Homeಮುಖಪುಟಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ : ಪಿ.ಮಹಮದ್

ಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ : ಪಿ.ಮಹಮದ್

- Advertisement -
- Advertisement -

ದಕ್ಷಿಣ ಕನ್ನಡದ ಪಿ.ಮಹಮ್ಮದ್ ಭಾರತದ ಇಂದಿನ ಪ್ರಮುಖ ಕಾರ್ಟೂನಿಸ್ಟ್‍ಗಳಲ್ಲಿ ಒಬ್ಬರು. ಜನವಾಹಿನಿಯಲ್ಲಿ ಅವರ ಕಾರ್ಟೂನ್‍ಗಳನ್ನು ನೋಡಿ ಓದುಗರು ಅಚ್ಚರಿಗೊಂಡರು. ಕಾರ್ಟೂನ್‍ಗಳಿಗೇ ವಿಶಿಷ್ಟವಾದ ಮೊನಚು ವ್ಯಂಗ್ಯ ಹಾಗೂ ಗೆರೆಗಳ ಆಟದ ಜೊತೆಗೆ ಸ್ಪಷ್ಟ ರಾಜಕೀಯ, ಸಾಮಾಜಿಕ ನಿಲುವು ಮಹಮ್ಮದ್‍ರವರ ವಿಶೇಷತೆ. ಕಲಾವಿದರಿಗೆ ಇರಬೇಕಾದ ಸ್ವಾತಂತ್ರ್ಯದ ಕುರಿತೂ ಅವರದು ಕಟು ನಿಲುವು. ಪ್ರಜಾವಾಣಿ, ವಿಜಯಕರ್ನಾಟಕಗಳಲ್ಲಿ ಕೆಲಸ ಮಾಡಿದ ನಂತರ ಈಗ ಸಂಪೂರ್ಣ ಸ್ವತಂತ್ರರು. ಆಂದೋಲನ, ವಾರ್ತಾಭಾರತಿ ಪತ್ರಿಕೆಗಳ ಜೊತೆಗೆ ಫೇಸ್‍ಬುಕ್‍ನ ಲಕ್ಷಾಂತರ ಓದುಗರು ನಿತ್ಯ ಅವರ ಕಾರ್ಟೂನ್‍ಗೆ ಕಾಯುತ್ತಾರೆ.

ನಾವು ಬದುಕುತ್ತಿರುವ ಕಾಲ ಅನೇಕ ವಿರೋಧಾಭಾಸಗಳಿಂದ ಕೂಡಿದೆ. ಈಗ ಅಭಿವ್ಯಕ್ತಿಸಲು ಮಾಧ್ಯಮಗಳ ಕೊರತೆಯಿಲ್ಲ. ಕೈಯಲ್ಲಿ ಮೊಬೈಲ್ ಇದ್ದರಾಯ್ತು – ನಮ್ಮ ಅನಿಸಿಕೆ – ಅಭಿಪ್ರಾಯಗಳನ್ನು ಜಗತ್ತಿನ ಯಾವ ಮೂಲೆಗೂ ತಲುಪಿಸಬಹುದು. ಆದರೆ ಅದೇ ಸಾಧನವನ್ನು ಟ್ರಾಲ್‍ಗಳ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಿಕ್ಕೂ ಬಳಸಲಾಗುತ್ತದೆ. ಗುಸುಗುಸು, ವದಂತಿ, ಚಾಡಿ ಮಾತುಗಳು ಇಂಟರ್ನೆಟ್ ಮಾಧ್ಯಮದ ಮೂಲಕ ಬಹುಮುಖ್ಯ ಅಭಿಪ್ರಾಯ ಎಂಬಂತೆ ಬಿತ್ತರಗೊಳ್ಳುತ್ತಿವೆ. ಬರೀ ವಾಟ್ಸಾಪ್ ಫಾರ್ವರ್ಡ್‍ಗಳನ್ನಷ್ಟೇ ನೋಡುವ ಮತ್ತು ಅವುಗಳನ್ನು ನಂಬುವ ದೊಡ್ಡದೊಂದು ಜನವರ್ಗ ಸೃಷ್ಟಿಯಾಗಿದ್ದು ಅವರು ಚುನಾವಣೆಗಳಲ್ಲಿ ತೆಗೆದುಕೊಳ್ಳುವ ತೀರ್ಮಾನದಿಂದಾಗಿ ಏನೆಲ್ಲಾ ಆಗಬಹುದು ಎಂಬುದನ್ನೂ ನೋಡುತ್ತಾ ಇದ್ದೇವೆ.

ಪ್ರಾಥಮಿಕ ಶಾಲೆಗಳಲ್ಲಿಯೇ ಸತ್ಯಮೇವ ಜಯತೆ ಎಂದು ಪಾಠ ಕೇಳುತ್ತಾ ಬಂದಿದ್ದೇನೆ. ಆದರೆ ಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ. ಮೊದಲೆಲ್ಲ ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಹೇಳುವವರನ್ನು ನೋಡಿದ್ದೆವು. ಈಗ ಸತ್ಯದ ತಲೆಯನ್ನೇ ಹಾರಿಸಿ ಸುಳ್ಳು ಹೇಳಲಾಗುತ್ತಿದೆ.

ವೃತ್ತಿಪರ ಕಾರ್ಟೂನಿಸ್ಟ್ ಆಗಿ ಕೆಲಸ ಮಾಡುತ್ತಿರುವ ನನಗೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಎಂದರೆ ಏನು ಎಂದು ನನ್ನ ವೃತ್ತಿಜೀವನದ ಮೂವ್ವತ್ತು ವರ್ಷಗಳಲ್ಲಿ ಚೆನ್ನಾಗಿ ಮನದಟ್ಟಾಗಿದೆ. ಶಾ ಬಾನು ವಿವಾದ, ಬಾಬರಿ ಮಸೀದಿ ಧ್ವಂಸ ಸಂದರ್ಭಗಳಲ್ಲಿ ನಾನು ರಚಿಸಿದ ಕಾರ್ಟೂನುಗಳಿಗೆ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಎದುರಿಸಿದ್ದೇನೆ. ಆದರೆ ಅವುಗಳಿಂದ ನಾನು ಮತ್ತು ನನ್ನಂಥ ಕಾರ್ಟೂನಿಸ್ಟರ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಶಕ್ತಿಗೆ ಏನೂ ತೊಂದರೆಯಾಗಿರಲಿಲ್ಲ. 2002ರ ಗುಜರಾತ್ ನರಮೇಧ ನಡೆದಾಗಲೂ ನಾವು ನಮ್ಮ ಮಾಧ್ಯಮವನ್ನು ಬಳಸಿಕೊಂಡು ಆ ಘಟನೆಗಳ ಬಗ್ಗೆ ಓದುಗರಿಗೆ ತಿಳಿಸಬೇಕಾದ್ದನ್ನು ತಿಳಿಸಿದ್ದೆವು.

ಆದರೆ 2014ರ ನಂತರದ ಸನ್ನಿವೇಶ ಸಂಪೂರ್ಣ ಭಿನ್ನವಾಗಿದೆ. ಒಂದು ನಿರ್ದಿಷ್ಟ ರಾಜಕೀಯ ನಾಯಕನ ವಿರುದ್ಧವಾದ ಕಾರ್ಟೂನ್ ರಚಿಸಿದರೆ ರಚಿಸಿದಾತನ ವಿರುದ್ಧ ‘ಟ್ರೋಲ್’ ಕಾಲಾಳುಗಳು ಮುಗಿಬೀಳುತ್ತಾರೆ. ಆತಂಕದ ವಿಷಯವೆಂದರೆ ಈ ಟ್ರೋಲ್‍ಗಳನ್ನು ದುಡ್ಡುಕೊಟ್ಟು ಈ ಉದ್ದೇಶಕ್ಕಾಗಿಯೇ ಇಟ್ಟುಕೊಳ್ಳಲಾಗುತ್ತದೆಯಂತೆ! ಇಂಥದಕ್ಕೆ ಮಣಿಯದವರ ಕುಟುಂಬ ಸದಸ್ಯರ ಮೇಲೇ ದೈಹಿಕ ದಾಳಿ ನಡೆಸುವ ಬೆದರಿಕೆ ಹಾಕಲಾಗುತ್ತದೆ. ಇವುಗಳನ್ನೆಲ್ಲ ಎದುರಿಸಿಯೂ ತಾನು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಿಟ್ಟುಕೊಡಲಾರೆ ಎಂದು ಹೇಳಲು ಸಾಕಷ್ಟು ಗಟ್ಟಿಯಾದ ಗುಂಡಿಗೆಯೇ ಬೇಕು. ಆದರೆ ಇಂಥ ಗುಂಡಿಗೆಯವರಿದ್ದರೂ ಅವರಿಗೆ ಮುಕ್ತವಾದ ಕೆಲಸ ಮಾಡಲು ಅವಕಾಶ ನೀಡಬೇಕಾದ ಮಾಧ್ಯಮ ಸಂಸ್ಥೆಗಳಿಗೇ ಧೈರ್ಯದ ಕೊರತೆಯಿರುತ್ತದೆ. ಕಾರ್ಪೊರೇಟ್ ಮಾಧ್ಯಮಗಳ ಈ ಕಾಲಘಟ್ಟದಲ್ಲಿ ಸರಕಾರವನ್ನು ಎದುರುಹಾಕಿಕೊಳ್ಳಲು ಯಾರೂ ತಯಾರಿಲ್ಲ.

ಪರಿಸ್ಥಿತಿ ಹೀಗಿರುವಾಗ ನನ್ನಂಥ ಸ್ಥಳೀಯ ಭಾಷೆಗಳಲ್ಲಿ ಕೆಲಸ ಮಾಡುವ ಕಾರ್ಟೂನಿಸ್ಟರಿಗೆ ಜೀವನ ನಿರ್ವಹಣೆಗಾಗಿ ದುಡಿಯುವುದೋ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲಿಕ್ಕಾಗಿ ದುಡಿಯುವುದೋ ಎನ್ನುವುದು ಅಕ್ಷರಶಃ ಜೀವನ್ಮರಣದ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಕ್ಷರಶಃ ಜೀವನ್ಮರಣದ ಪ್ರಶ್ನೆ! ನಿಮ್ಮ ಮಾತು ನೂರರಷ್ಟು ನಿಜ. ಆದರೆ, ನಮ್ಮಂಥವರು ನಿಮ್ಮ ವಿಡಂಭನಾತ್ಮಕ ಕಾರ್ಟೂನ್ ಗಳನ್ನು ನೋಡುತ್ತಾ ಬೆಳೆದವರು. ಅನುಸರಿಸಿದವರು. ಎದೆಗುಂದುವ ಹಾಗೆ ಇಲ್ಲ. ನಿಮ್ಮೊಂದಿಗೆ ನಾವುಗಳು ಇದ್ದೇವೆ. ನೀವೇ ಹೇಳಿದ ಹಾಗೆ ಹಿಂದೆಂದಿಗಿಂತಲೂ ನಿಮ್ಮಂಥವರ ಅಗತ್ಯ ಬಹಳವಿದೆ. ಮುಂದುವರೆಸಿ ಸಾರ್…ಸತ್ಯಕ್ಕೆ ತಡವಾಗಿಯಾದರೂ ಗೆಲುವೇ ಇದ್ದೇ ಇರುತ್ತೆ..

  2. ಪಿ.ಮುಹಮ್ಮದ್ ಅವರ ಮಾತುಗಳಲ್ಲಿ ಹುರುಳಿದೆ ,ಇದೆಯಂದು ಎಲ್ಲರಿಗೂ ಗೊತ್ತು ಇದೆ. ಹಾಗೆಂದು ಮಾತು ಆರಂಭಿಸುವವರು ಯಾರು, ಎಂಬುದು ಪ್ರಶ್ನೆ. ಇದಕ್ಕೆ ವ್ಯಂಗ್ಯಚಿತ್ರಗಳೇ ಉತ್ತರಿಸುತ್ತಿದ್ದವು. ಆರ್. ಕೆ..ಲಕ್ಷ್ಮಣ್ರು ನಮ್ಮ ಸೂಪ್ತ ಉತ್ತರಗಳನ್ನು ತಮ್ಮ ವ್ಯಂಗ್ಯಚಿತ್ರಗಳಲ್ಲಿ ಕೊಟ್ಟಂತೆ ಭಾಸವಾಗುತ್ತಿತ್ತು.
    ಇಂದು ಕರ್ನಾಟಕದ ವ್ಯಂಗ್ಯಚಿತ್ರಕಾರರೊಬ್ಬರ ಉದ್ಗಾರಗಳು ಆತಂಕ ತಡಿ ಎಮ್ ನದಾಫ್ ಅಫಜಲಪುರ.

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...