Homeಅಂಕಣಗಳುಇದು ಲವ್ ಜಿಹಾದ್ ಅಲ್ಲವಂತೆ

ಇದು ಲವ್ ಜಿಹಾದ್ ಅಲ್ಲವಂತೆ

- Advertisement -
- Advertisement -
ಇಸ್ಮತ್ ಪಜೀರ್ |
ಮೊನ್ನೆ ಪುಲ್ವಾಮಾ ಭಯೋತ್ಪಾದಕ ದಾಳಿ ನಡೆದು ಮೂರನೇ ದಿನಕ್ಕೆ ಅಂದರೆ ದೇಶಕ್ಕೆ ದೇಶವೇ ಸೂತಕದ ಛಾಯೆಯಲ್ಲಿದ್ದಾಗ ಉತ್ತರ ಪ್ರದೇಶದಲ್ಲೊಂದು ಹೈ ಪ್ರೊಫೈಲ್ ಮದುವೆ ನಡೆಯಿತು.
ಮದುವೆ ಯಾರದ್ದು ಗೊತ್ತೇ…?
ಉತ್ತರ ಪ್ರದೇಶದ ಮಂತ್ರಿ ರಾಮಲಾಲ್ ರ ಸೊಸೆ ಶ್ರೇಯಾ ಗುಪ್ತಾಳದ್ದು.. ವರನ್ಯಾರು ಗೊತ್ತೇ…? ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿಯ ತವರು ಕ್ಷೇತ್ರ ಗೋರಖ್ ಪುರದ ಶ್ರೀಮಂತ ಯುವಕ ಫೈಝಾನ್ ಕರೀಂ..! ಈ ಮದುವೆಯೇನು ಕದ್ದು ಮುಚ್ಚಿಯೋ.. ಗಂಡು ಹೆಣ್ಣು ಪರಾರಿಯಾಗಿಯೋ ನಡೆದದ್ದಲ್ಲ. ಇದು ಲವ್ ಕಂ ಅರೇಂಜ್ಡ್ ಮ್ಯಾರೇಜ್. ಅಂದರೆ ಶ್ರೇಯಾ ಗುಪ್ತಾ ಮತ್ತು ಫೈಝಾನ್ ಕರೀಂ ಮಧ್ಯೆ ಪ್ರೇಮಾಂಕುರವಾಯಿತು.

ಅವರು ಬಾಳ ಸಂಗಾತಿಗಳಾಗಲು ನಿರ್ಧರಿಸಿದರು. ಹಿರಿಯರು ಒಪ್ಪಿ ಮದುವೆ ಮಾಡಿ ಕೊಟ್ಟರು. ಒಂದು ವೇಳೆ ಹಿರಿಯರ ವಿರೋಧ ಈ ಮದುವೆಗೆ ಇದ್ದಿದ್ದರೆ  ಅಷ್ಟೊಂದು ಅದ್ದೂರಿ ಮದುವೆ ನಡೆಯುತ್ತಿರಲಿಲ್ಲ ಎಂಬುವುದು ಕಾಮನ್‌ ಸೆನ್ಸ್ ಗೆ ನಿಲುಕುವ ವಿಚಾರ. ಆ ಮದುವೆಯಲ್ಲಿ ಬಿಜೆಪಿಯ ಅತಿರಥ ಮಹಾರಥ ನಾಯಕರೆಲ್ಲಾ ಭಾಗವಹಿಸಿದ್ದರು. ಬಿಜೆಪಿ ಪಕ್ಷದ ಮಾತ್ರವಲ್ಲದೇ ವಿವಿಧ ರಾಜ್ಯಗಳ ಬಿಜೆಪಿ ಸರಕಾರಗಳ ಅಧಿಕಾರಸ್ಥರೂ ಭಾಗವಹಿಸಿದ್ದರು. ವಧೂ ವರರನ್ನು ಆಶೀರ್ವದಿಸುವುದರಲ್ಲಿ ಆರೆಸ್ಸೆಸ್ ಮುಖಂಡರೂ ಹಿಂದೆ ಬೀಳಲಿಲ್ಲ. ಯಾಕೆಂದರೆ ಅವರೀರ್ವರೂ ಮದುವೆ ಪ್ರಾಯವಾದವರೇ…

ಅವರ ಬದುಕು ಅವರ ವೈಯಕ್ತಿಕ ನಿರ್ಧಾರ. ಅವರ ಕುಟಂಬಕ್ಕೂ ಸಮ್ಮತಿಯಿದೆ. ಅದರಲ್ಲೇನು ತಪ್ಪು… ಅಲ್ವಾ…?
ಹೌದು, ತಪ್ಪೇನಿಲ್ಲ. ಹೇಳಿ ಕೇಳಿ ಲವ್ ಅಂದರೆ ಮೊದಲು ಒಂದು‌ ಆಕರ್ಷಣೆ… ಆ ಬಳಿಕ ಸ್ನೇಹ…‌ಆ ಬಳಿಕ ಆತ್ಮೀಯತೆ…..ಆ ಬಳಿಕ ಸುಖ ದುಃಖ ಹಂಚಿಕೊಳ್ಳುವಿಕೆ… ಮತ್ತೆ ಒಂದು ಗಟ್ಟಿ ನಿರ್ಧಾರಕ್ಕೆ ಬಂದರೆ ಮದುವೆ. ಇದು ಭಾರತದಲ್ಲಿ ಉಳ್ಳವರಿಗೆ, ಅಧಿಕಾರಸ್ಥರಿಗೆ ಅನ್ವಯವಾಗುವ ಅಲಖಿತ ಕಾನೂನು. ಆದರೆ… ಬಡ, ಮಧ್ಯಮ ವರ್ಗದವರಾದರೆ, ಅಧಿಕಾರಸ್ಥರಲ್ಲದಿದ್ದರೆ ಅಲ್ಲಿ ಜಾತಿ ಧರ್ಮಗಳ ಹಸ್ತಕ್ಷೇಪ ಇರಲೇಬೇಕು. ಯಾಕೆಂದರೆ ಅದೊಂದು ಮತ ಕೊಯ್ಲು ಮಾಡಲು ಸಾಧ್ಯವಾಗಬಲ್ಲ ರಾಜಕೀಯ ಇಶ್ಯೂ….
ಉಳ್ಳವರಾದರೆ, ಅಧಿಕಾರಸ್ಥರಾದರೆ ಲವ್ ಮ್ಯಾರೇಜ್….
ಬಡವರು, ಮಧ್ಯಮ ವರ್ಗಿಗಳಾದರೆ ಲವ್ ಜಿಹಾದ್…
ಈ ಪ್ರಕ್ರಿಯೆ ಇದು ಮೊದಲೂ ಅಲ್ಲ, ಕೊನೆಯೂ ಅಲ್ಲ…
ಅಡ್ವಾಣಿ, ಮುರಳೀ ಮನೋಹರ ಜೋಶಿ, ಅಶೋಕ್ ಸಿಂಘಾಲ್, ಮುಕ್ತಾರ್ ಅಬ್ಬಾಸ್ ನಖ್ವಿ, ಉಮರ್ ಅಬ್ದುಲ್ಲಾ, ಶಾನವಾಝ್ ಹುಸೇನ್, ಬಾಳಾ ಠಾಕ್ರೆ, ಸುಬ್ರಹ್ಮಣ್ಯ ಸ್ವಾಮಿ… ಹೀಗೆ ಇದಕ್ಕೊಂದು ದೊಡ್ಡ ಪರಂಪರೆಯೇ ಇದೆ. ಇದು ಮುಂದುವರಿಯುತ್ತದೆ ಸಹೋದರರೇ…ನಾವು ಮಾತ್ರ ಜಾತಿ, ಧರ್ಮ ಎಂದು ಕಚ್ಚಾಡುತ್ತಿರೋಣ…
(ಕೃಪೆ : ರಿಯಲ್ ಫ್ಲೇವರ್ ನ್ಯೂಸ್)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...