Homeಸಾಮಾಜಿಕಇಟ್ಟಿಹರೆಜ್ಜೆ ನಮ್ಮ ಜನ, ಗೆದ್ದೇ ಗೆಲ್ಲುವೆವು ಮುಂದೊಂದು ದಿನ

ಇಟ್ಟಿಹರೆಜ್ಜೆ ನಮ್ಮ ಜನ, ಗೆದ್ದೇ ಗೆಲ್ಲುವೆವು ಮುಂದೊಂದು ದಿನ

- Advertisement -
- Advertisement -

ಕಳೆದ ಒಂದು ದಶಕದಿಂದ ಇಡೀ ರಾಜ್ಯವೇ ಬರಗಾಲದ ಬೇಗೆಯಲ್ಲಿ ನಲುಗುತ್ತಿದೆ. ಇದಕ್ಕೆ ಮರೆಮಲೆನಾಡು ಪ್ರದೇಶವಾಗಿರುವ ಹಾಸನ ಜಿಲ್ಲೆಯೇನೂ ಹೊರತಾಗಿಲ್ಲ. ಹಾಸನವನ್ನೂ ಒಳಗೊಂಡಂತೆ ಜಿಲ್ಲೆಯ 5 ತಾಲ್ಲೂಕುಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೋದ ವರ್ಷ ಬರ ಪೀಡಿತ ರಾಜ್ಯಗಳ ಪಟ್ಟಿಗೆ ಸೇರಿಸಿವೆ. ಕಳೆದೆರಡು ವರ್ಷಗಳಲ್ಲಿ 200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ದಾರುಣತೆಯೂ ಜೊತೆಗೂಡಿದೆ. ಮಳೆ ಬಾರದಿದ್ದಾಗ ನೀರಿನ ಹಾಹಾಕಾರವಿರುವ ನಗರಪ್ರದೇಶಗಳಿಗೆ, ಹಳ್ಳಿಗಳಿಗೆ ಟ್ಯಾಂಕರ್‍ಗಳ ಮೂಲಕ ಒಂದಷ್ಟು ದಿನಗಳ ಕಾಲ ನೀರುಕೊಟ್ಟು ಕೈತೊಳೆದುಕೊಳ್ಳುತ್ತಿದ್ದ ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್‍ಗಳ ಮಧ್ಯೆ ಸದ್ದಿಲ್ಲದೆ ಚಿಗುರೊಡೆದದ್ದು ಹಸಿರುಭೂಮಿ ಪ್ರತಿಷ್ಠಾನ.
ಪರಿಸರದ ಬಗೆಗಿನ ಕಾಳಜಿಯುಳ್ಳ ಪರಿಸರ ಸಂಬಂಧಿ ಚಟುವಟಿಕೆಗಳು, ಬರಹಗಳು, ಹೋರಾಟಗಳನ್ನು ಮಾಡುತ್ತಿದ್ದ ಹಾಸನದ ಸಮಾನ ಮನಸ್ಸುಗಳು 2017ರ ಏಪ್ರಿಲ್‍ನಲ್ಲಿ ಒಂದೆಡೆ ಸೇರಿ, ನೀರಿನ ಬಗೆಯ ಅಧ್ಯಯನದೊಂದಿಗೆ, ಬರದ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವಲ್ಲಿ ಮುಂದಡಿ ಇಟ್ಟವರು. ಅಮೀರ್‍ಖಾನ್ ಮಹಾರಾಷ್ಟ್ರದಲ್ಲಿ ಬರದ ವಿರುದ್ಧ ಪಾನೀ ಫೌಂಡೇಶನ್ ಮೂಲಕ ನಡೆಸುತ್ತಿರುವ ಕೆಲಸಗಳ ಸಾಕ್ಷ್ಯಚಿತ್ರ ‘ದಿ ಬ್ಯಾಟಲ್ ಎಗೆನೆಸ್ಟ್ ಡ್ರಾಟ್’ ವೀಕ್ಷಿಸಿ, ನಂತರ ನಡೆಸಿದ ಚರ್ಚೆ ಅಲ್ಲಿ ನೆರೆದಿದ್ದ ಸಾಹಿತಿಗಳು, ಹೋರಾಟಗಾರರು, ಅಧಿಕಾರಿಗಳು, ಪತ್ರಕರ್ತರು, ಪರಿಸರಪ್ರೇಮಿಗಳು, ಕಲಾವಿದರಲ್ಲಿ ಕ್ರಿಯಾಶೀಲತೆಯಿಂದ ನೀರಿನ ಕೆಲಸದಲ್ಲಿ ತೊಡಗಲು ‘ಹಸಿರುಭೂಮಿ ಪ್ರತಿಸ್ಠಾನ’ವನ್ನು ಸ್ಥಾಪಿಸುವಂತೆ ಮಾಡಿತು.
ಪರಿಸರ ಮತ್ತು ಅಂತರ್ಜಲದ ಬಗೆಗೆ ನಾಡಿನ ಖ್ಯಾತ ಜಲ ಮತ್ತು ಅಂತರ್ಜಲ ತಜ್ಞರ ಮೂಲಕ ತರಬೇತಿ ಪಡೆದ ಹಸಿರುಭೂಮಿ ಪ್ರತಿಸ್ಠಾನದ ತಂಡ, ಆನಂತರ ಹೂಳು ತುಂಬಿ ಬತ್ತಿಹೋದ ಕೆರೆಗಳಲ್ಲಿ ಅಂತರ್ಜಲ ಹುಡುಕಿ ಕೆರೆ-ಕಲ್ಯಾಣಿಗಳಲ್ಲಿ ಹೂಳೆತ್ತುವ ಕಾರ್ಯದಲ್ಲಿ ತೊಡಗಿಕೊಂಡಿದ್ದು ಈಗ ಇತಿಹಾಸ. 2017ರ ಮೇ 1ರ ಕಾರ್ಮಿಕ ದಿನದಂದು ಹಾಸನ ತಾಲ್ಲೂಕಿನ ದೊಡ್ಡಕೊಂಡಗುಳ ಗ್ರಾಮದಲ್ಲಿ ಗ್ರಾಮಸ್ಥರನ್ನು ಸೇರಿಸಿಕೊಂಡು ಹೋಯ್ಸಳರ ಕಾಲದ 2 ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸುವ ಕೆಲಸವನ್ನು ಆರಂಭಿಸಿತು. ಹೂಳು ತುಂಬಿದ್ದ ಕಲ್ಯಾಣಿಗಳ ತಳಮಟ್ಟಕ್ಕೆ ಹೂಳು ತೆಗೆಯುತ್ತಿದ್ದಂತೆ ಜಲಚಿಲುಮೆ ಪಸರಿಸಿತು. ಆನಂತರ ಅದೇ ಊರಿನ ಕೆರೆಯನ್ನೂ ದಾನಿಗಳ ನೆರವಿನಿಂದ ಸುಮಾರು 6 ಲಕ್ಷ ಹಣವನ್ನು ವಿನಿಯೋಗಿಸಿ 20 ದಿನಗಳಲ್ಲಿ ಯಮತ್ರಗಳ ನೆರವಿನಿಂದ ಪುನಶ್ಚೇತನಗೊಳಿಸಿ ದಾಖಲೆ ಬರೆಯಿತು. ಆರಂಭದ ಮೊದಲನೆಯ ಪ್ರಯೋಗ ಯಶಸ್ಸು ಕಂಡ ಹುಮ್ಮಸ್ಸಿನಲ್ಲಿ ಮುನ್ನಡೆದ ತಂಡ ಹಾಸನ, ಚನ್ನರಾಯಪಟ್ಟಣ, ಅರಕಲಗೂಡು, ಬೇಲೂರು ತಾಲ್ಲೂಕುಗಳ ಹಲವಾರು ಹಳ್ಳಿಗಳಲ್ಲಿ ಸ್ಥಳೀಯರ ನೆರವಿನೊಂದಿಗೆ ತಂಡ ಕಟ್ಟಿ, ಜಲದ ಜಾಡನ್ನು ಹಿಡಿದು 35ಕ್ಕೂ ಹೆಚ್ಚಿನ ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸಿತು. ಹಾಗೂ ದಾನಿಗಳು, ಖಾಸಗಿ ಸಂಸ್ಥೆಗಳ ಸಾಮಾಜಿಕ ನಿಧಿಯ ನೆರವಿನೊಂದಿಗೆ 5ಕೆರೆಗಳನ್ನು 10ಅಡಿಗಳಷ್ಟು ಆಳಕ್ಕೆ ಹೂಳು ತೆಗೆದು ಪುನಶ್ಚೇತನಗೊಳಿಸುವಲ್ಲಿ ಹಸಿರುಭೂಮಿ ಪ್ರತಿಸ್ಠಾನ ಯಶಸ್ಸು ಕಂಡಿದೆ.
ಮೊದಲ ಯಶಸ್ಸು ಕಂಡ ದೊಡ್ಡಕೊಂಡಗುಳ ಕೆರೆಗೆ ನೀರು ಭರ್ತಿಯಾಗಿ ಸುತ್ತಮುತ್ತಲಿನ ಜಮೀನಿಗೆ, ಜಲಚರಗಳಿಗೆ, ಪ್ರಾಣಿ ಪಕ್ಷಿಗಳಿಗೆ, ಜನಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆಯನ್ನು ನೀಗಿಸಿದೆ. ಅಲ್ಲದೆ ತೆರೆದ ಬಾವಿಗಳು, ಕೊಳವೆಬಾವಿಗಳು ಅಂತರ್ಜಲ ವೃದ್ಧಿಸಿದ ಕಾರಣ ಭರ್ತಿಯಾಗಿವೆ. ಪ್ರತಿಷ್ಠಾನವು ಹಲವು ಗ್ರಾವiಗಳಲ್ಲಿ ಗ್ರಾಮ ಸ್ವರಾಜ್ ಸಮಿತಿಯನ್ನು ರಚನೆ ಮಾಡಿ ಇಂತಹ ಕೆಲಸಗಳಲ್ಲಿ ತೊಡಗಿಸಲು ಶ್ರಮಿಸುತ್ತಿದೆ. ದೊಡ್ಡಕೊಂಡಗುಳ ಗ್ರಾಮಸ್ವರಾಜ್ ಸಮಿತಿಯು ಹೋದ ವರ್ಷ ಕೆರೆಗೆ 15000 ಮೀನಿನ ಮರಿಗಳನ್ನು ಬಿಟ್ಟಿದ್ದು, ಕೆರೆಯನ್ನು ಸ್ವಚ್ಛವಾಗಿಸಿ, ಮೀನುಗಳ ಪೋಷಣೆ ಮಾಡಿದ್ದರ ಫಲವಾಗಿ ಮೀನುಗಳು ಅಭಿವೃದ್ಧಿಗೊಂಡು ಕಳೆದ ತಿಂಗಳು ಈ ಕೆರೆಯಲ್ಲಿ ಮೀನಗಳನ್ನು ಹಿಡಿದು ಕನಿಷ್ಠ ಬೆಲೆಗೆ ಮಾರಾಟ ಮಾಡಿದ್ದು ಒಂದು ಸಂತೋಷದ ವಿಚಾರ. ಈಗ 350 ಕೆ.ಜಿ ಇಂದ 35000 ರೂ ಆದಾಯ ತೊರೆತಿದೆ. ಮುಂದೆ ಒಂದೂವರೆ ಲಕ್ಷ ಆದಾಯದ ನಿರೀಕ್ಷೆಯಿದೆ. ಈ ಹಣವನ್ನು ಸಮಿತಿಯವರು ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಬಳೆಸಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ. ಸಮಿತಿಯು ಪ್ರತಿಷ್ಠಾನದೊಂದಿಗೆ ಕೈ ಜೋಡಿಸಿ ಶಾಲಾವರಣ, ಕೆರೆಯ ಸುತ್ತಮುತ್ತ, ಗುಂಡುತೋಪಿನಲ್ಲಿ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದು ಇದೂ ಕೂಡ ಗ್ರಾಮಕ್ಕೆ ಆದಾಯದ ಮೂಲವಾಗಿದ್ದು ಗ್ರಾಮವು ಸ್ವಾವಲಂಬಿ ಹಾಗೂ ಮಾದರಿ ಗ್ರಾವiವಾಗಿ ಪರಿವರ್ತನೆಗೊಳ್ಳಲು ಹಸಿರುಭೂಮಿ ಪ್ರತಿಷ್ಠಾನ ಅಹರ್ನಿಶಿ ಶ್ರಮಿಸುತ್ತಿದೆ.
ಹಾಸನದ ಉಪವಿಭಾಗಾಧಿಕಾರಿಗಳಾದ ಡಾ. ಎಚ್.ಎಲ್.ನಾಗರಾಜ್, ಚಿಂತಕರಾದ ರೂಪ ಹಾಸನ, ಪತ್ರಕರ್ತರಾದ ಆರ್.ಪಿ.ವೆಂಕಟೇಶಮೂರ್ತಿ, ಪರಿಸರಪ್ರಿಯ ಚ.ನಾ.ಅಶೋಕ್, ಇಂಜಿನಿಯರ್ ಸುಬ್ಬಸ್ವಾಮಿ, ವೆಂಕಟೇಗೌಡ, ದಾನಿಗಳಾದ ಡಾ.ಸಾವಿತ್ರಿ, ನಿವೃತ್ತ ಉಪನ್ಯಾಸಕರಾದ ಶಿವಶಂಕರಪ್ಪ, ಅಪ್ಪಾಜಿಗೌಡ, ಹಿರಿಯರಾದ ಪುಟ್ಟಯ್ಯ, ಸದ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜೀವೇಗೌಡ, ಅಹರ್ನಿಶಿ ಪ್ರತಿಷ್ಠಾನದ ಕೆಲಸದಲ್ಲಿ ತೊಡಗಿರುವ ಡಾ.ಮಂಜುನಾಥ್, ಮಂಜುನಾಥ್ ಮೋರೆ, ಅಹಮದ್, ಸೌಭಾಗ್ಯ, ಬಿ.ಎಸ್.ದೇಸಾಯಿ, ತಿಮ್ಮೇಶ್‍ಪ್ರಭು, ಚಿನ್ನೇನಹಳ್ಳಿಸ್ವಾಮಿ, ಎಸ್.ಎಸ್.ಪಾಷಾ, ಪ್ರಸನ್ನ….. ಹೀಗೆ ಹಲವು ಪ್ರಜ್ಞಾವಂತ ಸದಸ್ಯರು ತಮ್ಮ ಉಳಿದೆಲ್ಲ ಕಾರ್ಯಗಳು, ಭಾಷಣಗಳನ್ನು ಬಿಟ್ಟು ಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದರ ಫಲವಾಗಿ ಇಂದು ಹಾಸನ ಜಿಲ್ಲೆಯ ಕೆಲವು ಹಳ್ಳಿಗಳು ಬರದ ಮಧ್ಯೆಯೂ ಜೀವಂತವಾಗಿ ಉಸಿರಾಡಲು ಸಾಧ್ಯವಾಗಿದೆ. ಇಂತಹ ಸ್ಫೂರ್ತಿ ನಾಡಿನ ಉದ್ದಕ್ಕೂ ಹಬ್ಬಲಿ, ರೈತರ ಬದುಕು ಹಸನಾಗಲಿ ಎಂಬುದು ನಮ್ಮ ಹಾರೈಕೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...