Homeಸಾಮಾಜಿಕಈ ನೆಲದ ಶೋಷಿತರು ಕಲಿಯಬೇಕಾದದ್ದು ಸಾಕಷ್ಟಿದೆ 

ಈ ನೆಲದ ಶೋಷಿತರು ಕಲಿಯಬೇಕಾದದ್ದು ಸಾಕಷ್ಟಿದೆ 

- Advertisement -
ನಗರಗೆರೆ ರಮೇಶ್ |
ಈ ಸಂಭಾಷಣೆಯ ತುಣುಕುಗಳನ್ನು ಗಮನಿಸಿ:
1) ನಮ್ಮ ಮನೆಯ ಮುಂದೆ ನಮ್ಮ ಬೀದಿಯಲ್ಲಿ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದ ಗುಂಪು. ಅದರ ನಾಯಕ ಕೆಲವು ವರ್ಷಗಳ ಹಿಂದೆ ಜೆಡಿಎಸ್‍ನಲ್ಲಿದ್ದು ನಂತರ ಬಿಜೆಪಿ ಸೇರಿ ತನ್ನ ಪತ್ನಿಯನ್ನು ವಾರ್ಡಿನ ಕಾರ್ಪೊರೇಟರ್ ಆಗಿಸಿದ ಒಬ್ಬ ಪುಢಾರಿ.
`ನಮಸ್ಕಾರ ಸಾರ್!’
`ನಮಸ್ಕಾರ?’
ಕರಪತ್ರವನ್ನು ನನ್ನ ಕೈಗೆ ಕೊಡುತ್ತಾ, `ಈ ಬಾರಿ ಬಿಜೆಪಿಗೆ ಓಟ್ ಹಾಕಬೇಕು ಸಾರ್. ಈ ಏರಿಯಾದವರೆಲ್ಲಾ ನಮಗೇ ಓಟ್ ಹಾಕ್ತಾ ಇದಾರೆ.’
`ಆಯ್ತು, ಹಾಕೋಣ. ಆದ್ರೆ ಬಿಜೆಪಿಗೆ ಯಾಕೆ ಓಟ್ ಹಾಕಬೇಕು?’
`ನಮ್ಮ ಹಿಂದೂ ಧರ್ಮಕ್ಕೋಸ್ಕರ.’
`ಹಿಂದೂ ಧರ್ಮಕ್ಕೆ ಈಗ ಏನಾಗಿದೆ.’
`ಏನ್ಸಾರ್ ಹೀಗೆ ಹೇಳ್ತೀರ? ಅವರು ನೋಡಿ ಎಲ್ಲಾ ಕಡೆ ಹೇಗೆ ಬೆಳೀತಾ ಇದಾರೆ!’
`ಏನು, ಈ ದೇಶದಲ್ಲಿ ಬರೀ ಹಿಂದೂಗಳು ಮಾತ್ರ ಇರಬೇಕಾ? ನಿಮ್ಮ ಪಾಡಿಗೆ ನೀವು ಪೂಜೆ ಮಾಡಿ. ಅವರು ನಮಾಜೋ, ಮತ್ತೊಂದೋ ಮಾಡ್ಕೋತಾರೆ. ನಿಮಗೇನು ಕಷ್ಟ?’
`ಆದ್ರೂ, ನಾವು ಹುಷಾರಾಗಿರಬೇಕು ಅಲ್ವಾ ಸಾರ್! ದೇವೇಗೌಡ್ರು ನೋಡಿ, ಒಂದು ಸಲ ಹೇಳಿದ್ರು: ಮುಂದಿನ ಜನ್ಮ ಅನ್ನೋದಿದ್ರೆ ನಾನು ಮುಸ್ಲಿಮರ ಮನೇಲಿ ಹುಟ್ಟೋಕೆ ಬಯಸ್ತೀನಿ ಅಂತ.’
`ನೋಡ್ರಿ! ಕೆಲವು ವರ್ಷಗಳ ಹಿಂದೆ ನೀವು ಅವರ ಜತೆಯಲ್ಲಿದ್ರಿ. ಈಗ ಈ ರೀತಿ ಮಾತಾಡ್ತಾ ಇದೀರಲ್ರೀ! ಅಷ್ಟೇ ಅಲ್ಲದೆ ಒಂದು ಧರ್ಮದ ಹೆಸರಿನಲ್ಲಿ ಮತ ಕೇಳೋದು ತಪ್ಪು ಅಂತ ನಿಮಗೆ ಗೊತ್ತಿಲ್ವಾ?’
“ಅದು ಬಿಡಿ ಸಾರ್. ನಾವು ಅಭಿವೃದ್ಧಿ ಮಾಡ್ತಾ ಇದೀವಿ. ರೋಡುಗಳಿಗೆ ಟಾರ್ ಹಾಕಿಸ್ತಾ ಇದೀವಿ.”
“ಹೌದಾ! ಸ್ವಲ್ಪ ನಮ್ಮ ಬೀದಿ ಕಡೆ ನೋಡಿ. ಇಲ್ಲಿ ಟಾರ್ ಹಾಕಿ ಅದೆಷ್ಟೋ ಕಾಲ ಆಗ್ಹೋಗಿದೆ. ಇದು ಅಭಿವೃದ್ಧಿನಾ?”
“ನಿಮ್ಮಿಷ್ಟ ಸಾರ್, ಯಾರಿಗಾದ್ರೂ ಹಾಕ್ಕೊಳ್ಳಿ.”
ಎಂದ ಆ ವ್ಯಕ್ತಿ ಮತ್ತೊಂದು ಬಾರಿ ನಮಸ್ಕರಿಸಿ ತನ್ನ ಹಿಂಬಾಲಕರ ಜತೆ ಓಟ ಕಿತ್ತ.
* * * *
2) ದೂರವಾಣಿ ಸಂಭಾಷಣೆ:
“ನಮಸ್ಕಾರ ಸಾರ್! ರಮೇಶ್ ಅವರಾ?”
“ಹೌದು, ನೀವೂ?”
“ನಾನು ಈ ಏರಿಯಾದ ಬ್ರಾಹ್ಮಣ ಸಂಘದಿಂದ ಮಾತಾಡ್ತಾ ಇದೀನಿ ಈ ಬಾರಿ ಎಲೆಕ್ಷನ್‍ನಲ್ಲಿ ಬ್ರಾಹ್ಮಣರೆಲ್ಲಾ ಬಿಜೆಪಿಗೆ ಓಟು ಹಾಕಬೇಕು.”
“ನಾನು ಆ ರೀತಿ ಯೋಚನೆ ಮಾಡೋನಲ್ಲ. ನೇರವಾಗಿ ಹೇಳ್ತೀನಿ ಕೇಳಿ. ನಾನು ಬಿಜೆಪಿ ವಿರೋಧಿ.”
“ತುಂಬಾ ಬೇಜಾರಾಯ್ತು ಸಾರ್, ನಿಮ್ಮ ಮಾತು ಕೇಳಿ!”
“ಯಾಕೆ?”
“ನಾನು ಬಿಜೆಪಿ, ಅರ್‍ಎಸ್‍ಎಸ್. ನೀವು ಬಿಜೆಪಿನ ವಿರೋಧಿಸ್ತೀನಿ ಅಂದ್ರಿ. ಅದಕ್ಕೇ ಬೇಜಾರು.”
“ನಾನೇನೂ ಮಾಡೋಕಾಗಲ್ಲ”
* * * *
3) ಅಂಗಡಿಯೊಂದರಲ್ಲಿ ಒಬ್ಬ ಮಹಿಳೆ:
ಅಂಗಡಿಯವನನ್ನುದ್ದೇಶಿಸಿ: “ ನಾಳೆ ಎಲೆಕ್ಷನ್ ಅಲ್ವಾ! ಬಿಜೆಪಿಗೆ ಹಾಕ್ತಿರಿ ತಾನೇ!”
“ಹಾಕ್ಲೇ ಬೇಕಾಲ್ಲಾ ಇಲ್ದಿದ್ರೆ ನಾವು ಉಳಿಯೋದು ಹೇಗೆ?”
ಮಹಿಳೆ ಈಗ ನನ್ನನ್ನುದ್ದೇಶಿಸಿ;
“ಇಲ್ಲೆಲ್ಲಾ ಬಿಜೆಪಿಗೇ ಓಟು ಸಾರ್, ನೀವೇನಂತೀರಾ ಸಾರ್?”
“ಬಿಜೆಪಿಗೆ ಯಾಕೆ ಓಟು ಹಾಕಬೇಕಮ್ಮಾ?”
“ಯಾಕೆ ಸಾರ್? ಮೋದಿ ನೋಡಿ. ಪ್ರಪಂಚದಲ್ಲೆಲ್ಲಾ ಜನ ನಮ್ಮ ದೇಶನಾ ಗಮನಿಸೋತರ ಮಾಡಿದಾನೆ.”
“ಅಂದ್ರೆ ಅದಕ್ಕೆ ಮೊದಲು ಯಾರಿಗೂ ನಮ್ಮ ದೇಶದ ಬಗ್ಗೆ ಗೊತ್ತೇ ಇರಲಿಲ್ವಾ? ಗಾಂಧಿ, ನೆಹರೂ ಎಲ್ಲಾ ಇದ್ರಲ್ಲಾ!”
“ಇದ್ರು ಸಾರ್. ಆದ್ರೆ ಈಗ ಮೋದಿ ನಮ್ಮನ್ನ ಹೆಚ್ಚು ಫೇಮಸ್ ಮಾಡಿದಾನೆ”
“ಗಾಂಧಿನ ಕೊಂದ ಗುಂಪಿಗೆ ಸೇರಿದ ಮೋದಿಗೂ, ಇವರಿಗೂ ಹೋಲಿಕೆ ಇದೆಯೇನಮ್ಮಾ!”
“ಏನೋ ಸಾರ್! ಇಲ್ಲಿನ ಬ್ರಾಹ್ಮಣರಂತೂ ಎಲ್ಲಾ ಬಿಜೆಪಿನೇ. ಇಲ್ದೇ ಇದ್ರೆ ಇನ್ನು ಮುಂದೆ ಸಾಬರು ನಮ್ಮ ಮನೆಗಳಿಗೇ ನುಗ್ಗಿ ನಮಾಜ್ ಮಾಡ್ತಾರಷ್ಟೇ!”
“ನೋಡೀಮ್ಮಾ. ನಿಮಗಿಷ್ಟ ಆದ್ರೆ ಬಿಜೆಪಿಗೆ ಓಟು ಹಾಕ್ಕೋಳ್ಳಿ. ಆದರೆ, ಇಂಥ ಸುಳ್ಳುಗಳನ್ನು ತಲೀಲಿ ತುಂಬಿಕೊಂಡಿರಬೇಡಿ.”
ಮೇಲಿನ ಸಂಭಾಷಣೆಗಳ ತುಣುಕುಗಳು ಕಲ್ಪನೆಯಲ್ಲ. ಅವು ನನ್ನ ಮತ್ತು ಆ ಮೂವರು ವ್ಯಕ್ತಿಗಳ ನಡುವೆ ನಡೆದ ಮಾತುಗಳು.
ಸಂಘ ಪರಿವಾರದ ರಾಜಕೀಯ ಘಟಕವಾದ ಬಿಜೆಪಿಯ ಬೆಂಬಲದ ಮೂಲ (Support Base) ಪ್ರಮುಖವಾಗಿ ಯಾವುದು ಮತ್ತು ಆ ಬೆಂಬಲದ ಹಿಂದಿನ ಪ್ರಧಾನ ಕಾರಣಗಳು ಯಾವು ಅನ್ನುವುದು ಅವರುಗಳ ಮಾತುಗಳಿಂದ ಸ್ಪಷ್ಟವಾಗುತ್ತದೆ.
ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ದೇಶದ ಪ್ರಧಾನ ಸೇವಕ ಮತ್ತೆ ಮತ್ತೆ ಕೂಗಿಕೊಂಡರೂ, ಅದು ಎಷ್ಟು ಪೊಳ್ಳು ಎನ್ನುವುದು ಆತನಿಗೂ ಮತ್ತು ಆತನ ಆರಾಧಕರಿಗೂ ಗೊತ್ತು. ಬಿಜೆಪಿಯ ಹಲವರು ನಾಯಕರು, ಮಂತ್ರಿಗಳೂ ಸೇರಿದಂತೆ ನಿರ್ಭಿಡೆಯಿಂದ ಇಲ್ಲಿನ ಮುಸಲ್ಮಾನರ ವಿರುದ್ಧ ಕೆಂಡ ಕಾರುವುದನ್ನು, ಅದಕ್ಕೆ ಆಪ್ರಧಾನ ಸೇವಕ ಅಡ್ಡಿಪಡಿಸಿರುವುದನ್ನು ಕಂಡ ಯಾರಿಗಾದರೂ ಅವರೆಲ್ಲರೂ ತಮ್ಮ ಗುರೂಜಿಯ ‘ಚಿಂತನಗಂಗಾ’ದ ವಿಚಾರಧಾರೆಗೇ ಜೋತು ಬಿದ್ದಿರುವುದು ಸ್ಪಷ್ಟವಾಗಬೇಕು.
ಇನ್ನೂ ಬ್ರಾಹ್ಮಣರೆಲ್ಲಾ ಬಿಜೆಪಿಗೆ ಮತ ನೀಡಬೇಕು ಎನ್ನುವ ಮಾತಂತೂ ಆ ಪಕ್ಷ ತೋರಿಕೆಗಾಗಿಯಾದರೂ ಎಷ್ಟೇ ಹೆಣಗಿದರೂ ‘ಬ್ರಾಹ್ಮಣರ ಪಕ್ಷ’ ಎನ್ನುವ ಹಣೆ ಪಟ್ಟಿಯಿಂದ ದೂರಬರುವುದಂತೂ ಸಾಧ್ಯವೇ ಇಲ್ಲ. ಬ್ರಾಹ್ಮಣರೆನಿಸಿಕೊಂಡವರು ಒಂದು ಕಡೆ ಸೇರಿದಾಗ ವ್ಯಕ್ತವಾಗುವ ಅಭಿಪ್ರಾಯ ಅದು. ಯಾರಾದರೂ ಆ ಮಾತನ್ನು ಒಪ್ಪದಿದ್ದರೆ, ‘ತಲೆಕೆಟ್ಟವ’ ಎನ್ನುವ ಬಿರುದಿಗೆ ಸಿದ್ಧವಾಗಿರಬೇಕು. ಆದರೆ ಅಂಥವರಿಂದ ಬ್ರಾಹ್ಮಣರ ಬಿಜೆಪಿ ಒಲವಿಗೆ ಧಕ್ಕೆಯಾಗದು.
ಬಿಜೆಪಿ ನಮ್ಮ ದೇಶಕ್ಕೆ ಏನೋ ತಂದು ಕೊಡುತ್ತದೆ, ಅಭಿವೃದ್ಧಿ ಪಥದಲ್ಲಿ ನಡೆಸುತ್ತದೆ ಎಂದು ನಂಬುವ, ನಂಬಿದಂತೆ ನಟಿಸುತ್ತಿರುವ ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದವರು ಕಲಿಯಬೇಕಾದದ್ದು ಸಾಕಷ್ಟಿದೆ. ಈ ಮಾತನ್ನು ಹೇಳಲು ಮುಖ್ಯ ಕಾರಣವೆಂದರೆ ಎಷ್ಟೇ ನಿದರ್ಶನಗಳು ನಮ್ಮ ಮುಂದಿದ್ದರೂ ಈಗಲೂ ಹಿಂದುಳಿದ ಜಾತಿಗಳ, ದಲಿತರ, ಸ್ವಲ್ಪಮಟ್ಟಿಗೆ ಅಲ್ಪಸಂಖ್ಯಾಂತರ ಬೆಂಬಲ ಬಿಜೆಪಿಗೆ ದೊರೆತಿರುವುದು ಇತ್ತೀಚಿನ ಚುನಾವಣೆಗಳಲ್ಲಿ ಕಂಡುಬಂದಿದೆ. ಇನ್ನು ದೊಡ್ಡ ಸಂಖ್ಯೆಯಲ್ಲಿರುವ ಲಿಂಗಾಯತ(ವೀರಶೈವರೂ ಸೇರಿ)ರ ಬಲವಂತೂ ಬಿಜೆಪಿಯ ಕಡೆಗೇ ಇದೆ ಎನ್ನುವುದಂತೂ ಸೂರ್ಯ ಸ್ಪಷ್ಟೆ. ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ಸಿಗಬೇಕೆಂಬ ಒತ್ತಾಯದ ನಡುವೆಯೂ, ಅವರ ಬಿಜೆಪಿ ಪ್ರೇಮ ಕುಂಠಿತಗೊಂಡಿಲ್ಲ. ಅಲ್ಪಸಂಖ್ಯಾತ ಹಣೆಪಟ್ಟಿಯೂ ಬೇಕು, ನಮ್ಮವನೇ ಮುಖ್ಯಮಂತ್ರಿಯೂ ಆಗಬೇಕು ಎನ್ನುವ ಧೋರಣೆ ಅವರದು.
ಪ್ರತಿದಿನವೂ ನಡೆಯುತ್ತಿರುವ ತಂತ್ರ-ಪ್ರತಿತಂತ್ರಗಳನ್ನು ಗಮನಿಸಿದರೆ ನಮ್ಮಾ ಸಮಾಜ ಪ್ರಜಾ ತಾಂತ್ರಿಕತೆ ಎಂದರೆ ಏನು ಎನ್ನುವುದರ ಬಗ್ಗೆ ಇನ್ನೂ ಪ್ರಾಥಮಿಕ ಪಾಠಗಳೇ ಕಲಿತಿಲ್ಲ ಎನ್ನುವುದನ್ನು ಬೇರೆಯಾಗಿ ಹೇಳಬೇಕಾಗಿಲ್ಲ. ಜನರು ಮತ್ತು ಅವರಿಂದ ಆರಿಸಿಬಂದ ಜನಪ್ರತಿನಿಧಿಗಳು, ಅವರ ನಾಯಕರುಗಳು ಯಾರಿಗೂ ಪ್ರಜಾತಂತ್ರ, ಸಂವಿಧಾನ ಇವು ಯಾವುದರ ಬಗ್ಗೆಯೂ ಕಿಂಚಿತ್ತೂ ಕಾಳಜಿ ಇಲ್ಲ. ಅವೆಲ್ಲವೂ ಕೇವಲ ಜನರನ್ನು ಮರಳು ಮಾಡಲು ಬಳಸುವ ಪದಗಳು ಆ ವಿಷಯ ಜನರಿಗೂ ಗೊತ್ತು.
ಇಂಥ ಸನ್ನಿವೇಶದಲ್ಲಿಯೇ ಪ್ರಗತಿಪರವಾಗಿ, ಮೌಲ್ಯಗಳ ಬಗ್ಗೆ, ಅವುಗಳ ನಾಶದ ಬಗ್ಗೆ ಗಮನ ಹರಿಸುವವರ ಜವಾಬ್ಧಾರಿ ಇನ್ನೂ ಹೆಚ್ಚು. ಬಹಳ ಬೇಗ ಸಿನಿಕತನಕ್ಕೆ ನಮ್ಮನ್ನುದೂಡುವ ಇಂಥ ಬೆಳವಣಿಗೆಗಳನ್ನು ಅರ್ಥಮಾಡಿಕೊಂಡು ಸಮಾಜವನ್ನು ಸರಿಯಾದ ಮಾರ್ಗದ ಕಡೆ ಕರೆದೊಯ್ಯುವ ಪ್ರಯತ್ನಗಳು ನಡೆದರೆ ದೇಶಕ್ಕೆ ಸದ್ಗತಿ ಇಲ್ಲವೇ ದುರ್ಗತಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...