Homeಮುಖಪುಟಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ : ಪಿ.ಮಹಮದ್

ಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ : ಪಿ.ಮಹಮದ್

- Advertisement -
- Advertisement -

ದಕ್ಷಿಣ ಕನ್ನಡದ ಪಿ.ಮಹಮ್ಮದ್ ಭಾರತದ ಇಂದಿನ ಪ್ರಮುಖ ಕಾರ್ಟೂನಿಸ್ಟ್‍ಗಳಲ್ಲಿ ಒಬ್ಬರು. ಜನವಾಹಿನಿಯಲ್ಲಿ ಅವರ ಕಾರ್ಟೂನ್‍ಗಳನ್ನು ನೋಡಿ ಓದುಗರು ಅಚ್ಚರಿಗೊಂಡರು. ಕಾರ್ಟೂನ್‍ಗಳಿಗೇ ವಿಶಿಷ್ಟವಾದ ಮೊನಚು ವ್ಯಂಗ್ಯ ಹಾಗೂ ಗೆರೆಗಳ ಆಟದ ಜೊತೆಗೆ ಸ್ಪಷ್ಟ ರಾಜಕೀಯ, ಸಾಮಾಜಿಕ ನಿಲುವು ಮಹಮ್ಮದ್‍ರವರ ವಿಶೇಷತೆ. ಕಲಾವಿದರಿಗೆ ಇರಬೇಕಾದ ಸ್ವಾತಂತ್ರ್ಯದ ಕುರಿತೂ ಅವರದು ಕಟು ನಿಲುವು. ಪ್ರಜಾವಾಣಿ, ವಿಜಯಕರ್ನಾಟಕಗಳಲ್ಲಿ ಕೆಲಸ ಮಾಡಿದ ನಂತರ ಈಗ ಸಂಪೂರ್ಣ ಸ್ವತಂತ್ರರು. ಆಂದೋಲನ, ವಾರ್ತಾಭಾರತಿ ಪತ್ರಿಕೆಗಳ ಜೊತೆಗೆ ಫೇಸ್‍ಬುಕ್‍ನ ಲಕ್ಷಾಂತರ ಓದುಗರು ನಿತ್ಯ ಅವರ ಕಾರ್ಟೂನ್‍ಗೆ ಕಾಯುತ್ತಾರೆ.

ನಾವು ಬದುಕುತ್ತಿರುವ ಕಾಲ ಅನೇಕ ವಿರೋಧಾಭಾಸಗಳಿಂದ ಕೂಡಿದೆ. ಈಗ ಅಭಿವ್ಯಕ್ತಿಸಲು ಮಾಧ್ಯಮಗಳ ಕೊರತೆಯಿಲ್ಲ. ಕೈಯಲ್ಲಿ ಮೊಬೈಲ್ ಇದ್ದರಾಯ್ತು – ನಮ್ಮ ಅನಿಸಿಕೆ – ಅಭಿಪ್ರಾಯಗಳನ್ನು ಜಗತ್ತಿನ ಯಾವ ಮೂಲೆಗೂ ತಲುಪಿಸಬಹುದು. ಆದರೆ ಅದೇ ಸಾಧನವನ್ನು ಟ್ರಾಲ್‍ಗಳ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಿಕ್ಕೂ ಬಳಸಲಾಗುತ್ತದೆ. ಗುಸುಗುಸು, ವದಂತಿ, ಚಾಡಿ ಮಾತುಗಳು ಇಂಟರ್ನೆಟ್ ಮಾಧ್ಯಮದ ಮೂಲಕ ಬಹುಮುಖ್ಯ ಅಭಿಪ್ರಾಯ ಎಂಬಂತೆ ಬಿತ್ತರಗೊಳ್ಳುತ್ತಿವೆ. ಬರೀ ವಾಟ್ಸಾಪ್ ಫಾರ್ವರ್ಡ್‍ಗಳನ್ನಷ್ಟೇ ನೋಡುವ ಮತ್ತು ಅವುಗಳನ್ನು ನಂಬುವ ದೊಡ್ಡದೊಂದು ಜನವರ್ಗ ಸೃಷ್ಟಿಯಾಗಿದ್ದು ಅವರು ಚುನಾವಣೆಗಳಲ್ಲಿ ತೆಗೆದುಕೊಳ್ಳುವ ತೀರ್ಮಾನದಿಂದಾಗಿ ಏನೆಲ್ಲಾ ಆಗಬಹುದು ಎಂಬುದನ್ನೂ ನೋಡುತ್ತಾ ಇದ್ದೇವೆ.

ಪ್ರಾಥಮಿಕ ಶಾಲೆಗಳಲ್ಲಿಯೇ ಸತ್ಯಮೇವ ಜಯತೆ ಎಂದು ಪಾಠ ಕೇಳುತ್ತಾ ಬಂದಿದ್ದೇನೆ. ಆದರೆ ಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ. ಮೊದಲೆಲ್ಲ ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಹೇಳುವವರನ್ನು ನೋಡಿದ್ದೆವು. ಈಗ ಸತ್ಯದ ತಲೆಯನ್ನೇ ಹಾರಿಸಿ ಸುಳ್ಳು ಹೇಳಲಾಗುತ್ತಿದೆ.

ವೃತ್ತಿಪರ ಕಾರ್ಟೂನಿಸ್ಟ್ ಆಗಿ ಕೆಲಸ ಮಾಡುತ್ತಿರುವ ನನಗೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಎಂದರೆ ಏನು ಎಂದು ನನ್ನ ವೃತ್ತಿಜೀವನದ ಮೂವ್ವತ್ತು ವರ್ಷಗಳಲ್ಲಿ ಚೆನ್ನಾಗಿ ಮನದಟ್ಟಾಗಿದೆ. ಶಾ ಬಾನು ವಿವಾದ, ಬಾಬರಿ ಮಸೀದಿ ಧ್ವಂಸ ಸಂದರ್ಭಗಳಲ್ಲಿ ನಾನು ರಚಿಸಿದ ಕಾರ್ಟೂನುಗಳಿಗೆ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಎದುರಿಸಿದ್ದೇನೆ. ಆದರೆ ಅವುಗಳಿಂದ ನಾನು ಮತ್ತು ನನ್ನಂಥ ಕಾರ್ಟೂನಿಸ್ಟರ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಶಕ್ತಿಗೆ ಏನೂ ತೊಂದರೆಯಾಗಿರಲಿಲ್ಲ. 2002ರ ಗುಜರಾತ್ ನರಮೇಧ ನಡೆದಾಗಲೂ ನಾವು ನಮ್ಮ ಮಾಧ್ಯಮವನ್ನು ಬಳಸಿಕೊಂಡು ಆ ಘಟನೆಗಳ ಬಗ್ಗೆ ಓದುಗರಿಗೆ ತಿಳಿಸಬೇಕಾದ್ದನ್ನು ತಿಳಿಸಿದ್ದೆವು.

ಆದರೆ 2014ರ ನಂತರದ ಸನ್ನಿವೇಶ ಸಂಪೂರ್ಣ ಭಿನ್ನವಾಗಿದೆ. ಒಂದು ನಿರ್ದಿಷ್ಟ ರಾಜಕೀಯ ನಾಯಕನ ವಿರುದ್ಧವಾದ ಕಾರ್ಟೂನ್ ರಚಿಸಿದರೆ ರಚಿಸಿದಾತನ ವಿರುದ್ಧ ‘ಟ್ರೋಲ್’ ಕಾಲಾಳುಗಳು ಮುಗಿಬೀಳುತ್ತಾರೆ. ಆತಂಕದ ವಿಷಯವೆಂದರೆ ಈ ಟ್ರೋಲ್‍ಗಳನ್ನು ದುಡ್ಡುಕೊಟ್ಟು ಈ ಉದ್ದೇಶಕ್ಕಾಗಿಯೇ ಇಟ್ಟುಕೊಳ್ಳಲಾಗುತ್ತದೆಯಂತೆ! ಇಂಥದಕ್ಕೆ ಮಣಿಯದವರ ಕುಟುಂಬ ಸದಸ್ಯರ ಮೇಲೇ ದೈಹಿಕ ದಾಳಿ ನಡೆಸುವ ಬೆದರಿಕೆ ಹಾಕಲಾಗುತ್ತದೆ. ಇವುಗಳನ್ನೆಲ್ಲ ಎದುರಿಸಿಯೂ ತಾನು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಿಟ್ಟುಕೊಡಲಾರೆ ಎಂದು ಹೇಳಲು ಸಾಕಷ್ಟು ಗಟ್ಟಿಯಾದ ಗುಂಡಿಗೆಯೇ ಬೇಕು. ಆದರೆ ಇಂಥ ಗುಂಡಿಗೆಯವರಿದ್ದರೂ ಅವರಿಗೆ ಮುಕ್ತವಾದ ಕೆಲಸ ಮಾಡಲು ಅವಕಾಶ ನೀಡಬೇಕಾದ ಮಾಧ್ಯಮ ಸಂಸ್ಥೆಗಳಿಗೇ ಧೈರ್ಯದ ಕೊರತೆಯಿರುತ್ತದೆ. ಕಾರ್ಪೊರೇಟ್ ಮಾಧ್ಯಮಗಳ ಈ ಕಾಲಘಟ್ಟದಲ್ಲಿ ಸರಕಾರವನ್ನು ಎದುರುಹಾಕಿಕೊಳ್ಳಲು ಯಾರೂ ತಯಾರಿಲ್ಲ.

ಪರಿಸ್ಥಿತಿ ಹೀಗಿರುವಾಗ ನನ್ನಂಥ ಸ್ಥಳೀಯ ಭಾಷೆಗಳಲ್ಲಿ ಕೆಲಸ ಮಾಡುವ ಕಾರ್ಟೂನಿಸ್ಟರಿಗೆ ಜೀವನ ನಿರ್ವಹಣೆಗಾಗಿ ದುಡಿಯುವುದೋ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲಿಕ್ಕಾಗಿ ದುಡಿಯುವುದೋ ಎನ್ನುವುದು ಅಕ್ಷರಶಃ ಜೀವನ್ಮರಣದ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಕ್ಷರಶಃ ಜೀವನ್ಮರಣದ ಪ್ರಶ್ನೆ! ನಿಮ್ಮ ಮಾತು ನೂರರಷ್ಟು ನಿಜ. ಆದರೆ, ನಮ್ಮಂಥವರು ನಿಮ್ಮ ವಿಡಂಭನಾತ್ಮಕ ಕಾರ್ಟೂನ್ ಗಳನ್ನು ನೋಡುತ್ತಾ ಬೆಳೆದವರು. ಅನುಸರಿಸಿದವರು. ಎದೆಗುಂದುವ ಹಾಗೆ ಇಲ್ಲ. ನಿಮ್ಮೊಂದಿಗೆ ನಾವುಗಳು ಇದ್ದೇವೆ. ನೀವೇ ಹೇಳಿದ ಹಾಗೆ ಹಿಂದೆಂದಿಗಿಂತಲೂ ನಿಮ್ಮಂಥವರ ಅಗತ್ಯ ಬಹಳವಿದೆ. ಮುಂದುವರೆಸಿ ಸಾರ್…ಸತ್ಯಕ್ಕೆ ತಡವಾಗಿಯಾದರೂ ಗೆಲುವೇ ಇದ್ದೇ ಇರುತ್ತೆ..

  2. ಪಿ.ಮುಹಮ್ಮದ್ ಅವರ ಮಾತುಗಳಲ್ಲಿ ಹುರುಳಿದೆ ,ಇದೆಯಂದು ಎಲ್ಲರಿಗೂ ಗೊತ್ತು ಇದೆ. ಹಾಗೆಂದು ಮಾತು ಆರಂಭಿಸುವವರು ಯಾರು, ಎಂಬುದು ಪ್ರಶ್ನೆ. ಇದಕ್ಕೆ ವ್ಯಂಗ್ಯಚಿತ್ರಗಳೇ ಉತ್ತರಿಸುತ್ತಿದ್ದವು. ಆರ್. ಕೆ..ಲಕ್ಷ್ಮಣ್ರು ನಮ್ಮ ಸೂಪ್ತ ಉತ್ತರಗಳನ್ನು ತಮ್ಮ ವ್ಯಂಗ್ಯಚಿತ್ರಗಳಲ್ಲಿ ಕೊಟ್ಟಂತೆ ಭಾಸವಾಗುತ್ತಿತ್ತು.
    ಇಂದು ಕರ್ನಾಟಕದ ವ್ಯಂಗ್ಯಚಿತ್ರಕಾರರೊಬ್ಬರ ಉದ್ಗಾರಗಳು ಆತಂಕ ತಡಿ ಎಮ್ ನದಾಫ್ ಅಫಜಲಪುರ.

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...