Homeಸಿನಿಮಾಕ್ರೀಡೆಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

ಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಟಾಸ್ ಗೆದ್ದ ಶ್ರೀಲಂಕಾ ತಂಡ ಮೊದಲು ಈಜಲು ಆಯ್ಕೆ ಮಾಡಿಕೊಂಡಿದೆ. ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಕುರಿತು ಅತ್ಯಂತ ಹೆಚ್ಚು ಷೇರ್ ಆದ ಟ್ರೋಲ್ ಇದು. ಇದೇ ಜೂನ್ 11 ರಂದು ಭಾರೀ ಮಳೆಯಿಂದಾಗಿ ಕ್ರಿಕೆಟ್ ಅಂಗಳದ ತುಂಬ ನೀರು ತುಂಬಿದ್ದರಿಂದ ಮಾಡಿದ ವ್ಯಂಗ್ಯ ಇದಾಗಿತ್ತು.

ಆಡಿದ ನಾಲ್ಕು ಪಂದ್ಯ ಗೆದ್ದು ಮಳೆ ಮೊದಲ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ಎರಡನೇಯ ಸ್ಥಾನಕ್ಕೆ ಕುಸಿದಿದೆ ಎಂಬ ಜೋಕ್ ಸಹ ಮಾಡಲಾಯ್ತು. ಒಟ್ಟು ಇದುವರೆಗೆ ವಿಶ್ವಕಪ್‍ನಲ್ಲಿ 17 ಪಂದ್ಯಗಳು ನಡೆದರೆ ಅದರಲ್ಲಿ ಬರೋಬ್ಬರಿ 4 ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ. ಇಂದು ಭಾರತ ಮತ್ತು ನ್ಯೂಜಿಲೆಂಡ್ ಘಟಾನುಘಟಿಗಳ ನಡುವೆ ನಡೆಯಬೇಕಿದ್ದ ಪಂದ್ಯ ಸಹ ಮಳೆಯಿಂದಾಗಿ ರದ್ದಾಗುವ ಅಪಾಯದಲ್ಲಿದೆ.

ವಿಶ್ವಕಪ್ ಟೂರ್ನಿಗೆ ತನ್ನದೇ ಮಹತ್ವವಿದೆ. ಎಲ್ಲಾ ದೇಶಗಳು ವಿಶ್ವಕಪ್ ಗೆದ್ದ ಚಾಂಪಿಯನ್ ಆಗಬೇಕೆಂದು ಹಂಬಲಿಸುತ್ತಿರುತ್ತಾರೆ. ಪ್ರತಿ ಪಂದ್ಯವೂ ಅವರಿಗೇ ಮಹತ್ವದ್ದೆ. ಆದರೆ ಮಳೆಗೆ ಇದ್ಯಾವುದರ ಪರಿವೇಯು ಇಲ್ಲದೇ ಮನಬಂದಂತೆ ಸುರಿದ ಆಟಗಾರರ ಕನಸು ತೊಯ್ದುಬಿಡುತ್ತಿದೆ.

ಇನ್ನು ಅಭಿಮಾನಿಗಳಂತೂ ಎಷ್ಟೋ ದಿನ ಮೊದಲೇ ವಿಶ್ವಕಪ್ ಪಂದ್ಯ ನೋಡಲು ಟಿಕೇಟ್ ಬುಕ್ ಮಾಡಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದವರೂ ತೀವ್ರ ನಿರಾಶೆ ಕಾಡುತ್ತಿದೆ. ದುಡ್ಡು ಕೊಟ್ಟು, ರಜೆಹಾಕಿ ಕ್ರಿಕೆಟ್ ಅಂಗಳಕ್ಕೆ ಹೋದರೆ ಮಳೆಯಲ್ಲಿ ನೆನದು ಕಾದು ಸುಸ್ತಾಗಿ ಭಾರವಾದ ಹೆಜ್ಜೆಗಳನ್ನಿಟ್ಟು ವಾಪಸ್ ಮನೆಗೆ ಧಾವಿಸಬೇಕಾಗ ಪರಿಸ್ಥಿತಿ ಬಂದಿದೆ.

ಯಾಕೀಗೆ ಆಗುತ್ತಿದೆ? ಈ ಮುಂಚೆ ಆಗದ್ದು ವಿಶ್ವಕಪ್ ನಡೆಯುವಾಗಲೇ ಹೀಗೇಕೆ ಇಷ್ಟು ಮಳೆ ಸುರಿಯುತ್ತಿದೆ? ಪ್ರಶ್ನೆಯಲ್ಲಿ ತಪ್ಪಿದೆ. ಅಂದರೆ ಮಳೆ ಸುರಿಯುವಾಗಲೇ ಏಕೆ ವಿಶ್ವಕಪ್ ಟೂರ್ನಿ ನಡೆಯುತ್ತಿದೆ? ಎಂಬುದು ಅಸಲಿ ಪ್ರಶ್ನೆಯಾಗಬೇಕಿದೆ. ಅಂದರೆ ಮಳೆಗಾಲದಲ್ಲಿ ಟೂರ್ನಿಮೆಂಟ್ ಆಯೋಜಿಸಿದ್ದು ಏಕೆ?

ಹೌದು ಕಳೆದೆರೆಡು ವಿಶ್ವಕಪ್ ಟೂರ್ನಿಗಳನ್ನು ನೋಡಿ ಬರೋಣ. ಭಾರತ ಚಾಂಪಿಯನ್ ಆದ 2011ರಲ್ಲಿ ಫೆಬ್ರವರಿ-ಮಾರ್ಚ್ ನಲ್ಲಿ ಟೂರ್ನಿಮೆಂಟ್ ನಡೆದಿದ್ದರೆ, 2015ರಲ್ಲಿಯೂ ಸಹ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿಯೇ ಟೂರ್ನಿಮೆಂಟ್ ಸರಾಗವಾಗಿ ನಡೆದಿತ್ತು. ಆದರೆ ಈ ಬಾರಿ ಜೂನ್-ಜುಲೈನಲ್ಲಿ ಏಕೆ ಆಯೋಜಿಸಲಾಗಿದೆ ಗೊತ್ತೇ?

ತುಂಬಾ ತಲೆಕೆಡಿಸಿಕೊಳ್ಳುವುದು ಬೇಡ. ಈ ವರ್ಷ ಫೆಬ್ರವರಿ- ಮಾರ್ಚ್‍ನಲ್ಲಿ ಏನು ನಡೆಯಿತು ನೋಡಿ.. ಏನು ಘನಂದಾರಿ ಕೆಲಸವೇನಿರಲಿಲ್ಲ ಬದಲಿಗೆ ಐಪಿಎಲ್ ಎಂದ ಬಂಡವಾಳಿಗರ ಖಾಸಗಿ ಟೂರ್ನಿಮೆಂಟ್ ನಡಿದಿತ್ತು. ಹಾಗಾಗಿ ವಿಶ್ವಕಪ್ ಎಂಬ ಮಹತ್ವದ ಟೂರ್ನಿಯನ್ನೇ ಮುಂದೂಡಲಾಗಿದೆ. ಐಪಿಎಲ್ ಎಂಬುದು ಅಷ್ಟರಮಟ್ಟಿಗೆ ಬೆಳೆದುನಿಂತಿದೆ.

ಮಾರ್ಚ್ ಏಪ್ರಿಲ್ ನಲ್ಲಿ ಐಪಿಎಲ್ ಪಂದ್ಯಗಳು ನಡೆದ ಕಾರಣ ವಿಶ್ವಕಪ್ ಈ ಮಳೆಕಪ್ ಆಗಿದೆ ಅಷ್ಟೇ. ಮಳೆ ಈ ಮಟ್ಟಗೆ ಛಂಡಿ ಹಿಡಿದಿರುವುದು ನೋಡಿದರೆ ಮುಂದಿನ ಹಲವು ಪಂದ್ಯಗಳು ಸಹ ರದ್ದಾಗಬಹುದು. ಆಗ ಕ್ರಿಕೆಟ್ ಬದಲಿಗೆ ಈಜು ಸ್ಪರ್ಧೆಯೇ ನಡೆಯಬೇಕಾಗುತ್ತದೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...