Homeಅಂತರಾಷ್ಟ್ರೀಯಇರಾನ್ ಮೇಲೆ ಅಮೆರಿಕದ ಹದ್ದಿನ ಕಣ್ಣು

ಇರಾನ್ ಮೇಲೆ ಅಮೆರಿಕದ ಹದ್ದಿನ ಕಣ್ಣು

- Advertisement -
- Advertisement -

| ಭರತ್ ಹೆಬ್ಬಾಳ |

ದಶಕಗಳಿಂದ ಮಧ್ಯಪ್ರಾಚ್ಯ ಏಶಿಯಾವನ್ನು ಯುದ್ದ ನಕ್ಷೆಯಂತೆ ಉಪಯೋಗಿಸುತ್ತಿರುವ ಪಾಶ್ಚಾತ್ಯ ಶಕ್ತಿಗಳು ಈಗ ಇರಾನ್ ಮೇಲೆ ಕಣ್ಣಿಟ್ಟಿದೆ. ಪುರಾತನ ಕಾಲದಿಂದಲೂ ದೀರ್ಘ ಮತ್ತು ಮಹತ್ತರ ಇತಿಹಾಸ ಹೊಂದಿರುವ ಇರಾನ್, ಪ್ರಪಂಚದ ಮೂರನೇ ಅತಿ ದೊಡ್ಡ ಕಚ್ಚಾ ತೈಲ ನಿಕ್ಷೇಪಗಳು ಮತ್ತು ಪ್ರಪಂಚದ ಎರಡನೇ ದೊಡ್ಡ ನೈಸರ್ಗಿಕ ಅನಿಲ ನಿಕ್ಷೇಪಗಳನ್ನು ಹೊಂದಿರುವ ರಾಷ್ಟ್ರ.

ಅಮೆರಿಕದ ಕಾರ್ಯದರ್ಶಿ ಕೋಲಿನ್ ಪೊವೆಲ್ 2003, ಫೆಬ್ರುವರೀ 5ನೇ ತಾರೀಕು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಎದುರು ಒಂದು ವರದಿಯನ್ನು ನೀಡಿ ಮಾಡಿದ ಭಾಷಣ ಇರಾಕ್ ವಿರುದ್ದದ ಯುದ್ದಕ್ಕೆ ದಾರಿಮಾಡಿಕೊಟ್ಟಿತ್ತು. ಈ ಭಾಷಣದಲ್ಲಿ ಪೊವೆಲ್ ಅವರು ಸದ್ದಾಂ ಹುಸೇನ್ ಮತ್ತವರ ಆಡಳಿತವು ಉಗ್ರವಾದ ಪ್ರತಿಪಾದಿಸುವ ಅಲ್‍ಖೈದಾ ಅಂಗ ಸಂಘಟನೆಯ ಸಹಯೋಗದೊಂದಿಗೆ ರಾಸಾಯನಿಕ ಆಯುಧಗಳು ಮತ್ತು ಇನ್ನಷ್ಟು ವಿಧ್ವಂಸಕಾರಿ ಆಯುಧಗಳನ್ನು ಪಡೆದುಕೊಳ್ಳಲು ಪ್ರಯತ್ನಿಸುತ್ತಿದೆ ಮತ್ತದರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಪ್ರತಿಪಾದಿಸಿದ್ದರು. ತಾವು ಮಂಡಿಸಿದ ವರದಿಯಲ್ಲಿ ಬ್ರಿಟನ್ ಗೂಢಾಚಾರಿ ಸಂಸ್ಥೆ, ಉಪಗ್ರಹ ಚಿತ್ರಗಳು, ಆಡಿಯೋ ರೆಕಾರ್ಡಿಂಗ್ಸ್ ಮತ್ತು ಇನ್ನೂ ಇತರೆ ನಿರಾಕರಿಸಲಾಗದಂಥ ಪುರಾವೆಗಳೊಂದಿಗೆ ಇದೆ ಎಂದು ಒತ್ತು ಮಾಡಿ ಹೇಳಿದ್ದರು. ಈ ಘಟನೆಯ ಒಂದು ತಿಂಗಳ ನಂತರ ಅಮೆರಿಕ ಮತ್ತು ಹಿಂಬಾಲಕ ಪಡೆಗಳು ಇರಾಕ್ ಅನ್ನು ಬಾಂಬ್ಗಳ ಸುರಿಮಳೆಗೈದು ಧ್ವಂಸಗೊಳಿಸಿ ಇಲ್ಲಿಯವರೆಗೂ ಹತ್ತು ಲಕ್ಷಕ್ಕೂ ಮೇಲ್ಪಟ್ಟ ಜನ ಪ್ರಾಣ ಕಳೆದುಕೊಂಡಿದ್ದಾರೆ, ಅಷ್ಟೇ ಮಂದಿ ಆಂತರಿಕ ಹಾಗೂ ಅಂತರ್ರಾಷ್ಟ್ರೀಯ ನಿರಾಶ್ರಿತರಾಗಿದ್ದಾರೆ ಮತ್ತು ಇದಕ್ಕಾಗಿ ಅಮೆರಿಕ 1.06 ಟ್ರಿಲಿಯನ್ ಡಾಲರ್ ಖರ್ಚು ಮಾಡಿದೆ. ಇರಾಕಿನಲ್ಲಿ ತಾನು ಹುಟ್ಟು ಹಾಕಿದ್ದ ಕ್ರೌರ್ಯದಿಂದ ಐಸಿಸ್ ಹುಟ್ಟಲು ಕಾರಣವಾಯಿತು.

ಆದರೆ ಬಹುತೇಕ ಮಾಧ್ಯಮಗಳು ಮರೆಮಾಚಿದ ಸಂಗತಿಯೆಂದರೆ ಕೋಲಿನ್ ಪೊವೆಲ್ ಮಂಡಿಸಿದ ಇರಾಕ್ ವಿರುದ್ದದ ವರದಿ ಒಂದು ಕೃತಿಚೌರ್ಯ ವರದಿಯಾಗಿದ್ದು ಅದನ್ನು ಕೇಂಬ್ರಿಡ್ಜ್ ಪ್ರೋಫೆಸರ್ ಗ್ಲೆನ್ ರಾಂಗ್ವಾಲ ಹೊರತಂದ ವಾಸ್ತವವನ್ನು ಕೆಲವೇ ಕೆಲವು ಮಾಧ್ಯಮಗಳು ಪ್ರಕಟಿಸಿದ್ದವು. ಆ ಹತ್ತೊಂಬತ್ತು ಪುಟಗಳ ವರದಿಯಲ್ಲಿ 6ರಿಂದ 16ರ ಪುಟಗಳು ಆಕ್ಸ್‍ಫರ್ಡ್ ಯೂನಿವರ್ಸಿಟಿ ವಿದ್ಯಾರ್ಥಿಯ ಥೀಸಿಸ್ ಇಂದ ನೇರ ಕಾಪೀ ಪೇಸ್ಟ್ ಮಾಡಿದ ವರದಿ. ಆಗಿನ ಬ್ರಿಟಿಷ್ ಅಧ್ಯಕ್ಷ ಟೋನೀ ಬ್ಲೇರ್ ಆಫೀಸಿನಿಂದ ಬಂದದ್ದು ಎಂದು ಹೇಳಲಾಗುತ್ತಿದ್ದ ವರದಿ ಒಂದು ದೊಡ್ಡ ಕೃತಿಚೌರ್ಯ ದಾಖಲೆ. ಈ ಸುಳ್ಳು ದಾಖಲೆಯಿಂದ ತಮ್ಮೆಲ್ಲವನ್ನು ಕಳೆದುಕೊಂಡ ಇರಾಕ್ ಜನತೆ ಅತಿ ಕೆಟ್ಟ ಪರಿಣಾಮವನ್ನು ಎದುರಿಸುತ್ತಿದೆ. ಅಮೆರಿಕ ಮತ್ತದರ ಮಿತ್ರಪಡೆಗಳು ಉಪಯೋಗಿಸಿದ ಡೆಪ್ಲೀಟೆಡ್ ಯುರೇನೀಯಮ್ ಬಾಂಬ್ನಿಂದಾಗಿ ಆ ಪ್ರದೇಶಗಳಲ್ಲಿ ಹುಟ್ಟುವ ಅರ್ಧದಷ್ಟು ಮಕ್ಕಳು ಬರ್ತ್ ಡೆಫೆಕ್ಟ್ಸ್‍ಗಳಿಂದ ಹುಟ್ಟುತ್ತಿವೆ. 45% ಮಕ್ಕಳು ಹುಟ್ಟುವ ಮುಂಚಿತವಾಗಿ ಗರ್ಭದಲ್ಲೇ ಅಸುನೀಗುತ್ತವೆ. ಈ ಸಂಖ್ಯೆ ಯುದ್ದಕ್ಕೂ ಮುಂಚೆ 10%ಗಿಂತಲೂ ಕಡಿಮೆ ಇತ್ತು. ಇರಾಕ್‍ನಲ್ಲಿರುವ ಕಚ್ಚಾ ತೈಲವನ್ನು ಲಪಟಾಯಿಸಲು ಅಮೆರಿಕ ಕೊಟ್ಟ ಸಬೂಬು “ಸದ್ದಾಂ ತೊಲಗಿಸಿ ಪ್ರಜಾತಂತ್ರ (“ವಾಸ್ತವವಾಗಿ ಪಾಶ್ಚಾತ್ಯ ಬಂಡವಾಳಶಾಹಿ ಪ್ರಜಾತಂತ್ರ”) ತೆರುತ್ತೇವೆ” ಎಂದು.

ಮಧ್ಯಪ್ರಾಚ್ಯ ಕಚ್ಚಾ ತೈಲದ ನಿಯಂತ್ರಣವನ್ನು ತಮ್ಮ ತಮ್ಮ ಬಹುರಾಷ್ಟ್ರೀಯ ಕಂಪನಿಗಳ ಒಡೆತನದಲ್ಲಿಯೇ ಇಟ್ಟುಕೊಳ್ಳಲು ಈಗ ಮತ್ತೆ ಅದೇ ಯುದ್ದ ರಾಗವನ್ನು ಇರಾನ್ ವಿರುದ್ಧ ಉಪಯೋಗಿಸುತ್ತಿದ್ದಾರೆ. ದಶಕಗಳಿಂದ ಮಧ್ಯಪ್ರಾಚ್ಯ ಏಶಿಯಾವನ್ನು ಯುದ್ದ ನಕ್ಷೆಯಂತೆ ಉಪಯೋಗಿಸುತ್ತಿರುವ ಪಾಶ್ಚಾತ್ಯ ಶಕ್ತಿಗಳು ಈಗ ಇರಾನ್ ಮೇಲೆ ಕಣ್ಣಿಟ್ಟಿದೆ. ಪುರಾತನ ಕಾಲದಿಂದಲೂ ದೀರ್ಘ ಮತ್ತು ಮಹತ್ತರ ಇತಿಹಾಸ ಹೊಂದಿರುವ ಇರಾನ್, ಪ್ರಪಂಚದ ಮೂರನೇ ಅತಿ ದೊಡ್ಡ ಕಚ್ಚಾ ತೈಲ ನಿಕ್ಷೇಪಗಳು ಮತ್ತು ಪ್ರಪಂಚದ ಎರಡನೇ ದೊಡ್ಡ ನೈಸರ್ಗಿಕ ಅನಿಲ ನಿಕ್ಷೇಪಗಳನ್ನು ಹೊಂದಿರುವ ರಾಷ್ಟ್ರ. 1953ರಲ್ಲಿ ಅಮೆರಿಕ ಮತ್ತು ಬ್ರಿಟಿಷ್ ನಡೆಸಿದ ಕ್ಷಿಪ್ರಕ್ರಾಂತಿಯಲ್ಲಿ ಇರಾನ್ ದೇಶದ ಕಚ್ಚಾ ತೈಲ ನಿಕ್ಷೇಪಗಳ ರಾಷ್ಟ್ರೀಕರಣ ಮಾಡಲೆತ್ನಿಸಿದ ಮೊಹಮ್ಮೆದ್ ಮೊಸ್ಸಾದೇಘ್ನನ್ನು ಕಿತ್ತೊಗೆದು ತನ್ನ ಕೈಗೊಂಬೆ ಶಾಹ್ ರೆಜû ಪಲ್ಹಾವಿ ಯನ್ನು ಕೂರಿಸಿತು. ಶಾಹ್ ಆಡಳಿತ ಇರಾನಿನ ಜನರ ಮೇಲೆ ಅತ್ಯಂತ ಕ್ರೂರವಾಗಿತ್ತು. 1979 ಇಸ್ಲಾಮಿಕ್ ಕ್ರಾಂತಿಯ ಮೂಲಕ ಇರಾನಿನ ಜನತೆ ಶಾಹ್ ಮತ್ತು ತಮ್ಮ ದೇಶದಲ್ಲಿನ ಪಾಶ್ಚಾತ್ಯ ಹಸ್ತಕ್ಷೇಪವನ್ನು ತೊಲಗಿಸಿತು ಮತ್ತು ತನ್ನ ತೈಲ ಬಾವಿಗಳನ್ನು ಹಿಂಪಡೆಯಿತು. ಆಗಿನಿಂದಲೂ 40 ವರ್ಷಗಳ ಕಾಲ ಸರಕುಗಳು, ಔಷಧಿಗಳು, ಆರ್ಥಿಕ, ವೈಜ್ಞಾನಿಕ ನಿರ್ಬಂಧಗಳನ್ನು ಎದುರಿಸುತ್ತಾ ಬಂದಿದೆ.

ನಲವತ್ತು ವರುಷಗಳಿಂದ ಈ ನಿರ್ಬಂಧಗಳ ನಡುವೆಯೂ ಇರಾನ್ ಸಾಕಷ್ಟು ಸಾಧಿಸಿದೆ. ಪ್ರತಿರೋಧದ ಹೆಸರಿನಲ್ಲಿ ಇಸ್ಲಾಮಿಕ್ ಕ್ರಾಂತಿಯ ಆಶಯಗಳಿಗೆ ನಿಷ್ಠೆಯಿಂದ ದುಡಿಯುವ ಇರಾನಿಯನ್ ರೆವೊಲ್ಯೂಶನರೀ ಗಾರ್ಡ್ಸ್ ಸೇನೆ. ಕ್ಯೂಬ ನಂತರ ನಿರ್ಬಂಧಗಳ ಹೊರತಾಗಿಯೂ ಪ್ರಗತಿ ಸಾಧಿಸಿರುವುದೇ ಇರಾನಿನ ಬಹುದೊಡ್ಡ ಸಾಧನೆ. ಇರಾಕಿನ ದ್ವಂಸದ ನಂತರ ಅಲ್ಲಿನ ಸ್ಥಳೀಯ ನಾಯಕತ್ವವನ್ನು ಇರಾನ್ ಬೆಳೆಸಿದೆ. ಇಸ್ರೇಲ್ಗೆ ಸವಾಲೊಡ್ಡುವ ಲೆಬೆನನ್ ಹೆಜ್ ಬೊಲ್ಲ ಬೆಳೆಸಿದೆ, ಸೌದಿಗೆ ಸವಾಲೊಡ್ಡುವ ಹೌತಿ ಪ್ರತಿರೋಧವನ್ನು ಹುಟ್ಟು ಹಾಕಿದೆ ಇರಾನ್. ತನ್ನದೇ ಕ್ಷಿಪಣಿಗಳನ್ನು ತಯಾರಿಸುವುದೇ ಅಲ್ಲದೆ ಹೊರದೇಶಗಳ ವೈಜ್ಞಾನಿಕ ಸಹಾಯವಿಲ್ಲದೆ ಅಣು ವಿಜ್ಞಾನದಲ್ಲೂ ಬಹಳಷ್ಟು ಸಾಧಿಸಿದೆ. ಮುಖ್ಯವಾಗಿ ಇರಾನ್ ಏಳಿಗೆಯನ್ನು ಸಹಿಸಲಾಗದ ಸೌದಿ ಮತ್ತು ಇಸ್ರೇಲ್ ಅಮೆರಿಕದ ಯುದ್ದಕೋರ ಬಣವನ್ನು ಯುದ್ದಕ್ಕಾಗಿ ಪ್ರೇರೇಪಿಸುತ್ತಿದ್ದಾರೆ. ಇದರ ಸಲುವಾಗಿಯೇ ಒಬಾಮಾ ಆಡಳಿತ ಚೀನಾ, ರಶಿಯ, ಜರ್ಮನೀ, ಫ್ರಾನ್ಸ್, ಇರಾನ್ ಜೊತೆ ಮಾತುಕತೆ ನಡೆಸಿ Joint Comprehensive Plan of Action (JCPOA) ಒಪ್ಪಂದವನ್ನು 2015 ಜುಲೈ ತಿಂಗಳಲ್ಲಿ ಮಾಡಿಕೊಂಡಿತ್ತು. ಅದನ್ನು ಟ್ರಂಪ್ ಅಧಿಕಾರಕ್ಕೆ ಬಂದ ನಂತರ ಏಕಪಕ್ಷೀಯವಾಗಿ ಮುರಿದು ಮತ್ತೆ ಯುದ್ದದ ಮಾತುಗಳನ್ನು ಆಡುತ್ತಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವಣ ಈ ಬಿಕ್ಕಟ್ಟು 1979ರ ಬಿಕ್ಕಟ್ಟನ್ನು ನೆನಪಿಸುತ್ತಿದೆ.

ಹದಿನಾರು ವರ್ಷದ ಹಿಂದೆ ಕೋಲಿನ್ ಪೊವೆಲ್ ಹೇಗೆ ಸುಳ್ಳು ಹೇಳಿ ಇರಾಕ್ ವಿರುದ್ದದ ಯುದ್ದ ಶುರು ಮಾಡಿದ್ದಾರೋ ಹಾಗೆ ಇಸ್ರೇಲ್ನ ಬೆಂಜಮಿನ್ ನೆತನ್ಯಾಹು ಇರಾನ್ ಅಣು ಬಾಂಬ್‍ಗಳನ್ನು ತಯಾರಿಸುತ್ತಿದೆ ಎಂದು ವಿಶ್ವ ಸಂಸ್ಥೆಗೆ ಸುಳ್ಳು ಹೇಳಿ ಯುದ್ದಕ್ಕೆ ಸಜ್ಜಾಗುತ್ತಿದ್ದಾರೆ. ಜಾರ್ಜ್ ಬುಷ್ ಹೇಗೆ ಇರಾಕ್ ಅನ್ನು ಬೆದರಿಸಿ ದಾಳಿ ನೆಡೆಸಿದನೋ ಅದೇ ರೀತಿ ಟ್ರಂಪ್ ಇರಾನ್ ವಿರುದ್ದ ಬೆದರಿಕೆಗಳನ್ನು ಒಡ್ಡುತ್ತಿದ್ದಾನೆ. ಅಮೆರಿಕದ ಮಾಧ್ಯಮಗಳು ಕೂಡ (ಲಿಬರಲ್ ಪತ್ರಿಕೆಗಳು ಸೇರಿದಂತೆ) ಯುದ್ದವನ್ನು ಉತ್ತೇಜಿಸುವ ಪ್ರಚಾರವನ್ನೇ ಪತ್ರಿಕೋದ್ಯಮವನ್ನಾಗಿ ಮಾಡಿಕೊಂಡಿದೆ. ಈಗ ಅದು ಇರಾನಿನ ಮೇಲೆ ಕಡಿಮೆ ಇಳುವರಿ ಇರುವ ನಿರ್ದಿಷ್ಟ ಅಣು ಬಾಂಬ್ಗಳನ್ನು ಹಾಕಬೇಕು ಎಂಬ ಸಲಹೆಯನ್ನು ಟ್ರಂಪ್ ಆಡಳಿತಕ್ಕೆ ನೀಡುತ್ತಿದೆ. ಸೌದಿ, ಇಸ್ರೇಲ್, ಅಮೆರಿಕ ಒಂದು ಕಡೆಯಾದರೆ ಇರಾನ್, ರಶಿಯ, ಚೀನಾ, ಸಿರಿಯ, ಹಿeóïಬೊಲ್ಲ ಇನ್ನೊಂದು ಕಡೆ.

ಆದರೆ ಇರಾನ್ ಇವೆಲ್ಲದಕ್ಕೂ ಸಜ್ಜಾಗಿದೆ ಎಂದು ಸ್ಪಷ್ಟ ಸಂದೇಶ ಅಮೆರಿಕಗೆ ರವಾನಿಸಿದೆ. ತನ್ನ ಮೇಲೆ ದಾಳಿ ಆದಲ್ಲಿ ಅಮೆರಿಕ ಮಿಲಿಟರೀ ಬೇಸ್ ಇರುವ ತನ್ನ ಸುತ್ತಮುತ್ತಲಿನ ರಾಷ್ಟ್ರಗಳೆಲ್ಲವನ್ನು ಶತ್ರು ರಾಷ್ಟ್ರಗಳು ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿಕೆ ಕೊಟ್ಟಿದೆ. ಕಾನೂನುಬಾಹಿರ ನಿರ್ಬಂಧಗಳಿಂದ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಇರಾನ್ ಹೇಗೆ ಪುಟಿದೇಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಚೀನಾ ಮತ್ತು ರಶಿಯ ಕೂಡ ಬಲವಾಗಿ ಇರಾನ್ ಜೊತೆಗೆ ನಿಂತರೆ ಭಾರತ ಅಮೆರಿಕ ಮಾತುಗಳನ್ನು ಕೇಳಿ ಮೇ ತಿಂಗಳಿನಿಂದ ಇರಾನ್‍ನಿಂದ ತೈಲ ಆಮದು ನಿಲ್ಲಿಸಿದೆ. ಇರಾನ್ ವಿರುದ್ದ ಅಮೆರಿಕ ದಾಳಿ ಮಾಡಿದ್ದೆ ಆದಲ್ಲಿ ಅದರ ಪರಿಣಾಮ ಪ್ರಪಂಚದ ಎಲ್ಲ ದೇಶಗಳನ್ನು ತೀವ್ರ ಬಿಕ್ಕಟ್ಟಿಗೆ ತಳ್ಳುತ್ತದೆ. ತೈಲ ಬೆಲೆ ಗಗನಕ್ಕೇರುತ್ತವೆ. 1928 ರಲ್ಲಿ ಕಾಣಿಸಿಕೊಂಡಿದ್ದ ಆರ್ಥಿಕ ಕುಸಿತಕ್ಕಿಂತ ತೀವ್ರವಾಗಿರುತ್ತದೆ ಎಂದು ಆರ್ಥಿಕ ವಿಶ್ಲೇಷಕರು ಊಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...