Homeಅಂಕಣಗಳುಇದು ಲವ್ ಜಿಹಾದ್ ಅಲ್ಲವಂತೆ

ಇದು ಲವ್ ಜಿಹಾದ್ ಅಲ್ಲವಂತೆ

- Advertisement -
- Advertisement -
ಇಸ್ಮತ್ ಪಜೀರ್ |
ಮೊನ್ನೆ ಪುಲ್ವಾಮಾ ಭಯೋತ್ಪಾದಕ ದಾಳಿ ನಡೆದು ಮೂರನೇ ದಿನಕ್ಕೆ ಅಂದರೆ ದೇಶಕ್ಕೆ ದೇಶವೇ ಸೂತಕದ ಛಾಯೆಯಲ್ಲಿದ್ದಾಗ ಉತ್ತರ ಪ್ರದೇಶದಲ್ಲೊಂದು ಹೈ ಪ್ರೊಫೈಲ್ ಮದುವೆ ನಡೆಯಿತು.
ಮದುವೆ ಯಾರದ್ದು ಗೊತ್ತೇ…?
ಉತ್ತರ ಪ್ರದೇಶದ ಮಂತ್ರಿ ರಾಮಲಾಲ್ ರ ಸೊಸೆ ಶ್ರೇಯಾ ಗುಪ್ತಾಳದ್ದು.. ವರನ್ಯಾರು ಗೊತ್ತೇ…? ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿಯ ತವರು ಕ್ಷೇತ್ರ ಗೋರಖ್ ಪುರದ ಶ್ರೀಮಂತ ಯುವಕ ಫೈಝಾನ್ ಕರೀಂ..! ಈ ಮದುವೆಯೇನು ಕದ್ದು ಮುಚ್ಚಿಯೋ.. ಗಂಡು ಹೆಣ್ಣು ಪರಾರಿಯಾಗಿಯೋ ನಡೆದದ್ದಲ್ಲ. ಇದು ಲವ್ ಕಂ ಅರೇಂಜ್ಡ್ ಮ್ಯಾರೇಜ್. ಅಂದರೆ ಶ್ರೇಯಾ ಗುಪ್ತಾ ಮತ್ತು ಫೈಝಾನ್ ಕರೀಂ ಮಧ್ಯೆ ಪ್ರೇಮಾಂಕುರವಾಯಿತು.

ಅವರು ಬಾಳ ಸಂಗಾತಿಗಳಾಗಲು ನಿರ್ಧರಿಸಿದರು. ಹಿರಿಯರು ಒಪ್ಪಿ ಮದುವೆ ಮಾಡಿ ಕೊಟ್ಟರು. ಒಂದು ವೇಳೆ ಹಿರಿಯರ ವಿರೋಧ ಈ ಮದುವೆಗೆ ಇದ್ದಿದ್ದರೆ  ಅಷ್ಟೊಂದು ಅದ್ದೂರಿ ಮದುವೆ ನಡೆಯುತ್ತಿರಲಿಲ್ಲ ಎಂಬುವುದು ಕಾಮನ್‌ ಸೆನ್ಸ್ ಗೆ ನಿಲುಕುವ ವಿಚಾರ. ಆ ಮದುವೆಯಲ್ಲಿ ಬಿಜೆಪಿಯ ಅತಿರಥ ಮಹಾರಥ ನಾಯಕರೆಲ್ಲಾ ಭಾಗವಹಿಸಿದ್ದರು. ಬಿಜೆಪಿ ಪಕ್ಷದ ಮಾತ್ರವಲ್ಲದೇ ವಿವಿಧ ರಾಜ್ಯಗಳ ಬಿಜೆಪಿ ಸರಕಾರಗಳ ಅಧಿಕಾರಸ್ಥರೂ ಭಾಗವಹಿಸಿದ್ದರು. ವಧೂ ವರರನ್ನು ಆಶೀರ್ವದಿಸುವುದರಲ್ಲಿ ಆರೆಸ್ಸೆಸ್ ಮುಖಂಡರೂ ಹಿಂದೆ ಬೀಳಲಿಲ್ಲ. ಯಾಕೆಂದರೆ ಅವರೀರ್ವರೂ ಮದುವೆ ಪ್ರಾಯವಾದವರೇ…

ಅವರ ಬದುಕು ಅವರ ವೈಯಕ್ತಿಕ ನಿರ್ಧಾರ. ಅವರ ಕುಟಂಬಕ್ಕೂ ಸಮ್ಮತಿಯಿದೆ. ಅದರಲ್ಲೇನು ತಪ್ಪು… ಅಲ್ವಾ…?
ಹೌದು, ತಪ್ಪೇನಿಲ್ಲ. ಹೇಳಿ ಕೇಳಿ ಲವ್ ಅಂದರೆ ಮೊದಲು ಒಂದು‌ ಆಕರ್ಷಣೆ… ಆ ಬಳಿಕ ಸ್ನೇಹ…‌ಆ ಬಳಿಕ ಆತ್ಮೀಯತೆ…..ಆ ಬಳಿಕ ಸುಖ ದುಃಖ ಹಂಚಿಕೊಳ್ಳುವಿಕೆ… ಮತ್ತೆ ಒಂದು ಗಟ್ಟಿ ನಿರ್ಧಾರಕ್ಕೆ ಬಂದರೆ ಮದುವೆ. ಇದು ಭಾರತದಲ್ಲಿ ಉಳ್ಳವರಿಗೆ, ಅಧಿಕಾರಸ್ಥರಿಗೆ ಅನ್ವಯವಾಗುವ ಅಲಖಿತ ಕಾನೂನು. ಆದರೆ… ಬಡ, ಮಧ್ಯಮ ವರ್ಗದವರಾದರೆ, ಅಧಿಕಾರಸ್ಥರಲ್ಲದಿದ್ದರೆ ಅಲ್ಲಿ ಜಾತಿ ಧರ್ಮಗಳ ಹಸ್ತಕ್ಷೇಪ ಇರಲೇಬೇಕು. ಯಾಕೆಂದರೆ ಅದೊಂದು ಮತ ಕೊಯ್ಲು ಮಾಡಲು ಸಾಧ್ಯವಾಗಬಲ್ಲ ರಾಜಕೀಯ ಇಶ್ಯೂ….
ಉಳ್ಳವರಾದರೆ, ಅಧಿಕಾರಸ್ಥರಾದರೆ ಲವ್ ಮ್ಯಾರೇಜ್….
ಬಡವರು, ಮಧ್ಯಮ ವರ್ಗಿಗಳಾದರೆ ಲವ್ ಜಿಹಾದ್…
ಈ ಪ್ರಕ್ರಿಯೆ ಇದು ಮೊದಲೂ ಅಲ್ಲ, ಕೊನೆಯೂ ಅಲ್ಲ…
ಅಡ್ವಾಣಿ, ಮುರಳೀ ಮನೋಹರ ಜೋಶಿ, ಅಶೋಕ್ ಸಿಂಘಾಲ್, ಮುಕ್ತಾರ್ ಅಬ್ಬಾಸ್ ನಖ್ವಿ, ಉಮರ್ ಅಬ್ದುಲ್ಲಾ, ಶಾನವಾಝ್ ಹುಸೇನ್, ಬಾಳಾ ಠಾಕ್ರೆ, ಸುಬ್ರಹ್ಮಣ್ಯ ಸ್ವಾಮಿ… ಹೀಗೆ ಇದಕ್ಕೊಂದು ದೊಡ್ಡ ಪರಂಪರೆಯೇ ಇದೆ. ಇದು ಮುಂದುವರಿಯುತ್ತದೆ ಸಹೋದರರೇ…ನಾವು ಮಾತ್ರ ಜಾತಿ, ಧರ್ಮ ಎಂದು ಕಚ್ಚಾಡುತ್ತಿರೋಣ…
(ಕೃಪೆ : ರಿಯಲ್ ಫ್ಲೇವರ್ ನ್ಯೂಸ್)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...