Homeಕರ್ನಾಟಕಆಪರೇಷನ್ ಕಮಲಕ್ಕೆ ಬ್ರೇಕ್: ಯಡಿಯೂರಪ್ಪನವರ ಈ ಮಾತಿನ ಹಿಂದಿರುವ ಮರ್ಮವೇನು?

ಆಪರೇಷನ್ ಕಮಲಕ್ಕೆ ಬ್ರೇಕ್: ಯಡಿಯೂರಪ್ಪನವರ ಈ ಮಾತಿನ ಹಿಂದಿರುವ ಮರ್ಮವೇನು?

ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಬೀಳಿಸಿದ ಅಪಖ್ಯಾತಿ ಬಿಜೆಪಿ ಮೇಲೆ ಬಾರದಂತೆ, ಅದನ್ನು ಸಿದ್ದರಾಮಯ್ಯ ಮೇಲೆ ಆರೋಪಿಸಿ, ಒಳಗೊಳಗೇ ಆಪರೇಷನ್ ನಡೆಸುವ ತಂತ್ರಗಾರಿಕೆ ಭಾಗವಾಗಿ ಯಡಿಯೂರಪ್ಪನವರಿಂದ ಇಂಥಾ ಹೇಳಿಕೆ ಹೇಳಿಸಲಾಗಿದೆ ಎನ್ನಲಾಗುತ್ತಿದೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ದೆಹಲಿಯಿಂದ ಮರಳಿದ ಯಡಿಯೂರಪ್ಪ ತುಂಬಾ ನಿರಾಶೆಯಲ್ಲಿದ್ದಾರೆ. ಪ್ರಚಂಡ ಜಯದಿಂದ ಯಾರ ಮಾತನ್ನೂ ಕೇಳಿಸಿಕೊಳ್ಳದ ಸ್ಥಿತಿಯಲ್ಲಿರುವ `ಮೋದಿ-ಶಾ’ ಹೈಕಮಾಂಡ್ ಸದ್ಯಕ್ಕೆ ಯಾವ ಆಪರೇಷನ್ನೂ ಮಾಡಬೇಡಿ, ಸುಮ್ಮನೇ ವಿರೋಧ ಪಕ್ಷದಲ್ಲಿ ಕೂಡಿ ಎಂದು ಖಡಕ್ ಆದೇಶವನ್ನು ಯಡಿಯೂರಪ್ಪರಿಗೆ ನೀಡಿ ಕಳಿಸಿದೆ. ಇನ್ನೊಂದು ಕಡೆ ಯಡಿಯೂರಪ್ಪ ಸೂಚಿಸಿದ ಬೆಜೆಪಿ ಸಂಸದರಿಗೆ ಒಂದೂ ಸಚಿವ ಸ್ಥಾನ ನೀಡದೇ ಯಡಿಯೂರಪ್ಪರನ್ನು ಹೈಕಮಾಂಡ್ ಮೂಲೆಗೆ ತಳ್ಳಿದೆ. ಬಿಜೆಪಿಯಲ್ಲಿ ಯುಡಿಯೂರಪ್ಪ ಕತೆ ಮುಗಿದೇ ಹೋಯ್ತಾ?

ಮೋದಿಯವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ಬಂದಿಳಿದ ಯಡಿಯೂರಪ್ಪನವರ ಮುಖದಲ್ಲಿ ಈ ಮೊದಲಿದ್ದ ಯಾವ ಲವಲವಿಕೆಯೂ ಉಳಿದಿಲ್ಲ. ಮೇ 23ಕ್ಕೆ ರಾಜ್ಯ ಮೈತ್ರಿ ಸರ್ಕಾರ ಮುರಿದುಬಿದ್ದು ಬಿಜೆಪಿ ಸರ್ಕಾರ ಅಧಿಕಾರಕ್ಕೇರಲಿದೆ ಎಂದು ತುಂಬು ಹುಮ್ಮಸ್ಸಿನಲ್ಲಿ ಮಾತಾಡುತ್ತಿದ್ದ ಯಡಿಯೂರಪ್ಪನವರು ದಿಲ್ಲಿಯಿಂದ ಬರುತ್ತಿದ್ದಂತೆಯೇ “ಸದ್ಯಕ್ಕೆ ಸರ್ಕಾರದ ಪತನಕ್ಕೆ ಕೈಯಾಕಬೇಡಿ ಎಂದು ವರಿಷ್ಠರು ಸೂಚಿಸಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡದೇ ವಿರೋಧ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ” ಎಂಬ ಅಚ್ಚರಿ ಹೇಳಿಕೆ ನೀಡಿ ಅವರ ಹಿಂಬಾಲಕರೇ ತಬ್ಬಿಬ್ಬಾಗುವಂತೆ ಮಾಡಿದ್ದಾರೆ.

ಇದಕ್ಕೆ ಅವರು ಕೊಡುತ್ತಿರುವ ಕಾರಣ, “ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವ ಸಿದ್ದರಾಮಯ್ಯ ತಮ್ಮ ಪಕ್ಷದ ನಾಲ್ಕು ಶಾಸಕರನ್ನು ಅತೃಪ್ತರಂತೆ ಮುಂದೆ ಬಿಟ್ಟು ಬಿಜೆಪಿಗೆ ಕಳುಹಿಸುವ ಹುನ್ನಾರ ನಡೆಸಿದ್ದಾರೆ. ಆದ್ದರಿಂದ ನೀವು ಸರ್ಕಾರ ಪತನದ ಯತ್ನಕ್ಕೆ ಕೈಹಾಕಬೇಡಿ ಎಂಬ ಸಲಹೆ ನೀಡಿದ್ದಾರೆ” ಎನ್ನುತ್ತಿದ್ದಾರೆ.

ಆದರೆ ದಿಲ್ಲಿಯ ಬಲ್ಲ ಮೂಲಗಳು ಹೇಳುವಂತೆ ಯಡಿಯೂರಪ್ಪನವರು ಪ್ರಮಾಣವಚನ ಕಾರ್ಯಕ್ರಮದ ನೆಪದಲ್ಲಿ ದಿಲ್ಲಿಗೆ ಬಂದಿದ್ದೇ ಎರಡು ಅಜೆಂಡಾ ಇಟ್ಟುಕೊಂಡು. ಮೊದಲನೆಯದ್ದು, ತಮ್ಮ ಬೆಂಬಲಿಗ ಸಂಸದರಿಗೆ ಮೋದಿ ಸಂಪುಟದಲ್ಲಿ ಮಂತ್ರಿ ಮಾಡಿಸುವುದು. ಎರಡನೆಯದ್ದು, ಆಪರೇಷನ್ ಕಮಲಕ್ಕೆ ಅಧಿಕೃತ ಸಮ್ಮತಿ ಪಡೆದುಕೊಂಡು ಬರುವುದು. ಆದರೆ ಇವೆರಡೂ ಈಡೇರಿಲ್ಲ ಮಾತ್ರವಲ್ಲ, ಇನ್ನುಮುಂದೆ ಬಿಜೆಪಿಯಲ್ಲಿ ನಿಮ್ಮ ಪ್ರಾಧಾನ್ಯತೆ ಸಾಕು ಎಂಬ ಸ್ಪಷ್ಟ ಸುಳಿವನ್ನೂ ಅಮಿತ್ ಶಾ ನೀಡಿ ಕಳಿಸಿದ್ದಾರೆ ಎನ್ನುತ್ತವೆ ದಿಲ್ಲಿ ಮೂಲಗಳು.

ಯಡಿಯೂರಪ್ಪನವರು, ತಮ್ಮ ಆಪ್ತರಾದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬಾಗಲಕೋಟೆಯ ಗದ್ದಿಗೌಡರ್, ಹಾವೇರಿ ಶಿವಕುಮಾರ್ ಉದಾಸಿ, ಕೊಪ್ಪಳದ ಕರಡಿ ಸಂಗಣ್ಣ ಮತ್ತು ತುಮಕೂರಿನ ಬಸವರಾಜು- ಇವರಲ್ಲಿ ಒಬ್ಬಿಬ್ಬರಿಗೆ ಸಚಿವ ಸ್ಥಾನ ಅಪೇಕ್ಷಿಸಿದ್ದರು! ಇದಕ್ಕೆ ತಣ್ಣೀರು ಎರಚಿದ ಹೈಕಮಾಂಡ್ ಯಡಿಯೂರಪ್ಪ ಬಣದಿಂದ ಹೊರಗಡೆ ಗುರುತಿಸಿಕೊಂಡಿರುವ ಪ್ರಹ್ಲಾದ್ ಜೋಷಿ, ಸದಾನಂದಗೌಡ, ಸುರೇಶ್ ಅಂಗಡಿಗೆ ಮಾತ್ರ ಸಚಿವಗಿರಿ ದಯಪಾಲಿಸಿದೆ. ರಾಜ್ಯದಿಂದ ಈ ಹೆಸರುಗಳನ್ನು ಆರೆಸ್ಸೆಸ್ ಪರವಾಗಿ ಶಿಫಾರಸ್ಸು ಮಾಡಿದ್ದೇ ಸಂತೋಷ್‍ಜೀ ಎಂಬ ಸತ್ಯ ಯಡಿಯೂರಪ್ಪನವರನ್ನು ಮತ್ತಷ್ಟು ದಿಗ್ಭ್ರಮೆ ಗೊಳಿಸಿರಲಿಕ್ಕೂ ಸಾಕು.

ಎಂಪಿ ಎಲೆಕ್ಷನ್ನಿಗೆ ಟಿಕೇಟ್ ಹಂಚಿಕೆಯಲ್ಲೂ ಯಡಿಯೂರಪ್ಪನವರ ಶಿಫಾರಸ್ಸಿಗೆ ಹೈಕಮಾಂಡ್ ಮಣೆ ಹಾಕರಲಿಲ್ಲ ಎನ್ನುವುದನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದು. ಅಲ್ಲೂ ತೇಜಸ್ವಿ ಸೂರ್ಯನಂತ ಸಂತೋಷ್‍ಜಿ ಶಿಷ್ಯರಿಗೇ ಮಣೆ ಹಾಕಲಾಗಿತ್ತು. ಶೋಭಾ ಕರಂದ್ಲಾಜೆ ಮತ್ತು ಕರಡಿ ಸಂಗಣ್ಣರಿಗೆ ಟಿಕೇಟು ತರಲು ಯಡಿಯೂರಪ್ಪ ಹರಸಾಹಸ ಪಡಬೇಕಾಗಿ ಬಂದಿತ್ತು. ಅಲ್ಲದೇ ಚಿಕ್ಕೋಡಿ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗ ಶಾಸಕ ಉಮೇಶ ಕತ್ತಿಯ ಸಹೋದರ ರಮೇಶ ಕತ್ತಿಗೂ ಟಿಕೆಟ್ ತರುವಲ್ಲಿ ಯಡಿಯೂರಪ್ಪ ಮುಗ್ಗರಿಸಿದ್ದರು.

ಕುಂದಗೋಳ ಉಪ ಚುನಾವಣೆಯಲ್ಲೂ ಯಡಿಯೂರಪ್ಪ ಬೀಗ ಚಿಕ್ಕನಗೌಡರಿಗೆ ಟಿಕೆಟ್ ತಪ್ಪಿಸುವ ಯತ್ನ ಮಾಡಲಾಗಿತ್ತು. ಕೊನೆಗೂ ಯಡಿಯೂರಪ್ಪ ಟಿಕೆಟ್ ತಂದರಾದರೂ ಹುಬ್ಬಳ್ಳಿ-ಧಾರವಾಡದ ಬಿಜೆಪಿ ನಾಯಕರು ಚಿಕ್ಕನಗೌಡರ ಪರ ಮನಪೂರ್ವಕ ಪ್ರಚಾರ ಮಾಡದೇ ಯಡಿಯೂರಪ್ಪ ಬೀಗನಿಗೆ ಸೋಲು ತಂದಿಟ್ಟರು. ಚಿಂಚೋಳಿಯಲ್ಲಿ ತಮ್ಮ ಶಿಷ್ಯ, ತಮ್ಮ ಸಂಪುಟದಲ್ಲಿ ಸಚಿವ ಸ್ಥಾನವನ್ನೂ ನೀಡಿದ್ದ ಸುನೀಲ್ ವಲ್ಯಾಪುರೆಗೆ ಟಿಕೆಟ್ ಕೊಡಿಸುವ ಯಡಿಯೂರಪ್ಪರ ಯತ್ನಕ್ಕೆ ಹಿನ್ನಡೆ ಮಾಡಿದ ಸಂತೋಷ್‍ಜಿ ಬಣ ಅಲ್ಲಿ ವಲಸಿಗ ಉಮೇಶ ಜಾಧವರ ಮಗ ಅವಿನಾಶ ಜಾಧವ್‍ಗೆ ಟಿಕೆಟು ನೀಡಿತ್ತು.

ಗಾಯದ ಮೇಲೆ ಬರೆ ಎಂಬಂತೆ, ಈಗ ಆಪರೇಷನ್ ಕಮಲ ಮಾಡಬೇಡಿ, ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚಿಸುವ ದುಸ್ಸಾಹಸಕ್ಕೆ ಕೈ ಹಾಕಬೇಡಿ, ತೆಪ್ಪಗೆ ವಿರೋಧ ಪಕ್ಷವಾಗಿ ಕೆಲಸ ಮಾಡಿ ಎಂದು ಹೈಕಮಾಂಡ್ ಸೂಚನೆ ನೀಡಿದೆ ಎಂದು ಸ್ವತಃ ಯಡಿಯೂರಪ್ಪನವರೇ ಹೇಳಿಕೊಳ್ಳುತ್ತಿದ್ದಾರೆ. ಅಂದರೆ ಮುಖ್ಯಮಂತ್ರಿಯಾಗುವ ಯಡಿಯೂರಪ್ಪ ಕನಸಿಗೆ ಹೈಕಮಾಂಡ್ ಅಂತಿಮ ಮೊಳೆ ಹೊಡೆಯಿತೇ? ಎಂಬ ಅನುಮಾನ ಮೂಡದಿರದು.

ಲಿಂಗಾಯತ ಪ್ರಾಬಲ್ಯವಿರುವ ಉತ್ತರ ಕರ್ನಾಟಕಕ್ಕಷ್ಟೇ ಸೀಮಿತವಾಗಿದ್ದ ಬಿಜೆಪಿ ಈ ಚುನಾವಣೆಯಲ್ಲಿ ಮೋದಿ ಅಲೆಯಲ್ಲಿ ಒಕ್ಕಲಿಗ ಪ್ರಾಬಲ್ಯದ ಹಳೇ ಮೈಸೂರು ಪ್ರಾಂತ್ಯದಲ್ಲೂ ಕಾಂಗ್ರೆಸ್-ಜೆಡಿಎಸ್ ಹಿಂದಿಕ್ಕಿ ಅದ್ಭುತ ಯಶಸ್ಸು ಗಳಿಸಿರುವುದರಿಂದ ಇನ್ಮುಂದೆ ಕರ್ನಾಟಕದ ರಾಜಕಾರಣಕ್ಕೆ ಯಡಿಯೂರಪ್ಪ ತಮಗೆ ತೀರಾ ಅನಿವಾರ್ಯ ಆಗಲಾರರು ಎಂಬ ತರ್ಕಕ್ಕೆ ಬಿಜೆಪಿ ಹೈಕಮಾಂಡನ್ನು ಸಂತೋಷ್‍ಜಿ ಪಡೆ ತಂದು ನಿಲ್ಲಿಸಿದೆ ಎನ್ನುವುದು ಲೇಟೆಸ್ಟ್ ವರ್ತಮಾನ.

ಈ ಕ್ಷಣದಲ್ಲೇ ಆಪರೇಷನ್ ಕಮಲ ನಡೆಸಿ ಸರ್ಕಾರ ರಚಿಸಲು ಮುಂದಾದರೆ ಅನಿವಾರ್ಯವಾಗಿ ಯಡಿಯೂರಪ್ಪನವರನ್ನೇ ಸಿಎಂ ಮಾಡಬೇಕಾಗುತ್ತೆ. ಅದರ ಬದಲು ಅದನ್ನು ಕೊಂಚ ಮುಂದೂಡಿದರೆ, ಈಗ ಶುರುವಾಗಿರುವ ಮೋದಿ ಪರ್ವವನ್ನು ಕರ್ನಾಟಕದಲ್ಲಿ ಇನ್ನಷ್ಟೂ ಬಿಗಿಗೊಳಿಸುತ್ತಲೇ ಯಡಿಯೂರಪ್ಪನವರನ್ನು ರಾಜಕಾರಣದಲ್ಲಿ ಸಂಪೂರ್ಣ ಅಪ್ರಸ್ತುತಗೊಳಿಸಿದ ನಂತರ ತಮಗಿಷ್ಟ ಬಂದ ವ್ಯಕ್ತಿಯನ್ನು, (ಸಂತೋಷ್‍ರನ್ನು) ಸಿಎಂ ಮಾಡಬಹುದೆನ್ನುವ ಲೆಕ್ಕಾಚಾರವನ್ನು ಬಿಜೆಪಿ ಹೆಣೆದು ಕೂತಿದೆ ಎನ್ನಲಾಗುತ್ತಿದೆ. ಅಷ್ಟರೊಳಗೆ ಮೈತ್ರಿ ನಾಯಕರ ನಡುವಿನ ಕಿತ್ತಾಟ ತಾರಕಕ್ಕೇರಿ ಸರ್ಕಾರ ಬಿದ್ದರೆ, ಬಿಜೆಪಿಗೆ ಅಪಖ್ಯಾತಿಯೂ ತಟ್ಟುವುದಿಲ್ಲ ಎಂಬ ತರ್ಕ ಇಲ್ಲಿ ಕೆಲಸ ಮಾಡಿರುವ ಸಾಧ್ಯತೆಯೇ ಹೆಚ್ಚು.

ಮತ್ತೊಂದು ತರ್ಕದ ಪ್ರಕಾರ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಬೀಳಿಸಿದ ಅಪಖ್ಯಾತಿ ಬಿಜೆಪಿ ಮೇಲೆ ಬಾರದಂತೆ, ಅದನ್ನು ಸಿದ್ದರಾಮಯ್ಯ ಮೇಲೆ ಆರೋಪಿಸಿ, ಒಳಗೊಳಗೇ ಆಪರೇಷನ್ ನಡೆಸುವ ತಂತ್ರಗಾರಿಕೆ ಭಾಗವಾಗಿ ಯಡಿಯೂರಪ್ಪನವರಿಂದ ಇಂಥಾ ಹೇಳಿಕೆ ಹೇಳಿಸಲಾಗಿದೆ ಎನ್ನಲಾಗುತ್ತಿದೆ. ಅದೇನೆ ಇರಲಿ, ದಿಲ್ಲಿಯಿಂದ ವಾಪಾಸು ಬಂದ ಯಡಿಯೂರಪ್ಪನವರ ಮುಖದಲ್ಲಿ ಮೊದಲಿದ್ದ ಹುಮ್ಮಸ್ಸು ನಾಪತ್ತೆಯಾಗಿರುವುದು ಮಾತ್ರ ಸತ್ಯ.

ಲೋಕಸಭಾ ಚುನಾವಣೆ ನಡೆದು ತಿಂಗಳೊಪ್ಪತ್ತಿನಲ್ಲೇ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ 509 ಸ್ಥಾನ ಗೆದ್ದು ಚೇತರಿಸಿಕೊಂಡಿದ್ದರೆ, 25 ಸಂಸದರನ್ನು ಗೆದ್ದುಕೊಂಡ ಖುಷಿಯಲ್ಲಿದ್ದ ಬಿಜೆಪಿ ಕೇವಲ 366 ಲೋಕಲ್ ಬಾಡಿ ಸ್ಥಾನಗಳಿಗಷ್ಟೇ ಸೀಮಿತಗೊಂಡು ಆಘಾತಕ್ಕೆ ತುತ್ತಾಗಿರೋದು ಕೂಡಾ ಯಡಿಯೂರಪ್ಪನವರ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಲಕ್ಷಣವಲ್ಲ ಎನ್ನಲಾಗುತ್ತಿದೆ.

ಇದನ್ನು ಓದಿ: ಲಿಂಗಾಯಿತರಿಗೆ ಬಿಜೆಪಿ ಕೊಟ್ಟಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....