Homeಅಂಕಣಗಳುಈ ಬಡ ಭಾರತೀಯರು ಸರ್ಕಾರಕ್ಕೆ ಮೊದಲು ಕಾಣಬೇಕಿತ್ತು

ಈ ಬಡ ಭಾರತೀಯರು ಸರ್ಕಾರಕ್ಕೆ ಮೊದಲು ಕಾಣಬೇಕಿತ್ತು

- Advertisement -
- Advertisement -

ಬಡವರಿಗೆ ಕೊಡುವ ರೇಷನ್‍ನಲ್ಲಿ ಪೌಷ್ಟಿಕಾಂಶದ ಕೊರತೆ ಅತ್ಯಧಿಕ. ಆರೋಗ್ಯ ಇಲಾಖೆಯು ಕೋಟ್ಯಾಂತರ ರೂಪಾಯಿ ಖರ್ಚು ತೋರಿಸುತ್ತದೆ. ಆದರೆ ಬಡವರಿಗೆ ನೀಡುವ ಆಹಾರ ಪದಾರ್ಥ ಸತ್ವಹೀನವಾಗಿರುತ್ತವೆ. ಇದರ ಪರಿಣಾಮವಾಗಿ ಬಡವರಲ್ಲಿ ಅಪೌಷ್ಠಿಕತೆಯಿಂದ ನರಳುವ ಮತ್ತು ಸಾಯುವವರ ಸಂಖ್ಯೆ ಅತ್ಯಧಿಕವಾಗಿರುತ್ತದೆ. ಆದರೆ ಆರೋಗ್ಯ ಇಲಾಖೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ.

ಒಬ್ಬ ವಿಧವೆ ಕೂಲಿ ಕಾಸು ಸಿಕ್ಕದೆ ತನ್ನ ತಲೆಗೂದಲನ್ನೆ ಮಾರಿಕೊಂಡಿದ್ದಾಳೆ. ಒಂದು ಬಡಕುಟುಂಬದವರು ಹೊಟ್ಟೆಪಾಡಿಗಾಗಿ ತಮ್ಮ ಮಗುವನ್ನೇ ಮಾರಿಕೊಂಡರು. ಒಂದು ಒಡಸಂಸಾರದ ಒಬ್ಬ 7 ವರ್ಷದ ಹುಡುಗ ಹಸಿವನ್ನು ತಾಳಲಾರದೇ ಮನೆಬಿಟ್ಟು ಓಡಿಹೋಗಿ ಬಸ್‍ಸ್ಟಾಂಡಿನಲ್ಲಿ ಭಿಕ್ಷೆ ಬೇಡುತ್ತಾನೆ. ಕೂಲಿ ಕೆಲಸ ಮಾಡಿ ಹೊಟ್ಟೆ ಹೊರೆಯುತ್ತಾನೆ. ಅನೇಕ ಗರ್ಭಿಣಿ ಹೆಣ್ಣು ಮಕ್ಕಳು ಆಹಾರದ ಭದ್ರತೆ ಇಲ್ಲದೆ, ಅಪೌಷ್ಟಿಕತೆಯ ಕಾರಣದಿಂದ ಮಕ್ಕಳನ್ನು ಹಡೆದು ಸಾವನ್ನಪುತ್ತಾರೆ. ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 12 ಮಕ್ಕಳು ಒಮ್ಮೆಗೇ ಸಾಯುತ್ತಾರೆ. ಅನೇಕ ಸಂಸಾರಗಳು ಊರುಬಿಟ್ಟು ಬಂದು ಬೆಂಗಳೂರಿನಲ್ಲಿ ಫುಟ್‍ಪಾತಿನ ಮೇಲೆ ವಾಸಿಸುತ್ತಾರೆ. ರಾತ್ರಿ ಮಲಗುತ್ತಾರೆ. ತಿರುಪೆ ಮಾಡಿ ಜೀವನ ನಿರ್ವಹಿಸುತ್ತಾರೆ. ಹಳ್ಳಿಗಳಲ್ಲಿ ರೈತ ಕಾರ್ಮಿಕರು, ಅನೇಕ ದಿನ ಹೊಟ್ಟೆಗಿಲ್ಲದೆ ಮಲಗುವುದು ಭೂಮಿ ವಸತಿ ವಂಚಿತರಾಗಿ ಬಾಳ್ವೆ ನಡೆಸುತ್ತಿರುವುದೂ ನಡೆದೇ ಇದೆ.

ಭಾರತಕ್ಕೆ ಸ್ವಾತಂತ್ರ್ಯ ಬಂದು 72 ವರ್ಷಗಳೇ ಸಂದರೂ ಈ ಎಲ್ಲ ಬಡವರಿಗೆ ಮಾಡಲು ಉದ್ಯೋಗವಿಲ್ಲ. ಅವರ ಮಕ್ಕಳಿಗೆ ವಿದ್ಯೆ ಇಲ್ಲ. ಇನ್ನೊಂದು ಚಿತ್ರ ನೋಡಿ. ಭಾರತದಲ್ಲಿ ಲಕ್ಷ ಕೋಟ್ಯಾಧಿಪತಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರುತ್ತಿದೆ. ಅಂಬಾನಿ ಅದಾನಿ ಮುಂತಾದ ಕೋಟ್ಯಾಧಿಪತಿಗಳು ಕೋಟಿ ಕೋಟಿ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸುತ್ತದೆ. ಅವರ ಕೋಟಿ-ಕೋಟಿ ಹಳೆ ಸಾಲದ ಮೇಲಿನ ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಿದೆ. ಬಡವ ಬಲ್ಲಿದರ ನಡುವಿನ ಕಂದಕ ದೊಡ್ಡದಾಗುತ್ತಿದೆ.

ಕೇಂದ್ರ ಸರ್ಕಾರ ಬಡ ಜನರಿಗಾಗಿ 30 ಯೋಜನೆಗಳನ್ನು ಜಾರಿಗೆ ತಂದಿದೆ. ರಾಷ್ಟೀಯ ಸಾಮಾಜಿಕ ಸೇವೆ ಒದಗಿಸುವ ಸಂಸ್ಥೆಯೂ ಅವುಗಳಲ್ಲಿ ಒಂದು. ಅದು ಸಮಾಜದಲ್ಲಿ ಊಟ, ಉದ್ಯೋಗಗಳಿಂದ ವಂಚಿತರಾಗಿ ಸಾವನ್ನಪ್ಪಲು ಹೊರಟವರನ್ನು ತಡೆಗಟ್ಟುವುದಕ್ಕಾಗಿಯೇ ಈ ಸಂಸ್ಥೆ ಇರುವುದು. ಈ ಯೋಜನೆ ಬಡತನದ ಸೀಮಾರೇಖೆಯ ಕೆಳಗಿರುವರಿಗಾಗಿಯೇ ಸಾಮಾಜಿಕ ಭದ್ರತೆಯ ಯೋಜನೆ. ಈ ಯೋಜನೆಯಡಿಯಲ್ಲಿ 5 ಪ್ರತ್ಯೇಕ ಒಳಿತನ್ನು ಕೋರುವ ಯೋಜನೆಗಳಿವೆ. ಇವುಗಳೆಂದರೆ ಇಂದಿರಾಗಾಂಧಿ ರಾಷ್ಟ್ರೀಯ ಮನೆ ತಪ್ಪಿದವರ ಪಿಂಚಣಿ ಯೋಜನೆ, ಇಂದಿರಾಗಾಂಧಿ ವೃದ್ಧರ ಪಿಂಚಣಿ ಯೋಜನೆ, ಇಂದಿರಾಗಾಂಧಿ ಅಶಕ್ತರ ಪಿಂಚಣಿ ಯೋಜನೆ, ರಾಷ್ಟೀಯ ಫ್ಯಾಮಿಲಿ ಬೆನಿಫಿಟ್ ಸ್ಕೀಂ ಮತ್ತು ಅನ್ನಪೂರ್ಣ ಯೋಜನೆಗಳಿವೆ.

ಭಾರತ ವಿಶ್ವದಲ್ಲೆ ದೊಡ್ಡದಾದ ಆಹಾರ ಭದ್ರತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅದಕ್ಕಾಗಿ ವರ್ಷಕ್ಕೆ 1.8 ಲಕ್ಷಕೋಟಿ ವ್ಯಯ ಮಾಡುತ್ತಿದೆ. ಮಹಾತ್ಮಾಗಾಂಧಿ ಗ್ರಾಮೀಣ ರೋಜ್‍ಗಾರ್ ಯೋಜನೆಯ ಉಳಿವಿಗಾಗಿ ದಿನಗೂಲಿ ಒದಗಿಸಲು 2019-20ರಲ್ಲಿ ಭಾರತ ಸರ್ಕಾರ 60000 ಕೋಟಿ ಖರ್ಚು ಮಾಡಿದೆ. ಕೇಂದ್ರದ ಈ ವರ್ಷದ ಸಬ್ಸಿಡಿ ಬಿಲ್ 3.38 ಲಕ್ಷ ಕೋಟಿ ರೂಪಾಯಿಗಳು. ಅಂದರೆ ದಿನಕ್ಕೆ 900 ಕೋಟಿ. ಸಾಮಾಜಿಕ ಸೆಕ್ಟರ್ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಿಕೊಂಡು ಈ ವರ್ಷ 13.9 ಲಕ್ಷ ಕೋಟಿ ಖರ್ಚುಮಾಡುತ್ತಿವೆ. ಈ ಮೊತ್ತದಲ್ಲಿ ಪ್ರಾಕೃತಿಕ ವಿಕೋಪದಿಂದ ಜನಸಮುದಾಯಕ್ಕಾಗುವ ಹಾನಿಯನ್ನು ತುಂಬಿಕೊಡಲು 5.5 ಲಕ್ಷ ಕೋಟಿ ತೆಗೆದಿರಿಸಲಾಗಿದೆ. ಬಡತನದ ಇಂಡೆಕ್ಸ್ 54ರಿಂದ 50ಕ್ಕೆ ಇಳಿದಿದೆ. ಆದರೆ ರಾಷ್ಟೀಯ ಸರಾಸರಿಗಿಂತ ಕಡಿಮೆ ಇರುವ ರಾಜ್ಯಗಳು ಹಿಂದೆ 10 ಇದ್ದದ್ದು ಈಗ 14ಕ್ಕೆ ಏರಿವೆ.

ದೊಡ್ಡ ರಾಜ್ಯಗಳ ಪೈಕಿ 10 ರಾಜ್ಯಗಳು ಬಡತನದ ಸೀಮಾರೇಖೆಯ ತಳಗಿದ್ದು ಅವುಗಳಲ್ಲಿ ಆರಂತೂ ತುಂಬಾ ದುರವಸ್ಥೆಯಲ್ಲಿವೆ. ಇಷ್ಟೆಲ್ಲಾ ಅನಾಹುತಕ್ಕೆ ಕಾರಣವಾಗಿರುವುದು ಬಡತನ ನಿವಾರಣಾ ಕಾರ್ಯಾಚರಣೆಯ ಯೋಜನೆ ಅಭಾವದಿಂದಲ್ಲ; ಅವು ಅಪಾರ ಸಂಖ್ಯೆಯಲ್ಲಿವೆ.

ಈ ಸಾಮಾಜಿಕ ಕಾರ್ಯಕ್ರಮಗಳ ಕಾರ್ಯ ಕ್ಷಮತೆಯ ಅಭಾವದಿಂದಾಗಿ ಬಡತನ ಹೆಚ್ಚುತ್ತಿದೆ. ರಾಜ್ಯಗಳ ಆಡಳಿತಗಾರರ ದಕ್ಷತೆಯ ಕೊರತೆಯಿಂದ ಆಡಳಿತದ ಜ್ಞಾನದ ಕೊರತೆಯಿಂದ ಬಡತನ ನಿವಾರಣೆಯ ಕೆಲಸ ಹಿಂದೆ ಬಿದ್ದಿದೆ.

ದೇಶದಲ್ಲಿ ಅನೇಕ ಕಡೆ ಬಡತನ ಹಸಿವು ಕಾಡುತ್ತಿದೆ. ಆಹಾರದ ಅಪೌಷ್ಠಿಕತೆ ಇಡೀ ದೇಶವನ್ನು ಕಾಡುತ್ತಿದೆ. ಭಾರತದಲ್ಲಿ 58.3 ದಶಲಕ್ಷ ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿದ್ದಾರೆ; ಭಾರತದಲ್ಲಿ ಹುಟ್ಟುವ ಮಕ್ಕಳಲ್ಲಿ ಶೇ.40ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ತಾಯಂದಿರಾಗುವ ಒಂದು ಲಕ್ಷ ಮಹಿಳೆಯರಲ್ಲಿ 122 ಹೆಣ್ಣು ಮಕ್ಕಳು ಸಾವಿಗೆ ಗುರಿಯಾಗುತ್ತಾರೆ. ಗರ್ಭಿಣಿಯರಲ್ಲಿ ಅರ್ಧದಷ್ಟು ಮಹಿಳೆಯರು ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ. ಗರ್ಭಿಣಿಯಲ್ಲಿ ಶೇ.36ರಷ್ಟು ಮಹಿಳೆಯರಿಗೆ ಮಾತ್ರ ತಾಯಿತನದ ಬೆನೆಫಿಟ್ ಸಿಕ್ಕುತ್ತಿದೆ.

ಬಡವರಿಗೆ ಕೊಡುವ ರೇಷನ್‍ನಲ್ಲಿ ಪೌಷ್ಟಿಕಾಂಶದ ಕೊರತೆ ಅತ್ಯಧಿಕ. ಆರೋಗ್ಯ ಇಲಾಖೆಯು ಕೋಟ್ಯಾಂತರ ರೂಪಾಯಿ ಖರ್ಚು ತೋರಿಸುತ್ತದೆ. ಆದರೆ ಬಡವರಿಗೆ ನೀಡುವ ಆಹಾರ ಪದಾರ್ಥ ಸತ್ವಹೀನವಾಗಿರುತ್ತವೆ. ಇದರ ಪರಿಣಾಮವಾಗಿ ಬಡವರಲ್ಲಿ ಅಪೌಷ್ಠಿಕತೆಯಿಂದ ನರಳುವ ಮತ್ತು ಸಾಯುವವರ ಸಂಖ್ಯೆ ಅತ್ಯಧಿಕವಾಗಿರುತ್ತದೆ. ಆದರೆ ಆರೋಗ್ಯ ಇಲಾಖೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆರೋಗ್ಯ ಇಲಾಖೆಯ ಅಧಿಕಾರಿಗಳು ಅದನ್ನು ತಿನ್ನುವ ಇಲಾಖೆ ಹೊರತು ಜನತೆಯ ಒಳಿತಿಗಾಗಿ ಕಾರ್ಯ ನಿರ್ವಹಿಸುವ ಇಲಾಖೆ ಅಲ್ಲ ಎಂದು ಬಗೆದಂತಿದೆ.

ಇವೆಲ್ಲದರ ಅರ್ಥವೇನು? ಬಡತನ ನಿವಾರಣೆಗೆಂದು ಹಲವು ಬಗೆಯ ಯೋಜನೆಗಳನ್ನು ಇದುವರೆಗೆ ಆಳಿದ ವಿವಿಧ ಪಕ್ಷಗಳ ಸರ್ಕಾರಗಳು (ಪ್ರಧಾನವಾಗಿ ಕಾಂಗ್ರೆಸ್ಸು) ತಂದಿದ್ದಾರಾದರೂ, ಆ ನಿಟ್ಟಿನಲ್ಲಿ ಸಂಪೂರ್ಣ ಪರಿಹಾರ ಸಿಕ್ಕಿಲ್ಲ. ಅವೆಲ್ಲವನ್ನೂ ಬಗೆಹರಿಸಿ ಎಂದು 2014ರಲ್ಲಿ ಮತ್ತು 2019ರಲ್ಲಿ ಎರಡೆರಡು ಬಾರಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಅವರು ಮಾಡುತ್ತಿರುವುದೇನು? ಈ ಜನರನ್ನು ಬಡತನದ ಕೂಪದಿಂದ ಮೇಲೆತ್ತುವ ಬದಲು, ಜನರನ್ನು ಆತಂಕಕ್ಕೆ ದೂಡುವ ಕ್ರಮಗಳಿಗೆ ಮುಂದಾಗಿದೆ. ನೋಟು ರದ್ದತಿಯಿಂದ ಶುರುವಾಗಿ ಸಿಎಎ, ಎನ್‍ಆರ್‍ಸಿಯವರೆಗೆ ಎಲ್ಲವೂ ದೇಶವನ್ನು ಹಿಂಡುವ ಕ್ರಮಗಳಾಗಿವೆ. ದೇಶವನ್ನಾಳುವವರು ಭಾರತೀಯರ ಕುರಿತು ಕಾಳಜಿ ಇರುವವರೇ ಆಗಿದ್ದರೆ ಮೊದಲು ಬಡ ಭಾರತೀಯರ ಕುರಿತು ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...