Homeಸಾಮಾಜಿಕಇಟ್ಟಿಹರೆಜ್ಜೆ ನಮ್ಮ ಜನ, ಗೆದ್ದೇ ಗೆಲ್ಲುವೆವು ಮುಂದೊಂದು ದಿನ

ಇಟ್ಟಿಹರೆಜ್ಜೆ ನಮ್ಮ ಜನ, ಗೆದ್ದೇ ಗೆಲ್ಲುವೆವು ಮುಂದೊಂದು ದಿನ

- Advertisement -
- Advertisement -

ಕಳೆದ ಒಂದು ದಶಕದಿಂದ ಇಡೀ ರಾಜ್ಯವೇ ಬರಗಾಲದ ಬೇಗೆಯಲ್ಲಿ ನಲುಗುತ್ತಿದೆ. ಇದಕ್ಕೆ ಮರೆಮಲೆನಾಡು ಪ್ರದೇಶವಾಗಿರುವ ಹಾಸನ ಜಿಲ್ಲೆಯೇನೂ ಹೊರತಾಗಿಲ್ಲ. ಹಾಸನವನ್ನೂ ಒಳಗೊಂಡಂತೆ ಜಿಲ್ಲೆಯ 5 ತಾಲ್ಲೂಕುಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೋದ ವರ್ಷ ಬರ ಪೀಡಿತ ರಾಜ್ಯಗಳ ಪಟ್ಟಿಗೆ ಸೇರಿಸಿವೆ. ಕಳೆದೆರಡು ವರ್ಷಗಳಲ್ಲಿ 200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ದಾರುಣತೆಯೂ ಜೊತೆಗೂಡಿದೆ. ಮಳೆ ಬಾರದಿದ್ದಾಗ ನೀರಿನ ಹಾಹಾಕಾರವಿರುವ ನಗರಪ್ರದೇಶಗಳಿಗೆ, ಹಳ್ಳಿಗಳಿಗೆ ಟ್ಯಾಂಕರ್‍ಗಳ ಮೂಲಕ ಒಂದಷ್ಟು ದಿನಗಳ ಕಾಲ ನೀರುಕೊಟ್ಟು ಕೈತೊಳೆದುಕೊಳ್ಳುತ್ತಿದ್ದ ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್‍ಗಳ ಮಧ್ಯೆ ಸದ್ದಿಲ್ಲದೆ ಚಿಗುರೊಡೆದದ್ದು ಹಸಿರುಭೂಮಿ ಪ್ರತಿಷ್ಠಾನ.
ಪರಿಸರದ ಬಗೆಗಿನ ಕಾಳಜಿಯುಳ್ಳ ಪರಿಸರ ಸಂಬಂಧಿ ಚಟುವಟಿಕೆಗಳು, ಬರಹಗಳು, ಹೋರಾಟಗಳನ್ನು ಮಾಡುತ್ತಿದ್ದ ಹಾಸನದ ಸಮಾನ ಮನಸ್ಸುಗಳು 2017ರ ಏಪ್ರಿಲ್‍ನಲ್ಲಿ ಒಂದೆಡೆ ಸೇರಿ, ನೀರಿನ ಬಗೆಯ ಅಧ್ಯಯನದೊಂದಿಗೆ, ಬರದ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವಲ್ಲಿ ಮುಂದಡಿ ಇಟ್ಟವರು. ಅಮೀರ್‍ಖಾನ್ ಮಹಾರಾಷ್ಟ್ರದಲ್ಲಿ ಬರದ ವಿರುದ್ಧ ಪಾನೀ ಫೌಂಡೇಶನ್ ಮೂಲಕ ನಡೆಸುತ್ತಿರುವ ಕೆಲಸಗಳ ಸಾಕ್ಷ್ಯಚಿತ್ರ ‘ದಿ ಬ್ಯಾಟಲ್ ಎಗೆನೆಸ್ಟ್ ಡ್ರಾಟ್’ ವೀಕ್ಷಿಸಿ, ನಂತರ ನಡೆಸಿದ ಚರ್ಚೆ ಅಲ್ಲಿ ನೆರೆದಿದ್ದ ಸಾಹಿತಿಗಳು, ಹೋರಾಟಗಾರರು, ಅಧಿಕಾರಿಗಳು, ಪತ್ರಕರ್ತರು, ಪರಿಸರಪ್ರೇಮಿಗಳು, ಕಲಾವಿದರಲ್ಲಿ ಕ್ರಿಯಾಶೀಲತೆಯಿಂದ ನೀರಿನ ಕೆಲಸದಲ್ಲಿ ತೊಡಗಲು ‘ಹಸಿರುಭೂಮಿ ಪ್ರತಿಸ್ಠಾನ’ವನ್ನು ಸ್ಥಾಪಿಸುವಂತೆ ಮಾಡಿತು.
ಪರಿಸರ ಮತ್ತು ಅಂತರ್ಜಲದ ಬಗೆಗೆ ನಾಡಿನ ಖ್ಯಾತ ಜಲ ಮತ್ತು ಅಂತರ್ಜಲ ತಜ್ಞರ ಮೂಲಕ ತರಬೇತಿ ಪಡೆದ ಹಸಿರುಭೂಮಿ ಪ್ರತಿಸ್ಠಾನದ ತಂಡ, ಆನಂತರ ಹೂಳು ತುಂಬಿ ಬತ್ತಿಹೋದ ಕೆರೆಗಳಲ್ಲಿ ಅಂತರ್ಜಲ ಹುಡುಕಿ ಕೆರೆ-ಕಲ್ಯಾಣಿಗಳಲ್ಲಿ ಹೂಳೆತ್ತುವ ಕಾರ್ಯದಲ್ಲಿ ತೊಡಗಿಕೊಂಡಿದ್ದು ಈಗ ಇತಿಹಾಸ. 2017ರ ಮೇ 1ರ ಕಾರ್ಮಿಕ ದಿನದಂದು ಹಾಸನ ತಾಲ್ಲೂಕಿನ ದೊಡ್ಡಕೊಂಡಗುಳ ಗ್ರಾಮದಲ್ಲಿ ಗ್ರಾಮಸ್ಥರನ್ನು ಸೇರಿಸಿಕೊಂಡು ಹೋಯ್ಸಳರ ಕಾಲದ 2 ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸುವ ಕೆಲಸವನ್ನು ಆರಂಭಿಸಿತು. ಹೂಳು ತುಂಬಿದ್ದ ಕಲ್ಯಾಣಿಗಳ ತಳಮಟ್ಟಕ್ಕೆ ಹೂಳು ತೆಗೆಯುತ್ತಿದ್ದಂತೆ ಜಲಚಿಲುಮೆ ಪಸರಿಸಿತು. ಆನಂತರ ಅದೇ ಊರಿನ ಕೆರೆಯನ್ನೂ ದಾನಿಗಳ ನೆರವಿನಿಂದ ಸುಮಾರು 6 ಲಕ್ಷ ಹಣವನ್ನು ವಿನಿಯೋಗಿಸಿ 20 ದಿನಗಳಲ್ಲಿ ಯಮತ್ರಗಳ ನೆರವಿನಿಂದ ಪುನಶ್ಚೇತನಗೊಳಿಸಿ ದಾಖಲೆ ಬರೆಯಿತು. ಆರಂಭದ ಮೊದಲನೆಯ ಪ್ರಯೋಗ ಯಶಸ್ಸು ಕಂಡ ಹುಮ್ಮಸ್ಸಿನಲ್ಲಿ ಮುನ್ನಡೆದ ತಂಡ ಹಾಸನ, ಚನ್ನರಾಯಪಟ್ಟಣ, ಅರಕಲಗೂಡು, ಬೇಲೂರು ತಾಲ್ಲೂಕುಗಳ ಹಲವಾರು ಹಳ್ಳಿಗಳಲ್ಲಿ ಸ್ಥಳೀಯರ ನೆರವಿನೊಂದಿಗೆ ತಂಡ ಕಟ್ಟಿ, ಜಲದ ಜಾಡನ್ನು ಹಿಡಿದು 35ಕ್ಕೂ ಹೆಚ್ಚಿನ ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸಿತು. ಹಾಗೂ ದಾನಿಗಳು, ಖಾಸಗಿ ಸಂಸ್ಥೆಗಳ ಸಾಮಾಜಿಕ ನಿಧಿಯ ನೆರವಿನೊಂದಿಗೆ 5ಕೆರೆಗಳನ್ನು 10ಅಡಿಗಳಷ್ಟು ಆಳಕ್ಕೆ ಹೂಳು ತೆಗೆದು ಪುನಶ್ಚೇತನಗೊಳಿಸುವಲ್ಲಿ ಹಸಿರುಭೂಮಿ ಪ್ರತಿಸ್ಠಾನ ಯಶಸ್ಸು ಕಂಡಿದೆ.
ಮೊದಲ ಯಶಸ್ಸು ಕಂಡ ದೊಡ್ಡಕೊಂಡಗುಳ ಕೆರೆಗೆ ನೀರು ಭರ್ತಿಯಾಗಿ ಸುತ್ತಮುತ್ತಲಿನ ಜಮೀನಿಗೆ, ಜಲಚರಗಳಿಗೆ, ಪ್ರಾಣಿ ಪಕ್ಷಿಗಳಿಗೆ, ಜನಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆಯನ್ನು ನೀಗಿಸಿದೆ. ಅಲ್ಲದೆ ತೆರೆದ ಬಾವಿಗಳು, ಕೊಳವೆಬಾವಿಗಳು ಅಂತರ್ಜಲ ವೃದ್ಧಿಸಿದ ಕಾರಣ ಭರ್ತಿಯಾಗಿವೆ. ಪ್ರತಿಷ್ಠಾನವು ಹಲವು ಗ್ರಾವiಗಳಲ್ಲಿ ಗ್ರಾಮ ಸ್ವರಾಜ್ ಸಮಿತಿಯನ್ನು ರಚನೆ ಮಾಡಿ ಇಂತಹ ಕೆಲಸಗಳಲ್ಲಿ ತೊಡಗಿಸಲು ಶ್ರಮಿಸುತ್ತಿದೆ. ದೊಡ್ಡಕೊಂಡಗುಳ ಗ್ರಾಮಸ್ವರಾಜ್ ಸಮಿತಿಯು ಹೋದ ವರ್ಷ ಕೆರೆಗೆ 15000 ಮೀನಿನ ಮರಿಗಳನ್ನು ಬಿಟ್ಟಿದ್ದು, ಕೆರೆಯನ್ನು ಸ್ವಚ್ಛವಾಗಿಸಿ, ಮೀನುಗಳ ಪೋಷಣೆ ಮಾಡಿದ್ದರ ಫಲವಾಗಿ ಮೀನುಗಳು ಅಭಿವೃದ್ಧಿಗೊಂಡು ಕಳೆದ ತಿಂಗಳು ಈ ಕೆರೆಯಲ್ಲಿ ಮೀನಗಳನ್ನು ಹಿಡಿದು ಕನಿಷ್ಠ ಬೆಲೆಗೆ ಮಾರಾಟ ಮಾಡಿದ್ದು ಒಂದು ಸಂತೋಷದ ವಿಚಾರ. ಈಗ 350 ಕೆ.ಜಿ ಇಂದ 35000 ರೂ ಆದಾಯ ತೊರೆತಿದೆ. ಮುಂದೆ ಒಂದೂವರೆ ಲಕ್ಷ ಆದಾಯದ ನಿರೀಕ್ಷೆಯಿದೆ. ಈ ಹಣವನ್ನು ಸಮಿತಿಯವರು ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಬಳೆಸಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ. ಸಮಿತಿಯು ಪ್ರತಿಷ್ಠಾನದೊಂದಿಗೆ ಕೈ ಜೋಡಿಸಿ ಶಾಲಾವರಣ, ಕೆರೆಯ ಸುತ್ತಮುತ್ತ, ಗುಂಡುತೋಪಿನಲ್ಲಿ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದು ಇದೂ ಕೂಡ ಗ್ರಾಮಕ್ಕೆ ಆದಾಯದ ಮೂಲವಾಗಿದ್ದು ಗ್ರಾಮವು ಸ್ವಾವಲಂಬಿ ಹಾಗೂ ಮಾದರಿ ಗ್ರಾವiವಾಗಿ ಪರಿವರ್ತನೆಗೊಳ್ಳಲು ಹಸಿರುಭೂಮಿ ಪ್ರತಿಷ್ಠಾನ ಅಹರ್ನಿಶಿ ಶ್ರಮಿಸುತ್ತಿದೆ.
ಹಾಸನದ ಉಪವಿಭಾಗಾಧಿಕಾರಿಗಳಾದ ಡಾ. ಎಚ್.ಎಲ್.ನಾಗರಾಜ್, ಚಿಂತಕರಾದ ರೂಪ ಹಾಸನ, ಪತ್ರಕರ್ತರಾದ ಆರ್.ಪಿ.ವೆಂಕಟೇಶಮೂರ್ತಿ, ಪರಿಸರಪ್ರಿಯ ಚ.ನಾ.ಅಶೋಕ್, ಇಂಜಿನಿಯರ್ ಸುಬ್ಬಸ್ವಾಮಿ, ವೆಂಕಟೇಗೌಡ, ದಾನಿಗಳಾದ ಡಾ.ಸಾವಿತ್ರಿ, ನಿವೃತ್ತ ಉಪನ್ಯಾಸಕರಾದ ಶಿವಶಂಕರಪ್ಪ, ಅಪ್ಪಾಜಿಗೌಡ, ಹಿರಿಯರಾದ ಪುಟ್ಟಯ್ಯ, ಸದ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜೀವೇಗೌಡ, ಅಹರ್ನಿಶಿ ಪ್ರತಿಷ್ಠಾನದ ಕೆಲಸದಲ್ಲಿ ತೊಡಗಿರುವ ಡಾ.ಮಂಜುನಾಥ್, ಮಂಜುನಾಥ್ ಮೋರೆ, ಅಹಮದ್, ಸೌಭಾಗ್ಯ, ಬಿ.ಎಸ್.ದೇಸಾಯಿ, ತಿಮ್ಮೇಶ್‍ಪ್ರಭು, ಚಿನ್ನೇನಹಳ್ಳಿಸ್ವಾಮಿ, ಎಸ್.ಎಸ್.ಪಾಷಾ, ಪ್ರಸನ್ನ….. ಹೀಗೆ ಹಲವು ಪ್ರಜ್ಞಾವಂತ ಸದಸ್ಯರು ತಮ್ಮ ಉಳಿದೆಲ್ಲ ಕಾರ್ಯಗಳು, ಭಾಷಣಗಳನ್ನು ಬಿಟ್ಟು ಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದರ ಫಲವಾಗಿ ಇಂದು ಹಾಸನ ಜಿಲ್ಲೆಯ ಕೆಲವು ಹಳ್ಳಿಗಳು ಬರದ ಮಧ್ಯೆಯೂ ಜೀವಂತವಾಗಿ ಉಸಿರಾಡಲು ಸಾಧ್ಯವಾಗಿದೆ. ಇಂತಹ ಸ್ಫೂರ್ತಿ ನಾಡಿನ ಉದ್ದಕ್ಕೂ ಹಬ್ಬಲಿ, ರೈತರ ಬದುಕು ಹಸನಾಗಲಿ ಎಂಬುದು ನಮ್ಮ ಹಾರೈಕೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...