Homeಸಿನಿಮಾಕ್ರೀಡೆಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

ಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಟಾಸ್ ಗೆದ್ದ ಶ್ರೀಲಂಕಾ ತಂಡ ಮೊದಲು ಈಜಲು ಆಯ್ಕೆ ಮಾಡಿಕೊಂಡಿದೆ. ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಕುರಿತು ಅತ್ಯಂತ ಹೆಚ್ಚು ಷೇರ್ ಆದ ಟ್ರೋಲ್ ಇದು. ಇದೇ ಜೂನ್ 11 ರಂದು ಭಾರೀ ಮಳೆಯಿಂದಾಗಿ ಕ್ರಿಕೆಟ್ ಅಂಗಳದ ತುಂಬ ನೀರು ತುಂಬಿದ್ದರಿಂದ ಮಾಡಿದ ವ್ಯಂಗ್ಯ ಇದಾಗಿತ್ತು.

ಆಡಿದ ನಾಲ್ಕು ಪಂದ್ಯ ಗೆದ್ದು ಮಳೆ ಮೊದಲ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ಎರಡನೇಯ ಸ್ಥಾನಕ್ಕೆ ಕುಸಿದಿದೆ ಎಂಬ ಜೋಕ್ ಸಹ ಮಾಡಲಾಯ್ತು. ಒಟ್ಟು ಇದುವರೆಗೆ ವಿಶ್ವಕಪ್‍ನಲ್ಲಿ 17 ಪಂದ್ಯಗಳು ನಡೆದರೆ ಅದರಲ್ಲಿ ಬರೋಬ್ಬರಿ 4 ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ. ಇಂದು ಭಾರತ ಮತ್ತು ನ್ಯೂಜಿಲೆಂಡ್ ಘಟಾನುಘಟಿಗಳ ನಡುವೆ ನಡೆಯಬೇಕಿದ್ದ ಪಂದ್ಯ ಸಹ ಮಳೆಯಿಂದಾಗಿ ರದ್ದಾಗುವ ಅಪಾಯದಲ್ಲಿದೆ.

ವಿಶ್ವಕಪ್ ಟೂರ್ನಿಗೆ ತನ್ನದೇ ಮಹತ್ವವಿದೆ. ಎಲ್ಲಾ ದೇಶಗಳು ವಿಶ್ವಕಪ್ ಗೆದ್ದ ಚಾಂಪಿಯನ್ ಆಗಬೇಕೆಂದು ಹಂಬಲಿಸುತ್ತಿರುತ್ತಾರೆ. ಪ್ರತಿ ಪಂದ್ಯವೂ ಅವರಿಗೇ ಮಹತ್ವದ್ದೆ. ಆದರೆ ಮಳೆಗೆ ಇದ್ಯಾವುದರ ಪರಿವೇಯು ಇಲ್ಲದೇ ಮನಬಂದಂತೆ ಸುರಿದ ಆಟಗಾರರ ಕನಸು ತೊಯ್ದುಬಿಡುತ್ತಿದೆ.

ಇನ್ನು ಅಭಿಮಾನಿಗಳಂತೂ ಎಷ್ಟೋ ದಿನ ಮೊದಲೇ ವಿಶ್ವಕಪ್ ಪಂದ್ಯ ನೋಡಲು ಟಿಕೇಟ್ ಬುಕ್ ಮಾಡಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದವರೂ ತೀವ್ರ ನಿರಾಶೆ ಕಾಡುತ್ತಿದೆ. ದುಡ್ಡು ಕೊಟ್ಟು, ರಜೆಹಾಕಿ ಕ್ರಿಕೆಟ್ ಅಂಗಳಕ್ಕೆ ಹೋದರೆ ಮಳೆಯಲ್ಲಿ ನೆನದು ಕಾದು ಸುಸ್ತಾಗಿ ಭಾರವಾದ ಹೆಜ್ಜೆಗಳನ್ನಿಟ್ಟು ವಾಪಸ್ ಮನೆಗೆ ಧಾವಿಸಬೇಕಾಗ ಪರಿಸ್ಥಿತಿ ಬಂದಿದೆ.

ಯಾಕೀಗೆ ಆಗುತ್ತಿದೆ? ಈ ಮುಂಚೆ ಆಗದ್ದು ವಿಶ್ವಕಪ್ ನಡೆಯುವಾಗಲೇ ಹೀಗೇಕೆ ಇಷ್ಟು ಮಳೆ ಸುರಿಯುತ್ತಿದೆ? ಪ್ರಶ್ನೆಯಲ್ಲಿ ತಪ್ಪಿದೆ. ಅಂದರೆ ಮಳೆ ಸುರಿಯುವಾಗಲೇ ಏಕೆ ವಿಶ್ವಕಪ್ ಟೂರ್ನಿ ನಡೆಯುತ್ತಿದೆ? ಎಂಬುದು ಅಸಲಿ ಪ್ರಶ್ನೆಯಾಗಬೇಕಿದೆ. ಅಂದರೆ ಮಳೆಗಾಲದಲ್ಲಿ ಟೂರ್ನಿಮೆಂಟ್ ಆಯೋಜಿಸಿದ್ದು ಏಕೆ?

ಹೌದು ಕಳೆದೆರೆಡು ವಿಶ್ವಕಪ್ ಟೂರ್ನಿಗಳನ್ನು ನೋಡಿ ಬರೋಣ. ಭಾರತ ಚಾಂಪಿಯನ್ ಆದ 2011ರಲ್ಲಿ ಫೆಬ್ರವರಿ-ಮಾರ್ಚ್ ನಲ್ಲಿ ಟೂರ್ನಿಮೆಂಟ್ ನಡೆದಿದ್ದರೆ, 2015ರಲ್ಲಿಯೂ ಸಹ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿಯೇ ಟೂರ್ನಿಮೆಂಟ್ ಸರಾಗವಾಗಿ ನಡೆದಿತ್ತು. ಆದರೆ ಈ ಬಾರಿ ಜೂನ್-ಜುಲೈನಲ್ಲಿ ಏಕೆ ಆಯೋಜಿಸಲಾಗಿದೆ ಗೊತ್ತೇ?

ತುಂಬಾ ತಲೆಕೆಡಿಸಿಕೊಳ್ಳುವುದು ಬೇಡ. ಈ ವರ್ಷ ಫೆಬ್ರವರಿ- ಮಾರ್ಚ್‍ನಲ್ಲಿ ಏನು ನಡೆಯಿತು ನೋಡಿ.. ಏನು ಘನಂದಾರಿ ಕೆಲಸವೇನಿರಲಿಲ್ಲ ಬದಲಿಗೆ ಐಪಿಎಲ್ ಎಂದ ಬಂಡವಾಳಿಗರ ಖಾಸಗಿ ಟೂರ್ನಿಮೆಂಟ್ ನಡಿದಿತ್ತು. ಹಾಗಾಗಿ ವಿಶ್ವಕಪ್ ಎಂಬ ಮಹತ್ವದ ಟೂರ್ನಿಯನ್ನೇ ಮುಂದೂಡಲಾಗಿದೆ. ಐಪಿಎಲ್ ಎಂಬುದು ಅಷ್ಟರಮಟ್ಟಿಗೆ ಬೆಳೆದುನಿಂತಿದೆ.

ಮಾರ್ಚ್ ಏಪ್ರಿಲ್ ನಲ್ಲಿ ಐಪಿಎಲ್ ಪಂದ್ಯಗಳು ನಡೆದ ಕಾರಣ ವಿಶ್ವಕಪ್ ಈ ಮಳೆಕಪ್ ಆಗಿದೆ ಅಷ್ಟೇ. ಮಳೆ ಈ ಮಟ್ಟಗೆ ಛಂಡಿ ಹಿಡಿದಿರುವುದು ನೋಡಿದರೆ ಮುಂದಿನ ಹಲವು ಪಂದ್ಯಗಳು ಸಹ ರದ್ದಾಗಬಹುದು. ಆಗ ಕ್ರಿಕೆಟ್ ಬದಲಿಗೆ ಈಜು ಸ್ಪರ್ಧೆಯೇ ನಡೆಯಬೇಕಾಗುತ್ತದೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...