Homeಅಂಕಣಗಳುಈ ಬಡ ಭಾರತೀಯರು ಸರ್ಕಾರಕ್ಕೆ ಮೊದಲು ಕಾಣಬೇಕಿತ್ತು

ಈ ಬಡ ಭಾರತೀಯರು ಸರ್ಕಾರಕ್ಕೆ ಮೊದಲು ಕಾಣಬೇಕಿತ್ತು

- Advertisement -
- Advertisement -

ಬಡವರಿಗೆ ಕೊಡುವ ರೇಷನ್‍ನಲ್ಲಿ ಪೌಷ್ಟಿಕಾಂಶದ ಕೊರತೆ ಅತ್ಯಧಿಕ. ಆರೋಗ್ಯ ಇಲಾಖೆಯು ಕೋಟ್ಯಾಂತರ ರೂಪಾಯಿ ಖರ್ಚು ತೋರಿಸುತ್ತದೆ. ಆದರೆ ಬಡವರಿಗೆ ನೀಡುವ ಆಹಾರ ಪದಾರ್ಥ ಸತ್ವಹೀನವಾಗಿರುತ್ತವೆ. ಇದರ ಪರಿಣಾಮವಾಗಿ ಬಡವರಲ್ಲಿ ಅಪೌಷ್ಠಿಕತೆಯಿಂದ ನರಳುವ ಮತ್ತು ಸಾಯುವವರ ಸಂಖ್ಯೆ ಅತ್ಯಧಿಕವಾಗಿರುತ್ತದೆ. ಆದರೆ ಆರೋಗ್ಯ ಇಲಾಖೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ.

ಒಬ್ಬ ವಿಧವೆ ಕೂಲಿ ಕಾಸು ಸಿಕ್ಕದೆ ತನ್ನ ತಲೆಗೂದಲನ್ನೆ ಮಾರಿಕೊಂಡಿದ್ದಾಳೆ. ಒಂದು ಬಡಕುಟುಂಬದವರು ಹೊಟ್ಟೆಪಾಡಿಗಾಗಿ ತಮ್ಮ ಮಗುವನ್ನೇ ಮಾರಿಕೊಂಡರು. ಒಂದು ಒಡಸಂಸಾರದ ಒಬ್ಬ 7 ವರ್ಷದ ಹುಡುಗ ಹಸಿವನ್ನು ತಾಳಲಾರದೇ ಮನೆಬಿಟ್ಟು ಓಡಿಹೋಗಿ ಬಸ್‍ಸ್ಟಾಂಡಿನಲ್ಲಿ ಭಿಕ್ಷೆ ಬೇಡುತ್ತಾನೆ. ಕೂಲಿ ಕೆಲಸ ಮಾಡಿ ಹೊಟ್ಟೆ ಹೊರೆಯುತ್ತಾನೆ. ಅನೇಕ ಗರ್ಭಿಣಿ ಹೆಣ್ಣು ಮಕ್ಕಳು ಆಹಾರದ ಭದ್ರತೆ ಇಲ್ಲದೆ, ಅಪೌಷ್ಟಿಕತೆಯ ಕಾರಣದಿಂದ ಮಕ್ಕಳನ್ನು ಹಡೆದು ಸಾವನ್ನಪುತ್ತಾರೆ. ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 12 ಮಕ್ಕಳು ಒಮ್ಮೆಗೇ ಸಾಯುತ್ತಾರೆ. ಅನೇಕ ಸಂಸಾರಗಳು ಊರುಬಿಟ್ಟು ಬಂದು ಬೆಂಗಳೂರಿನಲ್ಲಿ ಫುಟ್‍ಪಾತಿನ ಮೇಲೆ ವಾಸಿಸುತ್ತಾರೆ. ರಾತ್ರಿ ಮಲಗುತ್ತಾರೆ. ತಿರುಪೆ ಮಾಡಿ ಜೀವನ ನಿರ್ವಹಿಸುತ್ತಾರೆ. ಹಳ್ಳಿಗಳಲ್ಲಿ ರೈತ ಕಾರ್ಮಿಕರು, ಅನೇಕ ದಿನ ಹೊಟ್ಟೆಗಿಲ್ಲದೆ ಮಲಗುವುದು ಭೂಮಿ ವಸತಿ ವಂಚಿತರಾಗಿ ಬಾಳ್ವೆ ನಡೆಸುತ್ತಿರುವುದೂ ನಡೆದೇ ಇದೆ.

ಭಾರತಕ್ಕೆ ಸ್ವಾತಂತ್ರ್ಯ ಬಂದು 72 ವರ್ಷಗಳೇ ಸಂದರೂ ಈ ಎಲ್ಲ ಬಡವರಿಗೆ ಮಾಡಲು ಉದ್ಯೋಗವಿಲ್ಲ. ಅವರ ಮಕ್ಕಳಿಗೆ ವಿದ್ಯೆ ಇಲ್ಲ. ಇನ್ನೊಂದು ಚಿತ್ರ ನೋಡಿ. ಭಾರತದಲ್ಲಿ ಲಕ್ಷ ಕೋಟ್ಯಾಧಿಪತಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರುತ್ತಿದೆ. ಅಂಬಾನಿ ಅದಾನಿ ಮುಂತಾದ ಕೋಟ್ಯಾಧಿಪತಿಗಳು ಕೋಟಿ ಕೋಟಿ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸುತ್ತದೆ. ಅವರ ಕೋಟಿ-ಕೋಟಿ ಹಳೆ ಸಾಲದ ಮೇಲಿನ ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಿದೆ. ಬಡವ ಬಲ್ಲಿದರ ನಡುವಿನ ಕಂದಕ ದೊಡ್ಡದಾಗುತ್ತಿದೆ.

ಕೇಂದ್ರ ಸರ್ಕಾರ ಬಡ ಜನರಿಗಾಗಿ 30 ಯೋಜನೆಗಳನ್ನು ಜಾರಿಗೆ ತಂದಿದೆ. ರಾಷ್ಟೀಯ ಸಾಮಾಜಿಕ ಸೇವೆ ಒದಗಿಸುವ ಸಂಸ್ಥೆಯೂ ಅವುಗಳಲ್ಲಿ ಒಂದು. ಅದು ಸಮಾಜದಲ್ಲಿ ಊಟ, ಉದ್ಯೋಗಗಳಿಂದ ವಂಚಿತರಾಗಿ ಸಾವನ್ನಪ್ಪಲು ಹೊರಟವರನ್ನು ತಡೆಗಟ್ಟುವುದಕ್ಕಾಗಿಯೇ ಈ ಸಂಸ್ಥೆ ಇರುವುದು. ಈ ಯೋಜನೆ ಬಡತನದ ಸೀಮಾರೇಖೆಯ ಕೆಳಗಿರುವರಿಗಾಗಿಯೇ ಸಾಮಾಜಿಕ ಭದ್ರತೆಯ ಯೋಜನೆ. ಈ ಯೋಜನೆಯಡಿಯಲ್ಲಿ 5 ಪ್ರತ್ಯೇಕ ಒಳಿತನ್ನು ಕೋರುವ ಯೋಜನೆಗಳಿವೆ. ಇವುಗಳೆಂದರೆ ಇಂದಿರಾಗಾಂಧಿ ರಾಷ್ಟ್ರೀಯ ಮನೆ ತಪ್ಪಿದವರ ಪಿಂಚಣಿ ಯೋಜನೆ, ಇಂದಿರಾಗಾಂಧಿ ವೃದ್ಧರ ಪಿಂಚಣಿ ಯೋಜನೆ, ಇಂದಿರಾಗಾಂಧಿ ಅಶಕ್ತರ ಪಿಂಚಣಿ ಯೋಜನೆ, ರಾಷ್ಟೀಯ ಫ್ಯಾಮಿಲಿ ಬೆನಿಫಿಟ್ ಸ್ಕೀಂ ಮತ್ತು ಅನ್ನಪೂರ್ಣ ಯೋಜನೆಗಳಿವೆ.

ಭಾರತ ವಿಶ್ವದಲ್ಲೆ ದೊಡ್ಡದಾದ ಆಹಾರ ಭದ್ರತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅದಕ್ಕಾಗಿ ವರ್ಷಕ್ಕೆ 1.8 ಲಕ್ಷಕೋಟಿ ವ್ಯಯ ಮಾಡುತ್ತಿದೆ. ಮಹಾತ್ಮಾಗಾಂಧಿ ಗ್ರಾಮೀಣ ರೋಜ್‍ಗಾರ್ ಯೋಜನೆಯ ಉಳಿವಿಗಾಗಿ ದಿನಗೂಲಿ ಒದಗಿಸಲು 2019-20ರಲ್ಲಿ ಭಾರತ ಸರ್ಕಾರ 60000 ಕೋಟಿ ಖರ್ಚು ಮಾಡಿದೆ. ಕೇಂದ್ರದ ಈ ವರ್ಷದ ಸಬ್ಸಿಡಿ ಬಿಲ್ 3.38 ಲಕ್ಷ ಕೋಟಿ ರೂಪಾಯಿಗಳು. ಅಂದರೆ ದಿನಕ್ಕೆ 900 ಕೋಟಿ. ಸಾಮಾಜಿಕ ಸೆಕ್ಟರ್ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಿಕೊಂಡು ಈ ವರ್ಷ 13.9 ಲಕ್ಷ ಕೋಟಿ ಖರ್ಚುಮಾಡುತ್ತಿವೆ. ಈ ಮೊತ್ತದಲ್ಲಿ ಪ್ರಾಕೃತಿಕ ವಿಕೋಪದಿಂದ ಜನಸಮುದಾಯಕ್ಕಾಗುವ ಹಾನಿಯನ್ನು ತುಂಬಿಕೊಡಲು 5.5 ಲಕ್ಷ ಕೋಟಿ ತೆಗೆದಿರಿಸಲಾಗಿದೆ. ಬಡತನದ ಇಂಡೆಕ್ಸ್ 54ರಿಂದ 50ಕ್ಕೆ ಇಳಿದಿದೆ. ಆದರೆ ರಾಷ್ಟೀಯ ಸರಾಸರಿಗಿಂತ ಕಡಿಮೆ ಇರುವ ರಾಜ್ಯಗಳು ಹಿಂದೆ 10 ಇದ್ದದ್ದು ಈಗ 14ಕ್ಕೆ ಏರಿವೆ.

ದೊಡ್ಡ ರಾಜ್ಯಗಳ ಪೈಕಿ 10 ರಾಜ್ಯಗಳು ಬಡತನದ ಸೀಮಾರೇಖೆಯ ತಳಗಿದ್ದು ಅವುಗಳಲ್ಲಿ ಆರಂತೂ ತುಂಬಾ ದುರವಸ್ಥೆಯಲ್ಲಿವೆ. ಇಷ್ಟೆಲ್ಲಾ ಅನಾಹುತಕ್ಕೆ ಕಾರಣವಾಗಿರುವುದು ಬಡತನ ನಿವಾರಣಾ ಕಾರ್ಯಾಚರಣೆಯ ಯೋಜನೆ ಅಭಾವದಿಂದಲ್ಲ; ಅವು ಅಪಾರ ಸಂಖ್ಯೆಯಲ್ಲಿವೆ.

ಈ ಸಾಮಾಜಿಕ ಕಾರ್ಯಕ್ರಮಗಳ ಕಾರ್ಯ ಕ್ಷಮತೆಯ ಅಭಾವದಿಂದಾಗಿ ಬಡತನ ಹೆಚ್ಚುತ್ತಿದೆ. ರಾಜ್ಯಗಳ ಆಡಳಿತಗಾರರ ದಕ್ಷತೆಯ ಕೊರತೆಯಿಂದ ಆಡಳಿತದ ಜ್ಞಾನದ ಕೊರತೆಯಿಂದ ಬಡತನ ನಿವಾರಣೆಯ ಕೆಲಸ ಹಿಂದೆ ಬಿದ್ದಿದೆ.

ದೇಶದಲ್ಲಿ ಅನೇಕ ಕಡೆ ಬಡತನ ಹಸಿವು ಕಾಡುತ್ತಿದೆ. ಆಹಾರದ ಅಪೌಷ್ಠಿಕತೆ ಇಡೀ ದೇಶವನ್ನು ಕಾಡುತ್ತಿದೆ. ಭಾರತದಲ್ಲಿ 58.3 ದಶಲಕ್ಷ ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿದ್ದಾರೆ; ಭಾರತದಲ್ಲಿ ಹುಟ್ಟುವ ಮಕ್ಕಳಲ್ಲಿ ಶೇ.40ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ತಾಯಂದಿರಾಗುವ ಒಂದು ಲಕ್ಷ ಮಹಿಳೆಯರಲ್ಲಿ 122 ಹೆಣ್ಣು ಮಕ್ಕಳು ಸಾವಿಗೆ ಗುರಿಯಾಗುತ್ತಾರೆ. ಗರ್ಭಿಣಿಯರಲ್ಲಿ ಅರ್ಧದಷ್ಟು ಮಹಿಳೆಯರು ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ. ಗರ್ಭಿಣಿಯಲ್ಲಿ ಶೇ.36ರಷ್ಟು ಮಹಿಳೆಯರಿಗೆ ಮಾತ್ರ ತಾಯಿತನದ ಬೆನೆಫಿಟ್ ಸಿಕ್ಕುತ್ತಿದೆ.

ಬಡವರಿಗೆ ಕೊಡುವ ರೇಷನ್‍ನಲ್ಲಿ ಪೌಷ್ಟಿಕಾಂಶದ ಕೊರತೆ ಅತ್ಯಧಿಕ. ಆರೋಗ್ಯ ಇಲಾಖೆಯು ಕೋಟ್ಯಾಂತರ ರೂಪಾಯಿ ಖರ್ಚು ತೋರಿಸುತ್ತದೆ. ಆದರೆ ಬಡವರಿಗೆ ನೀಡುವ ಆಹಾರ ಪದಾರ್ಥ ಸತ್ವಹೀನವಾಗಿರುತ್ತವೆ. ಇದರ ಪರಿಣಾಮವಾಗಿ ಬಡವರಲ್ಲಿ ಅಪೌಷ್ಠಿಕತೆಯಿಂದ ನರಳುವ ಮತ್ತು ಸಾಯುವವರ ಸಂಖ್ಯೆ ಅತ್ಯಧಿಕವಾಗಿರುತ್ತದೆ. ಆದರೆ ಆರೋಗ್ಯ ಇಲಾಖೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆರೋಗ್ಯ ಇಲಾಖೆಯ ಅಧಿಕಾರಿಗಳು ಅದನ್ನು ತಿನ್ನುವ ಇಲಾಖೆ ಹೊರತು ಜನತೆಯ ಒಳಿತಿಗಾಗಿ ಕಾರ್ಯ ನಿರ್ವಹಿಸುವ ಇಲಾಖೆ ಅಲ್ಲ ಎಂದು ಬಗೆದಂತಿದೆ.

ಇವೆಲ್ಲದರ ಅರ್ಥವೇನು? ಬಡತನ ನಿವಾರಣೆಗೆಂದು ಹಲವು ಬಗೆಯ ಯೋಜನೆಗಳನ್ನು ಇದುವರೆಗೆ ಆಳಿದ ವಿವಿಧ ಪಕ್ಷಗಳ ಸರ್ಕಾರಗಳು (ಪ್ರಧಾನವಾಗಿ ಕಾಂಗ್ರೆಸ್ಸು) ತಂದಿದ್ದಾರಾದರೂ, ಆ ನಿಟ್ಟಿನಲ್ಲಿ ಸಂಪೂರ್ಣ ಪರಿಹಾರ ಸಿಕ್ಕಿಲ್ಲ. ಅವೆಲ್ಲವನ್ನೂ ಬಗೆಹರಿಸಿ ಎಂದು 2014ರಲ್ಲಿ ಮತ್ತು 2019ರಲ್ಲಿ ಎರಡೆರಡು ಬಾರಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಅವರು ಮಾಡುತ್ತಿರುವುದೇನು? ಈ ಜನರನ್ನು ಬಡತನದ ಕೂಪದಿಂದ ಮೇಲೆತ್ತುವ ಬದಲು, ಜನರನ್ನು ಆತಂಕಕ್ಕೆ ದೂಡುವ ಕ್ರಮಗಳಿಗೆ ಮುಂದಾಗಿದೆ. ನೋಟು ರದ್ದತಿಯಿಂದ ಶುರುವಾಗಿ ಸಿಎಎ, ಎನ್‍ಆರ್‍ಸಿಯವರೆಗೆ ಎಲ್ಲವೂ ದೇಶವನ್ನು ಹಿಂಡುವ ಕ್ರಮಗಳಾಗಿವೆ. ದೇಶವನ್ನಾಳುವವರು ಭಾರತೀಯರ ಕುರಿತು ಕಾಳಜಿ ಇರುವವರೇ ಆಗಿದ್ದರೆ ಮೊದಲು ಬಡ ಭಾರತೀಯರ ಕುರಿತು ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....