Homeಮುಖಪುಟಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ : ಪಿ.ಮಹಮದ್

ಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ : ಪಿ.ಮಹಮದ್

- Advertisement -
- Advertisement -

ದಕ್ಷಿಣ ಕನ್ನಡದ ಪಿ.ಮಹಮ್ಮದ್ ಭಾರತದ ಇಂದಿನ ಪ್ರಮುಖ ಕಾರ್ಟೂನಿಸ್ಟ್‍ಗಳಲ್ಲಿ ಒಬ್ಬರು. ಜನವಾಹಿನಿಯಲ್ಲಿ ಅವರ ಕಾರ್ಟೂನ್‍ಗಳನ್ನು ನೋಡಿ ಓದುಗರು ಅಚ್ಚರಿಗೊಂಡರು. ಕಾರ್ಟೂನ್‍ಗಳಿಗೇ ವಿಶಿಷ್ಟವಾದ ಮೊನಚು ವ್ಯಂಗ್ಯ ಹಾಗೂ ಗೆರೆಗಳ ಆಟದ ಜೊತೆಗೆ ಸ್ಪಷ್ಟ ರಾಜಕೀಯ, ಸಾಮಾಜಿಕ ನಿಲುವು ಮಹಮ್ಮದ್‍ರವರ ವಿಶೇಷತೆ. ಕಲಾವಿದರಿಗೆ ಇರಬೇಕಾದ ಸ್ವಾತಂತ್ರ್ಯದ ಕುರಿತೂ ಅವರದು ಕಟು ನಿಲುವು. ಪ್ರಜಾವಾಣಿ, ವಿಜಯಕರ್ನಾಟಕಗಳಲ್ಲಿ ಕೆಲಸ ಮಾಡಿದ ನಂತರ ಈಗ ಸಂಪೂರ್ಣ ಸ್ವತಂತ್ರರು. ಆಂದೋಲನ, ವಾರ್ತಾಭಾರತಿ ಪತ್ರಿಕೆಗಳ ಜೊತೆಗೆ ಫೇಸ್‍ಬುಕ್‍ನ ಲಕ್ಷಾಂತರ ಓದುಗರು ನಿತ್ಯ ಅವರ ಕಾರ್ಟೂನ್‍ಗೆ ಕಾಯುತ್ತಾರೆ.

ನಾವು ಬದುಕುತ್ತಿರುವ ಕಾಲ ಅನೇಕ ವಿರೋಧಾಭಾಸಗಳಿಂದ ಕೂಡಿದೆ. ಈಗ ಅಭಿವ್ಯಕ್ತಿಸಲು ಮಾಧ್ಯಮಗಳ ಕೊರತೆಯಿಲ್ಲ. ಕೈಯಲ್ಲಿ ಮೊಬೈಲ್ ಇದ್ದರಾಯ್ತು – ನಮ್ಮ ಅನಿಸಿಕೆ – ಅಭಿಪ್ರಾಯಗಳನ್ನು ಜಗತ್ತಿನ ಯಾವ ಮೂಲೆಗೂ ತಲುಪಿಸಬಹುದು. ಆದರೆ ಅದೇ ಸಾಧನವನ್ನು ಟ್ರಾಲ್‍ಗಳ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಿಕ್ಕೂ ಬಳಸಲಾಗುತ್ತದೆ. ಗುಸುಗುಸು, ವದಂತಿ, ಚಾಡಿ ಮಾತುಗಳು ಇಂಟರ್ನೆಟ್ ಮಾಧ್ಯಮದ ಮೂಲಕ ಬಹುಮುಖ್ಯ ಅಭಿಪ್ರಾಯ ಎಂಬಂತೆ ಬಿತ್ತರಗೊಳ್ಳುತ್ತಿವೆ. ಬರೀ ವಾಟ್ಸಾಪ್ ಫಾರ್ವರ್ಡ್‍ಗಳನ್ನಷ್ಟೇ ನೋಡುವ ಮತ್ತು ಅವುಗಳನ್ನು ನಂಬುವ ದೊಡ್ಡದೊಂದು ಜನವರ್ಗ ಸೃಷ್ಟಿಯಾಗಿದ್ದು ಅವರು ಚುನಾವಣೆಗಳಲ್ಲಿ ತೆಗೆದುಕೊಳ್ಳುವ ತೀರ್ಮಾನದಿಂದಾಗಿ ಏನೆಲ್ಲಾ ಆಗಬಹುದು ಎಂಬುದನ್ನೂ ನೋಡುತ್ತಾ ಇದ್ದೇವೆ.

ಪ್ರಾಥಮಿಕ ಶಾಲೆಗಳಲ್ಲಿಯೇ ಸತ್ಯಮೇವ ಜಯತೆ ಎಂದು ಪಾಠ ಕೇಳುತ್ತಾ ಬಂದಿದ್ದೇನೆ. ಆದರೆ ಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ. ಮೊದಲೆಲ್ಲ ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಹೇಳುವವರನ್ನು ನೋಡಿದ್ದೆವು. ಈಗ ಸತ್ಯದ ತಲೆಯನ್ನೇ ಹಾರಿಸಿ ಸುಳ್ಳು ಹೇಳಲಾಗುತ್ತಿದೆ.

ವೃತ್ತಿಪರ ಕಾರ್ಟೂನಿಸ್ಟ್ ಆಗಿ ಕೆಲಸ ಮಾಡುತ್ತಿರುವ ನನಗೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಎಂದರೆ ಏನು ಎಂದು ನನ್ನ ವೃತ್ತಿಜೀವನದ ಮೂವ್ವತ್ತು ವರ್ಷಗಳಲ್ಲಿ ಚೆನ್ನಾಗಿ ಮನದಟ್ಟಾಗಿದೆ. ಶಾ ಬಾನು ವಿವಾದ, ಬಾಬರಿ ಮಸೀದಿ ಧ್ವಂಸ ಸಂದರ್ಭಗಳಲ್ಲಿ ನಾನು ರಚಿಸಿದ ಕಾರ್ಟೂನುಗಳಿಗೆ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಎದುರಿಸಿದ್ದೇನೆ. ಆದರೆ ಅವುಗಳಿಂದ ನಾನು ಮತ್ತು ನನ್ನಂಥ ಕಾರ್ಟೂನಿಸ್ಟರ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಶಕ್ತಿಗೆ ಏನೂ ತೊಂದರೆಯಾಗಿರಲಿಲ್ಲ. 2002ರ ಗುಜರಾತ್ ನರಮೇಧ ನಡೆದಾಗಲೂ ನಾವು ನಮ್ಮ ಮಾಧ್ಯಮವನ್ನು ಬಳಸಿಕೊಂಡು ಆ ಘಟನೆಗಳ ಬಗ್ಗೆ ಓದುಗರಿಗೆ ತಿಳಿಸಬೇಕಾದ್ದನ್ನು ತಿಳಿಸಿದ್ದೆವು.

ಆದರೆ 2014ರ ನಂತರದ ಸನ್ನಿವೇಶ ಸಂಪೂರ್ಣ ಭಿನ್ನವಾಗಿದೆ. ಒಂದು ನಿರ್ದಿಷ್ಟ ರಾಜಕೀಯ ನಾಯಕನ ವಿರುದ್ಧವಾದ ಕಾರ್ಟೂನ್ ರಚಿಸಿದರೆ ರಚಿಸಿದಾತನ ವಿರುದ್ಧ ‘ಟ್ರೋಲ್’ ಕಾಲಾಳುಗಳು ಮುಗಿಬೀಳುತ್ತಾರೆ. ಆತಂಕದ ವಿಷಯವೆಂದರೆ ಈ ಟ್ರೋಲ್‍ಗಳನ್ನು ದುಡ್ಡುಕೊಟ್ಟು ಈ ಉದ್ದೇಶಕ್ಕಾಗಿಯೇ ಇಟ್ಟುಕೊಳ್ಳಲಾಗುತ್ತದೆಯಂತೆ! ಇಂಥದಕ್ಕೆ ಮಣಿಯದವರ ಕುಟುಂಬ ಸದಸ್ಯರ ಮೇಲೇ ದೈಹಿಕ ದಾಳಿ ನಡೆಸುವ ಬೆದರಿಕೆ ಹಾಕಲಾಗುತ್ತದೆ. ಇವುಗಳನ್ನೆಲ್ಲ ಎದುರಿಸಿಯೂ ತಾನು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಿಟ್ಟುಕೊಡಲಾರೆ ಎಂದು ಹೇಳಲು ಸಾಕಷ್ಟು ಗಟ್ಟಿಯಾದ ಗುಂಡಿಗೆಯೇ ಬೇಕು. ಆದರೆ ಇಂಥ ಗುಂಡಿಗೆಯವರಿದ್ದರೂ ಅವರಿಗೆ ಮುಕ್ತವಾದ ಕೆಲಸ ಮಾಡಲು ಅವಕಾಶ ನೀಡಬೇಕಾದ ಮಾಧ್ಯಮ ಸಂಸ್ಥೆಗಳಿಗೇ ಧೈರ್ಯದ ಕೊರತೆಯಿರುತ್ತದೆ. ಕಾರ್ಪೊರೇಟ್ ಮಾಧ್ಯಮಗಳ ಈ ಕಾಲಘಟ್ಟದಲ್ಲಿ ಸರಕಾರವನ್ನು ಎದುರುಹಾಕಿಕೊಳ್ಳಲು ಯಾರೂ ತಯಾರಿಲ್ಲ.

ಪರಿಸ್ಥಿತಿ ಹೀಗಿರುವಾಗ ನನ್ನಂಥ ಸ್ಥಳೀಯ ಭಾಷೆಗಳಲ್ಲಿ ಕೆಲಸ ಮಾಡುವ ಕಾರ್ಟೂನಿಸ್ಟರಿಗೆ ಜೀವನ ನಿರ್ವಹಣೆಗಾಗಿ ದುಡಿಯುವುದೋ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲಿಕ್ಕಾಗಿ ದುಡಿಯುವುದೋ ಎನ್ನುವುದು ಅಕ್ಷರಶಃ ಜೀವನ್ಮರಣದ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಕ್ಷರಶಃ ಜೀವನ್ಮರಣದ ಪ್ರಶ್ನೆ! ನಿಮ್ಮ ಮಾತು ನೂರರಷ್ಟು ನಿಜ. ಆದರೆ, ನಮ್ಮಂಥವರು ನಿಮ್ಮ ವಿಡಂಭನಾತ್ಮಕ ಕಾರ್ಟೂನ್ ಗಳನ್ನು ನೋಡುತ್ತಾ ಬೆಳೆದವರು. ಅನುಸರಿಸಿದವರು. ಎದೆಗುಂದುವ ಹಾಗೆ ಇಲ್ಲ. ನಿಮ್ಮೊಂದಿಗೆ ನಾವುಗಳು ಇದ್ದೇವೆ. ನೀವೇ ಹೇಳಿದ ಹಾಗೆ ಹಿಂದೆಂದಿಗಿಂತಲೂ ನಿಮ್ಮಂಥವರ ಅಗತ್ಯ ಬಹಳವಿದೆ. ಮುಂದುವರೆಸಿ ಸಾರ್…ಸತ್ಯಕ್ಕೆ ತಡವಾಗಿಯಾದರೂ ಗೆಲುವೇ ಇದ್ದೇ ಇರುತ್ತೆ..

  2. ಪಿ.ಮುಹಮ್ಮದ್ ಅವರ ಮಾತುಗಳಲ್ಲಿ ಹುರುಳಿದೆ ,ಇದೆಯಂದು ಎಲ್ಲರಿಗೂ ಗೊತ್ತು ಇದೆ. ಹಾಗೆಂದು ಮಾತು ಆರಂಭಿಸುವವರು ಯಾರು, ಎಂಬುದು ಪ್ರಶ್ನೆ. ಇದಕ್ಕೆ ವ್ಯಂಗ್ಯಚಿತ್ರಗಳೇ ಉತ್ತರಿಸುತ್ತಿದ್ದವು. ಆರ್. ಕೆ..ಲಕ್ಷ್ಮಣ್ರು ನಮ್ಮ ಸೂಪ್ತ ಉತ್ತರಗಳನ್ನು ತಮ್ಮ ವ್ಯಂಗ್ಯಚಿತ್ರಗಳಲ್ಲಿ ಕೊಟ್ಟಂತೆ ಭಾಸವಾಗುತ್ತಿತ್ತು.
    ಇಂದು ಕರ್ನಾಟಕದ ವ್ಯಂಗ್ಯಚಿತ್ರಕಾರರೊಬ್ಬರ ಉದ್ಗಾರಗಳು ಆತಂಕ ತಡಿ ಎಮ್ ನದಾಫ್ ಅಫಜಲಪುರ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...