Homeಕರ್ನಾಟಕಇಬ್ಬರಿಗೆ ಖಾತೆ ಹಂಚಿಕೆ: ಅದೂ ಒಂದು ಬಿಕ್ಕಟ್ಟೇ!

ಇಬ್ಬರಿಗೆ ಖಾತೆ ಹಂಚಿಕೆ: ಅದೂ ಒಂದು ಬಿಕ್ಕಟ್ಟೇ!

- Advertisement -
- Advertisement -

| ಮಲ್ಲನಗೌಡರ್ |

ಈ ಸಮ್ಮಿಶ್ರ ಸರ್ಕಾರದ ಪ್ರತಿ ಹೆಜ್ಜೆಯಲ್ಲೂ ಬಿಕ್ಕಟ್ಟುಗಳೇ ಇವೆ. ನೇರವಾದ, ಸುಲಲಿತವಾಗಿ ಯಾವುದೂ ಆಗುತ್ತಿಲ್ಲ. ಮೈತ್ರಿ ಪಕ್ಷಗಳ ನಾಯಕರು ದಿನವೂ ರಾಜಕೀಯದ ಬಗ್ಗೆಯೇ ಹೆಚ್ಚು ತಲೆ ಕೆಡಿಸಿಕೊಂಡಿರುವುದರಿಂದ ಇಬ್ಬರು ಹೊಸ ಸಚಿವರಿಗೆ ಖಾತೆ ನೀಡುವುದು ಒಂದು ಸಣ್ಣ ಬಿಕ್ಕಟ್ಟೇ ಆಗಿರುವಂತಿದೆ.

ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಸೇರಿದ ಇಬ್ಬರು ಪಕ್ಷೇತರರಿಗೆ 11-12 ದಿನವಾದರೂ ಖಾತೆ ಹಂಚಿಕೆ ಆಗಿಲ್ಲ. ಈಗ ವಿ. ಶಂಕರ್ ಕಾಂಗ್ರೆಸ್ ಸದಸ್ಯರು. ಅವರಿಗೆ ಕಾಂಗ್ರೆಸ್ ಪಾಲಿನ ಖಾತೆಯನ್ನೇ ಕೊಡದೇ ಬೇರೆ ದಾರಿಯೇ ಇಲ್ಲದಂತಾಗಿದೆ. ಮುಳಬಾಗಿಲು ಪಕ್ಷೇತರ ಶಾಸಕ ಎಚ್. ನಾಗೇಶರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯೇ ಬೇಕೆಂದು ಎಂದು ಪಟ್ಟು ಹಿಡಿದಿದ್ದಾರೆ.

ಆರಂಭದಲ್ಲಿ ತಾವು ನಿಭಾಯಿಸಿದ್ದ ಅರಣ್ಯ ಖಾತೆಯೇ ಬೇಕು ಎಂದು ಶಂಕರ್ ಪಟ್ಟು ಹಿಡಿದಿದ್ದಾರೆ. ರಮೇಶ ಜಾರಕಿಹೊಳಿ ನಿಭಾಯಿಸಿದ್ದ ಪೌರಾಡಳಿತ ಖಾತೆಯನ್ನು ನಂತರ ಕಾಗ್ರೆಸ್‍ನ ಸಿ.ಎಸ್ ಶಿವಳ್ಳಿ ನಿರ್ವಹಿಸಿದ್ದರು. ಅವರ ನಿಧನದ ನಂತರ ಖಾಲಿ ಇರುವ ಆ ಸ್ಥಾನವನ್ನು ಒಪ್ಪಲು ಶಂಕರ್ ಸಿದ್ದರಿಲ್ಲ. ಈಗ ಅರಣ್ಯ ಖಾತೆಗೆ ಪ್ರಬಲ ನಾಯಕ ಕಾಂಗ್ರೆಸ್‍ನ ಸತೀಶ ಜಾರಕಿಹೊಳಿ ಸಚಿವರಿದ್ದು ಅವರಿಂದ ಈ ಖಾತೆ ಕಿತ್ತು ಕೊಡಲೂ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‍ನ ಹಿರಿಯ ನಾಯಕರೂ ಒಪ್ಪುವುದಿಲ್ಲ. ಶಂಕರ್‍ಗೆ ಅರಣ್ಯ ಸಚಿವ ಖಾತೆ ನೀಡಲು ಒಂದು ಮಟ್ಟಿನ ಪುನರಾರಚನೆ ಮಾಡಬೇಕು ಇದರಿಂದ ಸಚಿವರಲ್ಲಿ ಖಾತೆಗಾಗಿ ಮತ್ತೆ ಸ್ಪರ್ಧೆ ಏರ್ಪಡಬಹುದು. ಅದರಿಂದಾಗಿ ಶಂಕರ್ ಅವರು ಪೌರಾಡಳಿತ ಖಾತೆ ಒಪ್ಪದೇ ಬೇರೆ ದಾರಿಯೇ ಇಲ್ಲ. ಇಂಥದ್ದೇ ಖಾತೆ ಎಂದು ಒತ್ತಾಯಿಸುತ್ತಾ ಕೂತರೆ ಇನ್ನಷ್ಟು ದಿನ ಖಾತೆ ರಹಿತ ಸಚಿವರಾಗಿಯೇ ಮುಂದುವರೆಯಬೇಕಾಗುತ್ತೆ ಎಂದು ಸಿಎಂ ಸೂಚನೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

ಬಿಎಸ್‍ಪಿಯ ಎನ್. ಮಹೇಶ್ ಸಚಿನ ಸ್ಥಾನಕ್ಕೆ ರಾಜಿನಾಮೆ ನೀಡಿದಾಗಿನಿಂದಲೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಖಾಲಿಯೇ ಇದೆ. ಸದ್ಯ ಅದನ್ನೇ ತಮಗೆ ನೀಡಲಿ ಎಂದು ನಾಗೇಶ ಪಟ್ಟು ಹಿಡಿದಿದ್ದಾರೆ. ಜೆಡಿಎಸ್ ಪಾಲಿನ ಖಾತೆಗಳಲ್ಲಿಯೇ ಮಹೇಶರಿಗೆ ನೀಡಲಾಗಿತ್ತು. ಈಗ ನಾಗೇಶರಿಗೆ ಕೊಡಲು ಹೋದರೆ, ಜೆಡಿಎಸ್‍ನ ಯಾವುದಾದರೂ ಸಚಿವರು ತಮಗೆ ಅದನ್ನು ಕೊಡಿ ಎಂದು ಬೇಡಿಕೆ ಇಡಬಹುದೇನೋ. ಬಹಳಷ್ಟು ಸಮಯದಿಂದ ಖಾಲಿಯೇ ಇರುವ ಶಿಕ್ಷಣ ಖಾತೆಯ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಯೇ ಇಲ್ಲ. ಶಾಲೆಗಳು ಪುನರಾರಂಭವಾದರೂ ಅಧಿಕಾರಿಗಳ ನಿರ್ದೇಶನದಂತೆ ಎಲ್ಲವೂ ನಡೆಯುತ್ತಿದೆ. ನಾಗೇಶರಿಗೆ ಶಿಕ್ಷಣ ಖಾತೆ ಕೊಡದಿದ್ದರೆ, ಕುಮಾರಸ್ವಾಮಿ ತಮ್ಮಲ್ಲೇ ಇರವ ಹಲವು ಖಾತೆಗಳ ಪೈಕಿ ಒಂದನ್ನು ನೀಡಬೇಕಾಗುತ್ತದೆ.

 

ಶಂಕರ್ ಮತ್ತು ನಾಗೇಶರನ್ನು ಸಚಿವರನ್ನಾಗಿ ಮಾಡಿದ ಕಾಂಗ್ರೆಸ್‍ನ ನಾಯಕರಿಗೆ ಖಾತೆಗಳ ಬಗ್ಗೆ ಗಮನ ಹರಿಸಲು ಪೂರೈಸುತ್ತಿಲ್ಲ. ಅತೃಪ್ತ ಶಾಸಕರನ್ನು ಓಲೈಸುವ ಯತ್ನದಲ್ಲೂ ಕಾಂಗ್ರೆಸ್‍ಗೆ ಆಸಕ್ತಿ ಹೋದಂತಿದೆ. ಚಿಂಚೋಳಿಯ ಗೆಲುವಿನಿಂದ ಒಂದು ಸೀಟು ಹೆಚ್ಚು ಕಡಿಮೆ ಮಾಡಿಕೊಂಡಿರುವ ಬಿಜೆಪಿ ಸದಕ್ಕೆ ಶಂಕರ್, ನಾಗೇಶರ ಮೇಲೆ ಅಶೆ ಬಿಟ್ಟಿದೆ ಎಂಬುದು ಸತ್ಯ. ರೋಶನ್ ಬೇಗ್‍ರಿಂದ ಖಾಲಿಯಾದ ಸ್ಥಾನವನ್ನು ಶಂಕರ್ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಸಮಾಧಾನ ಹೊಂದಿದೆ.

ಸತೀಶ್ ಜಾರಕಿಹೊಳಿ

ಅರಣ್ಯ ಇಲಾಖೆಯ ನೇಮಕಾತಿಗಳಲ್ಲಿ ಶೇ 30ರಷ್ಟನ್ನು ಅರಣ್ಯವಾಸಿಗಳಿಗೆ ಮೀಸಲು ಇರುವಂತೆ ಕ್ರಮ ಕೈಗೊಂಡ ಸತೀಶ ಜಾರಕಿಹೊಳಿ ಆ ಖಾತೆಯನ್ನು ಬಿಟ್ಟು ಕೊಡಲಾರರು. ಹೀಗಾಗಿ ಶಂಕರ್ ಅನಿವಾರ್ಯವಾಗಿ ಪೌರಾಡಳಿತ ಖಾತೆ ಒಪ್ಪಿಕೊಳ್ಳಲೇ ಬೇಕಾಗಬಹುದು. ಸದ್ಯಕ್ಕೆ ಮೈತ್ರಿಯ ನಾಯಕರಿಗೆ ಶಂಕರ್ ಮತ್ತು ನಾಗೇಶರ ಖಾತೆಗಳ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಇನ್ನಷ್ಟು ಅವಧಿಗೆ ಶಂಕರ್ ಮತ್ತು ನಾಗೇಶ ಖಾತೆರಹಿತ ಸಚಿವರಾಗಿಯೇ ಮುಂದುವರೆಯಬೇಕು ಅಥವಾ ಈಗ ಸೂಚಿಸಿದ ಖಾತೆಗಳನ್ನು ಒಪ್ಪಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...