಾಸಗೀ ಡಾಟಾವನ್ನು ರಕ್ಷಿಸಿಕೊಳ್ಳುವುದು ಬಹಳ ಮುಖ್ಯವಾದ ವಿಚಾರ, ಅಂತಹ ಡಾಟಾಗಳನ್ನು ಆಧಾರ್ ಲೀಕ್ ಮಾಡಲಾರದು, ನಾನು ಅದರ ಜತೆಗಿದ್ದೇನೆ ಎಂದು ಮತ್ತೆ ಟ್ವಿಟ್ ಮಾಡಿದ್ದಾರೆ.
ಒಟ್ಟಿನಲ್ಲಿ ಆಧಾರ್‍ಗೆ ಯಾವ ಆಧಾರವೂ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಧಾನ ಸೇವಕ ಮೋದಿ ಸರ್ಕಾರದ ಗೊಡ್ಡು ಆಶ್ವಾಸನೆಗಳಿಂದ ಎಲ್ಲಾ ಖಾಸಗೀ ಡೇಟಾಗಳಿಗೂ ಆಧಾರ್ ಲಿಂಕ್ ಕೊಟ್ಟಿರುವ ಜನರು ತಮ್ಮ ಡೇಟಾಗಳನ್ನು ರಕ್ಷಿಸಿಕೊಳ್ಳಲು ಪೇಚಾಡಬೇಕಾದ ಪರಿಸ್ಥಿತಿಯನ್ನು ಚಾಲೆಂಜಿಂಗ್ ಸ್ಟಾರ್ ಶರ್ಮಾರ ಅವಾಂತರ ಎದುರುಗೊಳಿಸಿದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...