Homeಕರ್ನಾಟಕಮಧ್ಯಂತರ ಚುನಾವಣೆಗೆ ಸಿದ್ದತೆ ಆರಂಭಿಸಿದ ಸಿದ್ದರಾಮಯ್ಯ, ವೀಕ್ಷಕರ ನೇಮಕ

ಮಧ್ಯಂತರ ಚುನಾವಣೆಗೆ ಸಿದ್ದತೆ ಆರಂಭಿಸಿದ ಸಿದ್ದರಾಮಯ್ಯ, ವೀಕ್ಷಕರ ನೇಮಕ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ‘ಆಪರೇಷನ್ ಕಮಲದ ಅನೈತಿಕ ಕೂಸು’. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರ್ಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಗೋಕಾಕ, ಕಾಗವಾಡ ಮತ್ತು ಅಥಣಿ ಉಪಚುನಾವಣೆಗೆ ಸಂಬಂಧಿಸಿದಂತೆ ನಮ್ಮ‌ ಪಕ್ಷದಿಂದ ವೀಕ್ಷಕರನ್ನು ನೇಮಿಸಲಾಗಿದೆ. ಅವರು ಈ ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ, ಅವರ ಅಭಿಪ್ರಾಯ ಸಂಗ್ರಹಿಸಿ ನಮಗೆ ವರದಿ ಸಲ್ಲಿಸುತ್ತಾರೆ. ಆ ವರದಿಯ ಆಧಾರದ ಮೇಲೆ ನಾವು ನಮ್ಮ‌ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಮಧ್ಯಂತರ ಚುನಾವಣೆಗೆ ಸಿದ್ದತೆ ನಡೆಸುತ್ತಿದ್ದಾರೆ.

ನಮ್ಮದು ಹೈಕಮಾಂಡ್ ಪಕ್ಷ ಅಲ್ಲ ಅಂದಿದ್ದ ಬಿಜೆಪಿ ನಾಯಕರು ಈಗ ಮಾಡುತ್ತಿರುವುದು ಏನು? ವಾರದಲ್ಲಿ 3 ದಿನ ದೆಹಲಿಗೆ ಓಡಿ ಹೋಗುತ್ತಿದ್ದಾರೆ. ಅಮಿತ್ ಶಾ ಅನುಮತಿಯಿಲ್ಲದೆ ಯಡಿಯೂರಪ್ಪನವರು ಏನೂ ಮಾಡದಂತಹ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾಗಿದೆ. ಇದೇ ಬಿಜೆಪಿಗರ ನಿಜಬಣ್ಣ ಎಂದ ವ್ಯಂಗ್ಯವಾಡಿದ್ದಾರೆ.

ನಾವೀಗ ಅಧಿಕೃತ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧಿ ಕೋಮುವಾದಿ ಬಿಜೆಪಿ ಪಕ್ಷವೇ ಹೊರತು ಜೆಡಿಎಸ್ ಅಲ್ಲ. ನಾವ್ಯಾರು ಜೆಡಿಎಸ್ ಪಕ್ಷದವರ ಮೇಲೆ ಹಗೆ ಸಾಧಿಸುತ್ತಿಲ್ಲ. ಜಾತ್ಯಾತೀತ ಶಕ್ತಿಗೆ ಕೋಮುವಾದಿ ಶಕ್ತಿ ವಿರೋಧಿಯಾಗಿರುತ್ತದೆಯೇ ಹೊರತು, ಇನ್ನೊಂದು ಜಾತ್ಯಾತೀತ ಶಕ್ತಿಯಲ್ಲ ಎಂದು ಹೇಳುವ ಮೂಲಕ ಬಿಜೆಪಿಯನ್ನು ಟಾರ್ಗೆಟ್ ಮಾಡಲು ಸಿದ್ದರಾಮಯ್ಯನವರು ಮುಂದಾಗಿದ್ದಾರೆ.

ಯಡಿಯೂರಪ್ಪ, ಬಡವನ ಹಸಿವಿನ ಬಗ್ಗೆ ನೀವು ಅರಿಯದಷ್ಟು ನಿಮ್ಮ ಹೊಟ್ಟೆ ತುಂಬಿದೆಯೇ? ಅಥವಾ ನಿಮ್ಮ ಪಕ್ಷವು ಗಣ್ಯರ ಹಸಿವನ್ನು ಮಾತ್ರ ಪೂರೈಸುತ್ತದೆಯೇ? ಇಂದಿರಾ ಕ್ಯಾಂಟೀನ್ ಅನ್ನು ಮುಚ್ಚುವ ಯಾವುದೇ ಪ್ರಯತ್ನವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಅನ್ನಭಾಗ್ಯ ಮತ್ತು ಇಂದಿರಾ ಕ್ಯಾಂಟೀನ್ ನಂತಹ ಜನಪರವಾದ ಯೋಜನೆಗಳು ಮತ್ತು ನೀತಿಗಳನ್ನು ಕಡಿಮೆ ಮಾಡಲು ಅಥವಾ ನಾಶಮಾಡಲು ಬಿಜೆಪಿ ಸರ್ಕಾರ ಮುಂದಾಗುತ್ತಿದೆ. ನಮ್ಮ ಬೆದರಿಕೆಯ ನಂತರ ಅನ್ನ ಭಾಗ್ಯ ನಿಲ್ಲಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಇಂದಿರಾ ಕ್ಯಾಂಟೀನ್ ಬಗ್ಗೆಯೂ ಸಹ ನಮ್ಮ ನಿಲುವು ಭಿನ್ನವಾಗಿರುವುದಿಲ್ಲ. ಹಾಗಾಗಿ ಇಂದಿರಾ ಕ್ಯಾಂಟೀನ್ ಮುಚ್ಚಲು ಹೋದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಪ್ರತಿದಿನ 3 ಲಕ್ಷಕ್ಕೂ ಹೆಚ್ಚು ಜನರಿಗೆ ಇಂದಿರಾ ಕ್ಯಾಂಟೀನ್ ಹೊಟ್ಟೆ ತುಂಬಿಸುತ್ತಿದೆ. ಸಾಮಾಜಿಕ ಮತ್ತು ಆರ್ಥಿಕ ಅನ್ಯಾಯಗಳಿಗೆ ಬಲಿಯಾದ ಅನೇಕ ಅಂಚಿನಲ್ಲಿರುವ ವರ್ಗಗಳ ಹಸಿವನ್ನು ನೀಗಿಸುವ ಕಾರ್ಯಕ್ರಮವಿದು. ಕ್ಯಾಂಟೀನ್‌ಗಳನ್ನು ಮುಚ್ಚುವ ಯಾವುದೇ ಪ್ರಯತ್ನವು ನಗರ ಬಡತನ ಮತ್ತು ಬಡ ಕುಟುಂಬಗಳ ಜೀವನೋಪಾಯವನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಬಜೆಟ್ 2.3 ಲಕ್ಷಕ್ಕಿಂತ ಹೆಚ್ಚಿನದಾಗಿದೆ. ಅದರಲ್ಲಿ ಯಡಿಯುರಪ್ಪನವರು ಕೇವಲ 300-400 ಕೋಟಿ ನೀಡುವ ಮೂಲಕ ಇಂದಿರಾ ಕ್ಯಾಂಟೀನ್ ನಡೆಯಲು ಅವಕಾಶ ಕಲ್ಪಿಸುವುದು ಕಷ್ಟವೇ ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯನವರು ನಿರ್ಗತಿಕರಿಗೆ ಆಹಾರಕ್ಕಾಗಿ ಸಬ್ಸಿಡಿಯ ಅರ್ಹತೆ ಇಲ್ಲವೆನ್ನುವುದಾದರೆ, ಮುಂದುವರಿದು ವರ್ಗಗಳಿಗೂ ಸಹ ಸಬ್ಸಿಡಿಯನ್ನು ಕೊಡಬಾರದು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...