Homeಮುಖಪುಟಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ : ಪಿ.ಮಹಮದ್

ಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ : ಪಿ.ಮಹಮದ್

- Advertisement -
- Advertisement -

ದಕ್ಷಿಣ ಕನ್ನಡದ ಪಿ.ಮಹಮ್ಮದ್ ಭಾರತದ ಇಂದಿನ ಪ್ರಮುಖ ಕಾರ್ಟೂನಿಸ್ಟ್‍ಗಳಲ್ಲಿ ಒಬ್ಬರು. ಜನವಾಹಿನಿಯಲ್ಲಿ ಅವರ ಕಾರ್ಟೂನ್‍ಗಳನ್ನು ನೋಡಿ ಓದುಗರು ಅಚ್ಚರಿಗೊಂಡರು. ಕಾರ್ಟೂನ್‍ಗಳಿಗೇ ವಿಶಿಷ್ಟವಾದ ಮೊನಚು ವ್ಯಂಗ್ಯ ಹಾಗೂ ಗೆರೆಗಳ ಆಟದ ಜೊತೆಗೆ ಸ್ಪಷ್ಟ ರಾಜಕೀಯ, ಸಾಮಾಜಿಕ ನಿಲುವು ಮಹಮ್ಮದ್‍ರವರ ವಿಶೇಷತೆ. ಕಲಾವಿದರಿಗೆ ಇರಬೇಕಾದ ಸ್ವಾತಂತ್ರ್ಯದ ಕುರಿತೂ ಅವರದು ಕಟು ನಿಲುವು. ಪ್ರಜಾವಾಣಿ, ವಿಜಯಕರ್ನಾಟಕಗಳಲ್ಲಿ ಕೆಲಸ ಮಾಡಿದ ನಂತರ ಈಗ ಸಂಪೂರ್ಣ ಸ್ವತಂತ್ರರು. ಆಂದೋಲನ, ವಾರ್ತಾಭಾರತಿ ಪತ್ರಿಕೆಗಳ ಜೊತೆಗೆ ಫೇಸ್‍ಬುಕ್‍ನ ಲಕ್ಷಾಂತರ ಓದುಗರು ನಿತ್ಯ ಅವರ ಕಾರ್ಟೂನ್‍ಗೆ ಕಾಯುತ್ತಾರೆ.

ನಾವು ಬದುಕುತ್ತಿರುವ ಕಾಲ ಅನೇಕ ವಿರೋಧಾಭಾಸಗಳಿಂದ ಕೂಡಿದೆ. ಈಗ ಅಭಿವ್ಯಕ್ತಿಸಲು ಮಾಧ್ಯಮಗಳ ಕೊರತೆಯಿಲ್ಲ. ಕೈಯಲ್ಲಿ ಮೊಬೈಲ್ ಇದ್ದರಾಯ್ತು – ನಮ್ಮ ಅನಿಸಿಕೆ – ಅಭಿಪ್ರಾಯಗಳನ್ನು ಜಗತ್ತಿನ ಯಾವ ಮೂಲೆಗೂ ತಲುಪಿಸಬಹುದು. ಆದರೆ ಅದೇ ಸಾಧನವನ್ನು ಟ್ರಾಲ್‍ಗಳ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಿಕ್ಕೂ ಬಳಸಲಾಗುತ್ತದೆ. ಗುಸುಗುಸು, ವದಂತಿ, ಚಾಡಿ ಮಾತುಗಳು ಇಂಟರ್ನೆಟ್ ಮಾಧ್ಯಮದ ಮೂಲಕ ಬಹುಮುಖ್ಯ ಅಭಿಪ್ರಾಯ ಎಂಬಂತೆ ಬಿತ್ತರಗೊಳ್ಳುತ್ತಿವೆ. ಬರೀ ವಾಟ್ಸಾಪ್ ಫಾರ್ವರ್ಡ್‍ಗಳನ್ನಷ್ಟೇ ನೋಡುವ ಮತ್ತು ಅವುಗಳನ್ನು ನಂಬುವ ದೊಡ್ಡದೊಂದು ಜನವರ್ಗ ಸೃಷ್ಟಿಯಾಗಿದ್ದು ಅವರು ಚುನಾವಣೆಗಳಲ್ಲಿ ತೆಗೆದುಕೊಳ್ಳುವ ತೀರ್ಮಾನದಿಂದಾಗಿ ಏನೆಲ್ಲಾ ಆಗಬಹುದು ಎಂಬುದನ್ನೂ ನೋಡುತ್ತಾ ಇದ್ದೇವೆ.

ಪ್ರಾಥಮಿಕ ಶಾಲೆಗಳಲ್ಲಿಯೇ ಸತ್ಯಮೇವ ಜಯತೆ ಎಂದು ಪಾಠ ಕೇಳುತ್ತಾ ಬಂದಿದ್ದೇನೆ. ಆದರೆ ಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ. ಮೊದಲೆಲ್ಲ ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಹೇಳುವವರನ್ನು ನೋಡಿದ್ದೆವು. ಈಗ ಸತ್ಯದ ತಲೆಯನ್ನೇ ಹಾರಿಸಿ ಸುಳ್ಳು ಹೇಳಲಾಗುತ್ತಿದೆ.

ವೃತ್ತಿಪರ ಕಾರ್ಟೂನಿಸ್ಟ್ ಆಗಿ ಕೆಲಸ ಮಾಡುತ್ತಿರುವ ನನಗೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಎಂದರೆ ಏನು ಎಂದು ನನ್ನ ವೃತ್ತಿಜೀವನದ ಮೂವ್ವತ್ತು ವರ್ಷಗಳಲ್ಲಿ ಚೆನ್ನಾಗಿ ಮನದಟ್ಟಾಗಿದೆ. ಶಾ ಬಾನು ವಿವಾದ, ಬಾಬರಿ ಮಸೀದಿ ಧ್ವಂಸ ಸಂದರ್ಭಗಳಲ್ಲಿ ನಾನು ರಚಿಸಿದ ಕಾರ್ಟೂನುಗಳಿಗೆ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಎದುರಿಸಿದ್ದೇನೆ. ಆದರೆ ಅವುಗಳಿಂದ ನಾನು ಮತ್ತು ನನ್ನಂಥ ಕಾರ್ಟೂನಿಸ್ಟರ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಶಕ್ತಿಗೆ ಏನೂ ತೊಂದರೆಯಾಗಿರಲಿಲ್ಲ. 2002ರ ಗುಜರಾತ್ ನರಮೇಧ ನಡೆದಾಗಲೂ ನಾವು ನಮ್ಮ ಮಾಧ್ಯಮವನ್ನು ಬಳಸಿಕೊಂಡು ಆ ಘಟನೆಗಳ ಬಗ್ಗೆ ಓದುಗರಿಗೆ ತಿಳಿಸಬೇಕಾದ್ದನ್ನು ತಿಳಿಸಿದ್ದೆವು.

ಆದರೆ 2014ರ ನಂತರದ ಸನ್ನಿವೇಶ ಸಂಪೂರ್ಣ ಭಿನ್ನವಾಗಿದೆ. ಒಂದು ನಿರ್ದಿಷ್ಟ ರಾಜಕೀಯ ನಾಯಕನ ವಿರುದ್ಧವಾದ ಕಾರ್ಟೂನ್ ರಚಿಸಿದರೆ ರಚಿಸಿದಾತನ ವಿರುದ್ಧ ‘ಟ್ರೋಲ್’ ಕಾಲಾಳುಗಳು ಮುಗಿಬೀಳುತ್ತಾರೆ. ಆತಂಕದ ವಿಷಯವೆಂದರೆ ಈ ಟ್ರೋಲ್‍ಗಳನ್ನು ದುಡ್ಡುಕೊಟ್ಟು ಈ ಉದ್ದೇಶಕ್ಕಾಗಿಯೇ ಇಟ್ಟುಕೊಳ್ಳಲಾಗುತ್ತದೆಯಂತೆ! ಇಂಥದಕ್ಕೆ ಮಣಿಯದವರ ಕುಟುಂಬ ಸದಸ್ಯರ ಮೇಲೇ ದೈಹಿಕ ದಾಳಿ ನಡೆಸುವ ಬೆದರಿಕೆ ಹಾಕಲಾಗುತ್ತದೆ. ಇವುಗಳನ್ನೆಲ್ಲ ಎದುರಿಸಿಯೂ ತಾನು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಿಟ್ಟುಕೊಡಲಾರೆ ಎಂದು ಹೇಳಲು ಸಾಕಷ್ಟು ಗಟ್ಟಿಯಾದ ಗುಂಡಿಗೆಯೇ ಬೇಕು. ಆದರೆ ಇಂಥ ಗುಂಡಿಗೆಯವರಿದ್ದರೂ ಅವರಿಗೆ ಮುಕ್ತವಾದ ಕೆಲಸ ಮಾಡಲು ಅವಕಾಶ ನೀಡಬೇಕಾದ ಮಾಧ್ಯಮ ಸಂಸ್ಥೆಗಳಿಗೇ ಧೈರ್ಯದ ಕೊರತೆಯಿರುತ್ತದೆ. ಕಾರ್ಪೊರೇಟ್ ಮಾಧ್ಯಮಗಳ ಈ ಕಾಲಘಟ್ಟದಲ್ಲಿ ಸರಕಾರವನ್ನು ಎದುರುಹಾಕಿಕೊಳ್ಳಲು ಯಾರೂ ತಯಾರಿಲ್ಲ.

ಪರಿಸ್ಥಿತಿ ಹೀಗಿರುವಾಗ ನನ್ನಂಥ ಸ್ಥಳೀಯ ಭಾಷೆಗಳಲ್ಲಿ ಕೆಲಸ ಮಾಡುವ ಕಾರ್ಟೂನಿಸ್ಟರಿಗೆ ಜೀವನ ನಿರ್ವಹಣೆಗಾಗಿ ದುಡಿಯುವುದೋ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲಿಕ್ಕಾಗಿ ದುಡಿಯುವುದೋ ಎನ್ನುವುದು ಅಕ್ಷರಶಃ ಜೀವನ್ಮರಣದ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಕ್ಷರಶಃ ಜೀವನ್ಮರಣದ ಪ್ರಶ್ನೆ! ನಿಮ್ಮ ಮಾತು ನೂರರಷ್ಟು ನಿಜ. ಆದರೆ, ನಮ್ಮಂಥವರು ನಿಮ್ಮ ವಿಡಂಭನಾತ್ಮಕ ಕಾರ್ಟೂನ್ ಗಳನ್ನು ನೋಡುತ್ತಾ ಬೆಳೆದವರು. ಅನುಸರಿಸಿದವರು. ಎದೆಗುಂದುವ ಹಾಗೆ ಇಲ್ಲ. ನಿಮ್ಮೊಂದಿಗೆ ನಾವುಗಳು ಇದ್ದೇವೆ. ನೀವೇ ಹೇಳಿದ ಹಾಗೆ ಹಿಂದೆಂದಿಗಿಂತಲೂ ನಿಮ್ಮಂಥವರ ಅಗತ್ಯ ಬಹಳವಿದೆ. ಮುಂದುವರೆಸಿ ಸಾರ್…ಸತ್ಯಕ್ಕೆ ತಡವಾಗಿಯಾದರೂ ಗೆಲುವೇ ಇದ್ದೇ ಇರುತ್ತೆ..

  2. ಪಿ.ಮುಹಮ್ಮದ್ ಅವರ ಮಾತುಗಳಲ್ಲಿ ಹುರುಳಿದೆ ,ಇದೆಯಂದು ಎಲ್ಲರಿಗೂ ಗೊತ್ತು ಇದೆ. ಹಾಗೆಂದು ಮಾತು ಆರಂಭಿಸುವವರು ಯಾರು, ಎಂಬುದು ಪ್ರಶ್ನೆ. ಇದಕ್ಕೆ ವ್ಯಂಗ್ಯಚಿತ್ರಗಳೇ ಉತ್ತರಿಸುತ್ತಿದ್ದವು. ಆರ್. ಕೆ..ಲಕ್ಷ್ಮಣ್ರು ನಮ್ಮ ಸೂಪ್ತ ಉತ್ತರಗಳನ್ನು ತಮ್ಮ ವ್ಯಂಗ್ಯಚಿತ್ರಗಳಲ್ಲಿ ಕೊಟ್ಟಂತೆ ಭಾಸವಾಗುತ್ತಿತ್ತು.
    ಇಂದು ಕರ್ನಾಟಕದ ವ್ಯಂಗ್ಯಚಿತ್ರಕಾರರೊಬ್ಬರ ಉದ್ಗಾರಗಳು ಆತಂಕ ತಡಿ ಎಮ್ ನದಾಫ್ ಅಫಜಲಪುರ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...