Homeರಾಜಕೀಯಇಟ್ಸ್ me....ರಜನಿಕಾಂತ್! ಸೂಪರ್ ಸ್ಟಾರ್ ಹೊಣೆಗೇಡಿಯಾದಾಗ....

ಇಟ್ಸ್ me….ರಜನಿಕಾಂತ್! ಸೂಪರ್ ಸ್ಟಾರ್ ಹೊಣೆಗೇಡಿಯಾದಾಗ….

- Advertisement -
- Advertisement -

ದೊಡ್ಡಿಪಾಳ್ಯ ನರಸಿಂಹಮೂರ್ತಿ |

ಸೂಪರ್ ಸ್ಟಾರ್ ರಜನಿಕಾಂತ್ ಬಗ್ಗೆ ತಮಿಳರಿಗೆ ಎಂಥಾ ಅಭಿಮಾನ, ಭಕ್ತಿಯಿದೆ ಎಂಬುದು ತಿಳಿದ ಸಂಗತಿ. ಇಂಥಾ ತಮಿಳುನಾಡಿನಲ್ಲಿ ಈಗ ರಜನಿಕಾಂತ್ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇದ್ದಕ್ಕಿದ್ದಂತೆ ರಜನಿ ಬಗ್ಗೆ ತಮಿಳರು ಆಕ್ರೋಶ ವ್ಯಕ್ತಪಡಿಸಿದ್ದೇಕೆಂದು ನೋಡಿದರೆ ಅದಕ್ಕೆ ಸ್ವತಃ ರಜನಿಯವರ ಜನವಿರೋಧಿ ರಾಜಕೀಯ ಧೋರಣೆಯೇ ಕಾರಣ ಎಂಬುದು ಬೆಳಕಿಗೆ ಬಂದಿದೆ. ನಡೆದದ್ದಿಷ್ಟು. ಮೊನ್ನೆ ತುತ್ತುಕುಡಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಜನರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿ 13 ಜನರನ್ನು ಕೊಂದ ಘಟನೆಯ ಬಗ್ಗೆ ಇಡೀ ತಮಿಳುನಾಡು ಕುದಿಯುತ್ತಿದೆ. ಹೀಗಿರುವಾಗ ತೂತ್ತುಕುಡಿಗೆ ಭೇಟಿ ಕೊಟ್ಟ ಸೂಪರ್‍ಸ್ಟಾರ್ ಮಾಧ್ಯಮದವರನ್ನುದ್ದೇಶಿಸಿ ಮಾತಾಡಿ “ಈ ಘಟನೆಗೆ ಸಮಾಜಘಾತುಕ ಶಕ್ತಿಗಳೇ ಕಾರಣ. ಅವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರಿಂದಲೇ ಫೈರಿಂಗ್ ನಡೆಸಬೇಕಾಯ್ತು…” ಎಂದು ಅಪ್ಪಟ ಪೊಲೀಸ್ ಏಜೆಂಟರಂತೆ ಮಾತಾಡಿದ್ದಾರೆ. ಈ ಭೀಕರ ಮಾರಣಹೋಮವನ್ನು ಕಣ್ಣಾರೆ ಕಂಡಿರುವ ಅಭಿಮಾನಿಗಳಿಗೆ ರಜನಿ ಹೇಳಿಕೆಯಿಂದ ಶಾಕ್ ಆಗಿರುವುದಂತೂ ನಿಜ. ಇಡೀ ತಮಿಳುನಾಡಿನಲ್ಲಿ ರಜನಿಯ ಈ ನಿಲುವಿಗೆ ವ್ಯಾಪಕ ಖಂಡನೆ ವ್ಯಕ್ರವಾಗಿದೆ. ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಹಾಗೂ ನಾಗರಿಕರು ರಜನಿಯವರ ಹೇಳಿಕೆಯನ್ನು ಖಂಡಿಸುತ್ತಿದ್ದಾರೆ. ‘ಫೈರಿಂಗ್‍ನಲ್ಲಿ ಜೀವತೆತ್ತ 11 ವರ್ಷದ ಬಾಲಕಿ ಸಮಾಜಘಾತುಕ ಶಕ್ತಿಯೇ? ರಜನಿ ಯಾರ ಪರವಾಗಿ ಮಾತಾಡುತ್ತಿದ್ದಾರೆ? ಯಾರೋ ಹೇಳಿಕೊಟ್ಟ ಮಾತುಗಳನ್ನು ಹೇಳುತ್ತಿದ್ದಾರೆ’ ಎಂದು ಜನರು ತಿರುಗೇಟು ನೀಡಿದ್ದಾರೆ.

‘ಸ್ಟೆರ್‍ಲೈಟ್ ಕಂಪನಿಯ ಮಾಲಿನ್ಯದಿಂದ ತೂತ್ತುಕುಡಿಯ ಜನರ ಜೀವನವೇ ದುಸ್ತರವಾಗಿತ್ತಲ್ಲಾ, ಅದಕ್ಕಾಗಿ ಜನರು ಹೋರಾಟ ಮಾಡಿದ್ದನ್ನು ತಪ್ಪು ಎನ್ನುತ್ತೀರಾ?’ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸ್ಟಾರ್ “ಏನ್ ಹೋರಾಟ? ಎಲ್ಲದಕ್ಕೂ ಹೋರಾಟ ಹೋರಾಟ ಅಂತ ಹೋಗ್ತಾ ಇದ್ದರೆ ತಮಿಳುನಾಡು ಸುಡುಗಾಡು ಆಗೋಗುತ್ತೆ” ಎಂದು ಪ್ರಶ್ನೆ ಕೇಳಿದವರ ಮೇಲೆಯೇ ಜೋರು ಮಾಡಿದ್ದಾರೆ. ಮತ್ತೂ ಮುಂದುವರೆದು “ಹೀಗಾದರೆ ತಮಿಳುನಾಡಿಗೆ ವಿದೇಶಿ ಬಂಡವಾಳ ಹೂಡಲು ಯಾರೂ ಬರೋದಿಲ್ಲ” ಎಂದು ತಮ್ಮ ಆರ್ಥಿಕ ನೀತಿಯನ್ನೂ ಹೊರಗೆಡವಿದ್ದಾರೆ.

ವಿಪರ್ಯಾಸ ನೋಡಿ ಹೇಗಿದೆ. ಇನ್ನೇನು ರಿಲೀಸ್ ಆಗಬೇಕಿರುವ ‘ಕಾಲಾ’ ಸಿನಿಮಾದಲ್ಲಿ ಬಡಜನರ ಮೇಲೆ ನಡೆದ ದೌರ್ಜನ್ಯಗಳ ವಿರುದ್ಧ ಕೆಂಡಕಾರುವ ಹೀರೋ ರಜನಿಕಾಂತ್ ‘ಎಲ್ಲ ಜನರನ್ನು ಕರೆತನ್ನಿ, ಹೋರಾಟ ಮಾಡೋಣ’ ಅಂತ ಕರೆಕೊಡುತ್ತಾನೆ. ದುಷ್ಟಶಕ್ತಿಗಳ ವಿರುದ್ಧ ಹೋರಾಟ ಮಾಡಿಯೇ ಗೆಲ್ಲುತ್ತಾನೆ. ಆದರೆ ನಿಜಜೀವನದಲ್ಲಿ ಎಲ್ಲಾ ಉಲ್ಟಾಪಲ್ಟಾ.

ತೂತ್ತುಕುಡಿಯ ಭೇಟಿಯ ನಂತರ ಅವರು ಆಸ್ಪತ್ರೆಯಲ್ಲಿರುವ ಗಾಯಾಳುಗಳನ್ನು ಭೇಟಿ ಮಾಡಲು ಹೊರಟರು. ಅಲ್ಲಿ ಅವರಿಗೆ ಭಾರೀ ಮುಖಭಂಗ ಕಾದಿತ್ತು.

ತೀವ್ರ ಗಾಯಗೊಂಡು ಚಿಕಿತ್ಸೆಯಲ್ಲಿರುವ ಸಂತೋಷ್ ರಾಜ್ ಎಂಬ 21 ವರ್ಷದ ಯುವಕನ ಹಾಸಿಗೆಯ ಬಳಿಗೆ ಸೂಪರ್‍ಸ್ಟಾರ್ ಬರುತ್ತಿದ್ದಂತೆ ಸಂತೋಷ್ ಹಾಸಿಗೆಯಿಂದ ಎದ್ದು ಕೂತ. ಸಂತೋಷ್‍ನ ಹೆಗಲ ಮೇಲೆ ಕೈಹಾಕಿ ಮಾತಾಡಿಸಲು ರಾಜಕಾರಣಿಯ ಶೈಲಿಯಲ್ಲಿ ಸೂಪರ್‍ಸ್ಟಾರ್ ಮುಂದಾಗುತ್ತಿದ್ದಂತೆ “ಯಾರು ನೀವು? ಎಲ್ಲಿಂದ ಬಂದಿದ್ದೀರಿ?” ಎಂದು ಖಾರವಾಗಿ ಪ್ರಶ್ನೆ ಎಸೆದ ಗಾಯಾಳು ಯುವಕ. ಇಂಥಾ ಪ್ರಶ್ನೆಯನ್ನು ನಿರೀಕ್ಷಿಸಿರದಿದ್ದ ಸ್ಟಾರ್ ಸಾವರಿಸಿಕೊಂಡು “ನಾನು ರಜನಿಕಾಂತ್, ಚೆನ್ನೈಯಿಂದ ಬಂದಿದ್ದೇನೆ.” ಎಂದು ಉತ್ತರಿಸಿದರು. ನಂತರ ಪ್ರಶ್ನೆಗಳ ಸುರಿಮಳೆಯನ್ನೇ ಆರಂಭಿಸಿದ ಸಂತೋಷ್‍ನ ಕಡೆಗೆ ಕೇಳಿಸಿಕೊಳ್ಳದಂತೆ ಮುಂದೆ ಹೆಜ್ಜೆಹಾಕಿ ಮತ್ತಷ್ಟು ಮುಖಭಂಗದಿಂದ ತಪ್ಪಿಸಿಕೊಂಡರು. ಸೂಪರ್ ಸ್ಟಾರ್ ಆಸ್ಪತ್ರೆಯ ಆವರಣದಲ್ಲಿ ಕರೆದಿದ್ದ ಪ್ರೆಸ್‍ಮೀಟ್ ಅನ್ನು ಖಾಸಗಿ ರೆಸಾರ್ಟ್‍ಗೆ ಸ್ಥಳಾಂತರಿಸಿ ,ತನ್ನ ಪಟಾಲಂ ಸಮೇತ ಕೂಡಲೇ ಅಲ್ಲಿಂದ ಕಾಲ್ಕಿತ್ತರು.

“ಪೊಲೀಸ್ ಫೈರಿಂಗ್‍ನಲ್ಲಿ 13 ಜನ ಸತ್ತು ಒಂದು ವಾರವಾಯ್ತು. ಆಸ್ಪತ್ರೆಯಲ್ಲಿರುವ ಎಷ್ಟೋ ಜನರ ಸ್ಥಿತಿ ಗಂಭೀರವಾಗಿದೆ… ನೂರು ದಿನಗಳಿಂದ ನಾವು ಹೋರಾಟ ಮಾಡುತ್ತಿದ್ದೇವೆ, ಈ ಸ್ಟಾರ್ ಒಮ್ಮೆಯೂ ಬಾಯಿಬಿಚ್ಚಿಲ್ಲ. ಒಮ್ಮೆಯೂ ನಮ್ಮ ಕಡೆಗೆ ತಿರುಗಿ ನೋಡಿಲ್ಲ. ಒಂದು ವೇಳೆ ಸ್ಟೆರ್‍ಲೈಟ್ ಕಂಪನಿ ಮುಚ್ಚಬೇಕೆಂಬ ಆದೇಶ ಹೊರಬೀಳದೆ ಇದ್ದಿದ್ದರೆ ಬಹುಶಃ ಇವರು ಇಲ್ಲಿಗೆ ಬರುತ್ತಿರಲಿಲ್ಲ. ಇದ್ದಕ್ಕಿದ್ದಂತೆ ಈಗ ಬಂದಿರೋದು ಯಾಕೆ? ಇದಕ್ಕೂ ಬಲವಾದ ಕಾರಣ ಇದೆ. ಕೆಲದಿನಗಳಲ್ಲಿ ‘ಕಾಲಾ’ ರಿಲೀಸ್ ಆಗ್ತಾ ಇದೆ. ಈಗಲೂ ತೂತ್ತುಕುಡಿ ಜನರನ್ನು ಮಾತಾಡಿಸದೆ ಹೋದರೆ ತಮಿಳುನಾಡಿನಲ್ಲಿ ಅವರ ಸಿನಿಮಾ ಓಡೋದಿಲ್ಲ ಅಂತ ಅವರಿಗೆ ಚನ್ನಾಗಿ ಗೊತ್ತು. ಅದಕ್ಕೆ ಈ ವರಸೆ ಶುರು ಮಾಡಿದ್ದಾರೆ…” ಎಂದು ನಂತರ ಮಾಧ್ಯಮದವರ ಜೊತೆ ಮಾತಾಡಿದ ಸಂತೋಷ್ ಈ ಸೂಪರ್‍ಸ್ಟಾರ್ ಗುಟ್ಟನ್ನು ಬಿಚ್ಚಿಟ್ಟಿದ್ದಾನೆ. ಇಷ್ಟೆಲ್ಲಾ ಅನಾಹುತಕ್ಕೆ ಸಮಾಜಘಾತುಕ ಶಕ್ತಿಗಳೇ ಕಾರಣ ಎಂದ ರಜನಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂತೋಷ್ “ಜನರ ಹೋರಾಟದ ಬಗ್ಗೆ ಮಾತಾಡಲಿಕ್ಕೆ ಅವರಿಗೆ ಯಾವ ಹಕ್ಕಿದೆ? ಕನಿಷ್ಟ ಒಂದು ದಿನವಾದರೂ ತೂತ್ತುಕುಡಿ ಜನರ ಸಂಕಷ್ಟಗಳ ಬಗ್ಗೆ ಮಾತಾಡದೆ ಮೌನ ವಹಿಸಿದ್ದ ಇವರು ಈಗ ಎಂಟ್ರಿ ಕೊಟ್ಟಿರೋದೇ ಅನುಮಾನಾಸ್ಪದ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಪರ್‍ಸ್ಟಾರ್ ‘ನಾನು ರಜನಿಕಾಂತ್’ ಎಂದು ಹೇಳಿಕೊಂಡ ಘಟನೆ ‘ಇಟ್ಸ್ ಮಿ ರನಿಕಾಂತ್’ ಎಂಬ ಹ್ಯಾಷ್‍ಟ್ಯಾಗ್ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿದೆ. ರಜನಿಕಾಂತ್ ಅವರ ನಿಲುವನ್ನು ಸಾವಿರಾರು ಜನರು ಪ್ರಶ್ನಿಸಿದ್ದಾರೆ.

ಜನಪ್ರಿಯ ಸ್ಟಾರ್ ರಜನಿಕಾಂತ್ ರಾಜಕಾರಣಿಯಾಗಲು ಹೊರಟಿರುವ ಈ ಸಂದರ್ಭದಲ್ಲಿ, ಆಡಳಿತಾರೂಡ ಎಐಡಿಎಂಕೆ ಪರ ಬ್ಯಾಟಿಂಗ್ ಶುರುವಿಟ್ಟುಕೊಂಡಿರುವುದು ಆಶ್ಚರ್ಯಕರ ಸಂಗತಿ. ಜನರ ಜೀವಗಳ ಬಗ್ಗೆ ಕಾಳಜಿ ತೋರದೆ ಆಡಳಿತ ಪಕ್ಷ ಹಾಗೂ ಸ್ಟೆರ್‍ಲೈಟ್ ಕಾಪರ್ ಕಂಪನಿಯ ವಕ್ತಾರನಂತೆ ರಜನಿ ಮಾತಾಡುತ್ತಿರುವುದು ತಮಿಳು ಚಿತ್ರರಂಗದಲ್ಲಿ ಮಾತ್ರವಲ್ಲದೆ, ತಮಿಳುನಾಡಿನ ಸಾಮಾಜಿಕ, ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ ನಿಜಬಣ್ಣಗಳು ಹೊರಬರುವುದೇ ಇಂಥಾ ಸಂದರ್ಭದಲ್ಲಿ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...