Homeಕರ್ನಾಟಕಇಬ್ಬರಿಗೆ ಖಾತೆ ಹಂಚಿಕೆ: ಅದೂ ಒಂದು ಬಿಕ್ಕಟ್ಟೇ!

ಇಬ್ಬರಿಗೆ ಖಾತೆ ಹಂಚಿಕೆ: ಅದೂ ಒಂದು ಬಿಕ್ಕಟ್ಟೇ!

- Advertisement -
- Advertisement -

| ಮಲ್ಲನಗೌಡರ್ |

ಈ ಸಮ್ಮಿಶ್ರ ಸರ್ಕಾರದ ಪ್ರತಿ ಹೆಜ್ಜೆಯಲ್ಲೂ ಬಿಕ್ಕಟ್ಟುಗಳೇ ಇವೆ. ನೇರವಾದ, ಸುಲಲಿತವಾಗಿ ಯಾವುದೂ ಆಗುತ್ತಿಲ್ಲ. ಮೈತ್ರಿ ಪಕ್ಷಗಳ ನಾಯಕರು ದಿನವೂ ರಾಜಕೀಯದ ಬಗ್ಗೆಯೇ ಹೆಚ್ಚು ತಲೆ ಕೆಡಿಸಿಕೊಂಡಿರುವುದರಿಂದ ಇಬ್ಬರು ಹೊಸ ಸಚಿವರಿಗೆ ಖಾತೆ ನೀಡುವುದು ಒಂದು ಸಣ್ಣ ಬಿಕ್ಕಟ್ಟೇ ಆಗಿರುವಂತಿದೆ.

ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಸೇರಿದ ಇಬ್ಬರು ಪಕ್ಷೇತರರಿಗೆ 11-12 ದಿನವಾದರೂ ಖಾತೆ ಹಂಚಿಕೆ ಆಗಿಲ್ಲ. ಈಗ ವಿ. ಶಂಕರ್ ಕಾಂಗ್ರೆಸ್ ಸದಸ್ಯರು. ಅವರಿಗೆ ಕಾಂಗ್ರೆಸ್ ಪಾಲಿನ ಖಾತೆಯನ್ನೇ ಕೊಡದೇ ಬೇರೆ ದಾರಿಯೇ ಇಲ್ಲದಂತಾಗಿದೆ. ಮುಳಬಾಗಿಲು ಪಕ್ಷೇತರ ಶಾಸಕ ಎಚ್. ನಾಗೇಶರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯೇ ಬೇಕೆಂದು ಎಂದು ಪಟ್ಟು ಹಿಡಿದಿದ್ದಾರೆ.

ಆರಂಭದಲ್ಲಿ ತಾವು ನಿಭಾಯಿಸಿದ್ದ ಅರಣ್ಯ ಖಾತೆಯೇ ಬೇಕು ಎಂದು ಶಂಕರ್ ಪಟ್ಟು ಹಿಡಿದಿದ್ದಾರೆ. ರಮೇಶ ಜಾರಕಿಹೊಳಿ ನಿಭಾಯಿಸಿದ್ದ ಪೌರಾಡಳಿತ ಖಾತೆಯನ್ನು ನಂತರ ಕಾಗ್ರೆಸ್‍ನ ಸಿ.ಎಸ್ ಶಿವಳ್ಳಿ ನಿರ್ವಹಿಸಿದ್ದರು. ಅವರ ನಿಧನದ ನಂತರ ಖಾಲಿ ಇರುವ ಆ ಸ್ಥಾನವನ್ನು ಒಪ್ಪಲು ಶಂಕರ್ ಸಿದ್ದರಿಲ್ಲ. ಈಗ ಅರಣ್ಯ ಖಾತೆಗೆ ಪ್ರಬಲ ನಾಯಕ ಕಾಂಗ್ರೆಸ್‍ನ ಸತೀಶ ಜಾರಕಿಹೊಳಿ ಸಚಿವರಿದ್ದು ಅವರಿಂದ ಈ ಖಾತೆ ಕಿತ್ತು ಕೊಡಲೂ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‍ನ ಹಿರಿಯ ನಾಯಕರೂ ಒಪ್ಪುವುದಿಲ್ಲ. ಶಂಕರ್‍ಗೆ ಅರಣ್ಯ ಸಚಿವ ಖಾತೆ ನೀಡಲು ಒಂದು ಮಟ್ಟಿನ ಪುನರಾರಚನೆ ಮಾಡಬೇಕು ಇದರಿಂದ ಸಚಿವರಲ್ಲಿ ಖಾತೆಗಾಗಿ ಮತ್ತೆ ಸ್ಪರ್ಧೆ ಏರ್ಪಡಬಹುದು. ಅದರಿಂದಾಗಿ ಶಂಕರ್ ಅವರು ಪೌರಾಡಳಿತ ಖಾತೆ ಒಪ್ಪದೇ ಬೇರೆ ದಾರಿಯೇ ಇಲ್ಲ. ಇಂಥದ್ದೇ ಖಾತೆ ಎಂದು ಒತ್ತಾಯಿಸುತ್ತಾ ಕೂತರೆ ಇನ್ನಷ್ಟು ದಿನ ಖಾತೆ ರಹಿತ ಸಚಿವರಾಗಿಯೇ ಮುಂದುವರೆಯಬೇಕಾಗುತ್ತೆ ಎಂದು ಸಿಎಂ ಸೂಚನೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

ಬಿಎಸ್‍ಪಿಯ ಎನ್. ಮಹೇಶ್ ಸಚಿನ ಸ್ಥಾನಕ್ಕೆ ರಾಜಿನಾಮೆ ನೀಡಿದಾಗಿನಿಂದಲೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಖಾಲಿಯೇ ಇದೆ. ಸದ್ಯ ಅದನ್ನೇ ತಮಗೆ ನೀಡಲಿ ಎಂದು ನಾಗೇಶ ಪಟ್ಟು ಹಿಡಿದಿದ್ದಾರೆ. ಜೆಡಿಎಸ್ ಪಾಲಿನ ಖಾತೆಗಳಲ್ಲಿಯೇ ಮಹೇಶರಿಗೆ ನೀಡಲಾಗಿತ್ತು. ಈಗ ನಾಗೇಶರಿಗೆ ಕೊಡಲು ಹೋದರೆ, ಜೆಡಿಎಸ್‍ನ ಯಾವುದಾದರೂ ಸಚಿವರು ತಮಗೆ ಅದನ್ನು ಕೊಡಿ ಎಂದು ಬೇಡಿಕೆ ಇಡಬಹುದೇನೋ. ಬಹಳಷ್ಟು ಸಮಯದಿಂದ ಖಾಲಿಯೇ ಇರುವ ಶಿಕ್ಷಣ ಖಾತೆಯ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಯೇ ಇಲ್ಲ. ಶಾಲೆಗಳು ಪುನರಾರಂಭವಾದರೂ ಅಧಿಕಾರಿಗಳ ನಿರ್ದೇಶನದಂತೆ ಎಲ್ಲವೂ ನಡೆಯುತ್ತಿದೆ. ನಾಗೇಶರಿಗೆ ಶಿಕ್ಷಣ ಖಾತೆ ಕೊಡದಿದ್ದರೆ, ಕುಮಾರಸ್ವಾಮಿ ತಮ್ಮಲ್ಲೇ ಇರವ ಹಲವು ಖಾತೆಗಳ ಪೈಕಿ ಒಂದನ್ನು ನೀಡಬೇಕಾಗುತ್ತದೆ.

 

ಶಂಕರ್ ಮತ್ತು ನಾಗೇಶರನ್ನು ಸಚಿವರನ್ನಾಗಿ ಮಾಡಿದ ಕಾಂಗ್ರೆಸ್‍ನ ನಾಯಕರಿಗೆ ಖಾತೆಗಳ ಬಗ್ಗೆ ಗಮನ ಹರಿಸಲು ಪೂರೈಸುತ್ತಿಲ್ಲ. ಅತೃಪ್ತ ಶಾಸಕರನ್ನು ಓಲೈಸುವ ಯತ್ನದಲ್ಲೂ ಕಾಂಗ್ರೆಸ್‍ಗೆ ಆಸಕ್ತಿ ಹೋದಂತಿದೆ. ಚಿಂಚೋಳಿಯ ಗೆಲುವಿನಿಂದ ಒಂದು ಸೀಟು ಹೆಚ್ಚು ಕಡಿಮೆ ಮಾಡಿಕೊಂಡಿರುವ ಬಿಜೆಪಿ ಸದಕ್ಕೆ ಶಂಕರ್, ನಾಗೇಶರ ಮೇಲೆ ಅಶೆ ಬಿಟ್ಟಿದೆ ಎಂಬುದು ಸತ್ಯ. ರೋಶನ್ ಬೇಗ್‍ರಿಂದ ಖಾಲಿಯಾದ ಸ್ಥಾನವನ್ನು ಶಂಕರ್ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಸಮಾಧಾನ ಹೊಂದಿದೆ.

ಸತೀಶ್ ಜಾರಕಿಹೊಳಿ

ಅರಣ್ಯ ಇಲಾಖೆಯ ನೇಮಕಾತಿಗಳಲ್ಲಿ ಶೇ 30ರಷ್ಟನ್ನು ಅರಣ್ಯವಾಸಿಗಳಿಗೆ ಮೀಸಲು ಇರುವಂತೆ ಕ್ರಮ ಕೈಗೊಂಡ ಸತೀಶ ಜಾರಕಿಹೊಳಿ ಆ ಖಾತೆಯನ್ನು ಬಿಟ್ಟು ಕೊಡಲಾರರು. ಹೀಗಾಗಿ ಶಂಕರ್ ಅನಿವಾರ್ಯವಾಗಿ ಪೌರಾಡಳಿತ ಖಾತೆ ಒಪ್ಪಿಕೊಳ್ಳಲೇ ಬೇಕಾಗಬಹುದು. ಸದ್ಯಕ್ಕೆ ಮೈತ್ರಿಯ ನಾಯಕರಿಗೆ ಶಂಕರ್ ಮತ್ತು ನಾಗೇಶರ ಖಾತೆಗಳ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಇನ್ನಷ್ಟು ಅವಧಿಗೆ ಶಂಕರ್ ಮತ್ತು ನಾಗೇಶ ಖಾತೆರಹಿತ ಸಚಿವರಾಗಿಯೇ ಮುಂದುವರೆಯಬೇಕು ಅಥವಾ ಈಗ ಸೂಚಿಸಿದ ಖಾತೆಗಳನ್ನು ಒಪ್ಪಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...