- Advertisement -
- Advertisement -
“ಪ್ರಾಮಾಣಿಕರಾದ ಆನಂದ್ ಸಿಂಗ್ ಅರಣ್ಯ ಸಚಿವರಾಗಿ ಮುಂದುವರೆಯುವುದರಲ್ಲಿ ಯಾವುದೆ ತಪ್ಪಿಲ್ಲ” ಎಂದು ಆರೋಗ್ಯ ಸಚಿವ ರಾಮುಲು ಹೇಳಿದ್ದಾರೆ.
“ಕಾಂಗ್ರೆಸ್ ರಾಜಕೀಯ ಉದ್ದೇಶಕ್ಕಾಗಿ ಆನಂದ್ ಸಿಂಗ್ ಮತ್ತು ಜನಾರ್ಧನ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿದೆ. ಕಾಂಗ್ರೆಸಿನ ಈ ಪಿತೂರಿಯಿಂದಾಗಿ ಬಳ್ಳಾರಿಗೆ ಕೆಟ್ಟ ಹೆಸರು ಬಂದಿದೆ” ಎಂದು ಆರೋಗ್ಯ ಸಚಿವ ರಾಮುಲು ಹೇಳಿದ್ದಾರೆ.
“ಕಾಂಗ್ರೆಸ್ ಪಿತೂರಿಯಿಂದ ಆನಂದ್ ಸಿಂಗ್ ಮೇಲೆ ಪ್ರಕರಣ ದಾಖಲಾಗಿತ್ತು. ಅದು ಕಾಂಗ್ರೆಸ್ ಸರ್ಕಾರವಿದ್ದಾಗ ರಾಜಕೀಯ ಪಿತೂರಿಯಿಂದ ದಾಖಲಾದ ಪ್ರಕರಣ” ಎಂದು ಸಚಿವ ರಾಮುಲ್ ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಮಾಡಿ ಹತ್ತು ಹೊಸ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದರು. ಈ ಸಂಧರ್ಭದಲ್ಲಿ ಆನಂದ್ ಸಿಂಗ್ ಅವರಿಗೆ ಅರಣ್ಯ ಖಾತೆಯನ್ನು ನೀಡಲಾಗಿತ್ತು. ಆದರೆ ಆನಂದ್ ಸಿಂಗ್ ವಿರುದ್ಧ ಅರಣ್ಯ ಕಾಯ್ದೆ ಸೇರಿದಂತೆ ಹದಿನೈದು ಪ್ರಕರಣಗಳು ಬಾಕಿ ಇದೆ ಎಂಬ ಆರೋಪ ಕೇಳಿ ಬಂದಿತ್ತು.