Homeಸಾಮಾಜಿಕಇಫ್ತಾರ್ ಕೂಟ ಮತ್ತು ಪೇಜಾವರರ ಪೀಕಲಾಟ!!

ಇಫ್ತಾರ್ ಕೂಟ ಮತ್ತು ಪೇಜಾವರರ ಪೀಕಲಾಟ!!

- Advertisement -
- Advertisement -

ಇಂಡಿಯಾದ ರಾಜಕೀಯ ವಲಯದಲ್ಲಿ ಪಾಲಿಟಿಕಲ್ ಸಂತನೆಂದೇ ಸುಪ್ರಸಿದ್ಧರಾಗಿರುವ ಉಡುಪಿಯ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ “ದ್ವೈತ” ಸಿದ್ಧಾಂತಿ ಈ “ದ್ವೈತ”ವನ್ನು “ದ್ವಂದ್ವ” ಎಂದೇ ನಂಬಿದಂತಿರುವ ಪೇಜಾವರರ ನಡೆ-ನುಡಿ, ರೀತಿ-ನೀತಿಗಳಲ್ಲೆಲ್ಲ ವಿರೋಧಾಭಾಸವೇ ವಿರೋಧಿಭಾಸ!! ಬಾಬರಿ ಮಸೀದಿ ಧ್ವಂಸಕರಿಗೆ, ಗೋಗೂಂಡಾಗಳಿಗೆ ಸ್ಫೂರ್ತಿಯ ಚಿಲುಮೆಯಂತಿರುವ ಈ ಕೇಸರಿ ಪರಿವಾರದ ರಾಜರ್ಷಿ ಮಠದ ವ್ಯಾವಹಾರಿಕ ಕಾರ್ಯಕ್ರಮಕ್ಕೆ, ಮಠದ ಪರ್ಯಾಯ ಉತ್ಸವಕ್ಕೆ ಸಾಬರಿಂದ ಜೋಳಿಗೆ ತುಂಬ ಕಾಣಿಕೆ-ದೇಣಿಗೆ ಯಥೇಚ್ಛವಾಗಿ ಪಡೆಯುತ್ತಾರೆ; ರಂಜಾನ್ ಹೊತ್ತಲ್ಲಿ ಮುಸ್ಲಿಮರನ್ನು ಮಠಕ್ಕೆ ಆಹ್ವಾನಿಸಿ ತಿಂಡಿ-ತೀರ್ಥ ಕೊಟ್ಟು ಕಳಿಸುವ ಈ ಸ್ವಯಂಘೋಷಿತ ಪರಧರ್ಮ ಸಹಿಷ್ಣು ಕಣ್ಣೆದುರೇ ಸಾಬರನ್ನು ಹಿಂದೂತ್ವದ ಸೈತಾನರು ಬೆತ್ತಲೆ ಮಾಡಿ ಕೇಕೆ ಹಾಕಿದರೂ, ಬಡಿದು ಕೊಂದೆಸೆದರೂ ಮಾತೇ ಆಡುವುದಿಲ್ಲ.
ಇಂತಿಪ್ಪ ಪೇಜಾವರರ ಇಫ್ತಾರ್‍ಕೂಟ ಪ್ರಹಸನ ಈಗ ತರಹೇವಾರಿ ಸುದ್ದಿಯಲ್ಲಿದೆ. ಕಳೆದ ಬಾರಿಯ ರಂಜಾನ್ ಸಂದರ್ಭದಲ್ಲಿ ಪೇಜಾವರರು ಕೃಷ್ಣನ ಮಠಕ್ಕೆ ಮುಸ್ಲಿಮರನ್ನು ಬರಮಾಡಿಕೊಂಡು ಬರಸೆಳೆದು ಈದ್ ಮುಬಾರಕ್ ಹೇಳಿದ್ದರು. ಅಷ್ಟೇ ಅಲ್ಲ, ತಮ್ಮ ಕೈಯಾರೆ ಉಪಾಹಾರ ಕೊಟ್ಟು ಇಫ್ತಾರ್‍ಕೂಟ ಮಾಡಿಕಳಿಸಿದ್ದರು. ಹಾಗೇ ಪೇಜಾವರರು ಇಫ್ತಾರ್‍ಕೂಟ ಮಾಡಿದ್ದು ಅದೇ ಮೊದಲ ಸಲವೇನಲ್ಲ. ಹಿಂದೆಯೂ ಇಂಥ ಸೌಹಾರ್ದ ಸರ್ಕಸ್ ಸ್ವಾಮೀಜಿ ಮಾಡಿದ್ದರು. ಆದರೆ ಕಳೆದ ವರ್ಷ ಪೇಜಾವರರು ಸಾಬಿಗಳನ್ನು ಮಠಕ್ಕೆ ಕಳೆದು “ಕೂಟ” ಮಾಡಿದ್ದು ಅದ್ಯಾಕೋ ಮತೋನ್ಮತ್ತ ಹಿಂದೂತ್ವದ ಹರಿಕಾರರ ಪಿತ್ಥ ನೆತ್ತಿಗೇರಿಸಿತ್ತು. ಪ್ರಮೋದ್ ಮುತಾಲಿಕ್ ಎಂಬ ಸೈತಾನರ ಸೇನೆಯ ಸರದಾರ ಪೇಜಾವರರ ಮೇಲೆ ಮುರಕೊಂಡು ಬಿದ್ದಿದ್ದ. ಪೇಜಾವರರಂಥ ಪೇಜಾವರರೇ ಗೋಭಕ್ಷಕ ಸಾಬರ ಅಪ್ಪಿಕೊಳ್ಳುವುದು ಧರ್ಮಬಾಹಿರ ಎಂದು ಬೊಬ್ಬಿರಿದರೆ ತನ್ನ ಹಿಂದೂತ್ವದ ಇಮೇಜ್ ಮತ್ತಷ್ಟು ಹರಿತವಾಗುತ್ತದೆಂದು ಭಾವಿಸಿದ್ದ ಹುಂಬ ಮುತಾಲಿಕ್ ಸದ್ರಿ ಸ್ವಾಮಿ ವಿರುದ್ಧ ತಿರುಗಿಬಿದ್ದುಬಿಟ್ಟಿದ್ದ!
ಪೇಜಾವವರ ಇಫ್ತಾರ್‍ಕೂಟದ ಕತೆ ಕೇಳಿದ್ದೇ ತಡ, ಅದೆಲ್ಲಿಂದಲೋ ಉಡುಪಿಗೆ ವಕ್ಕರಿಸಿದ್ದ ಮುತಾಲಿಕ್ ನೇರ ಪೇಜಾವರ ಮಠಕ್ಕೆ ನುಗ್ಗಿದ್ದ, “ಏನ್ರಿ ಸ್ವಾಮ್ಯಾರಾ…. ಮಠಾ ಮಸೀದಿ ಮಾಡಾಕ್ ಹೊಂಟೆರೇನ್…..” ಎಂದು ಏರುಧ್ವನಿಯಲ್ಲಿ ಪೇಜಾವರರನ್ನು ತರಾಟೆಗೆ ತೆಗೆದುಕೊಂಡಿದ್ದ. ಈ ಅನಿರೀಕ್ಷಿತ ದಾಳಿಯಿಂದ ಹೌಹಾರಿದ ಪೇಜಾವರರು ಸಾವರಿಸಿಕೊಂಡು, “ಏ ಮುತಾಲಿಕಾ ಇದು ಕೃಷ್ಣ ಮಠ….. ಮೆಲ್ಲುಗೆ ಮಾತಾಡೋ ಮಾರಾಯ…..” ಎಂದು ರಮಿಸಿದ್ದರು. “ಗೋರಕ್ಷಕ ಕೃಷ್ಣನ ಮಠಕ್ಕೆ ಗೋಭಕ್ಷಕ ಸಾಬರನ್ನು ಕರೆಸಿಕೊಂಡಿರುವ ಪೇಜಾವರರು ತಮ್ಮ ಕೆಲಸ ಸಮರ್ಥಿಸಿಕೊಳ್ಳುತ್ತಿದ್ದಾರೆ….. ಅವರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡ್ತೇನೆ…..” ಎಂದು ಹಾರಾಡಿದ್ದ ಮುತಾಲಿಕ್ ಮಾಮ. ಮುತಾಲಿಕ್ ಬಹಿರಂಗವಾಗಿ ಕೂಗಾಡಿ ರಾಡಿ ಎಬ್ಬಿಸಿದ್ದ; ಆದರೆ ವಿಶ್ವ ಹಿಂದೂ ಪರಿಷತ್, ಆರೆಸೆಸ್‍ನ ನಾಜೂಕಿನ ರಿಂಗ್ ಮಾಸ್ಟರ್‍ಗಳು ಸದ್ದಿಲ್ಲದೆ ಪೇಜಾವರರಿಗೆ ಗುದ್ದುಹಾಕಿ “ವಿಚಾರಿಸಿ”ಕೊಂಡಿದ್ದರು.
ಹಿಂದೂತ್ವದ ದಾಳಿಗೆ ಪೇಜಾವರರು ಹೈರಾಣಾಗಿಹೋಗಿದ್ದರು. ಮಠದೊಳಗಣ ಇಫ್ತಿಯಾರ್ ಕೂಟ ಕರಾವಳಿಯಲ್ಲಿ ಬದಲಾಗಿರುವ ಹಿಂದೂತ್ವದ ಕಾಲಧರ್ಮಕ್ಕೆ ಸರಿಹೊಂದುವುದಿಲ್ಲ ಎಂಬ ಉಪದೇಶ ಪೇಜಾವರರಿಗೆ ಸಂಘಪರಿವಾರದ ದಶದಿಕ್ಕಿನಿಂದ ಧಾರಾಳವಾಗಿ ಬಾದತ್ವಳಿಸಿತ್ತು! ಪೇಜಾವರರಂಥವರೇ ಕರಾವಳಿಯ ಉದ್ದಗಲಕ್ಕೆ ಬಿತ್ತಿಬೆಳೆದ ಹಿಂಸೋನ್ಮಾದದ ಧರ್ಮಕಾರ ಸ್ವತಃ ಪೇಜಾವರರಿಗೇ ಧರ್ಮಸಂಕಟಕ್ಕೆ ಈಡು ಮಾಡಿತ್ತು. ತಮ್ಮ ಸಂದಿಗ್ಧತೆ ಹೊರಗೆಲ್ಲೂ ತೋರಿಸಿಕೊಳ್ಳದೆ ಒಳಗೊಳಗೇ ಚಡಪಡಿಸಿದ ಪೇಜಾವರರು ಮಾತಿನೇಟು ಮುತಾಲಿಕ್‍ಗೆ ಕೊಟ್ಟರು. ಗೋಕುಲಾಷ್ಠಮಿಗೂ ಇಮಾಮ್ ಸಾಬಿಗೂ ಎತ್ತನಿಂದೆತ್ತಣ ಸಂಬಂಧ ಎಂಬುದು ಮುತಾಲಿಕ್‍ನ ಮಂಗಾಟವಾಗಿತ್ತು.
ಈ ಕಾಲಕ್ಕೆ “ಮಾರು”ತ್ತರ ಕೊಟ್ಟ ಪೇಜಾವರರು ಉಡುಪಿ ಕೃಷ್ಣಮಠ ಮತ್ತು ಮುಸ್ಲಿಮರ ಮಧ್ಯೆ ಬಿಡಿಸಲಾಗದ ನಂಟಿರುವ ಇತಿಹಾಸ ಬಿಚ್ಚಿಟ್ಟಿದ್ದರು. 1904ರಲ್ಲೇ ಹಾಜಿ ಅಬ್ದುಲ್ಲಾ ಎಂಬ ಸೆಕ್ಯುಲರ್ ಸಾಬಣ್ಣ ತನ್ನ ಗುರುವಿನ ಗುರುಗಳಿಗೇ ಮನೆಗೆ ಕರೆದೊಯ್ದು ಕಾಣಿಕೆ ಕೊಟ್ಟು ಕಳಿಸಿದ್ದರು; 800 ವರ್ಷಗಳ ಹಿಂದೆಯೇ ಮಧ್ವಾಚಾರ್ಯರು ಸಾಯ್ಬರು ನೀಡಿದ ಸನ್ಮಾನ-ಗೌರವ ಮನಃಪೂರ್ವಕ ಸ್ವೀಕರಿಸಿ ಖುಷಿಗೊಂಡಿದ್ದರು. ಸಾಬರೊಂದಿಗೆ ಮಧ್ವಾಚಾರಿಗೆ ಅನ್ಯೋನ್ಯ ಸಂಬಂಧವೂ ಇತ್ತು. ಮಂತ್ರಾಲಯದ ರಾಘವೇಂದ್ರ ಸ್ವಾಮಿ ದೇಗುಲಕ್ಕೆ ಜಾಗ ಕೊಟ್ಟದ್ದು ಸಾಯ್ಬರ ಸುಲ್ತಾನ; ಉತ್ತರಾದಿ ಮಠದ ಸತ್ಯಭೋಧ ಸ್ವಾಮಿಗೂ ಮುಸ್ಲಿಮರ ದೊರೆಗಳಿಗೂ ಒಡನಾಟವಿತ್ತು…… ಎಂಬಂಥ ಹಲವು ಹಿಂದೂ-ಮುಸ್ಲಿಮ್ ಬಾಂಧವ್ಯದ ನಿದರ್ಶನ ನೀಡಿದ್ದರು ಪೇಜಾವರರು. ಇದು ಮುತಾಲಿಕ್‍ನಂಥ ಬಾಯಿಬಡುಕರ ಹಿಂದೂತ್ವ ಬರೀ ಬೂಟಾಟಿಕೆಯದು ಎಂಬುದನ್ನು ನಿಸ್ಸಂದಿಗ್ಧವಾಗಿ ಸಾಬೀತು ಮಾಡುವಂತಿತ್ತು.
ಜಿದ್ದು-ಸೇಡಿನ ಹಿಂದೂತ್ವದಿಂದ ತಲೆ ತೊಳೆಸಿಕೊಂಡಿರುವ ಶೂದ್ರ ಸಂತತಿಯ ಕೇಸರಿ ಭಾವೋದ್ವೇಗದ ಅಮಲು ಇಳಿಸುವಂತಿರುವ ಪೇಜಾವರರ ತರ್ಕ-ವಾದ ಕೇಳಿ ಸಂಘಪರಿವಾರದ ತಂತ್ರಗಾರರು ತಲೆ-ತಲೆ ಚಚ್ಚಿಕೊಂಡರು. ಪೇಜಾವರರನ್ನು ಗುಟ್ಟಾಗಿ ಸಂಧಿಸಿ ಓಟ್‍ಬ್ಯಾಂಕ್ ಹಿಂದೂತ್ವಕ್ಕೆ ಧಕ್ಕೆ ತರದಂತೆ ತಾಕೀತು ಮಾಡಿದ್ದರು ಸಂಘಿ ಸರದಾರರು. ಮುಂದಿನ ರಂಜಾನ್ ಹೊತ್ತಲ್ಲಿ ಇಂಥ ಗೊಂದಲ-ಗಲಾಟೆ ಮಾಡದಂತೆ ಎಚ್ಚರಿಸಲಾಗಿತ್ತೆಂದು ಮಠದ ಗೋಡೆ-ಕಂಬಗಳು ಈಗ ಪಿಸುಗುಟ್ಟುತ್ತಿವೆ! ಹೀಗಾಗಿ ಈ ಬಾರಿಯ ರಂಜಾನ್ ಹಬ್ಬ ಹತ್ತಿರತ್ತಿರ ಬರುತ್ತಿದ್ದಂತೆಯೇ ಪೇಜಾವರ ಸ್ವಾಮಿಗೆ ಪೀಕಲಾಟ ಶುರುವಾಗಿತ್ತು. ಇಫ್ತಿಯಾರ್ ಕೂಟ ಆಯೋಜನೆಯಿಂದ ತಪ್ಪಿಸಿಕೊಳ್ಳಲು ಉಪಾಯ ಹುಡುಕತೊಡಗಿದ್ದರು. ಒಂದೆಡೆ ಮುಸ್ಲಿಮರ ಜೊತೆಗಿನ ಸ್ನೇಹ-ಸಂಪರ್ಕದ ಸೆಕ್ಯುಲರ್ ಮುಖವಾಡದ ಚಿರತೆ; ಇನ್ನೊಂದೆಡೆ ವಿಎಚ್‍ಪಿ-ಆರೆಸೆಸ್ ಧಮಕಿ. ಇಫ್ತಾರ್‍ಕೂಟ ಮಾಡೊದಾ? ಬಿಡೋದಾ? ಎಂಬ ದ್ವಂದ್ವಕ್ಕೆ ಬಿದ್ದು ಒದ್ದಾಡಿದರು ಪೇಜಾವರ ಸ್ವಾಮೀಜಿ, ಪಾಪ!
ಕಳೆದ ಬಾರಿಯ ಇಫ್ತಾರ್‍ಕೂಟದ ದೆಸೆಯಿಂದ ಪೇಜಾವರರ ಹಿಂದೂತ್ವದ ಪ್ರಭಾವಳಿ ಮಸುಕಾಗುವ ಗಂಡಾಂತರ ಎದುರಾಗಿತ್ತು. ಅದನ್ನು ಹೇಗುಹೇಗೋ ಮ್ಯಾನೇಜ್ ಮಾಡಿದ್ದ ಪೇಜಾವರರು ಟೀಕೆ, ತಕರಾರಿಗೆ ತಾನೊಬ್ಬ ಸ್ವಧರ್ಮ ನಿಷ್ಠನೂ ಪರಧರ್ಮ ಸಹಿಷ್ಣುವೂ ಎಂದುತ್ತರಿಸಿದ್ದರು. ಸ್ವಾಮೀಜಿಯ ನಾಜೂಕಿನ ಮಾತುಗಾರಿಕೆಯಿಂದ ಆತನಿಗೆ ಕಾಲಧರ್ಮ, ದೇಶಧರ್ಮ ಮತ್ತು ಧರ್ಮದ ಧರ್ಮ ಅರಿವು ತಡವಾಗಿಯಾದರೂ ಆಗಿದೆಯಲ್ಲ ಎಂದು ಮನುಷ್ಯತ್ವವಾದಿಗಳು ನಿಟ್ಟುಸಿರು ಬಿಟ್ಟಿದ್ದರು. ಆದರೆ ಪೇಜಾವರರೀಗ ಉಲ್ಟಾ ಹೊಡೆದಿದ್ದಾರೆ! ತನ್ನ ಅಸಲಿ ಹಿಂದೂತ್ವದ ಅವತಾರ ತೋರಿಸಿದ್ದಾರೆ. “ಈ ಬಾರಿ ಮಠದಲ್ಲಿ ಇಫ್ತಾರ್‍ಕೂಟ ನಡೆಸುವುದಿಲ್ಲ” ಎಂದ್ಹೇಳಿ ತಾನೊಬ್ಬ ಶುದ್ಧ ಎಡಬಿಡಂಗಿ ಎಂಬ ಅನುಮಾನ ಖಾತ್ರಿಪಡಿಸಿದ್ದಾರೆ. ಪೇಜಾವರರ ಇಫ್ತಾರ್‍ಕೂಟ ಬೂಟಾಟಿಕೆ ಆಟ ಎಂಬುದು ಈಗ ಸಾಬೀತಾಗಿಹೋಗಿದೆ.
ತಾನೇ ಹಠ ಮಾಡಿ ಬಿಜೆಪಿ ಎಮ್ಮೆಲ್ಲೆಗಿರಿ ಟಿಕೆಟ್ ಕೊಡಿಸಿದ್ದ ರಂಗೀಲಾ ರಘುಪತಿ ಭಟ್ಟ ಮತ್ತು ವಿಶ್ವ ಹಿಂದೂ ಪರಿಷತ್, ಆರೆಸೆಸ್‍ನ ದಿಗ್ಗಜರ ಒತ್ತಡಕ್ಕೆ ಮಣಿದ ಪೇಜಾವರ ಸ್ವಾಮಿ ಈ ಬಾರಿ ಇಫ್ತಾರ್‍ಕೂಟ ಮಾಡಿಲ್ಲ ಎಂಬುದು ಬಹಿರಂಗ ರಹಸ್ಯ. ಸ್ವಾಮೀಜಿ ಮಠಕ್ಕೆ ಸಾಬರ ಕರೆಸಿಕೊಂಡು ಒಡನಾಡಿದರೆ ಕರಾವಳಿಯಲ್ಲಿ ಈಗ ಹುರಿಗೊಂಡಿರುವ ಹರಾಮಿ ಹಿಂದೂತ್ವ ಕಾವು ಕಡಿಮೆಯಾಗುತ್ತದೆಂಬ ದೂ(ದು)ರಾಲೋಚನೆ ರಘುಪತಿ ಭಟ್ಟನಂಥ ಹೇತ್ಲಾಂಡಿ ಚೆಡ್ಡಿಗಳದು; ಸ್ವಾಮಿಯ ಇಫ್ತಾರ್‍ಕೂಟದಿಂದ ಹಿಂದೂತ್ವದ ಹೋರಾಟದ ಕಾಲಾಳುಗಳಾದ ಶೂದ್ರರು ಬಿಜೆಪಿ-ಪರಿವಾರದಿಂದ ವಿಮುಖರಾಗುತ್ತಾರೆಂಬುದು ವಿಎಚ್‍ಪಿ-ಆರೆಸೆಸ್ ಡಾನ್‍ಗಳ ಲೆಕ್ಕಾಚಾರ!
ಶಿಷ್ಯಾಗ್ರೇಸ್ ರಘುಪತಿ ಭಟ್ಟ ಮತ್ತು ಪರಿವಾರ ಪರಾಕ್ರಮಿಗಳ ಏಕದೃಷ್ಟಿಯಿಂದ ಬಚಾವಾಗಲು ಇಫ್ತಾರ್‍ಕೂಟಕ್ಕೆ ಎಳ್ಳು ನೀರು ಬಿಟ್ಟಿರುವ ಪೇಜಾವರರು ತಾನು ಸುಬಗನೆಂದು ತೋರಿಸಿಕೊಳ್ಳಲು ಸಾಬರ ಮೇಲೆ ಗೂಬೆ ಕೂರಿಸುತ್ತಿರುವುದು ಆತ್ಮವಂಚನೆಯ ಪರಮಾವಧಿಯೇ ಸರಿ! ಮಠದ ಇಫ್ತಾರ್‍ಕೂಟಕ್ಕೆ ಬರಲು ಮುಸ್ಲಿಮರಿಗೆ ಮನಸ್ಸಿಲ್ಲ, ಕಳೆದ ಬಾರಿ ದೇವರಮೂರ್ತಿಯಿರುವ ಕೋಣೆಯಲ್ಲಿ ಇಫ್ತಾರ್ ನಡೆಸಲಾಗಿತ್ತೆಂಬ ಸಂಶಯ ಸಾಬರ ಕಾಡುತ್ತಿದೆ. ಆದರೆ ದೇವರಮೂರ್ತಿ ಕೂಟದ ಕೋಣೆಯಲ್ಲಿರಲಿಲ್ಲ; ಅದು ಪಕ್ಕದ ಕೊಠಡಿಯಲ್ಲಿತ್ತೆಂದು ಕಲಾತ್ಮಕವಾಗಿ ಸುಳ್ಳು ಸಬೂಬು ಪೋಣಿಸಿ ಹರಿಬಿಡುತ್ತಿದ್ದಾರೆ. ಮರುಕ್ಷಣವೇ ಮಾತು ಬದಲಿಸಿ ಈ ಬಾರಿ ರಂಜಾನ್ ಹಬ್ಬದಲ್ಲಿ ತಾನು ಪ್ರವಾಸದಲ್ಲಿದ್ದರಿಂದ ಮಠದಲ್ಲಿ ಇಫ್ತಾರ್‍ಕೂಟ ಏರ್ಪಡಿಸಲು ಸಾಧ್ಯವಾಗಲಿಲ್ಲ ಎಂದು ಭೋಂಗು ಬಿಡುತ್ತಾ ತಮ್ಮ “ಅದ್ವೈತ ದ್ವಂದ್ವ”ದ ತತ್ವಾನುಷ್ಠಾನ ಪ್ರದರ್ಶಿಸಿದ್ದಾರೆ.
ಕೋಮುಸೌಹಾರ್ದದ ಹೆಸರಲ್ಲಿ ಒಂದಡಿ ಮುಂದಿಟ್ಟಿದ್ದ ಪೇಜಾವರರು ಈ ವರ್ಷ ಏಕ್‍ದಮ್ ಹತ್ತಡಿ ಹಿಂದಿಟ್ಟಿದ್ದಾರೆ. ಪೇಜಾವರರಂತ “ಪೂಜ್ಯ”ರ ಹುಚ್ಚಾಟದಿಂದಾಗಿಯೇ ಹಿಂದೂತ್ವ ವಿಕಾರ ರೂಪತಾಳಿ ಸ್ಮಶಾನದಂತಾಗಿದೆ. ಅಮಾಯಕರ ಮಾರಣಹೋಮವಾಗುತ್ತಿದೆ; ಎಷ್ಟೊತ್ತಿಗೆ ಅದೆಂತ ಅನಾಹುತವಾಗುತ್ತಿದೇ ಎಂಬ ಆತಂಕ ಕರಾವಳಿ ಸೆರಗಲ್ಲಿ ಸುತ್ತಿಕೊಂಡಿದೆ. ಈ ಪಾಪ ಹಿಂದೂತ್ವದ ಹರಿಕರಗಳಿಗೆ ತಟ್ಟದೇ ಇರದು! ಪೇಜಾವರರ ಇಫ್ತಾರ್ ಕೂಟದ ಆಟ ಹಿಂದೂತ್ವದ ಹಿಡನ್ ಅಜೆಂಡಾದ ಹಿಕಮತ್ತೆಂದು ಅನುಮಾನ ಬರದಿರಲು ಸಾಧ್ಯವಾ?

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...