Homeರಾಜಕೀಯಇಟ್ಸ್ me....ರಜನಿಕಾಂತ್! ಸೂಪರ್ ಸ್ಟಾರ್ ಹೊಣೆಗೇಡಿಯಾದಾಗ....

ಇಟ್ಸ್ me….ರಜನಿಕಾಂತ್! ಸೂಪರ್ ಸ್ಟಾರ್ ಹೊಣೆಗೇಡಿಯಾದಾಗ….

- Advertisement -
- Advertisement -

ದೊಡ್ಡಿಪಾಳ್ಯ ನರಸಿಂಹಮೂರ್ತಿ |

ಸೂಪರ್ ಸ್ಟಾರ್ ರಜನಿಕಾಂತ್ ಬಗ್ಗೆ ತಮಿಳರಿಗೆ ಎಂಥಾ ಅಭಿಮಾನ, ಭಕ್ತಿಯಿದೆ ಎಂಬುದು ತಿಳಿದ ಸಂಗತಿ. ಇಂಥಾ ತಮಿಳುನಾಡಿನಲ್ಲಿ ಈಗ ರಜನಿಕಾಂತ್ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇದ್ದಕ್ಕಿದ್ದಂತೆ ರಜನಿ ಬಗ್ಗೆ ತಮಿಳರು ಆಕ್ರೋಶ ವ್ಯಕ್ತಪಡಿಸಿದ್ದೇಕೆಂದು ನೋಡಿದರೆ ಅದಕ್ಕೆ ಸ್ವತಃ ರಜನಿಯವರ ಜನವಿರೋಧಿ ರಾಜಕೀಯ ಧೋರಣೆಯೇ ಕಾರಣ ಎಂಬುದು ಬೆಳಕಿಗೆ ಬಂದಿದೆ. ನಡೆದದ್ದಿಷ್ಟು. ಮೊನ್ನೆ ತುತ್ತುಕುಡಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಜನರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿ 13 ಜನರನ್ನು ಕೊಂದ ಘಟನೆಯ ಬಗ್ಗೆ ಇಡೀ ತಮಿಳುನಾಡು ಕುದಿಯುತ್ತಿದೆ. ಹೀಗಿರುವಾಗ ತೂತ್ತುಕುಡಿಗೆ ಭೇಟಿ ಕೊಟ್ಟ ಸೂಪರ್‍ಸ್ಟಾರ್ ಮಾಧ್ಯಮದವರನ್ನುದ್ದೇಶಿಸಿ ಮಾತಾಡಿ “ಈ ಘಟನೆಗೆ ಸಮಾಜಘಾತುಕ ಶಕ್ತಿಗಳೇ ಕಾರಣ. ಅವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರಿಂದಲೇ ಫೈರಿಂಗ್ ನಡೆಸಬೇಕಾಯ್ತು…” ಎಂದು ಅಪ್ಪಟ ಪೊಲೀಸ್ ಏಜೆಂಟರಂತೆ ಮಾತಾಡಿದ್ದಾರೆ. ಈ ಭೀಕರ ಮಾರಣಹೋಮವನ್ನು ಕಣ್ಣಾರೆ ಕಂಡಿರುವ ಅಭಿಮಾನಿಗಳಿಗೆ ರಜನಿ ಹೇಳಿಕೆಯಿಂದ ಶಾಕ್ ಆಗಿರುವುದಂತೂ ನಿಜ. ಇಡೀ ತಮಿಳುನಾಡಿನಲ್ಲಿ ರಜನಿಯ ಈ ನಿಲುವಿಗೆ ವ್ಯಾಪಕ ಖಂಡನೆ ವ್ಯಕ್ರವಾಗಿದೆ. ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಹಾಗೂ ನಾಗರಿಕರು ರಜನಿಯವರ ಹೇಳಿಕೆಯನ್ನು ಖಂಡಿಸುತ್ತಿದ್ದಾರೆ. ‘ಫೈರಿಂಗ್‍ನಲ್ಲಿ ಜೀವತೆತ್ತ 11 ವರ್ಷದ ಬಾಲಕಿ ಸಮಾಜಘಾತುಕ ಶಕ್ತಿಯೇ? ರಜನಿ ಯಾರ ಪರವಾಗಿ ಮಾತಾಡುತ್ತಿದ್ದಾರೆ? ಯಾರೋ ಹೇಳಿಕೊಟ್ಟ ಮಾತುಗಳನ್ನು ಹೇಳುತ್ತಿದ್ದಾರೆ’ ಎಂದು ಜನರು ತಿರುಗೇಟು ನೀಡಿದ್ದಾರೆ.

‘ಸ್ಟೆರ್‍ಲೈಟ್ ಕಂಪನಿಯ ಮಾಲಿನ್ಯದಿಂದ ತೂತ್ತುಕುಡಿಯ ಜನರ ಜೀವನವೇ ದುಸ್ತರವಾಗಿತ್ತಲ್ಲಾ, ಅದಕ್ಕಾಗಿ ಜನರು ಹೋರಾಟ ಮಾಡಿದ್ದನ್ನು ತಪ್ಪು ಎನ್ನುತ್ತೀರಾ?’ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸ್ಟಾರ್ “ಏನ್ ಹೋರಾಟ? ಎಲ್ಲದಕ್ಕೂ ಹೋರಾಟ ಹೋರಾಟ ಅಂತ ಹೋಗ್ತಾ ಇದ್ದರೆ ತಮಿಳುನಾಡು ಸುಡುಗಾಡು ಆಗೋಗುತ್ತೆ” ಎಂದು ಪ್ರಶ್ನೆ ಕೇಳಿದವರ ಮೇಲೆಯೇ ಜೋರು ಮಾಡಿದ್ದಾರೆ. ಮತ್ತೂ ಮುಂದುವರೆದು “ಹೀಗಾದರೆ ತಮಿಳುನಾಡಿಗೆ ವಿದೇಶಿ ಬಂಡವಾಳ ಹೂಡಲು ಯಾರೂ ಬರೋದಿಲ್ಲ” ಎಂದು ತಮ್ಮ ಆರ್ಥಿಕ ನೀತಿಯನ್ನೂ ಹೊರಗೆಡವಿದ್ದಾರೆ.

ವಿಪರ್ಯಾಸ ನೋಡಿ ಹೇಗಿದೆ. ಇನ್ನೇನು ರಿಲೀಸ್ ಆಗಬೇಕಿರುವ ‘ಕಾಲಾ’ ಸಿನಿಮಾದಲ್ಲಿ ಬಡಜನರ ಮೇಲೆ ನಡೆದ ದೌರ್ಜನ್ಯಗಳ ವಿರುದ್ಧ ಕೆಂಡಕಾರುವ ಹೀರೋ ರಜನಿಕಾಂತ್ ‘ಎಲ್ಲ ಜನರನ್ನು ಕರೆತನ್ನಿ, ಹೋರಾಟ ಮಾಡೋಣ’ ಅಂತ ಕರೆಕೊಡುತ್ತಾನೆ. ದುಷ್ಟಶಕ್ತಿಗಳ ವಿರುದ್ಧ ಹೋರಾಟ ಮಾಡಿಯೇ ಗೆಲ್ಲುತ್ತಾನೆ. ಆದರೆ ನಿಜಜೀವನದಲ್ಲಿ ಎಲ್ಲಾ ಉಲ್ಟಾಪಲ್ಟಾ.

ತೂತ್ತುಕುಡಿಯ ಭೇಟಿಯ ನಂತರ ಅವರು ಆಸ್ಪತ್ರೆಯಲ್ಲಿರುವ ಗಾಯಾಳುಗಳನ್ನು ಭೇಟಿ ಮಾಡಲು ಹೊರಟರು. ಅಲ್ಲಿ ಅವರಿಗೆ ಭಾರೀ ಮುಖಭಂಗ ಕಾದಿತ್ತು.

ತೀವ್ರ ಗಾಯಗೊಂಡು ಚಿಕಿತ್ಸೆಯಲ್ಲಿರುವ ಸಂತೋಷ್ ರಾಜ್ ಎಂಬ 21 ವರ್ಷದ ಯುವಕನ ಹಾಸಿಗೆಯ ಬಳಿಗೆ ಸೂಪರ್‍ಸ್ಟಾರ್ ಬರುತ್ತಿದ್ದಂತೆ ಸಂತೋಷ್ ಹಾಸಿಗೆಯಿಂದ ಎದ್ದು ಕೂತ. ಸಂತೋಷ್‍ನ ಹೆಗಲ ಮೇಲೆ ಕೈಹಾಕಿ ಮಾತಾಡಿಸಲು ರಾಜಕಾರಣಿಯ ಶೈಲಿಯಲ್ಲಿ ಸೂಪರ್‍ಸ್ಟಾರ್ ಮುಂದಾಗುತ್ತಿದ್ದಂತೆ “ಯಾರು ನೀವು? ಎಲ್ಲಿಂದ ಬಂದಿದ್ದೀರಿ?” ಎಂದು ಖಾರವಾಗಿ ಪ್ರಶ್ನೆ ಎಸೆದ ಗಾಯಾಳು ಯುವಕ. ಇಂಥಾ ಪ್ರಶ್ನೆಯನ್ನು ನಿರೀಕ್ಷಿಸಿರದಿದ್ದ ಸ್ಟಾರ್ ಸಾವರಿಸಿಕೊಂಡು “ನಾನು ರಜನಿಕಾಂತ್, ಚೆನ್ನೈಯಿಂದ ಬಂದಿದ್ದೇನೆ.” ಎಂದು ಉತ್ತರಿಸಿದರು. ನಂತರ ಪ್ರಶ್ನೆಗಳ ಸುರಿಮಳೆಯನ್ನೇ ಆರಂಭಿಸಿದ ಸಂತೋಷ್‍ನ ಕಡೆಗೆ ಕೇಳಿಸಿಕೊಳ್ಳದಂತೆ ಮುಂದೆ ಹೆಜ್ಜೆಹಾಕಿ ಮತ್ತಷ್ಟು ಮುಖಭಂಗದಿಂದ ತಪ್ಪಿಸಿಕೊಂಡರು. ಸೂಪರ್ ಸ್ಟಾರ್ ಆಸ್ಪತ್ರೆಯ ಆವರಣದಲ್ಲಿ ಕರೆದಿದ್ದ ಪ್ರೆಸ್‍ಮೀಟ್ ಅನ್ನು ಖಾಸಗಿ ರೆಸಾರ್ಟ್‍ಗೆ ಸ್ಥಳಾಂತರಿಸಿ ,ತನ್ನ ಪಟಾಲಂ ಸಮೇತ ಕೂಡಲೇ ಅಲ್ಲಿಂದ ಕಾಲ್ಕಿತ್ತರು.

“ಪೊಲೀಸ್ ಫೈರಿಂಗ್‍ನಲ್ಲಿ 13 ಜನ ಸತ್ತು ಒಂದು ವಾರವಾಯ್ತು. ಆಸ್ಪತ್ರೆಯಲ್ಲಿರುವ ಎಷ್ಟೋ ಜನರ ಸ್ಥಿತಿ ಗಂಭೀರವಾಗಿದೆ… ನೂರು ದಿನಗಳಿಂದ ನಾವು ಹೋರಾಟ ಮಾಡುತ್ತಿದ್ದೇವೆ, ಈ ಸ್ಟಾರ್ ಒಮ್ಮೆಯೂ ಬಾಯಿಬಿಚ್ಚಿಲ್ಲ. ಒಮ್ಮೆಯೂ ನಮ್ಮ ಕಡೆಗೆ ತಿರುಗಿ ನೋಡಿಲ್ಲ. ಒಂದು ವೇಳೆ ಸ್ಟೆರ್‍ಲೈಟ್ ಕಂಪನಿ ಮುಚ್ಚಬೇಕೆಂಬ ಆದೇಶ ಹೊರಬೀಳದೆ ಇದ್ದಿದ್ದರೆ ಬಹುಶಃ ಇವರು ಇಲ್ಲಿಗೆ ಬರುತ್ತಿರಲಿಲ್ಲ. ಇದ್ದಕ್ಕಿದ್ದಂತೆ ಈಗ ಬಂದಿರೋದು ಯಾಕೆ? ಇದಕ್ಕೂ ಬಲವಾದ ಕಾರಣ ಇದೆ. ಕೆಲದಿನಗಳಲ್ಲಿ ‘ಕಾಲಾ’ ರಿಲೀಸ್ ಆಗ್ತಾ ಇದೆ. ಈಗಲೂ ತೂತ್ತುಕುಡಿ ಜನರನ್ನು ಮಾತಾಡಿಸದೆ ಹೋದರೆ ತಮಿಳುನಾಡಿನಲ್ಲಿ ಅವರ ಸಿನಿಮಾ ಓಡೋದಿಲ್ಲ ಅಂತ ಅವರಿಗೆ ಚನ್ನಾಗಿ ಗೊತ್ತು. ಅದಕ್ಕೆ ಈ ವರಸೆ ಶುರು ಮಾಡಿದ್ದಾರೆ…” ಎಂದು ನಂತರ ಮಾಧ್ಯಮದವರ ಜೊತೆ ಮಾತಾಡಿದ ಸಂತೋಷ್ ಈ ಸೂಪರ್‍ಸ್ಟಾರ್ ಗುಟ್ಟನ್ನು ಬಿಚ್ಚಿಟ್ಟಿದ್ದಾನೆ. ಇಷ್ಟೆಲ್ಲಾ ಅನಾಹುತಕ್ಕೆ ಸಮಾಜಘಾತುಕ ಶಕ್ತಿಗಳೇ ಕಾರಣ ಎಂದ ರಜನಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂತೋಷ್ “ಜನರ ಹೋರಾಟದ ಬಗ್ಗೆ ಮಾತಾಡಲಿಕ್ಕೆ ಅವರಿಗೆ ಯಾವ ಹಕ್ಕಿದೆ? ಕನಿಷ್ಟ ಒಂದು ದಿನವಾದರೂ ತೂತ್ತುಕುಡಿ ಜನರ ಸಂಕಷ್ಟಗಳ ಬಗ್ಗೆ ಮಾತಾಡದೆ ಮೌನ ವಹಿಸಿದ್ದ ಇವರು ಈಗ ಎಂಟ್ರಿ ಕೊಟ್ಟಿರೋದೇ ಅನುಮಾನಾಸ್ಪದ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಪರ್‍ಸ್ಟಾರ್ ‘ನಾನು ರಜನಿಕಾಂತ್’ ಎಂದು ಹೇಳಿಕೊಂಡ ಘಟನೆ ‘ಇಟ್ಸ್ ಮಿ ರನಿಕಾಂತ್’ ಎಂಬ ಹ್ಯಾಷ್‍ಟ್ಯಾಗ್ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿದೆ. ರಜನಿಕಾಂತ್ ಅವರ ನಿಲುವನ್ನು ಸಾವಿರಾರು ಜನರು ಪ್ರಶ್ನಿಸಿದ್ದಾರೆ.

ಜನಪ್ರಿಯ ಸ್ಟಾರ್ ರಜನಿಕಾಂತ್ ರಾಜಕಾರಣಿಯಾಗಲು ಹೊರಟಿರುವ ಈ ಸಂದರ್ಭದಲ್ಲಿ, ಆಡಳಿತಾರೂಡ ಎಐಡಿಎಂಕೆ ಪರ ಬ್ಯಾಟಿಂಗ್ ಶುರುವಿಟ್ಟುಕೊಂಡಿರುವುದು ಆಶ್ಚರ್ಯಕರ ಸಂಗತಿ. ಜನರ ಜೀವಗಳ ಬಗ್ಗೆ ಕಾಳಜಿ ತೋರದೆ ಆಡಳಿತ ಪಕ್ಷ ಹಾಗೂ ಸ್ಟೆರ್‍ಲೈಟ್ ಕಾಪರ್ ಕಂಪನಿಯ ವಕ್ತಾರನಂತೆ ರಜನಿ ಮಾತಾಡುತ್ತಿರುವುದು ತಮಿಳು ಚಿತ್ರರಂಗದಲ್ಲಿ ಮಾತ್ರವಲ್ಲದೆ, ತಮಿಳುನಾಡಿನ ಸಾಮಾಜಿಕ, ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ ನಿಜಬಣ್ಣಗಳು ಹೊರಬರುವುದೇ ಇಂಥಾ ಸಂದರ್ಭದಲ್ಲಿ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....