Homeಕರ್ನಾಟಕಇಬ್ಬರಿಗೆ ಖಾತೆ ಹಂಚಿಕೆ: ಅದೂ ಒಂದು ಬಿಕ್ಕಟ್ಟೇ!

ಇಬ್ಬರಿಗೆ ಖಾತೆ ಹಂಚಿಕೆ: ಅದೂ ಒಂದು ಬಿಕ್ಕಟ್ಟೇ!

- Advertisement -
- Advertisement -

| ಮಲ್ಲನಗೌಡರ್ |

ಈ ಸಮ್ಮಿಶ್ರ ಸರ್ಕಾರದ ಪ್ರತಿ ಹೆಜ್ಜೆಯಲ್ಲೂ ಬಿಕ್ಕಟ್ಟುಗಳೇ ಇವೆ. ನೇರವಾದ, ಸುಲಲಿತವಾಗಿ ಯಾವುದೂ ಆಗುತ್ತಿಲ್ಲ. ಮೈತ್ರಿ ಪಕ್ಷಗಳ ನಾಯಕರು ದಿನವೂ ರಾಜಕೀಯದ ಬಗ್ಗೆಯೇ ಹೆಚ್ಚು ತಲೆ ಕೆಡಿಸಿಕೊಂಡಿರುವುದರಿಂದ ಇಬ್ಬರು ಹೊಸ ಸಚಿವರಿಗೆ ಖಾತೆ ನೀಡುವುದು ಒಂದು ಸಣ್ಣ ಬಿಕ್ಕಟ್ಟೇ ಆಗಿರುವಂತಿದೆ.

ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಸೇರಿದ ಇಬ್ಬರು ಪಕ್ಷೇತರರಿಗೆ 11-12 ದಿನವಾದರೂ ಖಾತೆ ಹಂಚಿಕೆ ಆಗಿಲ್ಲ. ಈಗ ವಿ. ಶಂಕರ್ ಕಾಂಗ್ರೆಸ್ ಸದಸ್ಯರು. ಅವರಿಗೆ ಕಾಂಗ್ರೆಸ್ ಪಾಲಿನ ಖಾತೆಯನ್ನೇ ಕೊಡದೇ ಬೇರೆ ದಾರಿಯೇ ಇಲ್ಲದಂತಾಗಿದೆ. ಮುಳಬಾಗಿಲು ಪಕ್ಷೇತರ ಶಾಸಕ ಎಚ್. ನಾಗೇಶರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯೇ ಬೇಕೆಂದು ಎಂದು ಪಟ್ಟು ಹಿಡಿದಿದ್ದಾರೆ.

ಆರಂಭದಲ್ಲಿ ತಾವು ನಿಭಾಯಿಸಿದ್ದ ಅರಣ್ಯ ಖಾತೆಯೇ ಬೇಕು ಎಂದು ಶಂಕರ್ ಪಟ್ಟು ಹಿಡಿದಿದ್ದಾರೆ. ರಮೇಶ ಜಾರಕಿಹೊಳಿ ನಿಭಾಯಿಸಿದ್ದ ಪೌರಾಡಳಿತ ಖಾತೆಯನ್ನು ನಂತರ ಕಾಗ್ರೆಸ್‍ನ ಸಿ.ಎಸ್ ಶಿವಳ್ಳಿ ನಿರ್ವಹಿಸಿದ್ದರು. ಅವರ ನಿಧನದ ನಂತರ ಖಾಲಿ ಇರುವ ಆ ಸ್ಥಾನವನ್ನು ಒಪ್ಪಲು ಶಂಕರ್ ಸಿದ್ದರಿಲ್ಲ. ಈಗ ಅರಣ್ಯ ಖಾತೆಗೆ ಪ್ರಬಲ ನಾಯಕ ಕಾಂಗ್ರೆಸ್‍ನ ಸತೀಶ ಜಾರಕಿಹೊಳಿ ಸಚಿವರಿದ್ದು ಅವರಿಂದ ಈ ಖಾತೆ ಕಿತ್ತು ಕೊಡಲೂ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‍ನ ಹಿರಿಯ ನಾಯಕರೂ ಒಪ್ಪುವುದಿಲ್ಲ. ಶಂಕರ್‍ಗೆ ಅರಣ್ಯ ಸಚಿವ ಖಾತೆ ನೀಡಲು ಒಂದು ಮಟ್ಟಿನ ಪುನರಾರಚನೆ ಮಾಡಬೇಕು ಇದರಿಂದ ಸಚಿವರಲ್ಲಿ ಖಾತೆಗಾಗಿ ಮತ್ತೆ ಸ್ಪರ್ಧೆ ಏರ್ಪಡಬಹುದು. ಅದರಿಂದಾಗಿ ಶಂಕರ್ ಅವರು ಪೌರಾಡಳಿತ ಖಾತೆ ಒಪ್ಪದೇ ಬೇರೆ ದಾರಿಯೇ ಇಲ್ಲ. ಇಂಥದ್ದೇ ಖಾತೆ ಎಂದು ಒತ್ತಾಯಿಸುತ್ತಾ ಕೂತರೆ ಇನ್ನಷ್ಟು ದಿನ ಖಾತೆ ರಹಿತ ಸಚಿವರಾಗಿಯೇ ಮುಂದುವರೆಯಬೇಕಾಗುತ್ತೆ ಎಂದು ಸಿಎಂ ಸೂಚನೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

ಬಿಎಸ್‍ಪಿಯ ಎನ್. ಮಹೇಶ್ ಸಚಿನ ಸ್ಥಾನಕ್ಕೆ ರಾಜಿನಾಮೆ ನೀಡಿದಾಗಿನಿಂದಲೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಖಾಲಿಯೇ ಇದೆ. ಸದ್ಯ ಅದನ್ನೇ ತಮಗೆ ನೀಡಲಿ ಎಂದು ನಾಗೇಶ ಪಟ್ಟು ಹಿಡಿದಿದ್ದಾರೆ. ಜೆಡಿಎಸ್ ಪಾಲಿನ ಖಾತೆಗಳಲ್ಲಿಯೇ ಮಹೇಶರಿಗೆ ನೀಡಲಾಗಿತ್ತು. ಈಗ ನಾಗೇಶರಿಗೆ ಕೊಡಲು ಹೋದರೆ, ಜೆಡಿಎಸ್‍ನ ಯಾವುದಾದರೂ ಸಚಿವರು ತಮಗೆ ಅದನ್ನು ಕೊಡಿ ಎಂದು ಬೇಡಿಕೆ ಇಡಬಹುದೇನೋ. ಬಹಳಷ್ಟು ಸಮಯದಿಂದ ಖಾಲಿಯೇ ಇರುವ ಶಿಕ್ಷಣ ಖಾತೆಯ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಯೇ ಇಲ್ಲ. ಶಾಲೆಗಳು ಪುನರಾರಂಭವಾದರೂ ಅಧಿಕಾರಿಗಳ ನಿರ್ದೇಶನದಂತೆ ಎಲ್ಲವೂ ನಡೆಯುತ್ತಿದೆ. ನಾಗೇಶರಿಗೆ ಶಿಕ್ಷಣ ಖಾತೆ ಕೊಡದಿದ್ದರೆ, ಕುಮಾರಸ್ವಾಮಿ ತಮ್ಮಲ್ಲೇ ಇರವ ಹಲವು ಖಾತೆಗಳ ಪೈಕಿ ಒಂದನ್ನು ನೀಡಬೇಕಾಗುತ್ತದೆ.

 

ಶಂಕರ್ ಮತ್ತು ನಾಗೇಶರನ್ನು ಸಚಿವರನ್ನಾಗಿ ಮಾಡಿದ ಕಾಂಗ್ರೆಸ್‍ನ ನಾಯಕರಿಗೆ ಖಾತೆಗಳ ಬಗ್ಗೆ ಗಮನ ಹರಿಸಲು ಪೂರೈಸುತ್ತಿಲ್ಲ. ಅತೃಪ್ತ ಶಾಸಕರನ್ನು ಓಲೈಸುವ ಯತ್ನದಲ್ಲೂ ಕಾಂಗ್ರೆಸ್‍ಗೆ ಆಸಕ್ತಿ ಹೋದಂತಿದೆ. ಚಿಂಚೋಳಿಯ ಗೆಲುವಿನಿಂದ ಒಂದು ಸೀಟು ಹೆಚ್ಚು ಕಡಿಮೆ ಮಾಡಿಕೊಂಡಿರುವ ಬಿಜೆಪಿ ಸದಕ್ಕೆ ಶಂಕರ್, ನಾಗೇಶರ ಮೇಲೆ ಅಶೆ ಬಿಟ್ಟಿದೆ ಎಂಬುದು ಸತ್ಯ. ರೋಶನ್ ಬೇಗ್‍ರಿಂದ ಖಾಲಿಯಾದ ಸ್ಥಾನವನ್ನು ಶಂಕರ್ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಸಮಾಧಾನ ಹೊಂದಿದೆ.

ಸತೀಶ್ ಜಾರಕಿಹೊಳಿ

ಅರಣ್ಯ ಇಲಾಖೆಯ ನೇಮಕಾತಿಗಳಲ್ಲಿ ಶೇ 30ರಷ್ಟನ್ನು ಅರಣ್ಯವಾಸಿಗಳಿಗೆ ಮೀಸಲು ಇರುವಂತೆ ಕ್ರಮ ಕೈಗೊಂಡ ಸತೀಶ ಜಾರಕಿಹೊಳಿ ಆ ಖಾತೆಯನ್ನು ಬಿಟ್ಟು ಕೊಡಲಾರರು. ಹೀಗಾಗಿ ಶಂಕರ್ ಅನಿವಾರ್ಯವಾಗಿ ಪೌರಾಡಳಿತ ಖಾತೆ ಒಪ್ಪಿಕೊಳ್ಳಲೇ ಬೇಕಾಗಬಹುದು. ಸದ್ಯಕ್ಕೆ ಮೈತ್ರಿಯ ನಾಯಕರಿಗೆ ಶಂಕರ್ ಮತ್ತು ನಾಗೇಶರ ಖಾತೆಗಳ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಇನ್ನಷ್ಟು ಅವಧಿಗೆ ಶಂಕರ್ ಮತ್ತು ನಾಗೇಶ ಖಾತೆರಹಿತ ಸಚಿವರಾಗಿಯೇ ಮುಂದುವರೆಯಬೇಕು ಅಥವಾ ಈಗ ಸೂಚಿಸಿದ ಖಾತೆಗಳನ್ನು ಒಪ್ಪಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...