Homeಕರ್ನಾಟಕಮಧ್ಯಂತರ ಚುನಾವಣೆಗೆ ಸಿದ್ದತೆ ಆರಂಭಿಸಿದ ಸಿದ್ದರಾಮಯ್ಯ, ವೀಕ್ಷಕರ ನೇಮಕ

ಮಧ್ಯಂತರ ಚುನಾವಣೆಗೆ ಸಿದ್ದತೆ ಆರಂಭಿಸಿದ ಸಿದ್ದರಾಮಯ್ಯ, ವೀಕ್ಷಕರ ನೇಮಕ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ‘ಆಪರೇಷನ್ ಕಮಲದ ಅನೈತಿಕ ಕೂಸು’. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರ್ಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಗೋಕಾಕ, ಕಾಗವಾಡ ಮತ್ತು ಅಥಣಿ ಉಪಚುನಾವಣೆಗೆ ಸಂಬಂಧಿಸಿದಂತೆ ನಮ್ಮ‌ ಪಕ್ಷದಿಂದ ವೀಕ್ಷಕರನ್ನು ನೇಮಿಸಲಾಗಿದೆ. ಅವರು ಈ ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ, ಅವರ ಅಭಿಪ್ರಾಯ ಸಂಗ್ರಹಿಸಿ ನಮಗೆ ವರದಿ ಸಲ್ಲಿಸುತ್ತಾರೆ. ಆ ವರದಿಯ ಆಧಾರದ ಮೇಲೆ ನಾವು ನಮ್ಮ‌ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಮಧ್ಯಂತರ ಚುನಾವಣೆಗೆ ಸಿದ್ದತೆ ನಡೆಸುತ್ತಿದ್ದಾರೆ.

ನಮ್ಮದು ಹೈಕಮಾಂಡ್ ಪಕ್ಷ ಅಲ್ಲ ಅಂದಿದ್ದ ಬಿಜೆಪಿ ನಾಯಕರು ಈಗ ಮಾಡುತ್ತಿರುವುದು ಏನು? ವಾರದಲ್ಲಿ 3 ದಿನ ದೆಹಲಿಗೆ ಓಡಿ ಹೋಗುತ್ತಿದ್ದಾರೆ. ಅಮಿತ್ ಶಾ ಅನುಮತಿಯಿಲ್ಲದೆ ಯಡಿಯೂರಪ್ಪನವರು ಏನೂ ಮಾಡದಂತಹ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾಗಿದೆ. ಇದೇ ಬಿಜೆಪಿಗರ ನಿಜಬಣ್ಣ ಎಂದ ವ್ಯಂಗ್ಯವಾಡಿದ್ದಾರೆ.

ನಾವೀಗ ಅಧಿಕೃತ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧಿ ಕೋಮುವಾದಿ ಬಿಜೆಪಿ ಪಕ್ಷವೇ ಹೊರತು ಜೆಡಿಎಸ್ ಅಲ್ಲ. ನಾವ್ಯಾರು ಜೆಡಿಎಸ್ ಪಕ್ಷದವರ ಮೇಲೆ ಹಗೆ ಸಾಧಿಸುತ್ತಿಲ್ಲ. ಜಾತ್ಯಾತೀತ ಶಕ್ತಿಗೆ ಕೋಮುವಾದಿ ಶಕ್ತಿ ವಿರೋಧಿಯಾಗಿರುತ್ತದೆಯೇ ಹೊರತು, ಇನ್ನೊಂದು ಜಾತ್ಯಾತೀತ ಶಕ್ತಿಯಲ್ಲ ಎಂದು ಹೇಳುವ ಮೂಲಕ ಬಿಜೆಪಿಯನ್ನು ಟಾರ್ಗೆಟ್ ಮಾಡಲು ಸಿದ್ದರಾಮಯ್ಯನವರು ಮುಂದಾಗಿದ್ದಾರೆ.

ಯಡಿಯೂರಪ್ಪ, ಬಡವನ ಹಸಿವಿನ ಬಗ್ಗೆ ನೀವು ಅರಿಯದಷ್ಟು ನಿಮ್ಮ ಹೊಟ್ಟೆ ತುಂಬಿದೆಯೇ? ಅಥವಾ ನಿಮ್ಮ ಪಕ್ಷವು ಗಣ್ಯರ ಹಸಿವನ್ನು ಮಾತ್ರ ಪೂರೈಸುತ್ತದೆಯೇ? ಇಂದಿರಾ ಕ್ಯಾಂಟೀನ್ ಅನ್ನು ಮುಚ್ಚುವ ಯಾವುದೇ ಪ್ರಯತ್ನವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಅನ್ನಭಾಗ್ಯ ಮತ್ತು ಇಂದಿರಾ ಕ್ಯಾಂಟೀನ್ ನಂತಹ ಜನಪರವಾದ ಯೋಜನೆಗಳು ಮತ್ತು ನೀತಿಗಳನ್ನು ಕಡಿಮೆ ಮಾಡಲು ಅಥವಾ ನಾಶಮಾಡಲು ಬಿಜೆಪಿ ಸರ್ಕಾರ ಮುಂದಾಗುತ್ತಿದೆ. ನಮ್ಮ ಬೆದರಿಕೆಯ ನಂತರ ಅನ್ನ ಭಾಗ್ಯ ನಿಲ್ಲಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಇಂದಿರಾ ಕ್ಯಾಂಟೀನ್ ಬಗ್ಗೆಯೂ ಸಹ ನಮ್ಮ ನಿಲುವು ಭಿನ್ನವಾಗಿರುವುದಿಲ್ಲ. ಹಾಗಾಗಿ ಇಂದಿರಾ ಕ್ಯಾಂಟೀನ್ ಮುಚ್ಚಲು ಹೋದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಪ್ರತಿದಿನ 3 ಲಕ್ಷಕ್ಕೂ ಹೆಚ್ಚು ಜನರಿಗೆ ಇಂದಿರಾ ಕ್ಯಾಂಟೀನ್ ಹೊಟ್ಟೆ ತುಂಬಿಸುತ್ತಿದೆ. ಸಾಮಾಜಿಕ ಮತ್ತು ಆರ್ಥಿಕ ಅನ್ಯಾಯಗಳಿಗೆ ಬಲಿಯಾದ ಅನೇಕ ಅಂಚಿನಲ್ಲಿರುವ ವರ್ಗಗಳ ಹಸಿವನ್ನು ನೀಗಿಸುವ ಕಾರ್ಯಕ್ರಮವಿದು. ಕ್ಯಾಂಟೀನ್‌ಗಳನ್ನು ಮುಚ್ಚುವ ಯಾವುದೇ ಪ್ರಯತ್ನವು ನಗರ ಬಡತನ ಮತ್ತು ಬಡ ಕುಟುಂಬಗಳ ಜೀವನೋಪಾಯವನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಬಜೆಟ್ 2.3 ಲಕ್ಷಕ್ಕಿಂತ ಹೆಚ್ಚಿನದಾಗಿದೆ. ಅದರಲ್ಲಿ ಯಡಿಯುರಪ್ಪನವರು ಕೇವಲ 300-400 ಕೋಟಿ ನೀಡುವ ಮೂಲಕ ಇಂದಿರಾ ಕ್ಯಾಂಟೀನ್ ನಡೆಯಲು ಅವಕಾಶ ಕಲ್ಪಿಸುವುದು ಕಷ್ಟವೇ ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯನವರು ನಿರ್ಗತಿಕರಿಗೆ ಆಹಾರಕ್ಕಾಗಿ ಸಬ್ಸಿಡಿಯ ಅರ್ಹತೆ ಇಲ್ಲವೆನ್ನುವುದಾದರೆ, ಮುಂದುವರಿದು ವರ್ಗಗಳಿಗೂ ಸಹ ಸಬ್ಸಿಡಿಯನ್ನು ಕೊಡಬಾರದು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...