Homeಸಾಮಾಜಿಕಇಂಟರ್‌ಸೆಕ್ಸ್ ಮಕ್ಕಳೇಕೆ ಕ್ಷೋಭೆ ಅನುಭವಿಸಬೇಕಾಗಿ ಬರುತ್ತದೆ?

ಇಂಟರ್‌ಸೆಕ್ಸ್ ಮಕ್ಕಳೇಕೆ ಕ್ಷೋಭೆ ಅನುಭವಿಸಬೇಕಾಗಿ ಬರುತ್ತದೆ?

- Advertisement -
- Advertisement -

ಡಾ.ಕಾರ್ತಿಕ್ ಬಿಟ್ಟು |

ಇದುವರೆಗೆ ನಾವು ಟ್ರಾನ್ಸ್ಜೆಂಡರ್ ವ್ಯಕ್ತಿಗಳ ಬಯಾಲಾಜಿಕಲ್ ಆಧಾರದ ಬಗ್ಗೆ ಮಾತನಾಡಿದ್ದೇವೆ, ಅದರೊಂದಿಗೆ ಟ್ರಾನ್ಸ್ಜೆಂಡರ್ ಮತ್ತು ಇಂಟರ್‌ಸೆಕ್ಸ್ ಮಧ್ಯೆ ಇರುವ ವ್ಯತ್ಯಾಸ ಹಾಗೂ ಹೋಲಿಕೆಗಳ ಬಗ್ಗೆಯೂ ಚರ್ಚಿಸಿದ್ದೇವೆ. ಈಗ ಆ ವ್ಯಕ್ತಿಗಳು ಬಾಲ್ಯದಿಂದ ಹಿಡಿದು ತಮ್ಮ ಜೀವನದ ವಿವಿಧ ಹಂತಗಳಲ್ಲಿ ಎಂತಹ ಸಾಮಾಜಿಕ ಮತ್ತು ವೈಯಕ್ತಿಕ ಸಂಕಷ್ಟಗಳನ್ನು ಎದುರಿಸಬೇಕಾಗುತ್ತೆ ಎನ್ನುವುದನ್ನು ಚರ್ಚಿಸೋಣ. ಇಂಟರ್‌ಸೆಕ್ಸ್ ಆಗಿರಲು ಜೈವಿಕವಾದ ಕಾರಣವಿದೆ ಎಂಬುದನ್ನು ನೋಡಿದ್ದೇವೆ. ಅದರಲ್ಲೂ ಈ ವ್ಯಕ್ತಿಗಳಲ್ಲಿ ಮೇಲ್ತೋರಿಕೆಗೇ ಅದು ಕಂಡುಬಂದರೂ ಸಹ ಅವರ ಸಾಮಾಜಿಕ ಅನುಭವದಲ್ಲಿ ಸಮಸ್ಯೆಗಳು ಏಕೆ ತಲೆದೋರುತ್ತವೆ? ಏಕೆಂದರೆ, ಗಂಡು ಅಥವಾ ಹೆಣ್ಣಿನ ದೇಹಕ್ಕಿರುವ ಸಾಮಾಜಿಕ ನಿರೀಕ್ಷೆಗಳಿಗಿಂತ ಅವರು ಭಿನ್ನವಾಗಿರುತ್ತಾರೆ ಮತ್ತು ನೀವು ನಿರ್ದಿಷ್ಟ ಜೆಂಡರ್‌ನ ಗುರುತಿನೊಂದಿಗೇ ಇರಬೇಕು ಎಂದು ಒತ್ತಾಯಿಸುವ ಸಾಮಾಜಿಕ ಮತ್ತು ವೈದ್ಯಕೀಯ ಒತ್ತಡಗಳು ಅವರನ್ನು ಕಾಡುತ್ತವೆ.

ವೈದ್ಯರು ಅನೇಕ ಸಲ ಇಂಟರ್‌ಸೆಕ್ಸ್ ಮಕ್ಕಳ ಪೋಷಕರಿಗೆ ನೀಡುವ ಸಲಹೆಯೇ ಸಮಸ್ಯೆಯನ್ನು ತಂದೊಡ್ಡುತ್ತದೆ. ಅವರು ಆ ಮಗುವನ್ನು ಒಂದು ನಿರ್ದಿಷ್ಟ ಜೆಂಡರ್‌ಗೆ (ಜನನದ ಸಮಯದಲ್ಲಿ ವೈದ್ಯರು ನಿರ್ಧರಿಸಿದ ಜೆಂಡರ್) ಒತ್ತಾಯಪೂರ್ವಕವಾಗಿ ಒಳಗೊಳ್ಳುವಂತೆ ಸೂಚಿಸುತ್ತಾರೆ. ಹಾಗೂ ಕೆಲಸಲ ಅದಕ್ಕಿಂತ ಮುಂದೆ ಹೋಗಿ ಆ ಮಕ್ಕಳ ಜೀವನವನ್ನೇ ಬದಲಿಸಬಹುದಾದಂತಹ ಯಾತನಾಮಯ ಹಾಗೂ ಜೀವನದುದ್ದಕ್ಕೂ ಗಾಯದ ಕಲೆಗಳನ್ನು ಮಾಡಬಹುದಾದ ಶಸ್ತ್ರಚಿಕಿತ್ಸೆ ಮಾಡುವಂತೆಯೂ ಸೂಚಿಸುತ್ತಾರೆ. ಶಸ್ತ್ರಚಿಕಿತ್ಸೆಯಿಂದ ಆ ಮಕ್ಕಳ ದೇಹಗಳು ಅವರಿಗೆ ನೀಡಿದ ಜೆಂಡರ್‌ಗೆ ಅನುಗುಣವಾಗಿ ಬದಲಿಸಬಹುದು ಎನ್ನುವ ನಂಬಿಕೆಯಲ್ಲಿ ಈ ಶಸ್ತ್ರಚಿಕಿತ್ಸೆಗಳನ್ನು ಸೂಚಿಸಲಾಗುತ್ತದೆ. ಉದಾಹರಣೆಗೆ ಇತ್ತೀಚಿಗೆ ಮುಂಬಯಿಯಲ್ಲಿ ಇಂಟರ್‌ಸೆಕ್ಸ್ ಮಗುವಿನ ಮೇಲೆ ಇಂತಹ ಒಂದು ಶಸ್ತ್ರಚಿಕಿತ್ಸೆ ಮಾಡಲಾಯಿತು ಎನ್ನುವ ವರದಿ ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು. ಇಂಟರ್‌ಸೆಕ್ಸ್ ಆಗಿರುವ ವಯಸ್ಕರು ಇದರ ವಿರುದ್ಧ ತೀವ್ರವಾಗಿ ಪ್ರತಿಭಟಿಸಿದ್ದಾರೆ. ಚಿಕ್ಕವಯಸ್ಸಿನಲ್ಲಿ ಇಂತಹ ಶಸ್ತ್ರಚಿಕಿತ್ಸೆಗಳಿಗೆ ಒಳಗೊಳ್ಳುವಂತೆ ಮಾಡುವುದನ್ನು ತಾವು ಒಪ್ಪುವುದಿಲ್ಲ ಹಾಗೂ ತಂದೆತಾಯಿಗಳು ತಮ್ಮ ಇಂಟರ್‌ಸೆಕ್ಸ್ ಮಕ್ಕಳಿಗೆ ಅವರ ವಾಸ್ತವವನ್ನು ಮುಚ್ಚುಮರೆಯಿಲ್ಲದೇ ಹೇಳಬೇಕು ಹಾಗೂ ಅದರಿಂದ ಮಕ್ಕಳಿಗೆ ತಮ್ಮ ದೇಹದ ಬಗ್ಗೆ ಅರಿವು ಮೂಡಬಹುದು ಹಾಗೂ ತಮ್ಮ ಮನಸ್ಸನ್ನೂ ಅರ್ಥೈಸಿಕೊಳ್ಳಬಹುದು ಹಾಗೂ ತಾವು ಇತರರಿಗಿಂತ ಹೇಗೆ ಭಿನ್ನ ಮತ್ತು ಹೇಗೆ ಸಮಾನ ಎನ್ನುವುದನ್ನು ತಿಳಿಯಬಹುದು ಎಂದು ಸ್ಪಷ್ಟಪಡಿಸಿದ್ದಾರೆ. ಆ ಮಕ್ಕಳು ಬೆಳೆದ ನಂತರ ಯಾವ ಜೆಂಡರ್‌ನೊಂದಿಗೆ ತಮ್ಮನ್ನು ತಾವು ಜೆಂಡರ್‌ನೊಂದಿಗೆ ಗುರುತಿಸಿಕೊಳ್ಳಲು ಇಷ್ಟಪಡುವರು ಎಂದು, ಅದು ಸ್ಪಷ್ಟವಾಗಿ ವ್ಯಕ್ತವಾಗುವ ಸಮಯಕ್ಕೆ ಮುಂಚೆಯೇ ಯಾರಿಗೂ ಹೇಳಲಾಗುವುದಿಲ್ಲ.

ಹಾಗಾಗಿ ಇಂಟರ್‌ಸೆಕ್ಸ್ ಮಕ್ಕಳ ಪೋಷಕರು ಮತ್ತು ವೈದ್ಯರು ಗಮನಿಸಬೇಕಾದ ಮುಖ್ಯವಾದ ಸಂಗತಿ ಏನೆಂದರೆ, ತಪ್ಪು ಮಾಹಿತಿಯ ಆಧಾರದ ಮೇಲೆ ಆ ಇಂಟರ್‌ಸೆಕ್ಸ್ ಮಕ್ಕಳ ಮೇಲೆ ಜನನೇಂದ್ರೀಯದ ಶಸ್ತ್ರಚಿಕಿತ್ಸೆ ಮಾಡಲು ಆತುರಪಡಬಾರದು. ಹಾಗೆ ಮಾಡಿ ಆ ಮಗುವಿನ ಜೆಂಡರ್ ಅನ್ನು ಬದಲಿಸಲು ಪ್ರಯತ್ನ ಮಾಡಬಾರದು. ನೀವು ನಿಮ್ಮ ಇಂಟರ್‌ಸೆಕ್ಸ್ ಮಗುವನ್ನೂ ಇತರೆ ಮಕ್ಕಳಂತೆ ಒಪ್ಪಿಕೊಳ್ಳಿ, ಅಷ್ಟೇ ಪ್ರೀತಿಸಿ ಹಾಗೂ ಅವರನ್ನು ವಯಸ್ಕರಾಗಲು ಬಿಡಿ. ಆಗ ಮಾತ್ರ ಅವರು ತಾವು ಗುರುತಿಸಿಕೊಳ್ಳಲು ಇಚ್ಛಿಸುವ ಜೆಂಡರ್ ಬಗ್ಗೆ ನಿರ್ಣಯ ತಾವೇ ತೆಗೆದುಕೊಳ್ಳುವರು. ಅದರೊಂದಿಗೆ ತಮ್ಮ ದೇಹವನ್ನು ಮಾರ್ಪಡಿಸಲು ವೈದ್ಯಕೀಯ ನೆರವು ಅಗತ್ಯವೋ ಇಲ್ಲವೋ ಎಂತಲೂ ತಾವೇ ನಿರ್ಣಯಿಸಬಹುದು. ಅನೇಕ ಸಲ ಇಂಟರ್‌ಸೆಕ್ಸ್ ಮಕ್ಕಳ, ಅಂದರೆ ಯಾರ ದೇಹ ಪುರುಷ ಅಥವಾ ಸ್ತ್ರೀಯರ ದೇಹಕ್ಕೆ ಪೂರಕವಾಗಿರುವುದಿಲ್ಲವೋ ಅಂತಹ ಮಕ್ಕಳ ತಂದೆತಾಯಿಗಳು ಆ ಮಕ್ಕಳನ್ನು ಪರಿತ್ಯಜಿಸಿ ಬಿಡುತ್ತಾರೆ. ಎರಡು ತಿಂಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಇಂತಹ ಒಂದು ಮಗುವನ್ನು ಯಾರಾದರೂ ದತ್ತು ತೆಗೆದುಕೊಳ್ಳಲಿ ಎಂದು ಆ ಮಗುವಿನ ಪೋಷಕರು ಬಿಟ್ಟಿದ್ದು ವರದಿಯಾಗಿತ್ತು. ಹಾಗಾಗಿ ಇಂಟರ್‌ಸೆಕ್ಸ್ ಮಕ್ಕಳಿಗೆ ತಮ್ಮ ಉಳಿವಿಗಾಗಿ ಹಾಗೂ ತಾರತಮ್ಯದ ವಿರುದ್ಧದ ಹೆಣಗಾಟ ಹುಟ್ಟಿದ ಸಮಯದಿಂದಲೇ ಪ್ರಾರಂಭವಾಗುವುದು ಅತ್ಯಂತ ದುಃಖಕರ ಸಂಗತಿ.

ವೈದ್ಯರು ಇಂಟರ್‌ಸೆಕ್ಸ್ ಮಕ್ಕಳಿಗೆ ಗಂಡು ಅಥವಾ ಹೆಣ್ಣು ಎನ್ನುವ ಒಂದು ಜೆಂಡರ್ ಅನ್ನು ನಿರ್ಣಯಿಸಿಬಿಡುತ್ತಾರೆ. ಆದರೆ ಇಂಟರ್‌ಸೆಕ್ಸ್ ಆಗಲು ಒಂದು ನಿರ್ದಿಷ್ಟ ಮೂಲಕಾರಣ ಹೊಂದಿದ ಮಕ್ಕಳು, ಹುಟ್ಟಿನ ಸಂದರ್ಭದಲ್ಲಿ ತಮಗೆ ಆರೋಪಿಸಲಾದ ಜೆಂಡರ್‌ಗೆ ಅನುಗುಣವಾಗಿ ಬೆಳೆಯದೇ ಇರಬಹುದು ಎನ್ನುವುದನ್ನು ಪರಿಗಣಿಸದೇ ಮಗುವಿನ ಜೆಂಡರ್ ನಿರ್ಣಯಿಸುತ್ತಾರೆ. ಒಂದು ವೇಳೆ ಆ ಇಂಟರ್‌ಸೆಕ್ಸ್ ಮಕ್ಕಳು ತಮಗೆ ವಹಿಸಿರುವ ಜೆಂಡರ್‌ದೊಂದಿಗೆ ಹೊಂದಾಣಿಕೆಯಾದಲ್ಲಿ ಅವರು ಟ್ರಾನ್ಸ್ಜೆಂಡರ್ ಆಗುವುದಿಲ್ಲ, ಅವರು ಸಿಸ್‌ಜೆಂಡರ್ ಆಗುತ್ತಾರೆ. ಹಾಗೂ ಒಂದು ವೇಳೆ ತಮಗೆ ನೀಡಿರುವ ಜೆಂಡರ್‌ನೊಂದಿಗೆ ಹೊಂದಾಣಿಕೆ ಆಗದಿದ್ದಲ್ಲಿ ಅವರು ಟ್ರಾನ್ಸ್ಜೆಂಡರ್ ಆಗುತ್ತಾರೆ. ಹಾಗಾಗಿ ಇಂಟರ್‌ಸೆಕ್ಸ್ ಮತ್ತು ಟ್ರಾನ್ಸ್ಜೆಂಡರ್ ಎನ್ನುವ ಎರಡೂ ಬೇರೆಯ ಬಗೆಗಳೇ ಆಗಿದ್ದು, ಎರಡೂ ತನ್ನದೇ ಆದ ಆರ್ಥ ಮತ್ತು ಸಾಮಾಜಿಕ ಪಯಣಗಳನ್ನು ಹೊಂದಿರುತ್ತವೆ. ಆದರೆ ಕೆಲವರು ಇಂಟರ್‌ಸೆಕ್ಸ್ ಮತ್ತು ಟ್ರಾನ್ಸ್ಜೆಂಡರ್ ಎರಡೂ ಒಟ್ಟಿಗೇ ಆಗಿರಲೂ ಸಾಧ್ಯ.

ಟ್ರಾನ್ಸ್ಜೆಂಡರ್ ಮಕ್ಕಳ ಅನುಭವಗಳೇನು? ಕೆಲವು ಟ್ರಾನ್ಸ್ಜೆಂಡರ್ ಮಕ್ಕಳು ತಮಗೆ ವಹಿಸಿದ ಜೆಂಡರ್‌ಗಿಂತ ತಾವು ಭಿನ್ನ ಎಂದು 3 ವರ್ಷದ ಚಿಕ್ಕ ವಯಸ್ಸಿನಲ್ಲೇ ಗುರುತಿಸಿಬಿಡುತ್ತಾರೆ. ಇನ್ನಿತರರು ತಾವು ಪ್ರೌಢಾವಸ್ಥೆಗೆ ಬಂದಾಗ ಗುರುತಿಸುತ್ತಾರೆ ಹಾಗೂ ಇನ್ನೂ ಕೆಲವರು ಇನ್ನಷ್ಟು ತಡವಾಗಿಯೂ ಗುರುತಿಸುವುದುಂಟು. ಇಂತಹ ಒಂದು ಪ್ರಸಂಗವನ್ನು ಊಹಿಸಿ, ಒಬ್ಬ ಟ್ರಾನ್ಸ್ಜೆಂಡರ್ ಮಗು, ಆ ಮಗುವನ್ನು ಪೋಷಕರು ಗಂಡು ಎಂದು ನೋಡುತ್ತಿರುವ ಆ ಮಗು ಅಳುತ್ತ ಬಂದು ತನ್ನ ತಂದೆತಾಯಿಗಳಿಗೆ ತನ್ನ ಶಿಶ್ನವನ್ನು ತೆಗೆದುಹಾಕಬಹುದೇ ಎಂದು ಕೇಳುತ್ತದೆ ಅಥವಾ, ಹೆಣ್ಣುಮಗು ಎಂದು ನಿರ್ಧರಿಸಲಾದ ಆ ಮಗು, ತನ್ನ ತಂದೆತಾಯಿಗೆ ನಾಳೆ ನಾನು ನಿದ್ರೆಯಿಂದ ಎದ್ದಾಗ ಒಬ್ಬ ಹುಡುಗನಾಗಿ ಏಳಬಹುದೇ ಎಂದು ಕೇಳುತ್ತದೆ. ಇದರಿಂದ ತಂದೆತಾಯಿಗಳಿಗೆ ತುಂಬಾ ಗೊಂದಲವುಂಟಾಗಬಹುದು ಹಾಗೂ ಆ ಮಗುವಿನ ಬೆಳವಣಿಗೆಯ ಒಂದು ಹಂತ ಎಂತಲೋ ಅಥವಾ ಆ ಮಗುವಿನ ‘ಜೆಂಟರ್ ಐಡೆಂಟಿಟಿ ಡಿಸ್‌ಫೋರಿಯಾ’ ಎಂದು ಕರೆಯಲಾಗುವ ಕ್ಷೋಭೆ ತನ್ನಿಂತಾನೆ ಕಡಿಮೆಯಾಗಬಹುದು ಎಂದು ಭಾವಿಸುತ್ತಾರೆ. ತನ್ನ ಮಾತುಗಳನ್ನು ಕೇಳಿಸಿಕೊಳ್ಳುವುದಕ್ಕೆ ಸರಿಯಾದ ವಾತಾವರಣ ಸಿಗದಾಗ ಆ ಮಕ್ಕಳು ತಮ್ಮ ಭಾವನೆಗಳನ್ನು ಪ್ರಕಟಿಸಿದೇ ತಮ್ಮಲ್ಲೇ ಹುದುಗಿಸಿಡಲು ಪ್ರಯತ್ನಿಸುತ್ತಾರೆ. ಹಾಗೂ ಅದರ ಬಗ್ಗೆ ಮಾತನಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಿಬಿಡುತ್ತಾರೆ. ಡಿಸ್‌ಫೋರಿಯಾ ಹೊಂದಿರುವ ಕೆಲವು ಮಕ್ಕಳು ತಾವು ಗುರುತಿಸಿಕೊಳ್ಳಲಿಚ್ಛಿಸುವ ಜೆಂಡರ್‌ನಂತೆ ತುಂಬಾ ತೀವ್ರವಾಗಿ ವರ್ತಿಸುತ್ತಾರೆ, ಹಾಗಾದಾಗ ಕೆಲವು ಪೋಷಕರು ಆ ಮಗುವಿನ ಜೆಂಡರ್ ಇದೇ ಇರಬಹುದು ಎಂದು ಅದರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಆದರೆ ಇನ್ನೂ ಕೆಲವು ಪೋಷಕರು ಮಗುವಿನೊಂದಿಗೆ ತುಂಬಾ ಅಹಿತವಾಗಿ ಹಾಗೂ ಕೆಲವು ಸಲ ಹಿಂಸಾತ್ಮಕವಾಗಿ ವರ್ತಿಸುತ್ತಾರೆ.

ಟ್ರಾನ್ಸ್ಜೆಂಡರ್ ಮಗುವೊಂದು ವಯಸ್ಕರಾಗುವ ಅನುಭವವನ್ನು ತಿಳಿದುಕೊಳ್ಳಲು ನಾವು ಈ ಡಿಸ್‌ಫೋರಿಯಾ ಅನ್ನು ಇನ್ನೂ ಸರಿಯಾಗಿ ಅರ್ಥಮಾಡಿಕೊಳ್ಳಬೇಕಿದೆ, ವಿಶೇಷವಾಗಿ ಪ್ರೌಢಾವಸ್ಥೆಯಲ್ಲಿ ಪರಿಸ್ಥಿತಿ ಬಿಗಡಾಯಿಸಿದಾಗ. ಡಿಸ್‌ಫೋರಿಯಾ ಅಂದರೆ, ತನಗೆ ನೀಡಿರುವ ಜೆಂಡರ್‌ನೊಂದಿಗಿರುವ ಕ್ಷೋಭೆಯ ಭಾವನೆ ಅಥವಾ ಬೇರ್ಪಡಿಕೆ. ಈ ಡಿಸ್‌ಫೋರಿಯಾ ವಿವಿಧ ಸ್ವರೂಪಗಳನ್ನು ಪಡೆದುಕೊಳ್ಳಬಹುದು ಹಾಗೂ ಟ್ರಾನ್ಸ್ಜೆಂಡರ್ ಆಗಿ ಜೀವನ ಸಾಗಿಸುವ ಒಬ್ಬ ವ್ಯಕ್ತಿಯ ಅನುಭವ ಈ ಡಿಸ್‌ಫೋರಿಯಾದ ಅನುಭವವೇ ಆಗಿರುತ್ತದೆ. ನಮ್ಮ ಸಮಾಜವು ಟ್ರಾನ್ಸ್ಜೆಂಡರ್ ವ್ಯಕ್ತಿಗಳಿಗೆ ಇನ್ನಷ್ಟು ಸಮಸ್ಯೆಗಳನ್ನು ಸೃಷ್ಟಿಸದೇ ಈ ಸಮುದಾಯಕ್ಕೆ ಹೇಗೆ ಸಹಕಾರಿಯಾಗಬಲ್ಲದು ಎನ್ನುವುದನ್ನು ನಾವೆಲ್ಲರೂ ಸೇರಿ ಚಿಂತಿಸಬೇಕಿದೆ.

(ಅನುವಾದ: ಡಾ.ರಾಜಶೇಖರ್ ಅಕ್ಕಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...