Homeಸಿನಿಮಾಕ್ರೀಡೆಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

ಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಟಾಸ್ ಗೆದ್ದ ಶ್ರೀಲಂಕಾ ತಂಡ ಮೊದಲು ಈಜಲು ಆಯ್ಕೆ ಮಾಡಿಕೊಂಡಿದೆ. ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಕುರಿತು ಅತ್ಯಂತ ಹೆಚ್ಚು ಷೇರ್ ಆದ ಟ್ರೋಲ್ ಇದು. ಇದೇ ಜೂನ್ 11 ರಂದು ಭಾರೀ ಮಳೆಯಿಂದಾಗಿ ಕ್ರಿಕೆಟ್ ಅಂಗಳದ ತುಂಬ ನೀರು ತುಂಬಿದ್ದರಿಂದ ಮಾಡಿದ ವ್ಯಂಗ್ಯ ಇದಾಗಿತ್ತು.

ಆಡಿದ ನಾಲ್ಕು ಪಂದ್ಯ ಗೆದ್ದು ಮಳೆ ಮೊದಲ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ಎರಡನೇಯ ಸ್ಥಾನಕ್ಕೆ ಕುಸಿದಿದೆ ಎಂಬ ಜೋಕ್ ಸಹ ಮಾಡಲಾಯ್ತು. ಒಟ್ಟು ಇದುವರೆಗೆ ವಿಶ್ವಕಪ್‍ನಲ್ಲಿ 17 ಪಂದ್ಯಗಳು ನಡೆದರೆ ಅದರಲ್ಲಿ ಬರೋಬ್ಬರಿ 4 ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ. ಇಂದು ಭಾರತ ಮತ್ತು ನ್ಯೂಜಿಲೆಂಡ್ ಘಟಾನುಘಟಿಗಳ ನಡುವೆ ನಡೆಯಬೇಕಿದ್ದ ಪಂದ್ಯ ಸಹ ಮಳೆಯಿಂದಾಗಿ ರದ್ದಾಗುವ ಅಪಾಯದಲ್ಲಿದೆ.

ವಿಶ್ವಕಪ್ ಟೂರ್ನಿಗೆ ತನ್ನದೇ ಮಹತ್ವವಿದೆ. ಎಲ್ಲಾ ದೇಶಗಳು ವಿಶ್ವಕಪ್ ಗೆದ್ದ ಚಾಂಪಿಯನ್ ಆಗಬೇಕೆಂದು ಹಂಬಲಿಸುತ್ತಿರುತ್ತಾರೆ. ಪ್ರತಿ ಪಂದ್ಯವೂ ಅವರಿಗೇ ಮಹತ್ವದ್ದೆ. ಆದರೆ ಮಳೆಗೆ ಇದ್ಯಾವುದರ ಪರಿವೇಯು ಇಲ್ಲದೇ ಮನಬಂದಂತೆ ಸುರಿದ ಆಟಗಾರರ ಕನಸು ತೊಯ್ದುಬಿಡುತ್ತಿದೆ.

ಇನ್ನು ಅಭಿಮಾನಿಗಳಂತೂ ಎಷ್ಟೋ ದಿನ ಮೊದಲೇ ವಿಶ್ವಕಪ್ ಪಂದ್ಯ ನೋಡಲು ಟಿಕೇಟ್ ಬುಕ್ ಮಾಡಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದವರೂ ತೀವ್ರ ನಿರಾಶೆ ಕಾಡುತ್ತಿದೆ. ದುಡ್ಡು ಕೊಟ್ಟು, ರಜೆಹಾಕಿ ಕ್ರಿಕೆಟ್ ಅಂಗಳಕ್ಕೆ ಹೋದರೆ ಮಳೆಯಲ್ಲಿ ನೆನದು ಕಾದು ಸುಸ್ತಾಗಿ ಭಾರವಾದ ಹೆಜ್ಜೆಗಳನ್ನಿಟ್ಟು ವಾಪಸ್ ಮನೆಗೆ ಧಾವಿಸಬೇಕಾಗ ಪರಿಸ್ಥಿತಿ ಬಂದಿದೆ.

ಯಾಕೀಗೆ ಆಗುತ್ತಿದೆ? ಈ ಮುಂಚೆ ಆಗದ್ದು ವಿಶ್ವಕಪ್ ನಡೆಯುವಾಗಲೇ ಹೀಗೇಕೆ ಇಷ್ಟು ಮಳೆ ಸುರಿಯುತ್ತಿದೆ? ಪ್ರಶ್ನೆಯಲ್ಲಿ ತಪ್ಪಿದೆ. ಅಂದರೆ ಮಳೆ ಸುರಿಯುವಾಗಲೇ ಏಕೆ ವಿಶ್ವಕಪ್ ಟೂರ್ನಿ ನಡೆಯುತ್ತಿದೆ? ಎಂಬುದು ಅಸಲಿ ಪ್ರಶ್ನೆಯಾಗಬೇಕಿದೆ. ಅಂದರೆ ಮಳೆಗಾಲದಲ್ಲಿ ಟೂರ್ನಿಮೆಂಟ್ ಆಯೋಜಿಸಿದ್ದು ಏಕೆ?

ಹೌದು ಕಳೆದೆರೆಡು ವಿಶ್ವಕಪ್ ಟೂರ್ನಿಗಳನ್ನು ನೋಡಿ ಬರೋಣ. ಭಾರತ ಚಾಂಪಿಯನ್ ಆದ 2011ರಲ್ಲಿ ಫೆಬ್ರವರಿ-ಮಾರ್ಚ್ ನಲ್ಲಿ ಟೂರ್ನಿಮೆಂಟ್ ನಡೆದಿದ್ದರೆ, 2015ರಲ್ಲಿಯೂ ಸಹ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿಯೇ ಟೂರ್ನಿಮೆಂಟ್ ಸರಾಗವಾಗಿ ನಡೆದಿತ್ತು. ಆದರೆ ಈ ಬಾರಿ ಜೂನ್-ಜುಲೈನಲ್ಲಿ ಏಕೆ ಆಯೋಜಿಸಲಾಗಿದೆ ಗೊತ್ತೇ?

ತುಂಬಾ ತಲೆಕೆಡಿಸಿಕೊಳ್ಳುವುದು ಬೇಡ. ಈ ವರ್ಷ ಫೆಬ್ರವರಿ- ಮಾರ್ಚ್‍ನಲ್ಲಿ ಏನು ನಡೆಯಿತು ನೋಡಿ.. ಏನು ಘನಂದಾರಿ ಕೆಲಸವೇನಿರಲಿಲ್ಲ ಬದಲಿಗೆ ಐಪಿಎಲ್ ಎಂದ ಬಂಡವಾಳಿಗರ ಖಾಸಗಿ ಟೂರ್ನಿಮೆಂಟ್ ನಡಿದಿತ್ತು. ಹಾಗಾಗಿ ವಿಶ್ವಕಪ್ ಎಂಬ ಮಹತ್ವದ ಟೂರ್ನಿಯನ್ನೇ ಮುಂದೂಡಲಾಗಿದೆ. ಐಪಿಎಲ್ ಎಂಬುದು ಅಷ್ಟರಮಟ್ಟಿಗೆ ಬೆಳೆದುನಿಂತಿದೆ.

ಮಾರ್ಚ್ ಏಪ್ರಿಲ್ ನಲ್ಲಿ ಐಪಿಎಲ್ ಪಂದ್ಯಗಳು ನಡೆದ ಕಾರಣ ವಿಶ್ವಕಪ್ ಈ ಮಳೆಕಪ್ ಆಗಿದೆ ಅಷ್ಟೇ. ಮಳೆ ಈ ಮಟ್ಟಗೆ ಛಂಡಿ ಹಿಡಿದಿರುವುದು ನೋಡಿದರೆ ಮುಂದಿನ ಹಲವು ಪಂದ್ಯಗಳು ಸಹ ರದ್ದಾಗಬಹುದು. ಆಗ ಕ್ರಿಕೆಟ್ ಬದಲಿಗೆ ಈಜು ಸ್ಪರ್ಧೆಯೇ ನಡೆಯಬೇಕಾಗುತ್ತದೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...