Homeಕರ್ನಾಟಕಮಧ್ಯಂತರ ಚುನಾವಣೆಗೆ ಸಿದ್ದತೆ ಆರಂಭಿಸಿದ ಸಿದ್ದರಾಮಯ್ಯ, ವೀಕ್ಷಕರ ನೇಮಕ

ಮಧ್ಯಂತರ ಚುನಾವಣೆಗೆ ಸಿದ್ದತೆ ಆರಂಭಿಸಿದ ಸಿದ್ದರಾಮಯ್ಯ, ವೀಕ್ಷಕರ ನೇಮಕ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ‘ಆಪರೇಷನ್ ಕಮಲದ ಅನೈತಿಕ ಕೂಸು’. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರ್ಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಗೋಕಾಕ, ಕಾಗವಾಡ ಮತ್ತು ಅಥಣಿ ಉಪಚುನಾವಣೆಗೆ ಸಂಬಂಧಿಸಿದಂತೆ ನಮ್ಮ‌ ಪಕ್ಷದಿಂದ ವೀಕ್ಷಕರನ್ನು ನೇಮಿಸಲಾಗಿದೆ. ಅವರು ಈ ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ, ಅವರ ಅಭಿಪ್ರಾಯ ಸಂಗ್ರಹಿಸಿ ನಮಗೆ ವರದಿ ಸಲ್ಲಿಸುತ್ತಾರೆ. ಆ ವರದಿಯ ಆಧಾರದ ಮೇಲೆ ನಾವು ನಮ್ಮ‌ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಮಧ್ಯಂತರ ಚುನಾವಣೆಗೆ ಸಿದ್ದತೆ ನಡೆಸುತ್ತಿದ್ದಾರೆ.

ನಮ್ಮದು ಹೈಕಮಾಂಡ್ ಪಕ್ಷ ಅಲ್ಲ ಅಂದಿದ್ದ ಬಿಜೆಪಿ ನಾಯಕರು ಈಗ ಮಾಡುತ್ತಿರುವುದು ಏನು? ವಾರದಲ್ಲಿ 3 ದಿನ ದೆಹಲಿಗೆ ಓಡಿ ಹೋಗುತ್ತಿದ್ದಾರೆ. ಅಮಿತ್ ಶಾ ಅನುಮತಿಯಿಲ್ಲದೆ ಯಡಿಯೂರಪ್ಪನವರು ಏನೂ ಮಾಡದಂತಹ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾಗಿದೆ. ಇದೇ ಬಿಜೆಪಿಗರ ನಿಜಬಣ್ಣ ಎಂದ ವ್ಯಂಗ್ಯವಾಡಿದ್ದಾರೆ.

ನಾವೀಗ ಅಧಿಕೃತ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧಿ ಕೋಮುವಾದಿ ಬಿಜೆಪಿ ಪಕ್ಷವೇ ಹೊರತು ಜೆಡಿಎಸ್ ಅಲ್ಲ. ನಾವ್ಯಾರು ಜೆಡಿಎಸ್ ಪಕ್ಷದವರ ಮೇಲೆ ಹಗೆ ಸಾಧಿಸುತ್ತಿಲ್ಲ. ಜಾತ್ಯಾತೀತ ಶಕ್ತಿಗೆ ಕೋಮುವಾದಿ ಶಕ್ತಿ ವಿರೋಧಿಯಾಗಿರುತ್ತದೆಯೇ ಹೊರತು, ಇನ್ನೊಂದು ಜಾತ್ಯಾತೀತ ಶಕ್ತಿಯಲ್ಲ ಎಂದು ಹೇಳುವ ಮೂಲಕ ಬಿಜೆಪಿಯನ್ನು ಟಾರ್ಗೆಟ್ ಮಾಡಲು ಸಿದ್ದರಾಮಯ್ಯನವರು ಮುಂದಾಗಿದ್ದಾರೆ.

ಯಡಿಯೂರಪ್ಪ, ಬಡವನ ಹಸಿವಿನ ಬಗ್ಗೆ ನೀವು ಅರಿಯದಷ್ಟು ನಿಮ್ಮ ಹೊಟ್ಟೆ ತುಂಬಿದೆಯೇ? ಅಥವಾ ನಿಮ್ಮ ಪಕ್ಷವು ಗಣ್ಯರ ಹಸಿವನ್ನು ಮಾತ್ರ ಪೂರೈಸುತ್ತದೆಯೇ? ಇಂದಿರಾ ಕ್ಯಾಂಟೀನ್ ಅನ್ನು ಮುಚ್ಚುವ ಯಾವುದೇ ಪ್ರಯತ್ನವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಅನ್ನಭಾಗ್ಯ ಮತ್ತು ಇಂದಿರಾ ಕ್ಯಾಂಟೀನ್ ನಂತಹ ಜನಪರವಾದ ಯೋಜನೆಗಳು ಮತ್ತು ನೀತಿಗಳನ್ನು ಕಡಿಮೆ ಮಾಡಲು ಅಥವಾ ನಾಶಮಾಡಲು ಬಿಜೆಪಿ ಸರ್ಕಾರ ಮುಂದಾಗುತ್ತಿದೆ. ನಮ್ಮ ಬೆದರಿಕೆಯ ನಂತರ ಅನ್ನ ಭಾಗ್ಯ ನಿಲ್ಲಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಇಂದಿರಾ ಕ್ಯಾಂಟೀನ್ ಬಗ್ಗೆಯೂ ಸಹ ನಮ್ಮ ನಿಲುವು ಭಿನ್ನವಾಗಿರುವುದಿಲ್ಲ. ಹಾಗಾಗಿ ಇಂದಿರಾ ಕ್ಯಾಂಟೀನ್ ಮುಚ್ಚಲು ಹೋದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಪ್ರತಿದಿನ 3 ಲಕ್ಷಕ್ಕೂ ಹೆಚ್ಚು ಜನರಿಗೆ ಇಂದಿರಾ ಕ್ಯಾಂಟೀನ್ ಹೊಟ್ಟೆ ತುಂಬಿಸುತ್ತಿದೆ. ಸಾಮಾಜಿಕ ಮತ್ತು ಆರ್ಥಿಕ ಅನ್ಯಾಯಗಳಿಗೆ ಬಲಿಯಾದ ಅನೇಕ ಅಂಚಿನಲ್ಲಿರುವ ವರ್ಗಗಳ ಹಸಿವನ್ನು ನೀಗಿಸುವ ಕಾರ್ಯಕ್ರಮವಿದು. ಕ್ಯಾಂಟೀನ್‌ಗಳನ್ನು ಮುಚ್ಚುವ ಯಾವುದೇ ಪ್ರಯತ್ನವು ನಗರ ಬಡತನ ಮತ್ತು ಬಡ ಕುಟುಂಬಗಳ ಜೀವನೋಪಾಯವನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಬಜೆಟ್ 2.3 ಲಕ್ಷಕ್ಕಿಂತ ಹೆಚ್ಚಿನದಾಗಿದೆ. ಅದರಲ್ಲಿ ಯಡಿಯುರಪ್ಪನವರು ಕೇವಲ 300-400 ಕೋಟಿ ನೀಡುವ ಮೂಲಕ ಇಂದಿರಾ ಕ್ಯಾಂಟೀನ್ ನಡೆಯಲು ಅವಕಾಶ ಕಲ್ಪಿಸುವುದು ಕಷ್ಟವೇ ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯನವರು ನಿರ್ಗತಿಕರಿಗೆ ಆಹಾರಕ್ಕಾಗಿ ಸಬ್ಸಿಡಿಯ ಅರ್ಹತೆ ಇಲ್ಲವೆನ್ನುವುದಾದರೆ, ಮುಂದುವರಿದು ವರ್ಗಗಳಿಗೂ ಸಹ ಸಬ್ಸಿಡಿಯನ್ನು ಕೊಡಬಾರದು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...