Homeಅಂತರಾಷ್ಟ್ರೀಯಇರಾನ್ ಮೇಲೆ ಅಮೆರಿಕದ ಹದ್ದಿನ ಕಣ್ಣು

ಇರಾನ್ ಮೇಲೆ ಅಮೆರಿಕದ ಹದ್ದಿನ ಕಣ್ಣು

- Advertisement -
- Advertisement -

| ಭರತ್ ಹೆಬ್ಬಾಳ |

ದಶಕಗಳಿಂದ ಮಧ್ಯಪ್ರಾಚ್ಯ ಏಶಿಯಾವನ್ನು ಯುದ್ದ ನಕ್ಷೆಯಂತೆ ಉಪಯೋಗಿಸುತ್ತಿರುವ ಪಾಶ್ಚಾತ್ಯ ಶಕ್ತಿಗಳು ಈಗ ಇರಾನ್ ಮೇಲೆ ಕಣ್ಣಿಟ್ಟಿದೆ. ಪುರಾತನ ಕಾಲದಿಂದಲೂ ದೀರ್ಘ ಮತ್ತು ಮಹತ್ತರ ಇತಿಹಾಸ ಹೊಂದಿರುವ ಇರಾನ್, ಪ್ರಪಂಚದ ಮೂರನೇ ಅತಿ ದೊಡ್ಡ ಕಚ್ಚಾ ತೈಲ ನಿಕ್ಷೇಪಗಳು ಮತ್ತು ಪ್ರಪಂಚದ ಎರಡನೇ ದೊಡ್ಡ ನೈಸರ್ಗಿಕ ಅನಿಲ ನಿಕ್ಷೇಪಗಳನ್ನು ಹೊಂದಿರುವ ರಾಷ್ಟ್ರ.

ಅಮೆರಿಕದ ಕಾರ್ಯದರ್ಶಿ ಕೋಲಿನ್ ಪೊವೆಲ್ 2003, ಫೆಬ್ರುವರೀ 5ನೇ ತಾರೀಕು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಎದುರು ಒಂದು ವರದಿಯನ್ನು ನೀಡಿ ಮಾಡಿದ ಭಾಷಣ ಇರಾಕ್ ವಿರುದ್ದದ ಯುದ್ದಕ್ಕೆ ದಾರಿಮಾಡಿಕೊಟ್ಟಿತ್ತು. ಈ ಭಾಷಣದಲ್ಲಿ ಪೊವೆಲ್ ಅವರು ಸದ್ದಾಂ ಹುಸೇನ್ ಮತ್ತವರ ಆಡಳಿತವು ಉಗ್ರವಾದ ಪ್ರತಿಪಾದಿಸುವ ಅಲ್‍ಖೈದಾ ಅಂಗ ಸಂಘಟನೆಯ ಸಹಯೋಗದೊಂದಿಗೆ ರಾಸಾಯನಿಕ ಆಯುಧಗಳು ಮತ್ತು ಇನ್ನಷ್ಟು ವಿಧ್ವಂಸಕಾರಿ ಆಯುಧಗಳನ್ನು ಪಡೆದುಕೊಳ್ಳಲು ಪ್ರಯತ್ನಿಸುತ್ತಿದೆ ಮತ್ತದರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಪ್ರತಿಪಾದಿಸಿದ್ದರು. ತಾವು ಮಂಡಿಸಿದ ವರದಿಯಲ್ಲಿ ಬ್ರಿಟನ್ ಗೂಢಾಚಾರಿ ಸಂಸ್ಥೆ, ಉಪಗ್ರಹ ಚಿತ್ರಗಳು, ಆಡಿಯೋ ರೆಕಾರ್ಡಿಂಗ್ಸ್ ಮತ್ತು ಇನ್ನೂ ಇತರೆ ನಿರಾಕರಿಸಲಾಗದಂಥ ಪುರಾವೆಗಳೊಂದಿಗೆ ಇದೆ ಎಂದು ಒತ್ತು ಮಾಡಿ ಹೇಳಿದ್ದರು. ಈ ಘಟನೆಯ ಒಂದು ತಿಂಗಳ ನಂತರ ಅಮೆರಿಕ ಮತ್ತು ಹಿಂಬಾಲಕ ಪಡೆಗಳು ಇರಾಕ್ ಅನ್ನು ಬಾಂಬ್ಗಳ ಸುರಿಮಳೆಗೈದು ಧ್ವಂಸಗೊಳಿಸಿ ಇಲ್ಲಿಯವರೆಗೂ ಹತ್ತು ಲಕ್ಷಕ್ಕೂ ಮೇಲ್ಪಟ್ಟ ಜನ ಪ್ರಾಣ ಕಳೆದುಕೊಂಡಿದ್ದಾರೆ, ಅಷ್ಟೇ ಮಂದಿ ಆಂತರಿಕ ಹಾಗೂ ಅಂತರ್ರಾಷ್ಟ್ರೀಯ ನಿರಾಶ್ರಿತರಾಗಿದ್ದಾರೆ ಮತ್ತು ಇದಕ್ಕಾಗಿ ಅಮೆರಿಕ 1.06 ಟ್ರಿಲಿಯನ್ ಡಾಲರ್ ಖರ್ಚು ಮಾಡಿದೆ. ಇರಾಕಿನಲ್ಲಿ ತಾನು ಹುಟ್ಟು ಹಾಕಿದ್ದ ಕ್ರೌರ್ಯದಿಂದ ಐಸಿಸ್ ಹುಟ್ಟಲು ಕಾರಣವಾಯಿತು.

ಆದರೆ ಬಹುತೇಕ ಮಾಧ್ಯಮಗಳು ಮರೆಮಾಚಿದ ಸಂಗತಿಯೆಂದರೆ ಕೋಲಿನ್ ಪೊವೆಲ್ ಮಂಡಿಸಿದ ಇರಾಕ್ ವಿರುದ್ದದ ವರದಿ ಒಂದು ಕೃತಿಚೌರ್ಯ ವರದಿಯಾಗಿದ್ದು ಅದನ್ನು ಕೇಂಬ್ರಿಡ್ಜ್ ಪ್ರೋಫೆಸರ್ ಗ್ಲೆನ್ ರಾಂಗ್ವಾಲ ಹೊರತಂದ ವಾಸ್ತವವನ್ನು ಕೆಲವೇ ಕೆಲವು ಮಾಧ್ಯಮಗಳು ಪ್ರಕಟಿಸಿದ್ದವು. ಆ ಹತ್ತೊಂಬತ್ತು ಪುಟಗಳ ವರದಿಯಲ್ಲಿ 6ರಿಂದ 16ರ ಪುಟಗಳು ಆಕ್ಸ್‍ಫರ್ಡ್ ಯೂನಿವರ್ಸಿಟಿ ವಿದ್ಯಾರ್ಥಿಯ ಥೀಸಿಸ್ ಇಂದ ನೇರ ಕಾಪೀ ಪೇಸ್ಟ್ ಮಾಡಿದ ವರದಿ. ಆಗಿನ ಬ್ರಿಟಿಷ್ ಅಧ್ಯಕ್ಷ ಟೋನೀ ಬ್ಲೇರ್ ಆಫೀಸಿನಿಂದ ಬಂದದ್ದು ಎಂದು ಹೇಳಲಾಗುತ್ತಿದ್ದ ವರದಿ ಒಂದು ದೊಡ್ಡ ಕೃತಿಚೌರ್ಯ ದಾಖಲೆ. ಈ ಸುಳ್ಳು ದಾಖಲೆಯಿಂದ ತಮ್ಮೆಲ್ಲವನ್ನು ಕಳೆದುಕೊಂಡ ಇರಾಕ್ ಜನತೆ ಅತಿ ಕೆಟ್ಟ ಪರಿಣಾಮವನ್ನು ಎದುರಿಸುತ್ತಿದೆ. ಅಮೆರಿಕ ಮತ್ತದರ ಮಿತ್ರಪಡೆಗಳು ಉಪಯೋಗಿಸಿದ ಡೆಪ್ಲೀಟೆಡ್ ಯುರೇನೀಯಮ್ ಬಾಂಬ್ನಿಂದಾಗಿ ಆ ಪ್ರದೇಶಗಳಲ್ಲಿ ಹುಟ್ಟುವ ಅರ್ಧದಷ್ಟು ಮಕ್ಕಳು ಬರ್ತ್ ಡೆಫೆಕ್ಟ್ಸ್‍ಗಳಿಂದ ಹುಟ್ಟುತ್ತಿವೆ. 45% ಮಕ್ಕಳು ಹುಟ್ಟುವ ಮುಂಚಿತವಾಗಿ ಗರ್ಭದಲ್ಲೇ ಅಸುನೀಗುತ್ತವೆ. ಈ ಸಂಖ್ಯೆ ಯುದ್ದಕ್ಕೂ ಮುಂಚೆ 10%ಗಿಂತಲೂ ಕಡಿಮೆ ಇತ್ತು. ಇರಾಕ್‍ನಲ್ಲಿರುವ ಕಚ್ಚಾ ತೈಲವನ್ನು ಲಪಟಾಯಿಸಲು ಅಮೆರಿಕ ಕೊಟ್ಟ ಸಬೂಬು “ಸದ್ದಾಂ ತೊಲಗಿಸಿ ಪ್ರಜಾತಂತ್ರ (“ವಾಸ್ತವವಾಗಿ ಪಾಶ್ಚಾತ್ಯ ಬಂಡವಾಳಶಾಹಿ ಪ್ರಜಾತಂತ್ರ”) ತೆರುತ್ತೇವೆ” ಎಂದು.

ಮಧ್ಯಪ್ರಾಚ್ಯ ಕಚ್ಚಾ ತೈಲದ ನಿಯಂತ್ರಣವನ್ನು ತಮ್ಮ ತಮ್ಮ ಬಹುರಾಷ್ಟ್ರೀಯ ಕಂಪನಿಗಳ ಒಡೆತನದಲ್ಲಿಯೇ ಇಟ್ಟುಕೊಳ್ಳಲು ಈಗ ಮತ್ತೆ ಅದೇ ಯುದ್ದ ರಾಗವನ್ನು ಇರಾನ್ ವಿರುದ್ಧ ಉಪಯೋಗಿಸುತ್ತಿದ್ದಾರೆ. ದಶಕಗಳಿಂದ ಮಧ್ಯಪ್ರಾಚ್ಯ ಏಶಿಯಾವನ್ನು ಯುದ್ದ ನಕ್ಷೆಯಂತೆ ಉಪಯೋಗಿಸುತ್ತಿರುವ ಪಾಶ್ಚಾತ್ಯ ಶಕ್ತಿಗಳು ಈಗ ಇರಾನ್ ಮೇಲೆ ಕಣ್ಣಿಟ್ಟಿದೆ. ಪುರಾತನ ಕಾಲದಿಂದಲೂ ದೀರ್ಘ ಮತ್ತು ಮಹತ್ತರ ಇತಿಹಾಸ ಹೊಂದಿರುವ ಇರಾನ್, ಪ್ರಪಂಚದ ಮೂರನೇ ಅತಿ ದೊಡ್ಡ ಕಚ್ಚಾ ತೈಲ ನಿಕ್ಷೇಪಗಳು ಮತ್ತು ಪ್ರಪಂಚದ ಎರಡನೇ ದೊಡ್ಡ ನೈಸರ್ಗಿಕ ಅನಿಲ ನಿಕ್ಷೇಪಗಳನ್ನು ಹೊಂದಿರುವ ರಾಷ್ಟ್ರ. 1953ರಲ್ಲಿ ಅಮೆರಿಕ ಮತ್ತು ಬ್ರಿಟಿಷ್ ನಡೆಸಿದ ಕ್ಷಿಪ್ರಕ್ರಾಂತಿಯಲ್ಲಿ ಇರಾನ್ ದೇಶದ ಕಚ್ಚಾ ತೈಲ ನಿಕ್ಷೇಪಗಳ ರಾಷ್ಟ್ರೀಕರಣ ಮಾಡಲೆತ್ನಿಸಿದ ಮೊಹಮ್ಮೆದ್ ಮೊಸ್ಸಾದೇಘ್ನನ್ನು ಕಿತ್ತೊಗೆದು ತನ್ನ ಕೈಗೊಂಬೆ ಶಾಹ್ ರೆಜû ಪಲ್ಹಾವಿ ಯನ್ನು ಕೂರಿಸಿತು. ಶಾಹ್ ಆಡಳಿತ ಇರಾನಿನ ಜನರ ಮೇಲೆ ಅತ್ಯಂತ ಕ್ರೂರವಾಗಿತ್ತು. 1979 ಇಸ್ಲಾಮಿಕ್ ಕ್ರಾಂತಿಯ ಮೂಲಕ ಇರಾನಿನ ಜನತೆ ಶಾಹ್ ಮತ್ತು ತಮ್ಮ ದೇಶದಲ್ಲಿನ ಪಾಶ್ಚಾತ್ಯ ಹಸ್ತಕ್ಷೇಪವನ್ನು ತೊಲಗಿಸಿತು ಮತ್ತು ತನ್ನ ತೈಲ ಬಾವಿಗಳನ್ನು ಹಿಂಪಡೆಯಿತು. ಆಗಿನಿಂದಲೂ 40 ವರ್ಷಗಳ ಕಾಲ ಸರಕುಗಳು, ಔಷಧಿಗಳು, ಆರ್ಥಿಕ, ವೈಜ್ಞಾನಿಕ ನಿರ್ಬಂಧಗಳನ್ನು ಎದುರಿಸುತ್ತಾ ಬಂದಿದೆ.

ನಲವತ್ತು ವರುಷಗಳಿಂದ ಈ ನಿರ್ಬಂಧಗಳ ನಡುವೆಯೂ ಇರಾನ್ ಸಾಕಷ್ಟು ಸಾಧಿಸಿದೆ. ಪ್ರತಿರೋಧದ ಹೆಸರಿನಲ್ಲಿ ಇಸ್ಲಾಮಿಕ್ ಕ್ರಾಂತಿಯ ಆಶಯಗಳಿಗೆ ನಿಷ್ಠೆಯಿಂದ ದುಡಿಯುವ ಇರಾನಿಯನ್ ರೆವೊಲ್ಯೂಶನರೀ ಗಾರ್ಡ್ಸ್ ಸೇನೆ. ಕ್ಯೂಬ ನಂತರ ನಿರ್ಬಂಧಗಳ ಹೊರತಾಗಿಯೂ ಪ್ರಗತಿ ಸಾಧಿಸಿರುವುದೇ ಇರಾನಿನ ಬಹುದೊಡ್ಡ ಸಾಧನೆ. ಇರಾಕಿನ ದ್ವಂಸದ ನಂತರ ಅಲ್ಲಿನ ಸ್ಥಳೀಯ ನಾಯಕತ್ವವನ್ನು ಇರಾನ್ ಬೆಳೆಸಿದೆ. ಇಸ್ರೇಲ್ಗೆ ಸವಾಲೊಡ್ಡುವ ಲೆಬೆನನ್ ಹೆಜ್ ಬೊಲ್ಲ ಬೆಳೆಸಿದೆ, ಸೌದಿಗೆ ಸವಾಲೊಡ್ಡುವ ಹೌತಿ ಪ್ರತಿರೋಧವನ್ನು ಹುಟ್ಟು ಹಾಕಿದೆ ಇರಾನ್. ತನ್ನದೇ ಕ್ಷಿಪಣಿಗಳನ್ನು ತಯಾರಿಸುವುದೇ ಅಲ್ಲದೆ ಹೊರದೇಶಗಳ ವೈಜ್ಞಾನಿಕ ಸಹಾಯವಿಲ್ಲದೆ ಅಣು ವಿಜ್ಞಾನದಲ್ಲೂ ಬಹಳಷ್ಟು ಸಾಧಿಸಿದೆ. ಮುಖ್ಯವಾಗಿ ಇರಾನ್ ಏಳಿಗೆಯನ್ನು ಸಹಿಸಲಾಗದ ಸೌದಿ ಮತ್ತು ಇಸ್ರೇಲ್ ಅಮೆರಿಕದ ಯುದ್ದಕೋರ ಬಣವನ್ನು ಯುದ್ದಕ್ಕಾಗಿ ಪ್ರೇರೇಪಿಸುತ್ತಿದ್ದಾರೆ. ಇದರ ಸಲುವಾಗಿಯೇ ಒಬಾಮಾ ಆಡಳಿತ ಚೀನಾ, ರಶಿಯ, ಜರ್ಮನೀ, ಫ್ರಾನ್ಸ್, ಇರಾನ್ ಜೊತೆ ಮಾತುಕತೆ ನಡೆಸಿ Joint Comprehensive Plan of Action (JCPOA) ಒಪ್ಪಂದವನ್ನು 2015 ಜುಲೈ ತಿಂಗಳಲ್ಲಿ ಮಾಡಿಕೊಂಡಿತ್ತು. ಅದನ್ನು ಟ್ರಂಪ್ ಅಧಿಕಾರಕ್ಕೆ ಬಂದ ನಂತರ ಏಕಪಕ್ಷೀಯವಾಗಿ ಮುರಿದು ಮತ್ತೆ ಯುದ್ದದ ಮಾತುಗಳನ್ನು ಆಡುತ್ತಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವಣ ಈ ಬಿಕ್ಕಟ್ಟು 1979ರ ಬಿಕ್ಕಟ್ಟನ್ನು ನೆನಪಿಸುತ್ತಿದೆ.

ಹದಿನಾರು ವರ್ಷದ ಹಿಂದೆ ಕೋಲಿನ್ ಪೊವೆಲ್ ಹೇಗೆ ಸುಳ್ಳು ಹೇಳಿ ಇರಾಕ್ ವಿರುದ್ದದ ಯುದ್ದ ಶುರು ಮಾಡಿದ್ದಾರೋ ಹಾಗೆ ಇಸ್ರೇಲ್ನ ಬೆಂಜಮಿನ್ ನೆತನ್ಯಾಹು ಇರಾನ್ ಅಣು ಬಾಂಬ್‍ಗಳನ್ನು ತಯಾರಿಸುತ್ತಿದೆ ಎಂದು ವಿಶ್ವ ಸಂಸ್ಥೆಗೆ ಸುಳ್ಳು ಹೇಳಿ ಯುದ್ದಕ್ಕೆ ಸಜ್ಜಾಗುತ್ತಿದ್ದಾರೆ. ಜಾರ್ಜ್ ಬುಷ್ ಹೇಗೆ ಇರಾಕ್ ಅನ್ನು ಬೆದರಿಸಿ ದಾಳಿ ನೆಡೆಸಿದನೋ ಅದೇ ರೀತಿ ಟ್ರಂಪ್ ಇರಾನ್ ವಿರುದ್ದ ಬೆದರಿಕೆಗಳನ್ನು ಒಡ್ಡುತ್ತಿದ್ದಾನೆ. ಅಮೆರಿಕದ ಮಾಧ್ಯಮಗಳು ಕೂಡ (ಲಿಬರಲ್ ಪತ್ರಿಕೆಗಳು ಸೇರಿದಂತೆ) ಯುದ್ದವನ್ನು ಉತ್ತೇಜಿಸುವ ಪ್ರಚಾರವನ್ನೇ ಪತ್ರಿಕೋದ್ಯಮವನ್ನಾಗಿ ಮಾಡಿಕೊಂಡಿದೆ. ಈಗ ಅದು ಇರಾನಿನ ಮೇಲೆ ಕಡಿಮೆ ಇಳುವರಿ ಇರುವ ನಿರ್ದಿಷ್ಟ ಅಣು ಬಾಂಬ್ಗಳನ್ನು ಹಾಕಬೇಕು ಎಂಬ ಸಲಹೆಯನ್ನು ಟ್ರಂಪ್ ಆಡಳಿತಕ್ಕೆ ನೀಡುತ್ತಿದೆ. ಸೌದಿ, ಇಸ್ರೇಲ್, ಅಮೆರಿಕ ಒಂದು ಕಡೆಯಾದರೆ ಇರಾನ್, ರಶಿಯ, ಚೀನಾ, ಸಿರಿಯ, ಹಿeóïಬೊಲ್ಲ ಇನ್ನೊಂದು ಕಡೆ.

ಆದರೆ ಇರಾನ್ ಇವೆಲ್ಲದಕ್ಕೂ ಸಜ್ಜಾಗಿದೆ ಎಂದು ಸ್ಪಷ್ಟ ಸಂದೇಶ ಅಮೆರಿಕಗೆ ರವಾನಿಸಿದೆ. ತನ್ನ ಮೇಲೆ ದಾಳಿ ಆದಲ್ಲಿ ಅಮೆರಿಕ ಮಿಲಿಟರೀ ಬೇಸ್ ಇರುವ ತನ್ನ ಸುತ್ತಮುತ್ತಲಿನ ರಾಷ್ಟ್ರಗಳೆಲ್ಲವನ್ನು ಶತ್ರು ರಾಷ್ಟ್ರಗಳು ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿಕೆ ಕೊಟ್ಟಿದೆ. ಕಾನೂನುಬಾಹಿರ ನಿರ್ಬಂಧಗಳಿಂದ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಇರಾನ್ ಹೇಗೆ ಪುಟಿದೇಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಚೀನಾ ಮತ್ತು ರಶಿಯ ಕೂಡ ಬಲವಾಗಿ ಇರಾನ್ ಜೊತೆಗೆ ನಿಂತರೆ ಭಾರತ ಅಮೆರಿಕ ಮಾತುಗಳನ್ನು ಕೇಳಿ ಮೇ ತಿಂಗಳಿನಿಂದ ಇರಾನ್‍ನಿಂದ ತೈಲ ಆಮದು ನಿಲ್ಲಿಸಿದೆ. ಇರಾನ್ ವಿರುದ್ದ ಅಮೆರಿಕ ದಾಳಿ ಮಾಡಿದ್ದೆ ಆದಲ್ಲಿ ಅದರ ಪರಿಣಾಮ ಪ್ರಪಂಚದ ಎಲ್ಲ ದೇಶಗಳನ್ನು ತೀವ್ರ ಬಿಕ್ಕಟ್ಟಿಗೆ ತಳ್ಳುತ್ತದೆ. ತೈಲ ಬೆಲೆ ಗಗನಕ್ಕೇರುತ್ತವೆ. 1928 ರಲ್ಲಿ ಕಾಣಿಸಿಕೊಂಡಿದ್ದ ಆರ್ಥಿಕ ಕುಸಿತಕ್ಕಿಂತ ತೀವ್ರವಾಗಿರುತ್ತದೆ ಎಂದು ಆರ್ಥಿಕ ವಿಶ್ಲೇಷಕರು ಊಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...

ಕುವೈತ್ ವಿದ್ಯುತ್ ಸ್ಥಾವರ, ಉಪ್ಪು ನಿವಾರಣಾ ಘಟಕದ ಮೇಲೆ ಇರಾನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು

ದುಬೈ: ಕುವೈತ್‌ನಲ್ಲಿ ವಿದ್ಯುತ್ ಮತ್ತು ನೀರು ನಿವಾರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸುದ್ದಿ ಸಂಸ್ಥೆ ಕುನಾ ಸೋಮವಾರ ವರದಿ ಮಾಡಿದೆ. ದಾಳಿಯ ಸಮಯದಲ್ಲಿ...

1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಆರೋಪ; ದೆಹಲಿ ಪೊಲೀಸರಿಂದ ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ...

ಬಾಂಗ್ಲಾದೇಶದಿಂದ ಭಾರತದಲ್ಲಿ ಭಯೋತ್ಪಾದಕ ದಾಳಿ ನಿರ್ವಹಿಸುತ್ತಿದ್ದ ಲಷ್ಕರ್ ಕಮಾಂಡರ್ ಶಬ್ಬೀರ್ ಅಹ್ಮದ್ ಲೋನ್ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಭಾರತದಲ್ಲಿ ದಾಳಿಗಳನ್ನು ಯೋಜಿಸುತ್ತಿದ್ದ ಆರೋಪ ಹೊತ್ತಿರುವ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಆರೋಪಿ...

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 'ಖಬರ್ ರಾಜ್‌ಕೋಟ್ ಕಿ ನ್ಯೂಸ್' ಎಂಬ ಆನ್‌ಲೈನ್...

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...