Homeಕರ್ನಾಟಕಇಬ್ಬರಿಗೆ ಖಾತೆ ಹಂಚಿಕೆ: ಅದೂ ಒಂದು ಬಿಕ್ಕಟ್ಟೇ!

ಇಬ್ಬರಿಗೆ ಖಾತೆ ಹಂಚಿಕೆ: ಅದೂ ಒಂದು ಬಿಕ್ಕಟ್ಟೇ!

- Advertisement -
- Advertisement -

| ಮಲ್ಲನಗೌಡರ್ |

ಈ ಸಮ್ಮಿಶ್ರ ಸರ್ಕಾರದ ಪ್ರತಿ ಹೆಜ್ಜೆಯಲ್ಲೂ ಬಿಕ್ಕಟ್ಟುಗಳೇ ಇವೆ. ನೇರವಾದ, ಸುಲಲಿತವಾಗಿ ಯಾವುದೂ ಆಗುತ್ತಿಲ್ಲ. ಮೈತ್ರಿ ಪಕ್ಷಗಳ ನಾಯಕರು ದಿನವೂ ರಾಜಕೀಯದ ಬಗ್ಗೆಯೇ ಹೆಚ್ಚು ತಲೆ ಕೆಡಿಸಿಕೊಂಡಿರುವುದರಿಂದ ಇಬ್ಬರು ಹೊಸ ಸಚಿವರಿಗೆ ಖಾತೆ ನೀಡುವುದು ಒಂದು ಸಣ್ಣ ಬಿಕ್ಕಟ್ಟೇ ಆಗಿರುವಂತಿದೆ.

ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಸೇರಿದ ಇಬ್ಬರು ಪಕ್ಷೇತರರಿಗೆ 11-12 ದಿನವಾದರೂ ಖಾತೆ ಹಂಚಿಕೆ ಆಗಿಲ್ಲ. ಈಗ ವಿ. ಶಂಕರ್ ಕಾಂಗ್ರೆಸ್ ಸದಸ್ಯರು. ಅವರಿಗೆ ಕಾಂಗ್ರೆಸ್ ಪಾಲಿನ ಖಾತೆಯನ್ನೇ ಕೊಡದೇ ಬೇರೆ ದಾರಿಯೇ ಇಲ್ಲದಂತಾಗಿದೆ. ಮುಳಬಾಗಿಲು ಪಕ್ಷೇತರ ಶಾಸಕ ಎಚ್. ನಾಗೇಶರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯೇ ಬೇಕೆಂದು ಎಂದು ಪಟ್ಟು ಹಿಡಿದಿದ್ದಾರೆ.

ಆರಂಭದಲ್ಲಿ ತಾವು ನಿಭಾಯಿಸಿದ್ದ ಅರಣ್ಯ ಖಾತೆಯೇ ಬೇಕು ಎಂದು ಶಂಕರ್ ಪಟ್ಟು ಹಿಡಿದಿದ್ದಾರೆ. ರಮೇಶ ಜಾರಕಿಹೊಳಿ ನಿಭಾಯಿಸಿದ್ದ ಪೌರಾಡಳಿತ ಖಾತೆಯನ್ನು ನಂತರ ಕಾಗ್ರೆಸ್‍ನ ಸಿ.ಎಸ್ ಶಿವಳ್ಳಿ ನಿರ್ವಹಿಸಿದ್ದರು. ಅವರ ನಿಧನದ ನಂತರ ಖಾಲಿ ಇರುವ ಆ ಸ್ಥಾನವನ್ನು ಒಪ್ಪಲು ಶಂಕರ್ ಸಿದ್ದರಿಲ್ಲ. ಈಗ ಅರಣ್ಯ ಖಾತೆಗೆ ಪ್ರಬಲ ನಾಯಕ ಕಾಂಗ್ರೆಸ್‍ನ ಸತೀಶ ಜಾರಕಿಹೊಳಿ ಸಚಿವರಿದ್ದು ಅವರಿಂದ ಈ ಖಾತೆ ಕಿತ್ತು ಕೊಡಲೂ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‍ನ ಹಿರಿಯ ನಾಯಕರೂ ಒಪ್ಪುವುದಿಲ್ಲ. ಶಂಕರ್‍ಗೆ ಅರಣ್ಯ ಸಚಿವ ಖಾತೆ ನೀಡಲು ಒಂದು ಮಟ್ಟಿನ ಪುನರಾರಚನೆ ಮಾಡಬೇಕು ಇದರಿಂದ ಸಚಿವರಲ್ಲಿ ಖಾತೆಗಾಗಿ ಮತ್ತೆ ಸ್ಪರ್ಧೆ ಏರ್ಪಡಬಹುದು. ಅದರಿಂದಾಗಿ ಶಂಕರ್ ಅವರು ಪೌರಾಡಳಿತ ಖಾತೆ ಒಪ್ಪದೇ ಬೇರೆ ದಾರಿಯೇ ಇಲ್ಲ. ಇಂಥದ್ದೇ ಖಾತೆ ಎಂದು ಒತ್ತಾಯಿಸುತ್ತಾ ಕೂತರೆ ಇನ್ನಷ್ಟು ದಿನ ಖಾತೆ ರಹಿತ ಸಚಿವರಾಗಿಯೇ ಮುಂದುವರೆಯಬೇಕಾಗುತ್ತೆ ಎಂದು ಸಿಎಂ ಸೂಚನೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

ಬಿಎಸ್‍ಪಿಯ ಎನ್. ಮಹೇಶ್ ಸಚಿನ ಸ್ಥಾನಕ್ಕೆ ರಾಜಿನಾಮೆ ನೀಡಿದಾಗಿನಿಂದಲೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಖಾಲಿಯೇ ಇದೆ. ಸದ್ಯ ಅದನ್ನೇ ತಮಗೆ ನೀಡಲಿ ಎಂದು ನಾಗೇಶ ಪಟ್ಟು ಹಿಡಿದಿದ್ದಾರೆ. ಜೆಡಿಎಸ್ ಪಾಲಿನ ಖಾತೆಗಳಲ್ಲಿಯೇ ಮಹೇಶರಿಗೆ ನೀಡಲಾಗಿತ್ತು. ಈಗ ನಾಗೇಶರಿಗೆ ಕೊಡಲು ಹೋದರೆ, ಜೆಡಿಎಸ್‍ನ ಯಾವುದಾದರೂ ಸಚಿವರು ತಮಗೆ ಅದನ್ನು ಕೊಡಿ ಎಂದು ಬೇಡಿಕೆ ಇಡಬಹುದೇನೋ. ಬಹಳಷ್ಟು ಸಮಯದಿಂದ ಖಾಲಿಯೇ ಇರುವ ಶಿಕ್ಷಣ ಖಾತೆಯ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಯೇ ಇಲ್ಲ. ಶಾಲೆಗಳು ಪುನರಾರಂಭವಾದರೂ ಅಧಿಕಾರಿಗಳ ನಿರ್ದೇಶನದಂತೆ ಎಲ್ಲವೂ ನಡೆಯುತ್ತಿದೆ. ನಾಗೇಶರಿಗೆ ಶಿಕ್ಷಣ ಖಾತೆ ಕೊಡದಿದ್ದರೆ, ಕುಮಾರಸ್ವಾಮಿ ತಮ್ಮಲ್ಲೇ ಇರವ ಹಲವು ಖಾತೆಗಳ ಪೈಕಿ ಒಂದನ್ನು ನೀಡಬೇಕಾಗುತ್ತದೆ.

 

ಶಂಕರ್ ಮತ್ತು ನಾಗೇಶರನ್ನು ಸಚಿವರನ್ನಾಗಿ ಮಾಡಿದ ಕಾಂಗ್ರೆಸ್‍ನ ನಾಯಕರಿಗೆ ಖಾತೆಗಳ ಬಗ್ಗೆ ಗಮನ ಹರಿಸಲು ಪೂರೈಸುತ್ತಿಲ್ಲ. ಅತೃಪ್ತ ಶಾಸಕರನ್ನು ಓಲೈಸುವ ಯತ್ನದಲ್ಲೂ ಕಾಂಗ್ರೆಸ್‍ಗೆ ಆಸಕ್ತಿ ಹೋದಂತಿದೆ. ಚಿಂಚೋಳಿಯ ಗೆಲುವಿನಿಂದ ಒಂದು ಸೀಟು ಹೆಚ್ಚು ಕಡಿಮೆ ಮಾಡಿಕೊಂಡಿರುವ ಬಿಜೆಪಿ ಸದಕ್ಕೆ ಶಂಕರ್, ನಾಗೇಶರ ಮೇಲೆ ಅಶೆ ಬಿಟ್ಟಿದೆ ಎಂಬುದು ಸತ್ಯ. ರೋಶನ್ ಬೇಗ್‍ರಿಂದ ಖಾಲಿಯಾದ ಸ್ಥಾನವನ್ನು ಶಂಕರ್ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಸಮಾಧಾನ ಹೊಂದಿದೆ.

ಸತೀಶ್ ಜಾರಕಿಹೊಳಿ

ಅರಣ್ಯ ಇಲಾಖೆಯ ನೇಮಕಾತಿಗಳಲ್ಲಿ ಶೇ 30ರಷ್ಟನ್ನು ಅರಣ್ಯವಾಸಿಗಳಿಗೆ ಮೀಸಲು ಇರುವಂತೆ ಕ್ರಮ ಕೈಗೊಂಡ ಸತೀಶ ಜಾರಕಿಹೊಳಿ ಆ ಖಾತೆಯನ್ನು ಬಿಟ್ಟು ಕೊಡಲಾರರು. ಹೀಗಾಗಿ ಶಂಕರ್ ಅನಿವಾರ್ಯವಾಗಿ ಪೌರಾಡಳಿತ ಖಾತೆ ಒಪ್ಪಿಕೊಳ್ಳಲೇ ಬೇಕಾಗಬಹುದು. ಸದ್ಯಕ್ಕೆ ಮೈತ್ರಿಯ ನಾಯಕರಿಗೆ ಶಂಕರ್ ಮತ್ತು ನಾಗೇಶರ ಖಾತೆಗಳ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಇನ್ನಷ್ಟು ಅವಧಿಗೆ ಶಂಕರ್ ಮತ್ತು ನಾಗೇಶ ಖಾತೆರಹಿತ ಸಚಿವರಾಗಿಯೇ ಮುಂದುವರೆಯಬೇಕು ಅಥವಾ ಈಗ ಸೂಚಿಸಿದ ಖಾತೆಗಳನ್ನು ಒಪ್ಪಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...