Homeಅಂಕಣಗಳುಆಧಾರ್: ಆಷಾಢಭೂತಿ ಕಾಂಗ್ರೆಸ್, ಘಾತುಕ ಬಿಜೆಪಿ

ಆಧಾರ್: ಆಷಾಢಭೂತಿ ಕಾಂಗ್ರೆಸ್, ಘಾತುಕ ಬಿಜೆಪಿ

- Advertisement -
- Advertisement -

ಆಧಾರ್ ಕುರಿತ ಬಹುನಿರೀಕ್ಷಿತ ಸುಪ್ರೀಂಕೋರ್ಟ್ ತೀರ್ಪು ಇಂದು ಹೊರಬಿದ್ದಿದೆ. ಸಾವಿರಕ್ಕೂ ಹೆಚ್ಚು ಪುಟಗಳ ತೀರ್ಪಿನ ವಿವರ ನಾಳೆಯ ಹೊತ್ತಿಗೆ ಸಂಪೂರ್ಣವಾಗಿ ಲಭ್ಯವಾಗಲಿದೆ. ಈ ಸದ್ಯ ಮಾಧ್ಯಮಗಳು ಹೇಳುತ್ತಿರುವುದು – ಬ್ಯಾಂಕ್ ಖಾತೆಗೆ ಮತ್ತು ಮೊಬೈಲ್ ಫೋನ್‍ಗೆ ಇದನ್ನು ಲಿಂಕ್ ಮಾಡಬೇಕೆಂದೇನಿಲ್ಲವೆಂದು. ಆದರೆ, ಮೇಲ್ಮಧ್ಯಮ ವರ್ಗ ಮತ್ತು ಮೇಲ್ವರ್ಗದವರು ಮಾಡಬೇಕಾದ ಆದಾಯ ತೆರಿಗೆ ಸಲ್ಲಿಕೆ ಮತ್ತು ಪ್ಯಾನ್ ಕಾರ್ಡ್‍ಗೆ ಆಧಾರ್ ಕಡ್ಡಾಯ ಎಂಬುದನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಮಧ್ಯಮ ವರ್ಗ (ಕನಿಷ್ಠ ಗ್ಯಾಸ್ ಸಬ್ಸಿಡಿಗೆ ಆಧಾರ್ ಕಾರ್ಡ್ ಬೇಕು) ಹಾಗೂ ಅದಕ್ಕಿಂತ ಕೆಳಗಿನ ಸಮುದಾಯಗಳಿಗೆ ತಲುಪುತ್ತಿರುವ ಸರ್ಕಾರೀ ಸೌಲಭ್ಯಗಳಿಗೆ ಆಧಾರ್ ಕಡ್ಡಾಯ ಮಾಡುವುದನ್ನೂ ಎತ್ತಿ ಹಿಡಿದಿದೆ. ಮಕ್ಕಳನ್ನು ಹೊರತುಪಡಿಸಿ, ದೇಶದ ಎಲ್ಲಾ ಜನರಿಗೂ ಒಂದಲ್ಲಾ ಒಂದು ರೀತಿಯಲ್ಲಿ ಆಧಾರ್ ಕಡ್ಡಾಯವೇ ಆಗಿರುತ್ತದೆ. ಇದನ್ನು ಖಾಸಗಿ ಕಂಪೆನಿಗಳು ಕೇಳುವಂತಿಲ್ಲವೆಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.
ಡಿಜಿಟಲ್ ತಂತ್ರಜ್ಞಾನದ ಮೂಲಕ ಈಗಾಗಲೇ ಪ್ರತಿಯೊಬ್ಬ ವ್ಯಕ್ತಿಯ ಆನ್‍ಲೈನ್ ವ್ಯವಹಾರಗಳ ಮೂಲಕ ಅವರ ಇಷ್ಟಾನಿಷ್ಟಗಳನ್ನು, ವ್ಯವಹಾರಗಳ ಮೇಲೆ ನಿಗಾ ಇಟ್ಟು ಅವರ ವಿವರಗಳನ್ನು ಖಾಸಗಿಯವರು ಪಡೆದುಕೊಂಡಾಗಿದೆ. ಸರ್ಕಾರವು ಬಯಸಿದಲ್ಲಿ ಎಲ್ಲರ ಮೇಲೆ ನಿಗಾ ಇಡಲು ಸಾಧ್ಯವಾಗುವಂತೆ ಆಧಾರ್ ಕಡ್ಡಾಯವೂ ಆಗಿರುತ್ತದೆ. ನಿಗಾ ಇಡಲು ಆಧಾರ್ ಸಹಾ ಬೇಕಿಲ್ಲ; ಮೊಬೈಲ್ ಫೋನೇ ಸಾಕಾಗುತ್ತದೆ. ಆ ಅರ್ಥದಲ್ಲಿ ಈ ತೀರ್ಪಿನಿಂದ ಮಹತ್ತರವಾದುದೇನೋ ಸಾಧನೆಯಾದಂತೆ ಕಾಣುತ್ತಿಲ್ಲ. ಇದಕ್ಕೂ ಹಿಂದೆ ಸುಪ್ರೀಂಕೋರ್ಟ್ ಖಾಸಗಿತನದ ರಕ್ಷಣೆಯ ಕುರಿತು ನೀಡಿದ ತೀರ್ಪನ್ನು ಇದರಿಂದ ಆಧಾರ್ ವಿಚಾರದಲ್ಲಿ ಭಾಗಶಃ (ಖಾಸಗಿ ವ್ಯಕ್ತಿಗಳ ಕೈಗೆ ಆಧಾರ್ ವಿವರಗಳು ಹೋಗದಂತೆ ತಡೆಯುವ ಮೂಲಕ) ಅಷ್ಟೇ ಅನುಷ್ಠಾನ ಮಾಡಿದಂತಾಗುತ್ತದೆ.
ಈಗಾಗಲೇ ಖಾಸಗಿ ಕಂಪೆನಿಗಳು ಸಂಗ್ರಹಿಸಿಟ್ಟುಕೊಂಡಿರುವ ಆಧಾರ್ ಮಾಹಿತಿಯನ್ನು ನಾಶ ಮಾಡಬೇಕೆಂದು ಹೇಳಿದಾಗ್ಗ್ಯೂ ಆ ಪ್ರಕ್ರಿಯೆಯನ್ನು ಯಾರು, ಹೇಗೆ ಖಾತರಿಗೊಳಿಸುತ್ತಾರೆಂಬ ವಿವರಗಳು ಇನ್ನಷ್ಟೇ ಹೊರಬೀಳಬೇಕಿದೆ.
ಮುಖ್ಯ ನ್ಯಾಯಾಧೀಶ ನ್ಯಾ.ದೀಪಕ್ ಮಿಶ್ರಾ ಮತ್ತು ನ್ಯಾ.ಎ.ಕೆ.ಸಿಕ್ರಿ, ನ್ಯಾ.ಎ.ಎಂ.ಖಾನ್ವಿಲ್ಕರ್, ನ್ಯಾ.ಡಿ.ವೈ.ಚಂದ್ರಚೂಡ್ ಮತ್ತು ನ್ಯಾ.ಅಶೋಕ್ ಭೂಷಣ್‍ರಿದ್ದ ನ್ಯಾಯಪೀಠದಲ್ಲಿ ನ್ಯಾ.ಚಂದ್ರಚೂಡ್‍ರು ಮಾತ್ರ ತುಂಬಾ ಕಠಿಣ ಮಾತುಗಳಲ್ಲಿ ಕೆಲವು ಅಂಶಗಳನ್ನು ತೆರೆದಿಟ್ಟಿದ್ದಾರೆ. ಅವರೂ ಸಹಾ ಆಧಾರ್ ಪ್ರಕ್ರಿಯೆಯನ್ನೇ ರದ್ದುಗೊಳಿಸಬೇಕು ಎಂದು ಹೇಳಿರದಿದ್ದರೂ, ಆಧಾರ್ ಕಡ್ಡಾಯವಾಗುವುದರಿಂದ ಆಗುವ ಸಮಸ್ಯೆಗಳನ್ನು ಎತ್ತಿ ಹೇಳಿದ್ದಾರೆ. ಇದನ್ನು ಜಾರಿಗೆ ತಂದ ಪ್ರಕ್ರಿಯೆಯು ಅಸಾಂವಿಧಾನಿಕ ಎಂದೂ ಸ್ಪಷ್ಟವಾಗಿ ಮುಂದಿಟ್ಟಿದ್ದಾರೆ. ಈ ರೀತಿಯ ಅಲ್ಪಸಂಖ್ಯಾತ ತೀರ್ಪು ಬಂದಾಗ ಅದನ್ನು ಹಿಡಿದು, ಇನ್ನೂ ದೊಡ್ಡ ಪೀಠ ರಚನೆಗೆ ಕೇಳಬಹುದಾಗಿದೆ. ಅದನ್ನೇ ಮಾಡುತ್ತೇವೆಂದು ಕಾಂಗ್ರೆಸ್‍ನ ನಾಯಕ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಈಗಾಗಲೇ ಘೋಷಿಸಿದ್ದಾರೆ.
ಇಲ್ಲಿ ಆಶ್ಚರ್ಯವೆಂದರೆ, ಸದರಿ ಆಧಾರ್‍ಅನ್ನು ಮೊದಲು ತರಲು ಹೊರಟಿದ್ದೇ ಕಾಂಗ್ರೆಸ್ ಪಕ್ಷ. ಆದರೆ, ಇಂದು ರಾಹುಲ್‍ಗಾಂಧಿಯಾದಿಯಾಗಿ ಎಲ್ಲಾ ಕಾಂಗ್ರೆಸ್ಸಿಗರೂ ಈ ತೀರ್ಪನ್ನು ಸ್ವಾಗತಿಸಿದ್ದಾರೆ. ಅವರ ಪ್ರಕಾರ ಇದು ಯುಪಿಎ ತರಲು ಹೊರಟಿದ್ದ ಆಧಾರ್ ಪ್ರಕ್ರಿಯೆಗೆ ಸಂದ ಜಯ. ವಾಸ್ತವದಲ್ಲಿ ನಂದನ್ ನಿಲೇಕಣಿ ನೇತೃತ್ವದಲ್ಲಿ ಇದರ ಪರಿಕಲ್ಪನೆ ರೂಪುಗೊಂಡಾಗಲೇ ಇಂದು ಎನ್‍ಡಿಎ ಯಾವ ರೀತಿಯಲ್ಲಿ ಜಾರಿ ಮಾಡುತ್ತಿದೆಯೋ ಆ ಎಲ್ಲಾ ಸಾಧ್ಯತೆಗಳು/ಅಪಾಯಗಳು ಇದ್ದೇ ಇತ್ತು. ಜಾರಿಗೆ ತರುವ ಪ್ರಕ್ರಿಯೆಯನ್ನು ಸಂಸತ್ತಿನೊಳಗೆ ಇನ್ನೂ ‘ಪ್ರಜಾತಾಂತ್ರಿಕ’ಗೊಳಿಸುವ ಕೆಲಸವನ್ನಷ್ಟೇ ಕಾಂಗ್ರೆಸ್ ಮಾಡಬಯಸಿತ್ತು ಮತ್ತು ಹಂತಹಂತವಾಗಿ ಅದನ್ನು ಹೇರಲಾಗುತ್ತಿತ್ತು. ಆದರೆ, ಇಂದು ತನ್ನ ರೀತಿಯೇ ಬೇರೆ ಎಂದು ಅದು ಹೇಳುತ್ತಿದೆ. ಇದು ಕಾಂಗ್ರೆಸ್‍ನ ಆಷಾಢಭೂತಿತನಕ್ಕೆ ಸಾಕ್ಷಿ.
ಅದೇ ಹೊತ್ತಿನಲ್ಲಿ ಬಿಜೆಪಿಯಂತೂ ಈ ವಿಚಾರದಲ್ಲಿ ಭಾರೀ ದೊಡ್ಡ ಯುಟರ್ನ್ ಮಾಡಿದೆ. ಆಧಾರ್ ತರುವುದಕ್ಕೇ ಅದು ವಿರೋಧ ವ್ಯಕ್ತಪಡಿಸಿತ್ತು. ಆಧಾರ್ ಜನಕ ನಿಲೇಕಣಿ ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡಿದಾಗ, ಅವರನ್ನು ವಿರೋಧಿಸಲೂ ಇದನ್ನೊಂದು ಅಸ್ತ್ರವಾಗಿ ಮಾಡಿಕೊಂಡಿತ್ತು. ನಂತರ ಸುಲಭವಾಗಿ ಖಾಸಗಿಯವರ ಕೈಗೂ ಆಧಾರ್ ಸಿಗುವ ರೀತಿ ಮಾಡಿ ಜಾರಿ ಮಾಡಲು ಹೊರಟಿದ್ದು ಇದೇ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ.
ಇದೀಗ ಒಂದೆರಡು ಅಂಶಗಳನ್ನು ಹೊರತುಪಡಿಸಿ, ಉಳಿದಂತೆ ಆಧಾರ್‍ಅನ್ನು ಕೋರ್ಟ್ ಎತ್ತಿಹಿಡಿದಿದ್ದರೂ, ಒಟ್ಟಾರೆ ಇದರಲ್ಲಿ ಹಲವು ಅಪಾಯಕಾರಿ ಸಂಗತಿಗಳಿವೆ ಎಂಬುದನ್ನು ಕೋರ್ಟ್ ಗುರುತಿಸಿದೆ. ನ್ಯಾ.ಚಂದ್ರಚೂಡ್ ಅವರ ತೀರ್ಪಿನ ಅಂಶಗಳಂತೂ ಇದರ ಮಾನ್ಯತೆಯನ್ನು ಪ್ರಶ್ನಿಸಿದೆ. ಆದರೂ, ಇದೊಂದು ‘ಐತಿಹಾಸಿಕ’ ತೀರ್ಪು ಎಂದು ಬಿಜೆಪಿ ಹೇಳುತ್ತಿದೆ.
ಭಾರತವೆಂಬ ದೇಶದಲ್ಲಿ ‘ಸ್ಟ್ರೀಮ್‍ಲೈನ್’ ಮಾಡಬೇಕಾದ್ದು ಬಡವರಿಗೆ ಸಿಗುವ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನಷ್ಟೇ ಎಂದು ಸರ್ಕಾರವು ತಿಳಿದಿದೆ. ಯಾವ ಕಲ್ಯಾಣ ಕಾರ್ಯಕ್ರಮಗಳು ಸಂವಿಧಾನದ ಕಲಂ 21ರ ‘ಘನತೆಯಿಂದ ಬದುಕುವ ಹಕ್ಕ’ನ್ನು ಖಾತರಿಗೊಳಿಸಲು ಕಡ್ಡಾಯವೋ, ರಾಜ್ಯ ನಿರ್ದೇಶನ ತತ್ವಗಳ ಹಲವು ಕಲಂಗಳನ್ನು ಖಾತರಿಗೊಳಿಸಲು ಕಡ್ಡಾಯವೋ, ಅವು ಸಾಧ್ಯವಾದಷ್ಟೂ ಎಲ್ಲರಿಗೂ ಸಿಗದಂತೆ ಮಾಡುವುದರಲ್ಲಿ ಅಧಿಕಾರಶಾಹಿಗೆ ಎಲ್ಲಿಲ್ಲದ ಮುತುವರ್ಜಿ. ದೇಶದ ಇಡೀ ಬೊಕ್ಕಸವೇ ಜನಸಾಮಾನ್ಯರಿಗೆ ನೀಡುವ ಸಬ್ಸಿಡಿಗಳಿಗೆ ಹೋಗುತ್ತಿದೆ ಎಂಬುದು ಅವರ ಅಳಲು. ವಾಸ್ತವದಲ್ಲಿ ಕನಿಷ್ಠ ಮಟ್ಟಕ್ಕಾದರೂ ಬದುಕಿ ದುಡಿಯಲು ಈ ಸಮುದಾಯಗಳಿಗೆ ಸರ್ಕಾರವು ಕೆಲವು ಸಬ್ಸಿಡಿಗಳನ್ನು ನೀಡುತ್ತಿದೆ. ಅದರ ಮೂಲಕ ಕಡಿಮೆ ಕೂಲಿಯಲ್ಲಿ ಉಳ್ಳವರ ಉತ್ಪಾದನಾ ಘಟಕಗಳಲ್ಲಿ ಈ ಜನರು ದುಡಿಯುತ್ತಿದ್ದಾರೆ. ಆ ಅರ್ಥದಲ್ಲಿ ಅಗ್ಗದ ಕೂಲಿಗಳನ್ನು ಸರಬರಾಜು ಮಾಡಲು ಬೇಕಾದಷ್ಟು ಸಬ್ಸಿಡಿಯಷ್ಟೇ ಜನರಿಗೆ ಸಿಗುತ್ತಿದೆ. ಘನತೆಯಿಂದ ಬದುಕಲು ಬೇಕಾದಷ್ಟು ಕಲ್ಯಾಣ ಕಾರ್ಯಕ್ರಮಗಳು ಈ ದೇಶದಲ್ಲಿ ಜಾರಿಯಾಗಿಯೇ ಇಲ್ಲ.
ಹೀಗಿರುವಾಗ, ಸರ್ಕಾರದ ಸವಲತ್ತುಗಳು ‘ಸೋರಿಕೆ’ಯಾಗಿ ಕಡುಬಡವರಿಗೆ ಮಾತ್ರ ಸಿಗಬೇಕಾದವು ‘ಅನರ್ಹ’ರಿಗೆ ಸಿಕ್ಕಿಬಿಡುತ್ತಿದೆಯೆಂದು ಇಂತಹವರು ವಾದಿಸುತ್ತಿದ್ದರು. ಅವರ ಕೈಗೆ ಅಸ್ತ್ರವಾಗಿ ಸಿಕ್ಕಿದ್ದು ತಂತ್ರಜ್ಞಾನ. ಅದನ್ನು ಬಳಸಿಕೊಂಡು ಸೃಷ್ಟಿಸಲಾದ ಆಧಾರ್ ಈಗ ಬಡವರ ಅನ್ನಕ್ಕೆ ಕತ್ತರಿ ಹಾಕುವುದಷ್ಟೇ ಅಲ್ಲದೇ, ದೇಶದ ಎಲ್ಲಾ ಜನರ ಮೇಲೂ ನಿಗಾ ಇಡುವ ‘ನಿಗಾ ಪ್ರಭುತ್ವ’ವನ್ನು ಆಧಾರ್ ಸೃಷ್ಟಿ ಮಾಡಲು ಹೊರಟಿತ್ತು. ಅದರ ಕುರಿತು ಎದ್ದ ಪ್ರಶ್ನೆಗಳನ್ನು ಸುಪ್ರೀಂಕೋರ್ಟ್ ಗಮನಿಸಿದೆ ಮತ್ತು ಆ ಆತಂಕವನ್ನು ಒಂದಷ್ಟು ಮಟ್ಟಿಗೆ ಒಪ್ಪಿಕೊಂಡಿದೆ.
ಆದರೆ, ಆಧಾರ್‍ನ ಸಮಸ್ಯೆಯನ್ನು ನಿಜಕ್ಕೂ ಇಲ್ಲವಾಗಿಸುವ ನಿಟ್ಟಿನಲ್ಲಿ ಈ ಪ್ರಕ್ರಿಯೆಯು ಮುಂದುವರೆಯುತ್ತದೆಯಾ? ನ್ಯಾ.ಚಂದ್ರಚೂಡ್ ಅವರ ತೀರ್ಪಿನ ಅಂಶಗಳ ಕುರಿತಾಗಿ ಯಾರಾದರೂ ಇನ್ನೂ ದೊಡ್ಡ ಪೀಠಕ್ಕೆ ಕೊಂಡೊಯ್ದರೆ ಆಗೇನಾದರೂ ಉಳಿದ ವಿಚಾರಗಳಿಗೂ ಒಂದು ಪರಿಹಾರ ಕಾಣಿಸುತ್ತದೆಯಾ? ಖಾಸಗಿತನವೂ ಜನರ ಮೂಲಭೂತ ಹಕ್ಕು ಮತ್ತು ಸಂವಿಧಾನದ ಕಲಂ 21ರ ಭಾಗ ಎಂದು ಹೇಳಿದ್ದರ ಸೂಕ್ತವಾದ ವ್ಯಾಖ್ಯಾನ ಮತ್ತು ಆಧಾರ್ ಹಾಗೂ ಡಿಜಿಟಲ್ ಗೌಪ್ಯತೆ ವಿಚಾರಕ್ಕೂ ಅನ್ವಯವಾಗುತ್ತದೆಯಾ ನೋಡಬೇಕು.
ಆದರೆ, ಒಂದಂತೂ ಸ್ಪಷ್ಟ. ಕಾಂಗ್ರೆಸ್ ಮತ್ತು ಬಿಜೆಪಿಯಂತಹ ಪಕ್ಷಗಳಿಂದ ಈ ವಿಚಾರದಲ್ಲಿ ಸೂಕ್ತ ಪರಿಹಾರ ನಿರೀಕ್ಷಿಸುವುದು ಮೂರ್ಖತನ. ಮೋದಿ ಜೇಟ್ಲಿಯವರ ಧೋರಣೆಯಂತೂ ಅಪಾಯಕಾರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...