Homeಮುಖಪುಟಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ : ಪಿ.ಮಹಮದ್

ಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ : ಪಿ.ಮಹಮದ್

- Advertisement -
- Advertisement -

ದಕ್ಷಿಣ ಕನ್ನಡದ ಪಿ.ಮಹಮ್ಮದ್ ಭಾರತದ ಇಂದಿನ ಪ್ರಮುಖ ಕಾರ್ಟೂನಿಸ್ಟ್‍ಗಳಲ್ಲಿ ಒಬ್ಬರು. ಜನವಾಹಿನಿಯಲ್ಲಿ ಅವರ ಕಾರ್ಟೂನ್‍ಗಳನ್ನು ನೋಡಿ ಓದುಗರು ಅಚ್ಚರಿಗೊಂಡರು. ಕಾರ್ಟೂನ್‍ಗಳಿಗೇ ವಿಶಿಷ್ಟವಾದ ಮೊನಚು ವ್ಯಂಗ್ಯ ಹಾಗೂ ಗೆರೆಗಳ ಆಟದ ಜೊತೆಗೆ ಸ್ಪಷ್ಟ ರಾಜಕೀಯ, ಸಾಮಾಜಿಕ ನಿಲುವು ಮಹಮ್ಮದ್‍ರವರ ವಿಶೇಷತೆ. ಕಲಾವಿದರಿಗೆ ಇರಬೇಕಾದ ಸ್ವಾತಂತ್ರ್ಯದ ಕುರಿತೂ ಅವರದು ಕಟು ನಿಲುವು. ಪ್ರಜಾವಾಣಿ, ವಿಜಯಕರ್ನಾಟಕಗಳಲ್ಲಿ ಕೆಲಸ ಮಾಡಿದ ನಂತರ ಈಗ ಸಂಪೂರ್ಣ ಸ್ವತಂತ್ರರು. ಆಂದೋಲನ, ವಾರ್ತಾಭಾರತಿ ಪತ್ರಿಕೆಗಳ ಜೊತೆಗೆ ಫೇಸ್‍ಬುಕ್‍ನ ಲಕ್ಷಾಂತರ ಓದುಗರು ನಿತ್ಯ ಅವರ ಕಾರ್ಟೂನ್‍ಗೆ ಕಾಯುತ್ತಾರೆ.

ನಾವು ಬದುಕುತ್ತಿರುವ ಕಾಲ ಅನೇಕ ವಿರೋಧಾಭಾಸಗಳಿಂದ ಕೂಡಿದೆ. ಈಗ ಅಭಿವ್ಯಕ್ತಿಸಲು ಮಾಧ್ಯಮಗಳ ಕೊರತೆಯಿಲ್ಲ. ಕೈಯಲ್ಲಿ ಮೊಬೈಲ್ ಇದ್ದರಾಯ್ತು – ನಮ್ಮ ಅನಿಸಿಕೆ – ಅಭಿಪ್ರಾಯಗಳನ್ನು ಜಗತ್ತಿನ ಯಾವ ಮೂಲೆಗೂ ತಲುಪಿಸಬಹುದು. ಆದರೆ ಅದೇ ಸಾಧನವನ್ನು ಟ್ರಾಲ್‍ಗಳ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಿಕ್ಕೂ ಬಳಸಲಾಗುತ್ತದೆ. ಗುಸುಗುಸು, ವದಂತಿ, ಚಾಡಿ ಮಾತುಗಳು ಇಂಟರ್ನೆಟ್ ಮಾಧ್ಯಮದ ಮೂಲಕ ಬಹುಮುಖ್ಯ ಅಭಿಪ್ರಾಯ ಎಂಬಂತೆ ಬಿತ್ತರಗೊಳ್ಳುತ್ತಿವೆ. ಬರೀ ವಾಟ್ಸಾಪ್ ಫಾರ್ವರ್ಡ್‍ಗಳನ್ನಷ್ಟೇ ನೋಡುವ ಮತ್ತು ಅವುಗಳನ್ನು ನಂಬುವ ದೊಡ್ಡದೊಂದು ಜನವರ್ಗ ಸೃಷ್ಟಿಯಾಗಿದ್ದು ಅವರು ಚುನಾವಣೆಗಳಲ್ಲಿ ತೆಗೆದುಕೊಳ್ಳುವ ತೀರ್ಮಾನದಿಂದಾಗಿ ಏನೆಲ್ಲಾ ಆಗಬಹುದು ಎಂಬುದನ್ನೂ ನೋಡುತ್ತಾ ಇದ್ದೇವೆ.

ಪ್ರಾಥಮಿಕ ಶಾಲೆಗಳಲ್ಲಿಯೇ ಸತ್ಯಮೇವ ಜಯತೆ ಎಂದು ಪಾಠ ಕೇಳುತ್ತಾ ಬಂದಿದ್ದೇನೆ. ಆದರೆ ಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ. ಮೊದಲೆಲ್ಲ ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಹೇಳುವವರನ್ನು ನೋಡಿದ್ದೆವು. ಈಗ ಸತ್ಯದ ತಲೆಯನ್ನೇ ಹಾರಿಸಿ ಸುಳ್ಳು ಹೇಳಲಾಗುತ್ತಿದೆ.

ವೃತ್ತಿಪರ ಕಾರ್ಟೂನಿಸ್ಟ್ ಆಗಿ ಕೆಲಸ ಮಾಡುತ್ತಿರುವ ನನಗೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಎಂದರೆ ಏನು ಎಂದು ನನ್ನ ವೃತ್ತಿಜೀವನದ ಮೂವ್ವತ್ತು ವರ್ಷಗಳಲ್ಲಿ ಚೆನ್ನಾಗಿ ಮನದಟ್ಟಾಗಿದೆ. ಶಾ ಬಾನು ವಿವಾದ, ಬಾಬರಿ ಮಸೀದಿ ಧ್ವಂಸ ಸಂದರ್ಭಗಳಲ್ಲಿ ನಾನು ರಚಿಸಿದ ಕಾರ್ಟೂನುಗಳಿಗೆ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಎದುರಿಸಿದ್ದೇನೆ. ಆದರೆ ಅವುಗಳಿಂದ ನಾನು ಮತ್ತು ನನ್ನಂಥ ಕಾರ್ಟೂನಿಸ್ಟರ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಶಕ್ತಿಗೆ ಏನೂ ತೊಂದರೆಯಾಗಿರಲಿಲ್ಲ. 2002ರ ಗುಜರಾತ್ ನರಮೇಧ ನಡೆದಾಗಲೂ ನಾವು ನಮ್ಮ ಮಾಧ್ಯಮವನ್ನು ಬಳಸಿಕೊಂಡು ಆ ಘಟನೆಗಳ ಬಗ್ಗೆ ಓದುಗರಿಗೆ ತಿಳಿಸಬೇಕಾದ್ದನ್ನು ತಿಳಿಸಿದ್ದೆವು.

ಆದರೆ 2014ರ ನಂತರದ ಸನ್ನಿವೇಶ ಸಂಪೂರ್ಣ ಭಿನ್ನವಾಗಿದೆ. ಒಂದು ನಿರ್ದಿಷ್ಟ ರಾಜಕೀಯ ನಾಯಕನ ವಿರುದ್ಧವಾದ ಕಾರ್ಟೂನ್ ರಚಿಸಿದರೆ ರಚಿಸಿದಾತನ ವಿರುದ್ಧ ‘ಟ್ರೋಲ್’ ಕಾಲಾಳುಗಳು ಮುಗಿಬೀಳುತ್ತಾರೆ. ಆತಂಕದ ವಿಷಯವೆಂದರೆ ಈ ಟ್ರೋಲ್‍ಗಳನ್ನು ದುಡ್ಡುಕೊಟ್ಟು ಈ ಉದ್ದೇಶಕ್ಕಾಗಿಯೇ ಇಟ್ಟುಕೊಳ್ಳಲಾಗುತ್ತದೆಯಂತೆ! ಇಂಥದಕ್ಕೆ ಮಣಿಯದವರ ಕುಟುಂಬ ಸದಸ್ಯರ ಮೇಲೇ ದೈಹಿಕ ದಾಳಿ ನಡೆಸುವ ಬೆದರಿಕೆ ಹಾಕಲಾಗುತ್ತದೆ. ಇವುಗಳನ್ನೆಲ್ಲ ಎದುರಿಸಿಯೂ ತಾನು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಿಟ್ಟುಕೊಡಲಾರೆ ಎಂದು ಹೇಳಲು ಸಾಕಷ್ಟು ಗಟ್ಟಿಯಾದ ಗುಂಡಿಗೆಯೇ ಬೇಕು. ಆದರೆ ಇಂಥ ಗುಂಡಿಗೆಯವರಿದ್ದರೂ ಅವರಿಗೆ ಮುಕ್ತವಾದ ಕೆಲಸ ಮಾಡಲು ಅವಕಾಶ ನೀಡಬೇಕಾದ ಮಾಧ್ಯಮ ಸಂಸ್ಥೆಗಳಿಗೇ ಧೈರ್ಯದ ಕೊರತೆಯಿರುತ್ತದೆ. ಕಾರ್ಪೊರೇಟ್ ಮಾಧ್ಯಮಗಳ ಈ ಕಾಲಘಟ್ಟದಲ್ಲಿ ಸರಕಾರವನ್ನು ಎದುರುಹಾಕಿಕೊಳ್ಳಲು ಯಾರೂ ತಯಾರಿಲ್ಲ.

ಪರಿಸ್ಥಿತಿ ಹೀಗಿರುವಾಗ ನನ್ನಂಥ ಸ್ಥಳೀಯ ಭಾಷೆಗಳಲ್ಲಿ ಕೆಲಸ ಮಾಡುವ ಕಾರ್ಟೂನಿಸ್ಟರಿಗೆ ಜೀವನ ನಿರ್ವಹಣೆಗಾಗಿ ದುಡಿಯುವುದೋ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲಿಕ್ಕಾಗಿ ದುಡಿಯುವುದೋ ಎನ್ನುವುದು ಅಕ್ಷರಶಃ ಜೀವನ್ಮರಣದ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಕ್ಷರಶಃ ಜೀವನ್ಮರಣದ ಪ್ರಶ್ನೆ! ನಿಮ್ಮ ಮಾತು ನೂರರಷ್ಟು ನಿಜ. ಆದರೆ, ನಮ್ಮಂಥವರು ನಿಮ್ಮ ವಿಡಂಭನಾತ್ಮಕ ಕಾರ್ಟೂನ್ ಗಳನ್ನು ನೋಡುತ್ತಾ ಬೆಳೆದವರು. ಅನುಸರಿಸಿದವರು. ಎದೆಗುಂದುವ ಹಾಗೆ ಇಲ್ಲ. ನಿಮ್ಮೊಂದಿಗೆ ನಾವುಗಳು ಇದ್ದೇವೆ. ನೀವೇ ಹೇಳಿದ ಹಾಗೆ ಹಿಂದೆಂದಿಗಿಂತಲೂ ನಿಮ್ಮಂಥವರ ಅಗತ್ಯ ಬಹಳವಿದೆ. ಮುಂದುವರೆಸಿ ಸಾರ್…ಸತ್ಯಕ್ಕೆ ತಡವಾಗಿಯಾದರೂ ಗೆಲುವೇ ಇದ್ದೇ ಇರುತ್ತೆ..

  2. ಪಿ.ಮುಹಮ್ಮದ್ ಅವರ ಮಾತುಗಳಲ್ಲಿ ಹುರುಳಿದೆ ,ಇದೆಯಂದು ಎಲ್ಲರಿಗೂ ಗೊತ್ತು ಇದೆ. ಹಾಗೆಂದು ಮಾತು ಆರಂಭಿಸುವವರು ಯಾರು, ಎಂಬುದು ಪ್ರಶ್ನೆ. ಇದಕ್ಕೆ ವ್ಯಂಗ್ಯಚಿತ್ರಗಳೇ ಉತ್ತರಿಸುತ್ತಿದ್ದವು. ಆರ್. ಕೆ..ಲಕ್ಷ್ಮಣ್ರು ನಮ್ಮ ಸೂಪ್ತ ಉತ್ತರಗಳನ್ನು ತಮ್ಮ ವ್ಯಂಗ್ಯಚಿತ್ರಗಳಲ್ಲಿ ಕೊಟ್ಟಂತೆ ಭಾಸವಾಗುತ್ತಿತ್ತು.
    ಇಂದು ಕರ್ನಾಟಕದ ವ್ಯಂಗ್ಯಚಿತ್ರಕಾರರೊಬ್ಬರ ಉದ್ಗಾರಗಳು ಆತಂಕ ತಡಿ ಎಮ್ ನದಾಫ್ ಅಫಜಲಪುರ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...