Homeಅಂಕಣಗಳುಇದು ಲವ್ ಜಿಹಾದ್ ಅಲ್ಲವಂತೆ

ಇದು ಲವ್ ಜಿಹಾದ್ ಅಲ್ಲವಂತೆ

- Advertisement -
- Advertisement -
ಇಸ್ಮತ್ ಪಜೀರ್ |
ಮೊನ್ನೆ ಪುಲ್ವಾಮಾ ಭಯೋತ್ಪಾದಕ ದಾಳಿ ನಡೆದು ಮೂರನೇ ದಿನಕ್ಕೆ ಅಂದರೆ ದೇಶಕ್ಕೆ ದೇಶವೇ ಸೂತಕದ ಛಾಯೆಯಲ್ಲಿದ್ದಾಗ ಉತ್ತರ ಪ್ರದೇಶದಲ್ಲೊಂದು ಹೈ ಪ್ರೊಫೈಲ್ ಮದುವೆ ನಡೆಯಿತು.
ಮದುವೆ ಯಾರದ್ದು ಗೊತ್ತೇ…?
ಉತ್ತರ ಪ್ರದೇಶದ ಮಂತ್ರಿ ರಾಮಲಾಲ್ ರ ಸೊಸೆ ಶ್ರೇಯಾ ಗುಪ್ತಾಳದ್ದು.. ವರನ್ಯಾರು ಗೊತ್ತೇ…? ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿಯ ತವರು ಕ್ಷೇತ್ರ ಗೋರಖ್ ಪುರದ ಶ್ರೀಮಂತ ಯುವಕ ಫೈಝಾನ್ ಕರೀಂ..! ಈ ಮದುವೆಯೇನು ಕದ್ದು ಮುಚ್ಚಿಯೋ.. ಗಂಡು ಹೆಣ್ಣು ಪರಾರಿಯಾಗಿಯೋ ನಡೆದದ್ದಲ್ಲ. ಇದು ಲವ್ ಕಂ ಅರೇಂಜ್ಡ್ ಮ್ಯಾರೇಜ್. ಅಂದರೆ ಶ್ರೇಯಾ ಗುಪ್ತಾ ಮತ್ತು ಫೈಝಾನ್ ಕರೀಂ ಮಧ್ಯೆ ಪ್ರೇಮಾಂಕುರವಾಯಿತು.

ಅವರು ಬಾಳ ಸಂಗಾತಿಗಳಾಗಲು ನಿರ್ಧರಿಸಿದರು. ಹಿರಿಯರು ಒಪ್ಪಿ ಮದುವೆ ಮಾಡಿ ಕೊಟ್ಟರು. ಒಂದು ವೇಳೆ ಹಿರಿಯರ ವಿರೋಧ ಈ ಮದುವೆಗೆ ಇದ್ದಿದ್ದರೆ  ಅಷ್ಟೊಂದು ಅದ್ದೂರಿ ಮದುವೆ ನಡೆಯುತ್ತಿರಲಿಲ್ಲ ಎಂಬುವುದು ಕಾಮನ್‌ ಸೆನ್ಸ್ ಗೆ ನಿಲುಕುವ ವಿಚಾರ. ಆ ಮದುವೆಯಲ್ಲಿ ಬಿಜೆಪಿಯ ಅತಿರಥ ಮಹಾರಥ ನಾಯಕರೆಲ್ಲಾ ಭಾಗವಹಿಸಿದ್ದರು. ಬಿಜೆಪಿ ಪಕ್ಷದ ಮಾತ್ರವಲ್ಲದೇ ವಿವಿಧ ರಾಜ್ಯಗಳ ಬಿಜೆಪಿ ಸರಕಾರಗಳ ಅಧಿಕಾರಸ್ಥರೂ ಭಾಗವಹಿಸಿದ್ದರು. ವಧೂ ವರರನ್ನು ಆಶೀರ್ವದಿಸುವುದರಲ್ಲಿ ಆರೆಸ್ಸೆಸ್ ಮುಖಂಡರೂ ಹಿಂದೆ ಬೀಳಲಿಲ್ಲ. ಯಾಕೆಂದರೆ ಅವರೀರ್ವರೂ ಮದುವೆ ಪ್ರಾಯವಾದವರೇ…

ಅವರ ಬದುಕು ಅವರ ವೈಯಕ್ತಿಕ ನಿರ್ಧಾರ. ಅವರ ಕುಟಂಬಕ್ಕೂ ಸಮ್ಮತಿಯಿದೆ. ಅದರಲ್ಲೇನು ತಪ್ಪು… ಅಲ್ವಾ…?
ಹೌದು, ತಪ್ಪೇನಿಲ್ಲ. ಹೇಳಿ ಕೇಳಿ ಲವ್ ಅಂದರೆ ಮೊದಲು ಒಂದು‌ ಆಕರ್ಷಣೆ… ಆ ಬಳಿಕ ಸ್ನೇಹ…‌ಆ ಬಳಿಕ ಆತ್ಮೀಯತೆ…..ಆ ಬಳಿಕ ಸುಖ ದುಃಖ ಹಂಚಿಕೊಳ್ಳುವಿಕೆ… ಮತ್ತೆ ಒಂದು ಗಟ್ಟಿ ನಿರ್ಧಾರಕ್ಕೆ ಬಂದರೆ ಮದುವೆ. ಇದು ಭಾರತದಲ್ಲಿ ಉಳ್ಳವರಿಗೆ, ಅಧಿಕಾರಸ್ಥರಿಗೆ ಅನ್ವಯವಾಗುವ ಅಲಖಿತ ಕಾನೂನು. ಆದರೆ… ಬಡ, ಮಧ್ಯಮ ವರ್ಗದವರಾದರೆ, ಅಧಿಕಾರಸ್ಥರಲ್ಲದಿದ್ದರೆ ಅಲ್ಲಿ ಜಾತಿ ಧರ್ಮಗಳ ಹಸ್ತಕ್ಷೇಪ ಇರಲೇಬೇಕು. ಯಾಕೆಂದರೆ ಅದೊಂದು ಮತ ಕೊಯ್ಲು ಮಾಡಲು ಸಾಧ್ಯವಾಗಬಲ್ಲ ರಾಜಕೀಯ ಇಶ್ಯೂ….
ಉಳ್ಳವರಾದರೆ, ಅಧಿಕಾರಸ್ಥರಾದರೆ ಲವ್ ಮ್ಯಾರೇಜ್….
ಬಡವರು, ಮಧ್ಯಮ ವರ್ಗಿಗಳಾದರೆ ಲವ್ ಜಿಹಾದ್…
ಈ ಪ್ರಕ್ರಿಯೆ ಇದು ಮೊದಲೂ ಅಲ್ಲ, ಕೊನೆಯೂ ಅಲ್ಲ…
ಅಡ್ವಾಣಿ, ಮುರಳೀ ಮನೋಹರ ಜೋಶಿ, ಅಶೋಕ್ ಸಿಂಘಾಲ್, ಮುಕ್ತಾರ್ ಅಬ್ಬಾಸ್ ನಖ್ವಿ, ಉಮರ್ ಅಬ್ದುಲ್ಲಾ, ಶಾನವಾಝ್ ಹುಸೇನ್, ಬಾಳಾ ಠಾಕ್ರೆ, ಸುಬ್ರಹ್ಮಣ್ಯ ಸ್ವಾಮಿ… ಹೀಗೆ ಇದಕ್ಕೊಂದು ದೊಡ್ಡ ಪರಂಪರೆಯೇ ಇದೆ. ಇದು ಮುಂದುವರಿಯುತ್ತದೆ ಸಹೋದರರೇ…ನಾವು ಮಾತ್ರ ಜಾತಿ, ಧರ್ಮ ಎಂದು ಕಚ್ಚಾಡುತ್ತಿರೋಣ…
(ಕೃಪೆ : ರಿಯಲ್ ಫ್ಲೇವರ್ ನ್ಯೂಸ್)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....