Homeರಾಜಕೀಯಈ ಫಲಿತಾಂಶ ಮತ್ತು ಆ ಚುನಾವಣೆ

ಈ ಫಲಿತಾಂಶ ಮತ್ತು ಆ ಚುನಾವಣೆ

- Advertisement -
- Advertisement -

ಗೌತಮ |

ಕರ್ನಾಟಕದ ವಿಧಾನಸಭಾ ಚುನಾವಣೆಯನ್ನು ಮಾಧ್ಯಮಗಳು ಮತ್ತು ರಾಜಕೀಯ ವಿಶ್ಲೇಷಕರು 2019ರ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದು ಬಿಂಬಿಸಿವೆ. ಮೇಲ್ನೋಟಕ್ಕೆ ಅದು ಸರಿ ಎಂದು ಕೂಡ ಅನ್ನಿಸುತ್ತಿತ್ತು. ಅನ್ನಿಸುತ್ತಿದೆ. ರಾಜಕಾರಣದಲ್ಲಿ ಕಂಡದ್ದು, ಕೇಳಿದ್ದು ಮಾತ್ರ ‘ಸತ್ಯ’ ಅಲ್ಲ. ಹಾಗಾದರೆ ಕರ್ನಾಟಕದ ಚುನಾವಣೆಯು ಸೆಮಿಫೈನಲ್ ಅಲ್ಲವೇ? ಎಂಬ ಪ್ರಶ್ನೆ ಉದ್ಭವಿಸುವುದು ಸಹಜ. ಆಟದ ನಿಯಮಗಳು ರಾಜಕೀಯಕ್ಕೆ ಅನ್ವಯಿಸುವುದಿಲ್ಲ. ಜನ ರಾಜಕೀಯ ಆಯ್ಕೆಯನ್ನು ಆಟದ ರೀತಿಯಲ್ಲಿ ಮನರಂಜನೆ ಎಂದು ಭಾವಿಸುವುದಿಲ್ಲ. ಯಾಕೆಂದರೆ ಅವರಿಗೆ ತಮ್ಮ ಆಯ್ಕೆ ಉಂಟು ಮಾಡುವ ಅಪಾಯದ ಅರಿವು-ಮುನ್ಸೂಚನೆ ಇದ್ದೇ ಇರುತ್ತದೆ. ಎರಡು ಚುನಾವಣೆಯ ನಡುವಿನ ಅವಧಿಯಲ್ಲಿ ‘ಮತದಾರ ಪ್ರಭು’ ಅಸಹಾಯಕ. ಅದು ಅವನಿಗೆ ಗೊತ್ತಿರದ ಸಂಗತಿಯೇನಲ್ಲ. ಸಣ್ಣಪುಟ್ಟ ಬದಲಾವಣೆ-ಘಟನೆ-ಬೆಳವಣಿಗೆಗಳೂ ಸಂಕೇತ-ಸೂಚನೆ ನೀಡುತ್ತವೆ ಎನ್ನುವುದು ಒಂದು ಹಂತದ ಮಟ್ಟಿಗಿನ ತರ್ಕಕ್ಕೆ ಸರಿ. ತರ್ಕವು ಸತ್ಯದ ಸಮೀಪ ಹೋಗಬಹು ದಾದ ದಾರಿ ಮಾತ್ರ. ತರ್ಕದಿಂದಲೇ ಸತ್ಯವನ್ನು ಅರಿಯಲು-ಪಡೆಯಲು ಸಾಧ್ಯವಿಲ್ಲ. ಹಾಗಾದರೆ ಅದು ಹೇಗೆ ಸಿಗುತ್ತದೆ? ಅದನ್ನು ಪಡೆಯುವ ಕ್ರಮ ಏನು? ಅದು ವರ್ತಮಾನವನ್ನು ಹಿಡಿಯುವ ಹಂಬಲದ ಹಾಗೆ. ಸಿಕ್ಕಿತು ಎಂದು ಅನ್ನಿಸುವ ವೇಳೆಗಾಗಲೇ ಅದು ಬದಲಾಗಿ ಬಿಟ್ಟಿರುತ್ತದೆ. ಅದಿರಲಿ.

 ಒಮ್ಮೆ ಓಟು ಕೊಟ್ಟ ಮೇಲೆ ಮತದಾರ ಮೂಕಪ್ರೇಕ್ಷಕ ಆಗುತ್ತಾನೆ. ಐದು ವರ್ಷದವರೆಗೆ ಬರಿ ನೋಡುವುದಷ್ಟೇ ಅವನ ಕೆಲಸ. ಸಾಕ್ಷಿ ಆಗಿ ಉಳಿಯುತ್ತಾನೆ. ಭಾಗಿ ಆಗಲು ಅವಕಾಶವೇ ಇಲ್ಲದ ಮೇಲೆ ಸಾಕ್ಷಿ ಮಾತ್ರ ಆಗಿ ಉಳಿಯುವ ಅನಿವಾರ್ಯ ಸ್ಥಿತಿ ಅವನ ಮುಂದಿರುತ್ತದೆ. ಮಧ್ಯೆ ಬರುವ ರಾಜ್ಯಗಳ ಚುನಾವಣೆಗಳು ಆಯಾಭಾಗದ ಮನಸ್ಥಿತಿ ಮಾತ್ರ ಆಗಿರುತ್ತದೆ. ಇಡೀ ಇಂಡಿಯಾದ ಆಯ್ಕೆ ಆಗಿರುವುದಿಲ್ಲ. ಮತದಾರನಿಗೆ ತಾನು ಆಯ್ಕೆ ಮಾಡುತ್ತಿರುವುದು ‘ಲೋಕಸಭೆ’ ಮತ್ತು ‘ವಿಧಾನಸಭೆ’ಗೆ ಎಂಬುದರ ಸ್ಪಷ್ಟ ಅರಿವು ಇದ್ದೇ ಇದೆ. ಇರುತ್ತದೆ. ಅದಕ್ಕಾಗಿ ಭಾರತೀಯ ಮತದಾರರನ್ನು ಅನಕ್ಷರಸ್ಥ ಆದರೆ ಪ್ರಜ್ಞಾವಂತ ಎಂದು ಗುರುತಿಸುವುದು. ಕೋಟೆಯನ್ನು ಪ್ರಬಲಗೊಳಿಸಲು ಬಿಟ್ಟು ನೋಡುತ್ತ ಕುಳಿತು ಕೊಳ್ಳುವ ಮತದಾರನಿಗೆ ಕೋಟೆ ಕಟ್ಟಿದವ ತನ್ನ ಮುಂದೆ ಬಂದು ನಿಲ್ಲುತ್ತಾನೆ ಎಂದು ಗೊತ್ತಿದೆ. ಅದಕ್ಕಾಗಿ ಕೋಟೆಯ ನಿರ್ಮಾಣ ಕಾರ್ಯ ಎಷ್ಟೇ ಪ್ರಬಲವಾಗಿ ನಡೆದರೂ ನೋಡಿಯೇ ಇಲ್ಲದಂತೆ ಸುಮ್ಮನಿರುತ್ತಾನೆ. ನಿರ್ಣಾಯಕ ಹಂತ ಬರುವವರೆಗೆ ಕಾಯುವ ಆಟ ರಾಜಕಾರಣಿಗಳಿಗಿಂತ ಮತದಾರನಿಗೆ ಚೆನ್ನಾಗಿ ಗೊತ್ತಿದೆ. ಭಾರತದಲ್ಲಿ ಅಂತಹ ಹಲವು ನಿರ್ಣಯಗಳನ್ನು ತೋರಿಸಿದ್ದನ್ನು ನಾವು ನೋಡಿದ್ದೇವೆ. ನೋಡುತ್ತಿದ್ದೇವೆ.

ವಿಧಾನಸಭಾ ಚುನಾವಣೆಗಳು ಸಂಕೇತ-ಸೂಚನೆ ನೀಡುತ್ತವೆ. ಕರ್ನಾಟಕದ ಚುನಾವಣೆಯೂ 2019ಕ್ಕೆ ಸಂಬಂಧಿಸಿದಂತೆ ಸೂಚನೆ ನೀಡಿದೆ. ಕೇಂದ್ರದಲ್ಲಿರುವ ಸರ್ಕಾರದ ಬಗ್ಗೆ ಅಸಮಾಧಾನ ಇದ್ದರೂ ಅದು ವಿರೋಧಿ ಮತವಾಗಿ ಪರಿವರ್ತನೆ ಆಗಿಲ್ಲ. ಹಾಗೆಯೇ ಆಗದೇ ಇರುವುದಕ್ಕೆ ತನಗಾದ-ಆಗುತ್ತಿರುವ ತೊಂದರೆಗಿಂತ ಮುಸ್ಲಿಮರು ಮತ್ತು ದಲಿತರ ವಿರೋಧಿ ನಿಲುವೇ ಕಾರಣ. ಅಸ್ಪೃಶ್ಯರನ್ನು ಸಮಾನವಾಗಿ ನೋಡಬಯಸದ ಮನಸ್ಥಿತಿ ಹಾಗೂ ಮುಸ್ಲಿಮರ ಬಗ್ಗೆ ಇರುವ ಅನೂಹ್ಯ ಭೀತಿ ಇವೆರಡನ್ನೂ ಹುಟ್ಟಿಸುವಲ್ಲಿ ಮತ್ತು ಅದು ತಳಹಂತದವರೆಗೂ ಹರಡುವಂತೆ ಮಾಡುವಲ್ಲಿ ಕೇಂದ್ರದ ಆಡಳಿತಾರೂಢ ಪಕ್ಷ ಯಶಸ್ವಿಯಾಗಿದೆ. ಅದು ಕೇಂದ್ರದಲ್ಲಿ ರಾಜಕೀಯ ಪಕ್ಷದ ‘ಸಾಧನೆ’ ಎನ್ನುವುದಕ್ಕಿಂತ ಹೆಚ್ಚಾಗಿ ಅದನ್ನು ರೂಪಿಸುತ್ತಿರುವ ‘ಚಿಂತನಾ ಕ್ರಮ’ದ ‘ಗೆಲುವು’ ಎನ್ನುವುದರಲ್ಲಿ ಎರಡು ಮಾತಿಲ್ಲ. ಕರ್ನಾಟಕದ ವಿಧಾನಸಭಾ ಚುನಾವಣೆಯ ಫಲಿತಾಂಶವು ಬಹುಜನರ ಪರವಾಗಿ ರಾಜಕಾರಣ ಮಾಡುವುದರ ಅಪಾಯದ ಮುನ್ಸೂಚನೆ ನೀಡಿದೆ. ಹಾಗೆ ಅವರನ್ನು ಬಿಟ್ಟುಕೊಡದೇ ಪ್ರಬಲರ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಬಗ್ಗೆ ಕಂಡುಕೊಳ್ಳಬೇಕಾದ ದಾರಿಯ ಬಗ್ಗೆ ಯೋಚಿಸಲು ವಿರೊಧಪಕ್ಷಗಳಿಗೆ ಇದು ಸಕಾಲ.

ವಾಸ್ತವವಾಗಿ ವಿಧಾನಸಭೆಯ ಚುನಾವಣೆಗೂ ಲೋಕಸಭಾ ಚುನಾವಣೆಗೂ ನೇರ ಸಂಬಂಧ ಇಲ್ಲ. ವಿಧಾನಸಭಾ ಚುನಾವಣೆಗಳು ಮತ್ತು ಅದರ ಫಲಿತಾಂಶಗಳು ಕೇಂದ್ರದಲ್ಲಿರುವ ಸರ್ಕಾರದ-ಪಕ್ಷದ ಆತ್ಮವಿಶ್ವಾಸ ಮತ್ತು ಓಟದ ವೇಗ ಹೆಚ್ಚಿಸುವ- ಕಡಿಮೆ ಮಾಡಲು ಕಾರಣವಾಗುತ್ತವೆ. ಹಾಗಂತ ವಿಧಾನಸಭಾ ಚುನಾವಣೆಗಳ ಫಲಿತಾಂಶವೇ ಲೋಕಸಭೆಯಲ್ಲಿ ಪ್ರತಿಧ್ವನಿಸುತ್ತದೆ ಎಂದು ಭಾವಿಸಬೇಕಿಲ್ಲ. ವಿಧಾನಸಭಾ ಚುನಾವಣೆಗಳಲ್ಲಿ ತೋರಿದ ನಿಲುವಿಗೆ ತೀರಾ ವ್ಯತಿರಿಕ್ತವಾದ ನಿಲುವು ತೋರಿಸಿದ ನೂರಾರು ಉದಾಹರಣೆಗಳು ನಮ್ಮ ಮುಂದಿವೆ. ಅಧಿಕಾರದಲ್ಲಿ ಇರುವವರ ಆತ್ಮವಿಶ್ವಾಸ ಹೆಚ್ಚುವಂತೆ ಮಾಡುವುದು ಕೂಡ ಮತದಾರ ತೋರಿಸುವ ‘ಜಾಣ ನಡೆ’ ಎಂದು ವ್ಯಾಖ್ಯಾನಿಸಬೇಕಾಗುತ್ತದೆ.

2014ರ ಲೋಕಸಭಾ ಚುನಾವಣೆಯ ನಂತರ ದೆಹಲಿಯಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತದಾದದ್ದು ಬಿಟ್ಟರೆ ಉಳಿದಂತೆ ಎಲ್ಲ ಕಡೆಗಳಲ್ಲಿಯೂ ‘ಪ್ರಭುತ್ವ’ ತನ್ನ ಹಸ್ತ ಚಾಚುವಲ್ಲಿ ಯಶ ಕಂಡಂತೆ ಭಾಸವಾಗುತ್ತದೆ. ಬಿಹಾರದ ಮತದಾರ ನೀಡಿದ ಫಲಿತಾಂಶವೂ ಆಡಳಿತಾರೂಢರ ಪರವಾಗುವಂತೆ ಮಾಡಿದ್ದು ‘ಮುತ್ಸದ್ದಿ’ ರಾಜಕಾರಣಿಯೇ. ಉತ್ತರ ಪ್ರದೇಶದಲ್ಲಿ ಕೋಮುಭಾವನೆ ಕೆರಳಿಸುವ ಮೂಲಕ ವಿರೋಧಿಗಳನ್ನು ‘ಅಸಹಾಯಕ’ ಮಾಡುವಲ್ಲಿ ಕೇಂದ್ರ ಯಶಸ್ವಿಯಾದಂತೆ ಭಾಸವಾಗುತ್ತಿದೆ. ಪಂಜಾಬ್, ಗೋವಾ, ಅರುಣಾಚಲ ಪ್ರದೇಶ, ಸಿಕ್ಕಿಂಗಳಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷದ ವಿರುದ್ಧ ಮತ ಚಲಾವಣೆಯಾದರೂ ‘ತಂತ್ರ’ದಿಂದ ಅಧಿಕಾರ ಅನುಭವಿಸುವಲ್ಲಿ ಯಶಸ್ವಿಯಾಗಿದೆ. ಕರ್ನಾಟಕದ ಚುನಾವಣಾ ಫಲಿತಾಂಶವು ಕೂಡ ಮೇಲ್ನೋಟಕ್ಕೆ ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷದ ಪರವಾದ ನಿಲುವು ಎಂಬಂತೆ ಭಾಸವಾಗುತ್ತದೆ. ಕೇಂದ್ರದ ನಾಯಕರ ಆರ್ಭಟ- ತೋರಿದ ಆಸಕ್ತಿ ಹಾಗೆ ಅನ್ನಿಸುವಂತೆ ಮಾಡಿದೆ. ಲೋಕಸಭಾ ಚುನಾವಣೆಗೂ ಮುನ್ನ ನಡೆಯಲಿರುವ ಮಧ್ಯಪ್ರದೇಶ ಮತ್ತು ರಾಜಸ್ತಾನ ಚುನಾವಣೆಗಳು ಕೂಡ ನೀಡುವ ‘ಸಂಕೇತ’ವನ್ನೂ ಗಮನಿಸಬೇಕು. ಆದರೆ, ಸಂಕೇತಗಳೇ ಸತ್ಯವಾಗಿ ಪರಿವರ್ತನೆ ಆಗುತ್ತವೆ ಎಂದು ಭಾವಿಸಬೇಕಿಲ್ಲ. ತೋರುದೀಪ ಮಾತ್ರ ಗುರಿಯಲ್ಲ.

ರಾಜ್ಯಗಳ ದಂಡಯಾತ್ರೆಯಲ್ಲಿ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿಗೆ ಅಧಿಕಾರ ಸಿಗದಂತೆ ಮಾಡುವ ಪ್ರಯತ್ನಗಳು ತೀರಾ ವೇಗವಾಗಿ ನಡೆಯುತ್ತಿವೆ. ಅದು ಬಹುತೇಕ ಸಫಲವಾಗುವ ಸಾಧ್ಯತೆಗಳೇ ಹೆಚ್ಚು. ವಿಧಾನಸಭೆ ಚುನಾವಣೆಗಳ ಫಲಿತಾಂಶಗಳ ಆಧಾರದ ಮೇಲೆ ‘ಭಾರತ’ ನಿರ್ಧರಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮುಂದೆ ನಿರ್ಣಾಯಕ ಗಳಿಗೆಯಲ್ಲಿ ‘ಮಾರಿಹಬ್ಬ’ ಮಾಡುವುದಕ್ಕಾಗಿಯೇ ಗುಟ್ಟು ಬಿಟ್ಟುಕೊಡದೆ ಕಾಯುತ್ತಿರುತ್ತಾನೆ ಎಂಬುದು ಸುಳ್ಳೇನಲ್ಲ. ಸಣ್ಣಪುಟ್ಟ ಸಂಗತಿಗಳಿಗೆ ಪ್ರತಿಕ್ರಿಯೆ ನೀಡಿ ಕೈ ಸುಟ್ಟುಕೊಳ್ಳಲು ಮತದಾರರು ಬಯಸುವುದಿಲ್ಲ. ನಿರ್ಣಾಯಕ ಘಟ್ಟಕ್ಕಾಗಿ ಕಾಯುತ್ತಾರೆ. 2019 ಅಂತಹ ‘ಕಾಯುವಿಕೆ’ಗೆ ಅಂತ್ಯ ಹಾಡಲಿದೆ. ಅದಕ್ಕಿಂತ ಮೊದಲಿನವುಗಳೆಲ್ಲ ಪ್ರಕ್ರಿಯೆ ಮಾತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...